AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vittal Malekudiya: ‘19.20.21’ ಚಿತ್ರದಲ್ಲಿರುವ ರಿಯಲ್​ ಕಥೆ ಯಾರದ್ದು? ಫೋಟೋ ಸಹಿತ ಮಾಹಿತಿ ಹಂಚಿಕೊಂಡ ಚಿತ್ರತಂಡ

19.20.21 Movie | Mansore: ವಿಠಲ್ ಮಲೆಕುಡಿಯ ಅವರ ಪಾತ್ರವನ್ನು ರಂಗಭೂಮಿ ಕಲಾವಿದ ಶೃಂಗ ಬಿ.ವಿ. ನಿಭಾಯಿಸಿದ್ದಾರೆ. ವಿಠಲ್ ಅವರ ಹೋರಾಟದ ಕಥೆ ‘19.20.21’ ಚಿತ್ರದಲ್ಲಿದೆ.

ಮದನ್​ ಕುಮಾರ್​
|

Updated on: Mar 02, 2023 | 5:28 PM

Share
ಖ್ಯಾತ ನಿರ್ದೇಶಕ ಮಂಸೋರೆ ಅವರ ಬಹುನಿರೀಕ್ಷಿತ ‘19.20.21’ ಸಿನಿಮಾ ಮಾರ್ಚ್​ 3ರಂದು ತೆರೆಗೆ ಬರುತ್ತಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ನಡೆದ ರಿಯಲ್​ ಘಟನೆಗಳ ವಿವರ ಈ ಚಿತ್ರದಲ್ಲಿದೆ.

ಖ್ಯಾತ ನಿರ್ದೇಶಕ ಮಂಸೋರೆ ಅವರ ಬಹುನಿರೀಕ್ಷಿತ ‘19.20.21’ ಸಿನಿಮಾ ಮಾರ್ಚ್​ 3ರಂದು ತೆರೆಗೆ ಬರುತ್ತಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ನಡೆದ ರಿಯಲ್​ ಘಟನೆಗಳ ವಿವರ ಈ ಚಿತ್ರದಲ್ಲಿದೆ.

1 / 5
2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ಪಡೆಯಿಂದ ಬಂಧಿತರಾದ ವಿಠಲ್ ಮಲೆಕುಡಿಯ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರ ಕಾನೂನು ಹೋರಾಟದ ಕಥೆಯೇ ‘19.20.21’ ಸಿನಿಮಾ. ನಕ್ಸಲರೊಂದಿಗೆ ಸಂಪರ್ಕದಲ್ಲಿದ್ದಾರೆಂದು ತಂದೆ-ಮಗನನ್ನು ಬಂಧಿಸಲಾಗಿತ್ತು.

2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ಪಡೆಯಿಂದ ಬಂಧಿತರಾದ ವಿಠಲ್ ಮಲೆಕುಡಿಯ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರ ಕಾನೂನು ಹೋರಾಟದ ಕಥೆಯೇ ‘19.20.21’ ಸಿನಿಮಾ. ನಕ್ಸಲರೊಂದಿಗೆ ಸಂಪರ್ಕದಲ್ಲಿದ್ದಾರೆಂದು ತಂದೆ-ಮಗನನ್ನು ಬಂಧಿಸಲಾಗಿತ್ತು.

2 / 5
ಬಂಧನಕ್ಕೆ ಒಳಗಾದ ಸಮಯದಲ್ಲಿ ವಿಠಲ್ ಅವರು ಮಂಗಳೂರಿನ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪದವಿ ಓದುತ್ತಿದ್ದರು. ವಿಠಲ್ ಪರೀಕ್ಷೆ ಬರೆಯುವಾಗ ಪೊಲೀಸರು ಕೈಯಲ್ಲಿದ್ದ ಕೋಳ ಕೂಡ ತೆಗೆದಿರಲಿಲ್ಲ. ಈ ಘಟನೆ ರಾಜ್ಯಾದ್ಯಂತ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು.

ಬಂಧನಕ್ಕೆ ಒಳಗಾದ ಸಮಯದಲ್ಲಿ ವಿಠಲ್ ಅವರು ಮಂಗಳೂರಿನ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪದವಿ ಓದುತ್ತಿದ್ದರು. ವಿಠಲ್ ಪರೀಕ್ಷೆ ಬರೆಯುವಾಗ ಪೊಲೀಸರು ಕೈಯಲ್ಲಿದ್ದ ಕೋಳ ಕೂಡ ತೆಗೆದಿರಲಿಲ್ಲ. ಈ ಘಟನೆ ರಾಜ್ಯಾದ್ಯಂತ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು.

3 / 5
ವಿಠಲ್ ಅವರು ತಮ್ಮ ಮೇಲಿನ ಆರೋಪದ ವಿರುದ್ಧ ಸತತ ಹತ್ತು ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದರು. 2021ರಲ್ಲಿ ಅವರು ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿತ್ತು. ಈ ಸಿನಿಮಾದಲ್ಲಿ ವಿಠಲ್ ಮಲೆಕುಡಿಯ ಅವರ ಪಾತ್ರವನ್ನು ರಂಗಭೂಮಿ ಕಲಾವಿದ ಶೃಂಗ ಬಿ.ವಿ. ನಿಭಾಯಿಸಿದ್ದಾರೆ.

ವಿಠಲ್ ಅವರು ತಮ್ಮ ಮೇಲಿನ ಆರೋಪದ ವಿರುದ್ಧ ಸತತ ಹತ್ತು ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದರು. 2021ರಲ್ಲಿ ಅವರು ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿತ್ತು. ಈ ಸಿನಿಮಾದಲ್ಲಿ ವಿಠಲ್ ಮಲೆಕುಡಿಯ ಅವರ ಪಾತ್ರವನ್ನು ರಂಗಭೂಮಿ ಕಲಾವಿದ ಶೃಂಗ ಬಿ.ವಿ. ನಿಭಾಯಿಸಿದ್ದಾರೆ.

4 / 5
ದೇವರಾಜ್ ಆರ್. ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸತ್ಯ ಹೆಗ್ಡೆ ಸಹ ನಿರ್ಮಾಣವಿದೆ. ಶೃಂಗ ಬಿ.ವಿ. ಜೊತೆ ಬಾಲಾಜಿ ಮನೋಹರ್, ಸಂಪತ್, ಎಂ.ಡಿ. ಪಲ್ಲವಿ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಮುಂತಾದವರು ನಟಿಸಿದ್ದಾರೆ. ಶಿವು ಬಿ.ಕೆ. ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ.

ದೇವರಾಜ್ ಆರ್. ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸತ್ಯ ಹೆಗ್ಡೆ ಸಹ ನಿರ್ಮಾಣವಿದೆ. ಶೃಂಗ ಬಿ.ವಿ. ಜೊತೆ ಬಾಲಾಜಿ ಮನೋಹರ್, ಸಂಪತ್, ಎಂ.ಡಿ. ಪಲ್ಲವಿ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಮುಂತಾದವರು ನಟಿಸಿದ್ದಾರೆ. ಶಿವು ಬಿ.ಕೆ. ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ.

5 / 5
Follow Us
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ