ರಾಯಚೂರು: ಸಿಂಧನೂರು ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ

| Updated By: ರಮೇಶ್ ಬಿ. ಜವಳಗೇರಾ

Updated on: Dec 07, 2023 | 12:34 PM

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಲಾರಿ ಹಾಗೂ ಟಾಟಾ ಏಸ್​​ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ.

1 / 6
ರಾಯಚೂರು  ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್​​ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಟಾಟಾ ಏಸ್​​ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

2 / 6
ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಟಾಟಾ ಏಸ್ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೊರಟಿತ್ತು. ಆದ್ರೆ, ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

3 / 6
ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು

4 / 6
ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್​ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್​ನಲ್ಲಿ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು.

5 / 6
ಇನ್ನು ಘಟನೆಯಲ್ಲಿ  ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

6 / 6
ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.