ಬ್ರೇಕ್​ ಫೇಲ್​ ಆಗಿ ಹಳ್ಳಕ್ಕೆ ಉರುಳಿಬಿದ್ದ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ

Updated By: ರಮೇಶ್ ಬಿ. ಜವಳಗೇರಾ

Updated on: Apr 22, 2025 | 6:11 PM

ಬೆಂಗಳೂರಿನಿಂದ ಸಂಗಮ ನೋಡಲು ತೆರಳಿದ್ದ ಎರಡು ಖಾಸಗಿ ಬಸ್​ಗಳು ಅಪಘಾತಕ್ಕೀಡಾಗಿವೆ. ಮೊದಲ ಬಸ್​ ಬ್ರೇಕ್​ ಫೇಲ್​ ಆಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಇದರ ಹಿಂದೆ ಇದ್ದ ಮತ್ತೊಂದು ಬಸ್​ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಆದ್ರೆ, ಹಳ್ಳಕ್ಕೆ ಬಿದ್ದ ಬಸ್​ನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಹಳ್ಳಕ್ಕೆ ಬಸ್​ ಉರುಳಿಬಿದ್ದಿರುವ ಫೋಟೋಗಳು ಇಲ್ಲಿವೆ.

1 / 8
ಪ್ರವಾಸಿಗರ ಬಸ್​ವೊಂದು (private bus) ಹಳ್ಳಕ್ಕೆ ಬಿದ್ದಿದೆ. ಬ್ರೇಕ್​ ಫೇಲ್​ (Break fail) ಆಗಿ ಖಾಸಗಿ ಬಸ್ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ರಾಮನಗರ (Ramanagara) ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ (sangama )ಬಳಿ ನಡೆದಿದೆ

ಪ್ರವಾಸಿಗರ ಬಸ್​ವೊಂದು (private bus) ಹಳ್ಳಕ್ಕೆ ಬಿದ್ದಿದೆ. ಬ್ರೇಕ್​ ಫೇಲ್​ (Break fail) ಆಗಿ ಖಾಸಗಿ ಬಸ್ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ರಾಮನಗರ (Ramanagara) ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ (sangama )ಬಳಿ ನಡೆದಿದೆ

2 / 8
ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಪ್ರವಾಸಿಗರು ಬೆಂಗಳೂರಿನಿಂದ ಸಂಗಮ ನೋಡಲು ಬಂದಿದ್ದರು. ಈ ವೇಳೆ ರಸ್ತೆ ತಿರುವಿನಲ್ಲಿ ಬ್ರೇಕ್ ಫೇಲ್​ ಆಗಿ ಬಸ್ ಹಳ್ಳಕ್ಕೆ ಉರುಳಿಬಿದ್ದಿದೆ.

ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಪ್ರವಾಸಿಗರು ಬೆಂಗಳೂರಿನಿಂದ ಸಂಗಮ ನೋಡಲು ಬಂದಿದ್ದರು. ಈ ವೇಳೆ ರಸ್ತೆ ತಿರುವಿನಲ್ಲಿ ಬ್ರೇಕ್ ಫೇಲ್​ ಆಗಿ ಬಸ್ ಹಳ್ಳಕ್ಕೆ ಉರುಳಿಬಿದ್ದಿದೆ.

3 / 8
ಸದ್ಯ ಗಾಯಾಳುಗಳಿಗೆ ಕನಕಪುರದ ಸರ್ಕಾರಿ ಆಸ್ಪತ್ರೆಗೆ ಚಕಿತ್ಸೆ ನೀಡಲಾಗುತ್ತಿದ್ದು, ಕೆಲ ಗಾಯಾಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.

ಸದ್ಯ ಗಾಯಾಳುಗಳಿಗೆ ಕನಕಪುರದ ಸರ್ಕಾರಿ ಆಸ್ಪತ್ರೆಗೆ ಚಕಿತ್ಸೆ ನೀಡಲಾಗುತ್ತಿದ್ದು, ಕೆಲ ಗಾಯಾಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.

4 / 8
ಕ್ರಿಶ್ಚಿಯನ್ನರ ಹಬ್ಬದ ಹಿನ್ನೆಲೆಯಲ್ಲಿ ಮೊದಲು ಬೆಟ್ಟದ ಹಲಸೂರು ಗ್ರಾಮಕ್ಕೆ ಬಂದಿದ್ದರು. ಹಬ್ಬದ ಊಟ ಮುಗಿಸಿಕೊಂಡು ಸಂಗಮ‌ ನೋಡಲು ತೆರಳುವ ವೇಳೆ ಈ ದುರಂತ ಸಂಭವಿಸಿದೆ. ಗಾಯಾಳುಗಳು ಬೆಂಗಳೂರಿನ ಈಜಿಪುರ ನಿವಾಸಿಗಳು ಎಂದು ತಿಳಿದುಬಂದಿದೆ.

ಕ್ರಿಶ್ಚಿಯನ್ನರ ಹಬ್ಬದ ಹಿನ್ನೆಲೆಯಲ್ಲಿ ಮೊದಲು ಬೆಟ್ಟದ ಹಲಸೂರು ಗ್ರಾಮಕ್ಕೆ ಬಂದಿದ್ದರು. ಹಬ್ಬದ ಊಟ ಮುಗಿಸಿಕೊಂಡು ಸಂಗಮ‌ ನೋಡಲು ತೆರಳುವ ವೇಳೆ ಈ ದುರಂತ ಸಂಭವಿಸಿದೆ. ಗಾಯಾಳುಗಳು ಬೆಂಗಳೂರಿನ ಈಜಿಪುರ ನಿವಾಸಿಗಳು ಎಂದು ತಿಳಿದುಬಂದಿದೆ.

5 / 8
ಸದ್ಯ ಗಾಯಾಳುಗಳಿಗೆ ಕನಕಪುರದ ಸರ್ಕಾರಿ ಆಸ್ಪತ್ರೆಗೆ ಚಕಿತ್ಸೆ ನೀಡಲಾಗುತ್ತಿದ್ದು, ಕೆಲ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.

ಸದ್ಯ ಗಾಯಾಳುಗಳಿಗೆ ಕನಕಪುರದ ಸರ್ಕಾರಿ ಆಸ್ಪತ್ರೆಗೆ ಚಕಿತ್ಸೆ ನೀಡಲಾಗುತ್ತಿದ್ದು, ಕೆಲ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.

6 / 8
ಎರಡು ಬಸ್​ಗಳಲ್ಲಿ ಬೆಂಗಳೂರಿನಿಂದ ಬೆಟ್ಟದ ಹಲಸೂರಿಗೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ಬಳಿಕ ಸಂಗಮ ನೋಡಲು ತೆರಳುತ್ತಿದ್ದರು. ಈ ವೇಳೆ ಮೊದಲ ಬಸ್ ರಸ್ತೆ ತಿರುವಿನಲ್ಲಿ ಬ್ರೇಕ್​​ ಫೇಲ್​ ಆಗಿ ಹಳಕ್ಕೆ ಬಿದ್ದಿದ್ದರೆ, ಇದರ ಹಿಂದೆ ಇದ್ದ ಮತ್ತೊಂದು ಬಸ್​ ಕೂಡ ರಸ್ತೆ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಎರಡು ಬಸ್​ಗಳಲ್ಲಿ ಬೆಂಗಳೂರಿನಿಂದ ಬೆಟ್ಟದ ಹಲಸೂರಿಗೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ಬಳಿಕ ಸಂಗಮ ನೋಡಲು ತೆರಳುತ್ತಿದ್ದರು. ಈ ವೇಳೆ ಮೊದಲ ಬಸ್ ರಸ್ತೆ ತಿರುವಿನಲ್ಲಿ ಬ್ರೇಕ್​​ ಫೇಲ್​ ಆಗಿ ಹಳಕ್ಕೆ ಬಿದ್ದಿದ್ದರೆ, ಇದರ ಹಿಂದೆ ಇದ್ದ ಮತ್ತೊಂದು ಬಸ್​ ಕೂಡ ರಸ್ತೆ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ.

7 / 8
ಮೊದಲ ಬಸ್ ರಸ್ತೆ ತಿರುವಿನಲ್ಲಿ ಬ್ರೇಕ್​​ ಫೇಲ್​ ಆಗಿ ಹಳಕ್ಕೆ ಬಿದ್ದಿದ್ದರೆ, ಇದರ ಹಿಂದೆ ಇದ್ದ ಮತ್ತೊಂದು ಬಸ್​ ಕೂಡ ರಸ್ತೆ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಎರಡನೇ ಬಸ್​ನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬಸ್​ನ ಮುಂಭಾಗ ಜಖಂ ಆಗಿದೆ.

ಮೊದಲ ಬಸ್ ರಸ್ತೆ ತಿರುವಿನಲ್ಲಿ ಬ್ರೇಕ್​​ ಫೇಲ್​ ಆಗಿ ಹಳಕ್ಕೆ ಬಿದ್ದಿದ್ದರೆ, ಇದರ ಹಿಂದೆ ಇದ್ದ ಮತ್ತೊಂದು ಬಸ್​ ಕೂಡ ರಸ್ತೆ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಎರಡನೇ ಬಸ್​ನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬಸ್​ನ ಮುಂಭಾಗ ಜಖಂ ಆಗಿದೆ.

8 / 8

ಬಸ್​ ಸಂಪೂರ್ಣವಾಗಿ ಉಲ್ಟಾ ಬಿದ್ದಿದೆ. ಪರಿಣಾಮ ಬಸ್​ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸ್ಥಿತಿ ಗಂಭೀರಗಳಾಗಿವೆ. ಇದರಿಂದ ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಬಸ್​ ಸಂಪೂರ್ಣವಾಗಿ ಉಲ್ಟಾ ಬಿದ್ದಿದೆ. ಪರಿಣಾಮ ಬಸ್​ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸ್ಥಿತಿ ಗಂಭೀರಗಳಾಗಿವೆ. ಇದರಿಂದ ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.