AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಹುಲಿಗೆಮ್ಮದೇವಿ ಹುಂಡಿ ತುಂಬಿಸಿದ ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆ

ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಇದರಿಂದ ಹುಲಿಗೆಮ್ಮ ದೇವಿ ಹುಂಡಿಗೆ ಭರ್ಜರಿ ಕಾಣಿಕೆ ಹರಿದುಬಂದಿದೆ. ಹಣ ಮಾತ್ರವಲ್ಲದೇ ಚಿನ್ನ, ಬೆಳ್ಳಿ ಕಾಣಿಕೆಯಾಗಿ ಬಂದಿದೆ.

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ|

Updated on: Jun 29, 2023 | 8:48 AM

Share
ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನ ಭಕ್ತ ಸಾಗರವೇ ಹರಿದುಬಂದಿದೆ.

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನ ಭಕ್ತ ಸಾಗರವೇ ಹರಿದುಬಂದಿದೆ.

1 / 6
ಇದರಿಂದ ಒಂದು ತಿಂಗಳಲ್ಲಿ ಹುಲಿಗೆಮ್ಮದೇವಿ ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ ರೂ. ಕಾಣಿಕೆ‌ ಸಂಗ್ರಹವಾಗಿದೆ

ಇದರಿಂದ ಒಂದು ತಿಂಗಳಲ್ಲಿ ಹುಲಿಗೆಮ್ಮದೇವಿ ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ ರೂ. ಕಾಣಿಕೆ‌ ಸಂಗ್ರಹವಾಗಿದೆ

2 / 6
ಹುಲಿಗೆಮ್ಮ‌ದೇವಿಗೆ ಹುಂಡಿಗೆ ಹಣ ಮಾತ್ರವಲ್ಲ ಕಾಣಿಕೆಯಾಗಿ 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಬಂದಿದೆ.

ಹುಲಿಗೆಮ್ಮ‌ದೇವಿಗೆ ಹುಂಡಿಗೆ ಹಣ ಮಾತ್ರವಲ್ಲ ಕಾಣಿಕೆಯಾಗಿ 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಬಂದಿದೆ.

3 / 6
ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಹುಲಿಗೆಮ್ಮದೇವಿ ಹುಂಡಿಗೆ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಹುಲಿಗೆಮ್ಮದೇವಿ ಹುಂಡಿಗೆ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

4 / 6
ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಹುಲಿಗೆಮ್ಮ‌ದೇವಿ

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಹುಲಿಗೆಮ್ಮ‌ದೇವಿ

5 / 6
ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಮೇ 12 ರಿಂದ 16 ರವರೆಗೆ ನಡೆದಿತ್ತು. ಮಹಾ ರಥೋತ್ಸವ ಮೇ 13 ರಂದು ಸಂಜೆ 5.30ಕ್ಕೆ ಜರುಗಿತ್ತು.

ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಮೇ 12 ರಿಂದ 16 ರವರೆಗೆ ನಡೆದಿತ್ತು. ಮಹಾ ರಥೋತ್ಸವ ಮೇ 13 ರಂದು ಸಂಜೆ 5.30ಕ್ಕೆ ಜರುಗಿತ್ತು.

6 / 6