ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.
Updated on: Dec 07, 2023 | 12:34 PM
Share

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Photo Gallery
ಸಿಎಂ ಡಿಕೆಶಿಯನ್ನ ವೇದಿಕೆಯಲ್ಲಿ ಭುಜ ತಟ್ಟಿ, ಕೈಹಿಡಿದು ಕರೆದೊಯ್ದ ಪ್ರಧಾನಿ
ರಾಜ್ಯದ ಅಭಿವೃದ್ಧಿಗೆ ಸಹಕರಿಸುವಂತೆ ಮೋದಿಗೆ ಡಿಕೆ ಶಿವಕುಮಾರ್ ಮನವಿ
ಪ್ರಧಾನಿ ಮೋದಿಗೆ ಅಪೂರ್ವ ಉಡುಗೊರೆ
ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಒಂದೇ ಕುಟುಂಬದ 6 ಜನರ ರಕ್ಷಣೆ!
ಮೈಸೂರಿನಲ್ಲಿ 'ಮೋದಿ... ಮೋದಿ...' ಜಯಘೋಷ
ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ
‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್ಗೆ ಬರುತ್ತಿದ್ದರು ಅಂಬರೀಶ್’
ಮೋದಿಗೆ ಸಿಎಂ ಡಿಕೆಶಿಯಿಂದ ಸ್ವಾಗತ
ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ
ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ರೈಲ್ವೆ ಸೇತುವೆಯ ಶೀಟ್
ಹೆಗಲ ಮೇಲೆ ಮೊಸಳೆ ಹೊತ್ತು ಪೊಲೀಸ್ ಠಾಣೆಗೆ ಬಂದ ಬಿಹಾರದ ಯುವಕ; ವಿಡಿಯೋ ವೈರಲ್
ಆಂಧ್ರದ ಭೋಗಾಪುರಂನಲ್ಲಿ 13,000 ವಿದ್ಯಾರ್ಥಿಗಳ ನೃತ್ಯಕ್ಕೆ ಪ್ರಧಾನಿ ಮೋದಿ ಫಿದಾ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!




