AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಸಾಮಾಜಿಕ ಮಾಧ್ಯಮ ನಿರ್ಬಂಧ ಸುಗ್ರೀವಾಜ್ಞೆಗೆ ತಾತ್ಕಾಲಿಕ ತಡೆ

ತಿರುವನಂತಪುರ: ಸಾಮಾಜಿಕ ಮಾಧ್ಯಮಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಹೊರಡಿಸಿದ್ದ ಕೇರಳ ಸರ್ಕಾರ ಇದೀಗ ತನ್ನ ನಿರ್ಧಾರ ಬದಲಿಸಿದೆ. ಆಡಳಿತಾರೂಢ ಎಲ್​ಡಿಎಫ್​ನ ಮುಂಚೂಣಿ ನಾಯಕರೂ ಸೇರಿದಂತೆ ಹಲವರಿಂದ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ಸದ್ಯಕ್ಕೆ ಅನುಷ್ಠಾನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ ನೀಡಿದ್ದಾರೆ. ‘ಆಕ್ಷೇಪಾರ್ಹ’ ಪೋಸ್ಟ್​ಗಳನ್ನು ಹಾಕಿದವರಿಗೆ ₹ 10 ಸಾವಿರ ದಂಡ ಅಥವಾ 3 ವರ್ಷ ಜೈಲು ಶಿಕ್ಷೆ ವಿಧಿಸುವ 118ಎ ಪರಿಚ್ಛೇದವನ್ನು ಸುಗ್ರೀವಾಜ್ಞೆಯ ಮೂಲಕ ಕೇರಳ ಪೊಲೀಸ್ ಕಾಯ್ದೆಗೆ ಸೇರಿಸಲು ರಾಜ್ಯ ಸರ್ಕಾರ […]

ಕೇರಳ: ಸಾಮಾಜಿಕ ಮಾಧ್ಯಮ ನಿರ್ಬಂಧ ಸುಗ್ರೀವಾಜ್ಞೆಗೆ ತಾತ್ಕಾಲಿಕ ತಡೆ
ಸಾಧು ಶ್ರೀನಾಥ್​
|

Updated on: Nov 23, 2020 | 5:03 PM

Share

ತಿರುವನಂತಪುರ: ಸಾಮಾಜಿಕ ಮಾಧ್ಯಮಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಹೊರಡಿಸಿದ್ದ ಕೇರಳ ಸರ್ಕಾರ ಇದೀಗ ತನ್ನ ನಿರ್ಧಾರ ಬದಲಿಸಿದೆ. ಆಡಳಿತಾರೂಢ ಎಲ್​ಡಿಎಫ್​ನ ಮುಂಚೂಣಿ ನಾಯಕರೂ ಸೇರಿದಂತೆ ಹಲವರಿಂದ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ಸದ್ಯಕ್ಕೆ ಅನುಷ್ಠಾನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ ನೀಡಿದ್ದಾರೆ.

‘ಆಕ್ಷೇಪಾರ್ಹ’ ಪೋಸ್ಟ್​ಗಳನ್ನು ಹಾಕಿದವರಿಗೆ ₹ 10 ಸಾವಿರ ದಂಡ ಅಥವಾ 3 ವರ್ಷ ಜೈಲು ಶಿಕ್ಷೆ ವಿಧಿಸುವ 118ಎ ಪರಿಚ್ಛೇದವನ್ನು ಸುಗ್ರೀವಾಜ್ಞೆಯ ಮೂಲಕ ಕೇರಳ ಪೊಲೀಸ್ ಕಾಯ್ದೆಗೆ ಸೇರಿಸಲು ರಾಜ್ಯ ಸರ್ಕಾರ ಮುಂದಾಗಿತ್ತು. ಸರ್ಕಾರದ ಪ್ರಸ್ತಾವಕ್ಕೆ ಶನಿವಾರ ರಾಜ್ಯಪಾಲರ ಅಂಕಿತವೂ ದೊರಕಿತ್ತು.

ಈ ಕಾನೂನಿಗೆ ಕೇರಳ ಮಾತ್ರವಲ್ಲದೇ ದೇಶಾದ್ಯಂತ ವಿರೋಧ ವ್ಯಕ್ತವಾಗಿತ್ತು. ಇದನ್ನು ‘ಕೆಟ್ಟ’ ಕಾನೂನು ಎಂದೇ ಪರಿಣಿತರು ಮತ್ತು ವಿರೋಧ ಪಕ್ಷಗಳ ನಾಯಕರು ಟೀಕಿಸಿದ್ದರು.

ಪೊಲೀಸ್​ ಕಾಯ್ದೆ ತಿದ್ದುಪಡಿಗೆ ಪ್ರಜಾಪ್ರಭುತ್ವದ ಪರವಾಗಿರುವವರು, ಎಲ್​ಡಿಎಫ್ ಬೆಂಬಲಿಗರೂ ಸೇರಿದಂತೆ ಸಮಾಜದ ವಿವಿಧ ವಲಯಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅವರ ಭಾವನೆಗಳಿಗೆ ಬೆಲೆ ಕೊಟ್ಟು ಸುಗ್ರೀವಾಜ್ಞೆಯನ್ನು ಅನುಷ್ಠಾನಕ್ಕೆ ತರಬಾರದು ಎಂಬ ನಿರ್ಧಾರಕ್ಕೆ ಬಂದೆ ಎಂದು ಪಿಣರಯಿ ವಿಜಯನ್ ಹೇಳಿದ್ದಾರೆ.

ಸುಳ್ಳು ಸುದ್ದಿ ಹರಡುವುದು, ವೈಯಕ್ತಿಕ ಸ್ವಾತಂತ್ರ್ಯವನ್ನು ಪ್ರಶ್ನಿಸುವುದು, ಸಂವಿಧಾನಾತ್ಮಕ ವೈಯಕ್ತಿಕ ಘನತೆಗೆ ಚ್ಯುತಿ ತರುವುದು, ಮಹಿಳೆಯರು ಮತ್ತು ತೃತೀಯ ಲಿಂಗಿಗಳನ್ನು ಅವಹೇಳನ ಮಾಡುವುದನ್ನು ತಪ್ಪಿಸಲು ಕಠಿಣ ಕಾಯ್ದೆ ತರಲು ನಮ್ಮ ಸರ್ಕಾರ ಮುಂದಾಗಿತ್ತು.

ಸಾಮಾಜಿಕ ಮಾಧ್ಯಮಗಳ ಕೆಲ ಪೋಸ್ಟ್​ಗಳಿಂದ ಎಷ್ಟೋ ಕುಟುಂಬಗಳು ಒಡೆದುಹೋಗಿವೆ, ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಹಿರಿಯ ಪತ್ರಕರ್ತರೇ ಸಾಮಾಜಿಕ ಮಾಧ್ಯಮಗಳ ನಿಯಂತ್ರಣಕ್ಕೆ ಕಠಿಣ ಕಾಯ್ದೆ ಬೇಕು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ನಾನು ಇಂಥ ಪೊಲೀಸ್ ಕಾಯ್ದೆ ತಿದ್ದುಪಡಿಗೆ ಯತ್ನಿಸಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಇದನ್ನು ಓದಿ: ಆಕ್ಷೇಪಾರ್ಹ ‘ಸಾಮಾಜಿಕ ಸಂದೇಶ’ಕ್ಕೆ 5 ವರ್ಷ ಜೈಲು: ಕೇರಳ ಸರ್ಕಾರದ ಹೊಸ ಕಾನೂನು

ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ