ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ತಾಯಿ ಆನೆ ಭ್ರೂಣದಲ್ಲೇ ಮರಿಆನೆ ಮೃತಪಟ್ಟಿದೆ.
1 / 6
ನಲವತ್ತೇಳು ವರ್ಷದ ಸುವರ್ಣ ಎಂಬ ಆನೆಗೆ ಪ್ರಸವ ವೇದನೆ ಮುಗಿದರೂ ಮರಿ ಜನನ ಆಗದ ಹಿನ್ನೆಲೆ ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದಾಗ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.
2 / 6
ಸುವರ್ಣ ಜೀವ ಉಳಿಸಲು ವೈದ್ಯರು ಪ್ರಯತ್ನ ಪಟ್ಟಿದ್ದಾರೆ. ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸುವರ್ಣಳಿಗೆ ಪ್ರಾಣಿ ಶಸ್ತ್ರ ಚಿಕಿತ್ಸೆ ತಜ್ಞರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.
3 / 6
ತಾಯಿ ಆನೆ ಉಳಿಸಿಕೊಳ್ಳಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಆನೆ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿ ಕಳವಳ.
4 / 6
ಹಲವಾರು ಜಾತಿಯ ಪ್ರಾಣಿಗಳು, ಪಕ್ಷಿಗಳು ಮತ್ತು ಸಸ್ಯಗಳಿಗೆ ನೆಲೆಯಾಗಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ದಾಖಲೆ ಆದಾಯ ಗಳಿಸಿದೆ.
5 / 6
2022-23ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಒಟ್ಟು 53 ಕೋಟಿ, 89 ಲಕ್ಷ, 75 ಸಾವಿರದಷ್ಟು ಆದಾಯವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಗಳಿಸಿದೆ.