AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳಿ ಶಾಲೆಗೆ: ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ, ಇಲ್ಲಿವೆ ಫೋಟೋಸ್​

ಕರ್ನಾಟಕದಲ್ಲಿ 2025-26ನೇ ಶೈಕ್ಷಣಿಕ ವರ್ಷ ಆರಂಭವಾಗಿದೆ. ಶಾಲೆಗಳು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸಲ್ಪಟ್ಟಿವೆ. ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಮೊದಲ ದಿನವೇ ಶಿಕ್ಷಣ ಇಲಾಖೆ ಮಕ್ಕಳಿಗೆ ಮೊಟ್ಟೆ ವಿತರಿಸಿದೆ. ಈ ಮಧ್ಯೆ ಗದಗಿನಲ್ಲಿ ಶಾಲಾ ಬಸ್ ಪಲ್ಟಿಯಾದ ಘಟನೆ ಸಂಭವಿಸಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 29, 2025 | 3:08 PM

Share
ಕರ್ನಾಟಕದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭವಾಗಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳು ಇಂದಿನಿಂದ ಆರಂಭಗೊಂಡಿವೆ. ಆ ಮೂಲಕ ಬೇಸಿಗೆ ರಜೆ ಮುಗಿಸಿ ಮಕ್ಕಳು ಶಾಲೆಗಳತ್ತ ಮುಖ ಮಾಡಿದ್ದಾರೆ.

ಕರ್ನಾಟಕದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭವಾಗಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳು ಇಂದಿನಿಂದ ಆರಂಭಗೊಂಡಿವೆ. ಆ ಮೂಲಕ ಬೇಸಿಗೆ ರಜೆ ಮುಗಿಸಿ ಮಕ್ಕಳು ಶಾಲೆಗಳತ್ತ ಮುಖ ಮಾಡಿದ್ದಾರೆ.

1 / 7
ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಛಗೊಳಿ, ತಳಿರು ತೋರಣ, ರಂಗೋಲೆ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರುಗಳಿಗೆ ಶಿಕ್ಷಣ ಇಲಾಖೆ ಸೂಚಿಸಿತ್ತು.

ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಛಗೊಳಿ, ತಳಿರು ತೋರಣ, ರಂಗೋಲೆ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರುಗಳಿಗೆ ಶಿಕ್ಷಣ ಇಲಾಖೆ ಸೂಚಿಸಿತ್ತು.

2 / 7
ಇಂದು ಬೆಂಗಳೂರಿನ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಇಂದು ಬೆಂಗಳೂರಿನ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

3 / 7
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನೂರಾರು ಕನಸುಗಳನ್ನು ಹೊತ್ತು ಶಾಲೆಗಳತ್ತ ಹೆಜ್ಜೆಹಾಕುತ್ತಿರುವ ನಾಡಿನ ಮಕ್ಕಳಿಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನೂರಾರು ಕನಸುಗಳನ್ನು ಹೊತ್ತು ಶಾಲೆಗಳತ್ತ ಹೆಜ್ಜೆಹಾಕುತ್ತಿರುವ ನಾಡಿನ ಮಕ್ಕಳಿಗೆ ಶುಭ ಕೋರಿದ್ದಾರೆ.

4 / 7
ಈ ವೇಳೆ 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ ಮಾಡಿದರು. ಬಳಿಕ ಶಾಲಾ ಕೊಠಡಿಗಳ ಪರಿಶೀಲನೆ ಕೂಡ ಮಾಡಿದ್ದಾರೆ.

ಈ ವೇಳೆ 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ ಮಾಡಿದರು. ಬಳಿಕ ಶಾಲಾ ಕೊಠಡಿಗಳ ಪರಿಶೀಲನೆ ಕೂಡ ಮಾಡಿದ್ದಾರೆ.

5 / 7
ಇನ್ನು ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ವಾಗತಿಸಿದ್ದಾರೆ. ಇತ್ತ ಶಿಕ್ಷಣ ಇಲಾಖೆ ಕೂಡ ಮೊದಲ ದಿನವೇ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಿದೆ.

ಇನ್ನು ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ವಾಗತಿಸಿದ್ದಾರೆ. ಇತ್ತ ಶಿಕ್ಷಣ ಇಲಾಖೆ ಕೂಡ ಮೊದಲ ದಿನವೇ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಿದೆ.

6 / 7
ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿಯಾದ ಘಟನೆ ಗದಗ ನಗರದ R.K.ನಗರ ಬಳಿಯ ಅಂಡರ್​ಪಾಸ್​ನಲ್ಲಿ ನಡೆದಿದೆ. ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸ್​​​ಗೆ ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಪಲ್ಟಿ ಹೊಡೆದಿತ್ತು. ವಿದ್ಯಾರ್ಥಿಗಳನ್ನು ಕರೆತರಲು ಹೊರಟಿದ್ದಾಗ ಅವಘಡ ಸಂಭವಿಸಿದ್ದು, ಭಾರೀ ದುರಂತ ತಪ್ಪಿದೆ.

ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿಯಾದ ಘಟನೆ ಗದಗ ನಗರದ R.K.ನಗರ ಬಳಿಯ ಅಂಡರ್​ಪಾಸ್​ನಲ್ಲಿ ನಡೆದಿದೆ. ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸ್​​​ಗೆ ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಪಲ್ಟಿ ಹೊಡೆದಿತ್ತು. ವಿದ್ಯಾರ್ಥಿಗಳನ್ನು ಕರೆತರಲು ಹೊರಟಿದ್ದಾಗ ಅವಘಡ ಸಂಭವಿಸಿದ್ದು, ಭಾರೀ ದುರಂತ ತಪ್ಪಿದೆ.

7 / 7
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ