Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ

14 ವರ್ಷದ ಬಾಲಕಿ 30 ಕಿ.ಮೀ ಸಮುದ್ರ ಈಜುವ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಈ ಯುವ ಪ್ರತಿಭೆ, ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸ ಇವರ ಯಶಸ್ಸಿನ ಹಿಂದಿನ ರಹಸ್ಯವೆಂದು ಹೇಳಿದ್ದಾರೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 30, 2025 | 3:00 PM

30 ಕಿ.ಮೀ ಸಮುದ್ರ ಈಜುವ ಮೂಲಕ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿಯ ಸಾಧನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕುಪ್ಪಳ್ಳಿ ಗ್ರಾಮದ ಶಿಕ್ಷಕರಾದ ಮಂಜುನಾಥ್ ಮತ್ತು ರೂಪ ದಂಪತಿಗಳ ಪುತ್ರಿ 14 ವರ್ಷದ ಡಿಂಪಲ್ ಸೋನಾಕ್ಷಿ ಎಂ.ಗೌಡ ಸಾಧನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

30 ಕಿ.ಮೀ ಸಮುದ್ರ ಈಜುವ ಮೂಲಕ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿಯ ಸಾಧನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕುಪ್ಪಳ್ಳಿ ಗ್ರಾಮದ ಶಿಕ್ಷಕರಾದ ಮಂಜುನಾಥ್ ಮತ್ತು ರೂಪ ದಂಪತಿಗಳ ಪುತ್ರಿ 14 ವರ್ಷದ ಡಿಂಪಲ್ ಸೋನಾಕ್ಷಿ ಎಂ.ಗೌಡ ಸಾಧನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

1 / 5
ಬಯಲು ಸೀಮೆ ಕೋಲಾರದಲ್ಲಿ ಹುಟ್ಟಿ ಸಮುದ್ರದಲ್ಲಿ ಈಜುವ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಸ್ಥಾನದಲ್ಲಿ ಗೆದ್ದು ಬೀಗುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಗಡಿಭಾಗದ ಗ್ರಾಮೀಣ ಪ್ರತಿಭೆ ಸೋನಾಕ್ಷಿ ಸತತ ಪರಿಶ್ರಮದಿಂದ ಇಂಥದೊಂದು ಸಾಧನೆ ಮಾಡಿದ್ದಾರೆ. ಗುಜರಾತ್​ನ ಅದ್ರಿ ಬೀಚಿನಿಂದ ವೀರವಾಲ್ ಜೆಟ್ಟಿರವರೆಗೆ 30 ಕಿ.ಮೀ ಸಮುದ್ರ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಗೆಲುವಿನ ದಾಖಲೆ ಬರೆದಿದ್ದಾರೆ. 

ಬಯಲು ಸೀಮೆ ಕೋಲಾರದಲ್ಲಿ ಹುಟ್ಟಿ ಸಮುದ್ರದಲ್ಲಿ ಈಜುವ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಸ್ಥಾನದಲ್ಲಿ ಗೆದ್ದು ಬೀಗುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಗಡಿಭಾಗದ ಗ್ರಾಮೀಣ ಪ್ರತಿಭೆ ಸೋನಾಕ್ಷಿ ಸತತ ಪರಿಶ್ರಮದಿಂದ ಇಂಥದೊಂದು ಸಾಧನೆ ಮಾಡಿದ್ದಾರೆ. ಗುಜರಾತ್​ನ ಅದ್ರಿ ಬೀಚಿನಿಂದ ವೀರವಾಲ್ ಜೆಟ್ಟಿರವರೆಗೆ 30 ಕಿ.ಮೀ ಸಮುದ್ರ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಗೆಲುವಿನ ದಾಖಲೆ ಬರೆದಿದ್ದಾರೆ. 

2 / 5
ಕಳೆದ ವರ್ಷ ನವೆಂಬರ್​​ನಲ್ಲಿ ನಡೆದ ರಾಷ್ಟ್ರಮಟ್ಟದ 10 ಕಿಲೋ ಮೀಟರ್ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದ ಡಿಂಪಲ್​ ಸೋನಾಕ್ಷಿ, ಹಾಂಕಾಂಗ್​ನಲ್ಲಿ ನಡೆದಿದ್ದ ಏಷ್ಯನ್ ಈಜು ಚಾಂಪಿಯನ್ ಶಿಪ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ವಿಜಯದುರ್ಗದಲ್ಲಿ ನಡೆದ 15ಕಿ.ಮೀ ಈಜು ಸ್ಪರ್ಧೆಯಲ್ಲಿ ಮಾಲ್ವನ್ ಬೀಚಿನಲ್ಲಿ ನಡೆದ 5 ಕಿ.ಮೀ ಮತ್ತು 10 ಕಿ.ಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದರು. 

ಕಳೆದ ವರ್ಷ ನವೆಂಬರ್​​ನಲ್ಲಿ ನಡೆದ ರಾಷ್ಟ್ರಮಟ್ಟದ 10 ಕಿಲೋ ಮೀಟರ್ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದ ಡಿಂಪಲ್​ ಸೋನಾಕ್ಷಿ, ಹಾಂಕಾಂಗ್​ನಲ್ಲಿ ನಡೆದಿದ್ದ ಏಷ್ಯನ್ ಈಜು ಚಾಂಪಿಯನ್ ಶಿಪ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ವಿಜಯದುರ್ಗದಲ್ಲಿ ನಡೆದ 15ಕಿ.ಮೀ ಈಜು ಸ್ಪರ್ಧೆಯಲ್ಲಿ ಮಾಲ್ವನ್ ಬೀಚಿನಲ್ಲಿ ನಡೆದ 5 ಕಿ.ಮೀ ಮತ್ತು 10 ಕಿ.ಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದರು. 

3 / 5
ಜೊತೆಗೆ ಗುಜರಾತ್​ನ ಪೋರಬಂದರ್​ನಲ್ಲಿ ನಡೆದ ಐದು ಕಿ.ಮೀ ಮತ್ತು 10 ಕಿ.ಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಸೋನಾಕ್ಷಿ, ವಿಶ್ವ ಚಾಂಪಿಯನ್ ಶಿಪ್ ಮತ್ತು ಒಲಂಪಿಕ್ಸ್​ನಲ್ಲಿ ಭಾರತಕ್ಕೆ ಪದಕ ತಂದುಕೊಡುವ ಗುರಿಯನ್ನು ಹೊಂದಿದ್ದಾರೆ. ಇವರ ಸಾಧನೆಗೆ ಈಗಾಗಲೇ ದ್ರೋಣಾಚಾರ್ಯ ಪ್ರಶಸ್ತಿ ಸಿಕ್ಕಿದೆ.

ಜೊತೆಗೆ ಗುಜರಾತ್​ನ ಪೋರಬಂದರ್​ನಲ್ಲಿ ನಡೆದ ಐದು ಕಿ.ಮೀ ಮತ್ತು 10 ಕಿ.ಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಸೋನಾಕ್ಷಿ, ವಿಶ್ವ ಚಾಂಪಿಯನ್ ಶಿಪ್ ಮತ್ತು ಒಲಂಪಿಕ್ಸ್​ನಲ್ಲಿ ಭಾರತಕ್ಕೆ ಪದಕ ತಂದುಕೊಡುವ ಗುರಿಯನ್ನು ಹೊಂದಿದ್ದಾರೆ. ಇವರ ಸಾಧನೆಗೆ ಈಗಾಗಲೇ ದ್ರೋಣಾಚಾರ್ಯ ಪ್ರಶಸ್ತಿ ಸಿಕ್ಕಿದೆ.

4 / 5
ಬೆಂಗಳೂರಿನ ನಿಹಾರ್ ಅಮೀನ್ ರವರ ಡಾಲ್ಫಿನ್ ಅಕಾಡೆಮಿಯಲ್ಲಿ ದಿನನಿತ್ಯ ಆರು ಗಂಟೆ ಈಜು ಅಭ್ಯಾಸ  ಮಾಡುವ ಸೋನಾಕ್ಷಿ ಅವರ ಕಠಿಣ ಪರಿಶ್ರಮದಿಂದಲೇ ಇಂಥದೊಂದು ಸಾಧನೆ ಮಾಡಲು ಸಾಧ್ಯ ಅನ್ನೋದು ಅವರ ಪೊಷಕರ ಮಾತು. ಆದಷ್ಟು ಬೇಗ ಡಿಂಪಲ್​ ಸೋನಾಕ್ಷಿ ಅವರ ಸಾಧನೆಯ ಕನಸು ನನಸಾಗಲಿ ಅನ್ನೋದು ಚಿನ್ನದ ನಾಡಿನ ಜನರ ಆಶಯವಾಗಿದೆ.

ಬೆಂಗಳೂರಿನ ನಿಹಾರ್ ಅಮೀನ್ ರವರ ಡಾಲ್ಫಿನ್ ಅಕಾಡೆಮಿಯಲ್ಲಿ ದಿನನಿತ್ಯ ಆರು ಗಂಟೆ ಈಜು ಅಭ್ಯಾಸ  ಮಾಡುವ ಸೋನಾಕ್ಷಿ ಅವರ ಕಠಿಣ ಪರಿಶ್ರಮದಿಂದಲೇ ಇಂಥದೊಂದು ಸಾಧನೆ ಮಾಡಲು ಸಾಧ್ಯ ಅನ್ನೋದು ಅವರ ಪೊಷಕರ ಮಾತು. ಆದಷ್ಟು ಬೇಗ ಡಿಂಪಲ್​ ಸೋನಾಕ್ಷಿ ಅವರ ಸಾಧನೆಯ ಕನಸು ನನಸಾಗಲಿ ಅನ್ನೋದು ಚಿನ್ನದ ನಾಡಿನ ಜನರ ಆಶಯವಾಗಿದೆ.

5 / 5
Follow us
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ