AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಚಿಕಿತ್ಸೆಗೆ ಹೊಸ ಔಷಧ ಬಳಸಲು ಅನುಮತಿ ನೀಡಿದ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ

ಔಷಧ ರೂಪದಲ್ಲಿ ಝೈಡಸ್ ಕ್ಯಾಡಿಲ್ಲಾ ಕಂಪನಿಯ ವಿರಾಫಿನ್ ಔಷಧ ಬಳಸಲು ಅನುಮತಿ ದೊರೆತಿದ್ದು, ಒಂದು ಡೋಸ್ ಲಸಿಕೆಯ ಬಳಕೆಯು ಕೊರೊನಾ ಸೋಂಕಿತರಲ್ಲಿ ಚೇತರಿಕೆ ಉಂಟುಮಾಡಿದೆ ಎಂದು ಕಂಪನಿ ತಿಳಿಸಿದೆ.

ಕೊರೊನಾ ಸೋಂಕಿತರ ಚಿಕಿತ್ಸೆಗೆ ಹೊಸ ಔಷಧ ಬಳಸಲು ಅನುಮತಿ ನೀಡಿದ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ
ಸಾಂಕೇತಿಕ ಚಿತ್ರ
guruganesh bhat
| Edited By: |

Updated on:Apr 23, 2021 | 4:21 PM

Share

ದೆಹಲಿ: ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿಯು ಝೈಡಸ್ ಕ್ಯಾಡಿಲ್ಲಾ ಕಂಪನಿಯ ವಿರಾಫಿನ್ ಔಷಧವನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಲು ಅನುಮತಿ ನೀಡಿದೆ. ಲಘು ಕೊರೊನಾದಿಂದ ಬಳಲುತ್ತಿರುವವರಿಗೆ ಔಷಧ ರೂಪದಲ್ಲಿ ಝೈಡಸ್ ಕ್ಯಾಡಿಲ್ಲಾ ಕಂಪನಿಯ ವಿರಾಫಿನ್ ಔಷಧ ಬಳಸಲು ಅನುಮತಿ ದೊರೆತಿದ್ದು, ಒಂದು ಡೋಸ್ ಲಸಿಕೆಯ ಬಳಕೆಯು ಕೊರೊನಾ ಸೋಂಕಿತರಲ್ಲಿ ಚೇತರಿಕೆ ಉಂಟುಮಾಡಿದೆ ಎಂದು ಕಂಪನಿ ತಿಳಿಸಿದೆ.

ಚರ್ಮದ ಒಳಪದರಕ್ಕೆ ಕೊಡುವ ವಿರಾಫಿನ್​ನಲ್ಲಿ PegIFN ಔಷಧವಿದೆ. ಈ ಸಿಂಗಲ್ ಡೋಸ್ ಔಷಧಿ ಇದು ವೈರಾಣು ಸೋಂಕು ನಿರೋಧಕ, ಕೊರೊನಾ ಸೋಂಕು ಪ್ರಕರಣಗಳಲ್ಲೂ ಪರಿಣಾಮಕಾರಿ ಎಂದು ಕ್ಲಿನಿಕಲ್ ಪರೀಕ್ಷೆಗಳಲ್ಲಿ ಸಾಬೀತಾಗಿದೆ ಎಂದು ಕಂಪನಿಯು ಹೇಳಿಕೊಂಡಿದೆ.

ಕೋವಿಡ್-19 ರೋಗಿಗಳಿಗೆ ಈ ಔಷಧಿ ನೀಡಿದಾಗ ಕೃತಕ ಆಮ್ಲಜನಕವನ್ನು ನೀಡಬೇಕಾದ ಅಗತ್ಯವೂ ಹೆಚ್ಚಿನ ಸಂದರ್ಭಗಳಲ್ಲಿ ಕಂಡುಬರಲಿಲ್ಲ. ಕೊರೊನಾ ಸೋಂಕಿನಿಂದ ಉಂಟಾಗುವ ಉಸಿರಾಟದ ಹಲವು ಸಮಸ್ಯೆಗಳನ್ನು ವಿರಾಫಿನ್ ಪರಿಣಾಮಕಾರಿಯಾಗಿ ತಡೆದದ್ದು ಪ್ರಯೋಗಗಳ ವೇಳೆ ದಾಖಲಾಗಿದೆ. ಕೊರೊನಾದಿಂದ ರೋಗಿಗಳು ಚೇತರಿಸಿಕೊಂಡ ನಂತರ ಕಾಣಿಸುವ ಕೆಲ ಇತರ ಆರೋಗ್ಯದ ಸಮಸ್ಯೆಗಳನ್ನೂ ಇದು ತಡೆಯಬಲ್ಲದು.  ಎಂದು ಕಂಪನಿ ಹೇಳಿಕೊಂಡಿದೆ. ವಿರಾಫಿನ್ ಚಿಕಿತ್ಸೆಯ ನಂತರ ಕೊರೊನಾ ಸೋಂಕು ದೃಢಪಟ್ಟಿದ್ದ ಶೇ 91.15ರಷ್ಟು ರೋಗಿಗಳಲ್ಲಿ ಆರ್​ಟಿ-ಪಿಸಿಆರ್ ಪರೀಕ್ಷೆ ವೇಳೆ 7 ದಿನಗಳಲ್ಲಿ ನೆಗೆಟಿವ್ ವರದಿ ಬಂದಿತ್ತು ಎಂದು ಕಂಪನಿ ಹೇಳಿಕೊಂಡಿದೆ.

ಇದನ್ನೂ ಓದಿ: Long Covid: ಕೊರೊನಾ ನೆಗೆಟಿವ್​ ವರದಿಯಾದರೂ ನಿರ್ಲಕ್ಷಿಸದಿರಿ; ದೀರ್ಘಕಾಲದವರೆಗೆ ಲಕ್ಷಣಗಳಿರಬಹುದು

ಕೊವಿಡ್​ನಿಂದ ಭಯಭೀತರಾದ ರೋಗಿಗಳಿಗೆ ಉತ್ಸಾಹ ತುಂಬಲು ವೈದ್ಯರಿಂದ ಮನೋರಂಜನೆ​; ವಿಡಿಯೋ ವೈರಲ್​

(Zydus cadila gets emergency approval for covid treatment in India GGD)

Published On - 3:46 pm, Fri, 23 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ