ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.
Updated on: Dec 07, 2023 | 12:34 PM
Share

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಳಿಲು ಮನೆಯೊಳೆಗೆ ಬಂದರೆ ಅದರ ವಿಶೇಷತೆ ಏನು ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ತೊಂದರೆ!
ಗ್ಯಾಸ್ ಸೋರಿಕೆ: ಬೆಂಕಿಯ ಫೋರ್ಸ್ಗೆ ಇಡೀ ಮನೆಯೇ ಛಿದ್ರ ಛಿದ್ರ
‘ಬಿಗ್ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ
ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ
ಪಾಕ್ ನಾಯಕನೊಂದಿಗೆ ವಿಶ್ವಕಪ್ನಲ್ಲೂ ಕೈಕುಲುಕುದ ಸೂರ್ಯ
ಇಶಾ ಫೌಂಡೇಷನ್ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ