ಗದಗ: ಗ್ರಾಹಕರನ್ನು ಆಕರ್ಷಿಸುತ್ತಿರುವ ಕೇಕ್ನಲ್ಲಿ ತಯಾರಿಸಿದ ಅಯೋಧ್ಯೆ ಶ್ರೀರಾಮ ಮಂದಿರ
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ. ಇದೀಗ, ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.
Updated on: Jan 18, 2024 | 3:09 PM

ಗದಗದಲ್ಲಿ ಬೇಕರಿ ಅಂಗಡಿಯೊಂದರಲ್ಲಿ ಕೇಕ್ ಮೂಲಕ ಸಿದ್ಧಪಡಿಸಿದ ಅಯೋಧ್ಯೆ ಶ್ರೀರಾಮ ಮಂದಿರ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದಲ್ಲೂ ಇದರ ಸಂಭ್ರಮ ಮನೆ ಮಾಡಿದೆ. ರಾಮ ಭಕ್ತರು ಮಣ್ಣಿನಲ್ಲಿ ರಾಮನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ.

ಗದಗ ನಗರದಲ್ಲೂ ಶ್ರೀರಾಮ ಮಂದಿರ ಲೋಕಾರ್ಪಣೆಯ ಸಂಭ್ರಮ ಜೋರಾಗಿಯೇ ಇದೆ. ಸಾಸನೂರ ಬೇಕರಿ ಅಂಗಡಿಯಲ್ಲಿ ಶ್ರೀರಾಮ ಮಂದಿರ ಕಣ್ಮನ ಸೆಳೆಯುತ್ತಿದೆ.

ಕೇಕ್ನಲ್ಲಿ ತಯಾರಾದ ಈ ಸುಂದರ ಅಯೋಧ್ಯೆ ಮಂದಿರವು ಲೈಟಿಂಗ್ಸ್ನಲ್ಲಿ ಝಗಮಗಿಸುತ್ತಿದ್ದು, ಗ್ರಾಹಕರನ್ನು ಆಕರ್ಷಿಸುತ್ತಿದೆ.

ಕೇಕ್ನಲ್ಲಿ ಸಿದ್ಧಪಡಿಸಲಾದ ಈ ರಾಮ ಮಂದಿರ ನೋಡಲು ಜನರು ಅಂಗಡಿಗೆ ಆಗಮಿಸುತ್ತಿದ್ದಾರೆ. ಕೇಕ್ ರಾಮ ಮಂದಿರ ನೋಡಿ ಫಿದಾ ಆದ ಜನರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

20-25 ಕೆಜಿ ಕೇಕ್ನಲ್ಲಿ ಅಯೋಧ್ಯೆ ರಾಮ ಮಂದಿರದ ಮಾದರಿಯನ್ನು ತಯಾರಿಸಲಾಗಿದೆ.

7-10 ಮಂದಿ ಕಾರ್ಮಿಕರ ಕೈಚಳಕದಿಂದ ಕೇಕ್ನಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ.

ಕೇಕ್ನಲ್ಲಿ ತಯಾರಿಸಲಾದ ರಾಮ ಮಂದಿರದ ಮಾದರಿಯನ್ನು ಜನವರಿ 22 ರವರೆಗೆ ಪ್ರದರ್ಶನಕ್ಕೆ ಇಡಲಾಗುತ್ತಿದೆ.

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...
Read More



