AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಸೆಂಚುರಿ ಸ್ಟಾರ್ ಕಳ್ಳ: 1.45 ಕೋಟಿ ಮೌಲ್ಯದ 100 ಬೈಕ್ ವಶಕ್ಕೆ!

ಬೆಂಗಳೂರಿನಲ್ಲೊಬ್ಬ ಖತರ್ನಾಕ್​ ಬೈಕ್ ಕಳ್ಳ ಸಿಕ್ಕಿಬಿದ್ದಿದ್ದಾನೆ. ಈ ಸಾಮಾನ್ಯ ಖದೀಮ ಅಲ್ಲ. ಬೈಕ್ ಕದಿಯುವುದರಲ್ಲಿ ಇವನು ಸೆಂಚುರಿಯನ್ನೇ ಬಾರಿಸಿದ್ದಾನೆ. ಮೂರು ವರ್ಷದಲ್ಲಿ ಈತ ಕಳ್ಳತ ಮಾಡಿದ್ದು 1.45 ಕೋಟಿ ಮೌಲ್ಯದ ಬರೋಬ್ಬರಿ 100 ಬೈಕ್​ಗಳನ್ನು. ಹೌದು.. ಅಚ್ಚರಿ ಅನ್ನಿಸಿದರೂ ಸತ್ಯ. ಹಾಗಾದ್ರೆ, ಈ ಮಹಾ ಖದೀಮ ಯಾರು? ಯಾವ್ಯಾವ ಕಂಪನಿಯ ಎಷ್ಟೆಷ್ಟು ಬೈಕ್ ಕಳ್ಳತನ ಮಾಡಿದ್ದಾನೆ ಎನ್ನುವ ವಿವರ ಇಲ್ಲಿದೆ ನೋಡಿ.

ರಮೇಶ್ ಬಿ. ಜವಳಗೇರಾ
|

Updated on: Feb 28, 2025 | 6:52 PM

Share
ಬೆಂಗಳೂರಿನಲ್ಲೊಬ್ಬ ಖತರ್ನಾಕ್​ ಬೈಕ್ ಕಳ್ಳನನ್ನು ಕೆ.ಆರ್​. ಪುರ ಪೊಲೀಸರು ಬಂಧಿಸಿದ್ದಾರೆ. ಈ ಕಳ್ಳ ಉಳಿದವರಂತೆ ಸಾಮಾನ್ಯ ಕಳ್ಳನಲ್ಲ. ಬೈಕ್ ಕದಿಯುವುದರಲ್ಲಿ ಇವನು ಸೆಂಚುರಿಯನ್ನೇ ಬಾರಿಸಿದ್ದಾನೆ. ಮೂರು ವರ್ಷದಲ್ಲಿ ಈತ ಕಳ್ಳತ ಮಾಡಿದ್ದು ಬರೋಬ್ಬರಿ ನೂರು ಬೈಕ್​.

ಬೆಂಗಳೂರಿನಲ್ಲೊಬ್ಬ ಖತರ್ನಾಕ್​ ಬೈಕ್ ಕಳ್ಳನನ್ನು ಕೆ.ಆರ್​. ಪುರ ಪೊಲೀಸರು ಬಂಧಿಸಿದ್ದಾರೆ. ಈ ಕಳ್ಳ ಉಳಿದವರಂತೆ ಸಾಮಾನ್ಯ ಕಳ್ಳನಲ್ಲ. ಬೈಕ್ ಕದಿಯುವುದರಲ್ಲಿ ಇವನು ಸೆಂಚುರಿಯನ್ನೇ ಬಾರಿಸಿದ್ದಾನೆ. ಮೂರು ವರ್ಷದಲ್ಲಿ ಈತ ಕಳ್ಳತ ಮಾಡಿದ್ದು ಬರೋಬ್ಬರಿ ನೂರು ಬೈಕ್​.

1 / 6
ಆಂಧ್ರಪ್ರದೇಶದ ಬಂಗಾರುಪಾಳ್ಯಂನ ನಿವಾಸಿಯಾದ ಪ್ರಸಾದಬಾಬು ಎಂದು ಈ ಬೈಕ್ ಖದೀಮನನ್ನು ಗುರುತಿಸಲಾಗಿದೆ. ದುಬಾರಿ ಬೈಕ್​ಗಳನ್ನೇ ಟಾರ್ಗೆಟ್​ ಮಾಡ್ತಿದ್ದ ಈತ, ಲಕ್ಷಾಂತರ ರೂಪಾಯಿಯ ಬೈಕ್​ಗಳನ್ನು ಕೇವಲ 15 ರಿಂದ 20 ಸಾವಿರ ರೂಪಾಯಿಗೆ ಮಾರಿಕೊಂಡು ದುಡ್ಡು ಮಾಡಿಕೊಳ್ಳುತ್ತಿದ್ದ.

ಆಂಧ್ರಪ್ರದೇಶದ ಬಂಗಾರುಪಾಳ್ಯಂನ ನಿವಾಸಿಯಾದ ಪ್ರಸಾದಬಾಬು ಎಂದು ಈ ಬೈಕ್ ಖದೀಮನನ್ನು ಗುರುತಿಸಲಾಗಿದೆ. ದುಬಾರಿ ಬೈಕ್​ಗಳನ್ನೇ ಟಾರ್ಗೆಟ್​ ಮಾಡ್ತಿದ್ದ ಈತ, ಲಕ್ಷಾಂತರ ರೂಪಾಯಿಯ ಬೈಕ್​ಗಳನ್ನು ಕೇವಲ 15 ರಿಂದ 20 ಸಾವಿರ ರೂಪಾಯಿಗೆ ಮಾರಿಕೊಂಡು ದುಡ್ಡು ಮಾಡಿಕೊಳ್ಳುತ್ತಿದ್ದ.

2 / 6
ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳ ಚಿಟಕಿ ಹೊಡೆಯುವುದರಲ್ಲೇ ಹ್ಯಾಂಡಲ್​ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ. ಬಳಿಕ ಕಡಿಮೆ ಹಣಕ್ಕೆ ಮಾರಿಕೊಂಡು ಬಂದ ಹಣದಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ. ಬೆಂಗಳೂರು, ಚಿತ್ತೂರು, ತಿರುಪತಿ ಸೇರಿ ಹಲವು ಕಡೆ ಈತ ತನ್ನ ಕೈಚಳಕ ತೋರಿಸಿದ್ದಾನೆ.

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳ ಚಿಟಕಿ ಹೊಡೆಯುವುದರಲ್ಲೇ ಹ್ಯಾಂಡಲ್​ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ. ಬಳಿಕ ಕಡಿಮೆ ಹಣಕ್ಕೆ ಮಾರಿಕೊಂಡು ಬಂದ ಹಣದಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ. ಬೆಂಗಳೂರು, ಚಿತ್ತೂರು, ತಿರುಪತಿ ಸೇರಿ ಹಲವು ಕಡೆ ಈತ ತನ್ನ ಕೈಚಳಕ ತೋರಿಸಿದ್ದಾನೆ.

3 / 6
ಇನ್ನು ಒಂದು ವಿಚಿತ್ರ ಸಂಗತಿ ಅಂದ್ರೆ ಇವನು ಪ್ರತಿದಿನ ಸಂಜೆ ಬಸ್​​ನಲ್ಲಿ ಬೆಂಗಳೂರಿಗೆ ಬಂದು ತಲುಪುತ್ತಿದ್ದ. ನಂತರ ಕೆ.ಆರ್​.ಪುರ, ಟಿನ್​ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿದ್ದ. ಮನೆ ಮುಂದೆ ನಿಂತಿರುವ ಬೈಕ್​ಗಳನ್ನು ಕದ್ದು ಬಂದ ದಿನವೇ ಅದೇ ಬೈಕ್​ನಲ್ಲಿ ವಾಪಸ್ ಊರಿಗೆ ಎಸ್ಕೇಪ್ ಆಗುತ್ತಿದ್ದ.

ಇನ್ನು ಒಂದು ವಿಚಿತ್ರ ಸಂಗತಿ ಅಂದ್ರೆ ಇವನು ಪ್ರತಿದಿನ ಸಂಜೆ ಬಸ್​​ನಲ್ಲಿ ಬೆಂಗಳೂರಿಗೆ ಬಂದು ತಲುಪುತ್ತಿದ್ದ. ನಂತರ ಕೆ.ಆರ್​.ಪುರ, ಟಿನ್​ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿದ್ದ. ಮನೆ ಮುಂದೆ ನಿಂತಿರುವ ಬೈಕ್​ಗಳನ್ನು ಕದ್ದು ಬಂದ ದಿನವೇ ಅದೇ ಬೈಕ್​ನಲ್ಲಿ ವಾಪಸ್ ಊರಿಗೆ ಎಸ್ಕೇಪ್ ಆಗುತ್ತಿದ್ದ.

4 / 6
ಆರೋಪಿ ಪ್ರಸಾದ್​ ಬಾಬು ಸ್ಕ್ರೂಡ್ರೈವರ್​ ಬಳಸಿ ಬೈಕ್​ನ ಲಾಕ್ ಓಪನ್ ಮಾಡುತ್ತಿದ್ದ, ಹೆಡ್​​ಲೈಟ್​​ ಭಾಗದ ಒಳಗೆ ಇರುವ ಎರಡು ವೈರ್​ಗಳನ್ನು ಜೋಡಿಸಿ ಸೆಲ್ಫ್​ಸ್ಟಾರ್ಟ್ ಮಾಡಿ ಬೈಕ್​ ಕದ್ದು ಪರಾರಿಯಾಗುತ್ತಿದ್ದ. ಆತ ಹೇಗೆ ಬೈಕ್ ಕದಿಯುತ್ತಿದ್ದ ಎಂಬುದನ್ನ ಪೊಲೀಸರ ಮುಂದೆಯೇ ಒಂದು ಡೆಮೋ ಮಾಡಿ ತೋರಿಸಿದ್ದಾನೆ.

ಆರೋಪಿ ಪ್ರಸಾದ್​ ಬಾಬು ಸ್ಕ್ರೂಡ್ರೈವರ್​ ಬಳಸಿ ಬೈಕ್​ನ ಲಾಕ್ ಓಪನ್ ಮಾಡುತ್ತಿದ್ದ, ಹೆಡ್​​ಲೈಟ್​​ ಭಾಗದ ಒಳಗೆ ಇರುವ ಎರಡು ವೈರ್​ಗಳನ್ನು ಜೋಡಿಸಿ ಸೆಲ್ಫ್​ಸ್ಟಾರ್ಟ್ ಮಾಡಿ ಬೈಕ್​ ಕದ್ದು ಪರಾರಿಯಾಗುತ್ತಿದ್ದ. ಆತ ಹೇಗೆ ಬೈಕ್ ಕದಿಯುತ್ತಿದ್ದ ಎಂಬುದನ್ನ ಪೊಲೀಸರ ಮುಂದೆಯೇ ಒಂದು ಡೆಮೋ ಮಾಡಿ ತೋರಿಸಿದ್ದಾನೆ.

5 / 6
 ಒಟ್ಟು 20 ರಾಯಲ್ ಎನ್​​ಫಿಲ್ಡ್​, 30 ಪಲ್ಸರ್ ಬೈಕ್, 40 ಆ್ಯಕ್ಟಿವಾ ಬೈಕ್​ಗಳನ್ನು ಸೇರಿ ಇನ್ನುಳಿದ ಹಲವು ದುಬಾರಿ ಬೈಕ್​ಗಳನ್ನು ಕದ್ದಿದ್ದಾನೆ. ಸದ್ಯ ಪೊಲೀಸರು ಈ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದು. ಸುಮಾರು 1.45 ಕೋಟಿ ರೂಪಾಯಿ ಮೌಲ್ಯದ 100 ಬೈಕ್ ವಶಕ್ಕೆ ಪಡೆದುಕೊಂಡಿದ್ದು. ಕೆ.ಆರ್​.ಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಟ್ಟು 20 ರಾಯಲ್ ಎನ್​​ಫಿಲ್ಡ್​, 30 ಪಲ್ಸರ್ ಬೈಕ್, 40 ಆ್ಯಕ್ಟಿವಾ ಬೈಕ್​ಗಳನ್ನು ಸೇರಿ ಇನ್ನುಳಿದ ಹಲವು ದುಬಾರಿ ಬೈಕ್​ಗಳನ್ನು ಕದ್ದಿದ್ದಾನೆ. ಸದ್ಯ ಪೊಲೀಸರು ಈ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದು. ಸುಮಾರು 1.45 ಕೋಟಿ ರೂಪಾಯಿ ಮೌಲ್ಯದ 100 ಬೈಕ್ ವಶಕ್ಕೆ ಪಡೆದುಕೊಂಡಿದ್ದು. ಕೆ.ಆರ್​.ಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ