Kannada Rajyotsava 2022: ಟ್ವಿಟರ್ ಪ್ರೊಫೈಲ್​ನಲ್ಲಿ ಕನ್ನಡದಲ್ಲಿ ಹೆಸರು ಹಾಕಲು ಹಿಂಜರಿಕೆ ಏಕೆ?

ಈಗ ಕೆಲವರು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ತಮ್ಮ ಹೆಸರುಗಳನ್ನು ಕನ್ನಡದಲ್ಲಿ ಬರೆದಿದ್ದು ಉಂಟು. ಆದರೆ ಟ್ವಿಟರ್​ನಲ್ಲಿ ಕಡಿಮೆ. ಪ್ರತಿಯೊಬ್ಬ ಕನ್ನಡಿಗನು ತನ್ನ ಪ್ರೊಫೈಲ್​ನಲ್ಲಿ ಇಂಗ್ಲಿಷ್​ನಲ್ಲಿ ಹೆಸರು ಬರೆದುಕೊಂಡರೆ, ಮುಂದಿನ ದಿನಗಳಲ್ಲಿ ಟ್ವಿಟರ್​ನಲ್ಲಿ ಕನ್ನಡ ಮಾಯವಾಗುವುದು ಖಂಡಿತ.

Kannada Rajyotsava 2022: ಟ್ವಿಟರ್ ಪ್ರೊಫೈಲ್​ನಲ್ಲಿ ಕನ್ನಡದಲ್ಲಿ ಹೆಸರು ಹಾಕಲು ಹಿಂಜರಿಕೆ ಏಕೆ?
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 01, 2022 | 12:29 PM

ಇಂದಿನ ದಿನಗಳಲ್ಲಿ ಎಲ್ಲಿ ನೋಡಿದರೂ ಸೋಷಿಯಲ್ ಮೀಡಿಯಾದ್ದೇ ಹವಾ. ಅದರಲ್ಲೂ ಟ್ವಿಟರ್ ಹೆಚ್ಚಿನ ಜನ ಕನ್ನಡಿಗರು ಕೂಡ ಇದನ್ನು ಉಪಯೋಗ ಮಾಡುತ್ತಾರೆ. ಈ ಟ್ವಿಟರ್​ನಲ್ಲಿ ನಮ್ಮ ಖಾತೆಗಳಂತೂ ಇದ್ದೇ ಇರುತ್ತೆ. ಆ ಖಾತೆಗಳಲ್ಲಿ ನಮ್ಮಲ್ಲಿ ಹೆಚ್ಚಿನವರ ಹೆಸರುಗಳು ಇಂಗ್ಲೀಷ್ ಭಾಷೆಯಲ್ಲೇ ಇದೆ. ಹೀಗಿರುವಾಗ ಕನ್ನಡ ಕನ್ನಡ ಎಂದು ಬಿಗುಮಾನ ಪಡುವ ನಾವು ಈ ಟ್ವಿಟರ್​ನಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಯಾಕೆ ಹೆಸರನ್ನು ಬರೆಯಬೇಕು. ಸ್ವಚ್ಛವಾಗಿ ಕನ್ನಡದ ಪದಗಳಲ್ಲಿ ಹೆಸರನ್ನು ಬರೆಯಬಹುದಲ್ವಾ? ಕನ್ನಡವನ್ನು ಉಳಿಸುವ ಬೆಳೆಸುವ ಕಾರ್ಯ ನಮ್ಮಿಂದಾನೆ ಆರಂಭವಾಗಬಹುದಲ್ವಾ? ನಾವು ಬೇರೆಯವರಿಗೆ ಹೇಳುವ ಬದಲು ಸ್ವತಃ ನಾವೇ ನಮ್ಮ ಟ್ವಿಟರ್ ಖಾತೆಗಳಲ್ಲಿ ಕನ್ನಡ ಭಾಷೆಯಲ್ಲಿ ಹೆಸರನ್ನು ಬರೆದಹುದು ಅಲ್ವಾ ಎಂಬ ಪ್ರಶ್ನೆಗಳು ಹುಟ್ಟಿಕೊಳ್ಳತ್ತದೆ.

ಈಗ ಕೆಲವರು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ತಮ್ಮ ಹೆಸರುಗಳನ್ನು ಕನ್ನಡದಲ್ಲಿ ಬರೆದಿದ್ದು ಉಂಟು. ಆದರೆ ಟ್ವಿಟರ್​ನಲ್ಲಿ ಕಡಿಮೆ. ಪ್ರತಿಯೊಬ್ಬ ಕನ್ನಡಿಗನು ತನ್ನ ಪ್ರೊಫೈಲ್​ನಲ್ಲಿ ಇಂಗ್ಲಿಷ್​ನಲ್ಲಿ ಹೆಸರು ಬರೆದುಕೊಂಡರೆ, ಮುಂದಿನ ದಿನಗಳಲ್ಲಿ ಟ್ವಿಟರ್​ನಲ್ಲಿ ಕನ್ನಡ ಮಾಯವಾಗುವುದು ಖಂಡಿತ. ಕನ್ನಡವನ್ನು ಬೆಳೆಸುವುದು ಉಳಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ಜನಗಳು ಹೇಗಪ್ಪಾ ಅಂದ್ರೆ ಒಬ್ಬ ಸಾಮಾನ್ಯ ಮನುಷ್ಯ ಏನಾದರೂ ಒಳ್ಳೆಯದನ್ನು ಮಾಡಿದರೆ ಅದನ್ನು ಅನುಕರಣೆ ಮಾಡುವವರ ಸಂಖ್ಯೆ ತುಂಬಾ ಕಮ್ಮಿ ಇರುತ್ತದೆ. ಆದರೆ ಒಬ್ಬ ಸೆಲೆಬ್ರಿಟಿ ಏನೇ ಮಾಡಿದರೂ ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ ಹಾಗೂ ಜನರು ಅದನ್ನು ಅನುಕರಣೆ ಮಾಡುತ್ತಾರೆ. ಕನ್ನಡ ಭಾಷೆಯ ಬಗ್ಗೆ ಅಭಿಮಾನ ತೋರುವ ಅನೇಕ ಸೆಲೆಬ್ರಿಟಿಗಳಿದ್ದಾರೆ. ಅವರನ್ನು ಟ್ವಿಟರ್​ಗಳಲ್ಲಿ ಅನುಸರಿಸುವ ಅಭಿಮಾನಿಗಳ ಸಂಖ್ಯೆ ತುಂಬಾನೇ ಇರುತ್ತದೆ. ಅಂತಹ ಸೆಲೆಬ್ರಿಟಿಗಳು ಟ್ವಿಟರ್​ಗಳಲ್ಲಿ ತಮ್ಮ ಹೆಸರನ್ನು ಕನ್ನಡದಲ್ಲಿ ಬರೆದರೆ ಎಷ್ಟು ಚೆನ್ನಾಗಿ ಇರುತ್ತೆ ಅಲ್ವಾ.

ಇದನ್ನು ಓದಿ: ವಿಕಿಪಿಡಿಯಾದಲ್ಲಿ ಕನ್ನಡ ನಿರ್ಲಕ್ಷ್ಯ?: ಕನ್ನಡದ ಅಸ್ಮಿತೆಯ ಕೂಗು ಎಲ್ಲೆಡೆ ಕೇಳಲಿ

ಖಂಡಿತವಾಗಿಯೂ ಅವರ ಅಭಿಮಾನಿಗಳು ಕೂಡಾ ಅದನ್ನೇ ಪಾಲಿಸುತ್ತಾರೆ. ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ಖಾತೆಯ ಹೆಸರುಗಳನ್ನು ಕನ್ನಡದಲ್ಲೇ ಬರೆಯುತ್ತಾರೆ. ಅದನ್ನು ನೋಡಿದಾಗ ಸಾಮಾಜಿಕ ಜಾಲತಾಣದಲ್ಲೂ ನಮ್ಮ ಕನ್ನಡದ್ದೇ ಕಾರುಬಾರು ಎಂದು ನಾವು ಖಂಡಿತವಾಗಿಯೂ ಖುಷಿ ಪಡುತ್ತೇವೆ. ಭಾಷೆಯ ಅಭಿಮಾನ ಕೇವಲ ಒಂದು ದಿನ ಅಂದ್ರೆ ನವೆಂಬರ್ 1ರಂದು ಮಾತ್ರ ಸೀಮಿತವಾಗಬಾರದು. ನಾವಿರುವ ಪ್ರತಿದಿನವೂ ಕನ್ನಡ ರಾಜ್ಯೋತ್ಸವವಾಗಬೇಕು. ನಾವು ಮಾಡುವ ಸಹಿಯಿಂದ ಹಿಡಿದು ನಾವು ಪ್ರತಿನಿತ್ಯ ಬಳಸುವ ಸೋಷಿಯಲ್ ಮೀಡಿಯಾದಲ್ಲೂ ಕನ್ನಡದ ಪದ ಬಳಕೆಯನ್ನು ಮಾಡಬೇಕು.

ಮಧುಶ್ರೀ ಅಂಚನ್

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ