AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BWF World C’ships: 15 ವರ್ಷಗಳ ಬರ ಅಂತ್ಯ; ಇತಿಹಾಸ ಸೃಷ್ಟಿಸಿದ ತ್ರಿಶಾ- ಗಾಯತ್ರಿ ಜೋಡಿ

World Badminton Championships 2026: ದೆಹಲಿಯಲ್ಲಿ ನಡೆಯುತ್ತಿರುವ 2026 ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತ್ರಿಶಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಜೋಡಿ ಐತಿಹಾಸಿಕ ಜಯ ಸಾಧಿಸಿದೆ. ಕ್ವಾರ್ಟರ್ ಫೈನಲ್‌ನಲ್ಲಿ ಚೀನಾ ಜೋಡಿಯನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸುವುದರ ಮೂಲಕ ಭಾರತಕ್ಕೆ ಕನಿಷ್ಠ ಕಂಚಿನ ಪದಕವನ್ನು ಖಚಿತಪಡಿಸಿದೆ. ಇದು ಕಳೆದ 15 ವರ್ಷಗಳಲ್ಲಿ ಭಾರತ ಮಹಿಳಾ ಡಬಲ್ಸ್ ವಿಭಾಗದಲ್ಲಿ ಗೆಲ್ಲುತ್ತಿರುವ ಮೊದಲ ವಿಶ್ವ ಚಾಂಪಿಯನ್‌ಶಿಪ್ ಪದಕವಾಗಿದೆ, ಭಾರತೀಯ ಬ್ಯಾಡ್ಮಿಂಟನ್‌ಗೆ ಇದೊಂದು ಮಹತ್ವದ ಹೆಜ್ಜೆಯಾಗಿದೆ.

ಪೃಥ್ವಿಶಂಕರ
|

Updated on: Aug 21, 2026 | 4:32 PM

Share
ದೆಹಲಿಯಲ್ಲಿ ನಡೆಯುತ್ತಿರುವ 2026 ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಐದನೇ ದಿನದಂದು ಭಾರತದ ಮಹಿಳಾ ಬ್ಯಾಡ್ಮಿಂಟನ್ ಡಬಲ್ಸ್ ಜೋಡಿ ತ್ರಿಶಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಐತಿಹಾಸಿಕ ಜಯ ಸಾಧಿಸುವ ಮೂಲಕ ಸೆಮಿಫೈನಲ್​ಗೆ ಅರ್ಹತೆ ಪಡೆದಿದೆ. ಈ ಮೂಲಕ ಭಾರತಕ್ಕೆ ಕನಿಷ್ಠ ಕಂಚಿನ ಪದಕವನ್ನು ಖಚಿತಪಡಿಸಿದೆ.

ದೆಹಲಿಯಲ್ಲಿ ನಡೆಯುತ್ತಿರುವ 2026 ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಐದನೇ ದಿನದಂದು ಭಾರತದ ಮಹಿಳಾ ಬ್ಯಾಡ್ಮಿಂಟನ್ ಡಬಲ್ಸ್ ಜೋಡಿ ತ್ರಿಶಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಐತಿಹಾಸಿಕ ಜಯ ಸಾಧಿಸುವ ಮೂಲಕ ಸೆಮಿಫೈನಲ್​ಗೆ ಅರ್ಹತೆ ಪಡೆದಿದೆ. ಈ ಮೂಲಕ ಭಾರತಕ್ಕೆ ಕನಿಷ್ಠ ಕಂಚಿನ ಪದಕವನ್ನು ಖಚಿತಪಡಿಸಿದೆ.

1 / 5
ಶುಕ್ರವಾರ ನಡೆದ ರಣ ರೋಚಕ ಪಂದ್ಯದಲ್ಲಿ, ಶ್ರೇಯಾಂಕವಿಲ್ಲದ ತ್ರಿಶಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಜೋಡಿ 1 ಗಂಟೆ 9 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಚೀನಾದ ಪ್ರಬಲ ಜೋಡಿ ಜಿಯಾ ಯಿ ಫ್ಯಾನ್ ಮತ್ತು ಜಾಂಗ್ ಶು ಜಿಯಾನ್ ಅವರನ್ನು 16-21, 21-15, 21-13 ಸೆಟ್‌ಗಳಿಂದ ಸೋಲಿಸಿತು.

ಶುಕ್ರವಾರ ನಡೆದ ರಣ ರೋಚಕ ಪಂದ್ಯದಲ್ಲಿ, ಶ್ರೇಯಾಂಕವಿಲ್ಲದ ತ್ರಿಶಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಜೋಡಿ 1 ಗಂಟೆ 9 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಚೀನಾದ ಪ್ರಬಲ ಜೋಡಿ ಜಿಯಾ ಯಿ ಫ್ಯಾನ್ ಮತ್ತು ಜಾಂಗ್ ಶು ಜಿಯಾನ್ ಅವರನ್ನು 16-21, 21-15, 21-13 ಸೆಟ್‌ಗಳಿಂದ ಸೋಲಿಸಿತು.

2 / 5
ಈ ಗೆಲುವು ಭಾರತೀಯ ಬ್ಯಾಡ್ಮಿಂಟನ್‌ಗೆ ಮಹತ್ವದ್ದಾಗಿದೆ, ಏಕೆಂದರೆ ಇದು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಮಹಿಳಾ ಡಬಲ್ಸ್ ವಿಭಾಗದಲ್ಲಿ ಭಾರತ ಕಳೆದ 15 ವರ್ಷಗಳಿಂದ ಪದಕ ಗೆದ್ದಿಲ್ಲ. ಕೊನೆಯ ಬಾರಿಗೆ 2011 ರಲ್ಲಿ ಭಾರತದ  ಜ್ವಾಲಾ ಗುಟ್ಟಾ ಮತ್ತು ಅಶ್ವಿನಿ ಪೊನ್ನಪ್ಪ ಜೋಡಿ ಕಂಚಿನ ಪದಕ ಗೆದ್ದಿತ್ತು.

ಈ ಗೆಲುವು ಭಾರತೀಯ ಬ್ಯಾಡ್ಮಿಂಟನ್‌ಗೆ ಮಹತ್ವದ್ದಾಗಿದೆ, ಏಕೆಂದರೆ ಇದು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಮಹಿಳಾ ಡಬಲ್ಸ್ ವಿಭಾಗದಲ್ಲಿ ಭಾರತ ಕಳೆದ 15 ವರ್ಷಗಳಿಂದ ಪದಕ ಗೆದ್ದಿಲ್ಲ. ಕೊನೆಯ ಬಾರಿಗೆ 2011 ರಲ್ಲಿ ಭಾರತದ ಜ್ವಾಲಾ ಗುಟ್ಟಾ ಮತ್ತು ಅಶ್ವಿನಿ ಪೊನ್ನಪ್ಪ ಜೋಡಿ ಕಂಚಿನ ಪದಕ ಗೆದ್ದಿತ್ತು.

3 / 5
ದೆಹಲಿಯ ಇಂದಿರಾ ಗಾಂಧಿ ಅರೆನಾದಲ್ಲಿ ನಡೆದ ಈ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ತ್ರಿಶಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಎದುರು ಮೊದಲ ಗೇಮ್​ನ ಆರಂಭದಲ್ಲಿ ಚೀನಾ ಆಟಗಾರ್ತಿಯರು 1-6 ಅಂತರದಲ್ಲಿ ಮುನ್ನಡೆ ಸಾಧಿಸಿದರು. ನಂತರ ಭಾರತೀಯ ಜೋಡಿ ಸತತ ಆರು ಪಾಯಿಂಟ್‌ಗಳನ್ನು ಗಳಿಸಿ ಅಂತರವನ್ನು 8-9ಕ್ಕೆ ಇಳಿಸಿತ್ತಾದರೂ ಚೀನಾ ಜೋಡಿ ಮೊದಲ ಗೇಮ್ ಅನ್ನು 21-16ರಿಂದ ಗೆದ್ದುಕೊಂಡಿತು.

ದೆಹಲಿಯ ಇಂದಿರಾ ಗಾಂಧಿ ಅರೆನಾದಲ್ಲಿ ನಡೆದ ಈ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ತ್ರಿಶಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಎದುರು ಮೊದಲ ಗೇಮ್​ನ ಆರಂಭದಲ್ಲಿ ಚೀನಾ ಆಟಗಾರ್ತಿಯರು 1-6 ಅಂತರದಲ್ಲಿ ಮುನ್ನಡೆ ಸಾಧಿಸಿದರು. ನಂತರ ಭಾರತೀಯ ಜೋಡಿ ಸತತ ಆರು ಪಾಯಿಂಟ್‌ಗಳನ್ನು ಗಳಿಸಿ ಅಂತರವನ್ನು 8-9ಕ್ಕೆ ಇಳಿಸಿತ್ತಾದರೂ ಚೀನಾ ಜೋಡಿ ಮೊದಲ ಗೇಮ್ ಅನ್ನು 21-16ರಿಂದ ಗೆದ್ದುಕೊಂಡಿತು.

4 / 5
ಆದರೆ ಎರಡನೇ ಗೇಮ್ ಅನ್ನು ಭಾರತದ ಜೋಡಿ 21-15ರಿಂದ ಗೆದ್ದು ಪಂದ್ಯವನ್ನು ಸಮಬಲಗೊಳಿಸಿತು. ಮೂರನೇ ಗೇಮ್‌ನಲ್ಲಿ, ಭಾರತೀಯ ಜೋಡಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ವಿರಾಮದ ವೇಳೆಗೆ 11-5 ಅಂತರದ ಮುನ್ನಡೆ ಸಾಧಿಸಿತು. ಭಾರತದ ದಾಳಿ ಮತ್ತು ಒತ್ತಡದಿಂದಾಗಿ ಚೀನಾದ ಆಟಗಾರ್ತಿಯರು ಅನಗತ್ಯ ತಪ್ಪುಗಳನ್ನು ಮಾಡಲು ಪ್ರಾರಂಭಿಸಿದರು. ಇದರ ಲಾಭ ಪಡೆದ ಭಾರತೀಯ ಜೋಡಿ ಒಂಬತ್ತು ಮ್ಯಾಚ್ ಪಾಯಿಂಟ್‌ಗಳನ್ನು ಗಳಿಸಿ ಅಂತಿಮವಾಗಿ ಪಂದ್ಯವನ್ನು 21-13 ಅಂತರದಿಂದ ಗೆದ್ದಿತು.

ಆದರೆ ಎರಡನೇ ಗೇಮ್ ಅನ್ನು ಭಾರತದ ಜೋಡಿ 21-15ರಿಂದ ಗೆದ್ದು ಪಂದ್ಯವನ್ನು ಸಮಬಲಗೊಳಿಸಿತು. ಮೂರನೇ ಗೇಮ್‌ನಲ್ಲಿ, ಭಾರತೀಯ ಜೋಡಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ವಿರಾಮದ ವೇಳೆಗೆ 11-5 ಅಂತರದ ಮುನ್ನಡೆ ಸಾಧಿಸಿತು. ಭಾರತದ ದಾಳಿ ಮತ್ತು ಒತ್ತಡದಿಂದಾಗಿ ಚೀನಾದ ಆಟಗಾರ್ತಿಯರು ಅನಗತ್ಯ ತಪ್ಪುಗಳನ್ನು ಮಾಡಲು ಪ್ರಾರಂಭಿಸಿದರು. ಇದರ ಲಾಭ ಪಡೆದ ಭಾರತೀಯ ಜೋಡಿ ಒಂಬತ್ತು ಮ್ಯಾಚ್ ಪಾಯಿಂಟ್‌ಗಳನ್ನು ಗಳಿಸಿ ಅಂತಿಮವಾಗಿ ಪಂದ್ಯವನ್ನು 21-13 ಅಂತರದಿಂದ ಗೆದ್ದಿತು.

5 / 5
Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!