AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ ಭಾಗದಲ್ಲಿ ಅದ್ಧೂರಿ ಗಣೇಶೋತ್ಸವ; ವಿಘ್ನಗಳನ್ನು ದೂರ ಮಾಡಿದ ಪ್ರತಿಯಾಗಿ ಗಣೇಶನ ಪ್ರತಿಷ್ಠಾಪನೆ

ಗಣೇಶ ನ ಇನ್ನೊಂದು ಹೆಸರೆ ವಿಘ್ನ ವಿನಾಶಕ. ಹೆಸರಿನಂತೆ ಭಕ್ತರ ವಿಘ್ನ ದೂರ ಮಾಡುವ ವಿನಾಯಕ, ಸಹಜವಾಗಿ ಜುಲೈ ತಿಂಗಳಿನಲ್ಲಿ ಪ್ರತಿಷ್ಠಾಪನೆ ಮಾಡುವುದು ಮಾಮೂಲಿ. ಆದ್ರೆ, ಕಾರವಾರ ಭಾಗದ ಜನರ ದೊಡ್ಡ ವಿಘ್ನಗಳನ್ನು ದೂರ ಮಾಡಿದ ಪ್ರತಿಯಾಗಿ, ಮಾಘ ಮಾಸದಲ್ಲೂ ಗಣೇಶ್​ನ ಪ್ರತಿಷ್ಠಾಪನೆ ಮಾಡುತ್ತಾರೆ. ಅಷ್ಟಕ್ಕೂ ಜನರ ಸಂಕಷ್ಟ ಏನಾಗಿತ್ತು?, ಈಗ ಅದನ್ನು ಹೇಗೆ ಆಚರಿಸಲಾಗುತ್ತಿದೆ ಎಂಬುವುದರ ಕುರಿತು ಇಲ್ಲಿದೆ ಮಾಹಿತಿ.

ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Feb 13, 2024 | 8:49 PM

Share
ಒಂದೆಡೆ ವಿಧ ವಿಧದ ಹೂವುಗಳು, ಗರಿಕೆ ಹುಲ್ಲಿನಿಂದ ಅಲಂಕಾರಗೊಂಡು ಮನೆಯಲ್ಲಿ ಕಂಗೊಳಿಸುತ್ತಿರುವ ಗಣೇಶನ ಮೂರ್ತಿ. ಇನ್ನೊಂದೆಡೆ ಗಣಪತಿ ಮೂರ್ತಿಗೆ ಪೂಜೆ ಸಲ್ಲಿಸಿ, ಭಕ್ತಿಯಿಂದ ಬೇಡಿಕೊಳ್ಳುತ್ತಿರುವ ಜನರು. ಮತ್ತೊಂದೆಡೆ ವಿಘ್ನನಿವಾರಕನ ಭಜನೆ ಮಾಡುತ್ತಾ ಆರತಿ ಬೆಳಗುತ್ತಿರುವ ಮಹಿಳೆಯರು. ಈ ಎಲ್ಲ ದೃಶ್ಯಗಳು ಕಂಡುಬಂದಿದ್ದು ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ.

ಒಂದೆಡೆ ವಿಧ ವಿಧದ ಹೂವುಗಳು, ಗರಿಕೆ ಹುಲ್ಲಿನಿಂದ ಅಲಂಕಾರಗೊಂಡು ಮನೆಯಲ್ಲಿ ಕಂಗೊಳಿಸುತ್ತಿರುವ ಗಣೇಶನ ಮೂರ್ತಿ. ಇನ್ನೊಂದೆಡೆ ಗಣಪತಿ ಮೂರ್ತಿಗೆ ಪೂಜೆ ಸಲ್ಲಿಸಿ, ಭಕ್ತಿಯಿಂದ ಬೇಡಿಕೊಳ್ಳುತ್ತಿರುವ ಜನರು. ಮತ್ತೊಂದೆಡೆ ವಿಘ್ನನಿವಾರಕನ ಭಜನೆ ಮಾಡುತ್ತಾ ಆರತಿ ಬೆಳಗುತ್ತಿರುವ ಮಹಿಳೆಯರು. ಈ ಎಲ್ಲ ದೃಶ್ಯಗಳು ಕಂಡುಬಂದಿದ್ದು ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ.

1 / 7
ಮಾಘ ಚತುರ್ಥಿ ಹಿನ್ನೆಲೆ ಕಾರವಾರಿಗರು ಇಂದು ಗಣೇಶ ಹಬ್ಬವನ್ನ ಆಚರಿಸಿ ಸಂಭ್ರಮಿಸಿದರು. ಗಣಪತಿ ಹುಟ್ಟಿದ ದಿನ ಎಂದೇ ಹೇಳಲಾಗುವ ಮಾಘ ಚೌತಿಯಂದು ಗಣೇಶ ಚತುರ್ಥಿ ಮಾದರಿಯಲ್ಲೇ ಗಣಪತಿ ಮೂರ್ತಿಯನ್ನಿಟ್ಟು ಪೂಜೆ ಸಲ್ಲಿಸುವ ಸಂಪ್ರದಾಯ ಕಾರವಾರ ತಾಲ್ಲೂಕಿನಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ಮಾಘ ಚತುರ್ಥಿ ಹಿನ್ನೆಲೆ ಕಾರವಾರಿಗರು ಇಂದು ಗಣೇಶ ಹಬ್ಬವನ್ನ ಆಚರಿಸಿ ಸಂಭ್ರಮಿಸಿದರು. ಗಣಪತಿ ಹುಟ್ಟಿದ ದಿನ ಎಂದೇ ಹೇಳಲಾಗುವ ಮಾಘ ಚೌತಿಯಂದು ಗಣೇಶ ಚತುರ್ಥಿ ಮಾದರಿಯಲ್ಲೇ ಗಣಪತಿ ಮೂರ್ತಿಯನ್ನಿಟ್ಟು ಪೂಜೆ ಸಲ್ಲಿಸುವ ಸಂಪ್ರದಾಯ ಕಾರವಾರ ತಾಲ್ಲೂಕಿನಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

2 / 7
ಮಾಘ ಚೌತಿಯಂದು ಪ್ರತಿಷ್ಠಾಪಿಸುವ ಮೂರ್ತಿಯನ್ನು ಹರಕೆ ಗಣಪತಿ ಎಂದೇ ಹೇಳಲಾಗುತ್ತದೆ. ಇಷ್ಟಾರ್ಥಗಳ ಈಡೇರಿಕೆಗಾಗಿ ಹರಕೆ ಹೊತ್ತುಕೊಂಡವರು ಹಾಗೂ ಗಣೇಶ ಚತುರ್ಥಿಯ ಸಮಯದಲ್ಲಿ ನಾನಾ ಕಾರಣಗಳಿಂದ ಮೂರ್ತಿ ಪ್ರತಿಷ್ಠಾಪಿಸಲು ಸಾಧ್ಯವಾಗದಿರುವವರೂ ಸಹ ಮಾಘ ಚೌತಿಯಂದು ಒಂದು ದಿನದ ಮಟ್ಟಿಗೆ ಗಣಪನ ಮೂರ್ತಿಯನ್ನಿಟ್ಟು ಪೂಜೆ ಮಾಡುತ್ತಾರೆ.

ಮಾಘ ಚೌತಿಯಂದು ಪ್ರತಿಷ್ಠಾಪಿಸುವ ಮೂರ್ತಿಯನ್ನು ಹರಕೆ ಗಣಪತಿ ಎಂದೇ ಹೇಳಲಾಗುತ್ತದೆ. ಇಷ್ಟಾರ್ಥಗಳ ಈಡೇರಿಕೆಗಾಗಿ ಹರಕೆ ಹೊತ್ತುಕೊಂಡವರು ಹಾಗೂ ಗಣೇಶ ಚತುರ್ಥಿಯ ಸಮಯದಲ್ಲಿ ನಾನಾ ಕಾರಣಗಳಿಂದ ಮೂರ್ತಿ ಪ್ರತಿಷ್ಠಾಪಿಸಲು ಸಾಧ್ಯವಾಗದಿರುವವರೂ ಸಹ ಮಾಘ ಚೌತಿಯಂದು ಒಂದು ದಿನದ ಮಟ್ಟಿಗೆ ಗಣಪನ ಮೂರ್ತಿಯನ್ನಿಟ್ಟು ಪೂಜೆ ಮಾಡುತ್ತಾರೆ.

3 / 7
ಕಳೆದ 19 ವರ್ಷಗಳ ಹಿಂದೆ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ಬಳಿಯ ಸರ್ಕಲ್ ಅಪಘಾತಗಳ ಸೆಂಟರ್ ಪಾಯಿಂಟ್ ಆಗಿತ್ತು, ವಾರಕ್ಕೆ ಎರಡು ಮೂರು ಸಾವು ಆಗೊದು ಸಹಜವಾಗಿತ್ತು. ಸಾವಿಗೆ ಬ್ರೇಕ್ ಹಾಕಬೇಕೆಂಬ ಸದುದ್ದೇಶದಿಂದ ಗ್ರಾಮಸ್ಥರೆಲ್ಲ ಸೇರಿ ಗಣೇಶನ ಪ್ರತಿಷ್ಠಾಪಣೆ ಮಾಡಲು ಆರಂಭ ಮಾಡಿದ್ರು. ಅಂದಿನಿಂದ ಈ ಸರ್ಕಲ್ ನಲ್ಲಿ ವರ್ಷಕ್ಕೆ ಒಂದೊ ಎರಡು ಅಪಘಾತ ಆಗುತ್ತೆ ಅಷ್ಟೆ ಎನ್ನುತ್ತಾರೆ ಇಲ್ಲಿನ ಜನರು.

ಕಳೆದ 19 ವರ್ಷಗಳ ಹಿಂದೆ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ಬಳಿಯ ಸರ್ಕಲ್ ಅಪಘಾತಗಳ ಸೆಂಟರ್ ಪಾಯಿಂಟ್ ಆಗಿತ್ತು, ವಾರಕ್ಕೆ ಎರಡು ಮೂರು ಸಾವು ಆಗೊದು ಸಹಜವಾಗಿತ್ತು. ಸಾವಿಗೆ ಬ್ರೇಕ್ ಹಾಕಬೇಕೆಂಬ ಸದುದ್ದೇಶದಿಂದ ಗ್ರಾಮಸ್ಥರೆಲ್ಲ ಸೇರಿ ಗಣೇಶನ ಪ್ರತಿಷ್ಠಾಪಣೆ ಮಾಡಲು ಆರಂಭ ಮಾಡಿದ್ರು. ಅಂದಿನಿಂದ ಈ ಸರ್ಕಲ್ ನಲ್ಲಿ ವರ್ಷಕ್ಕೆ ಒಂದೊ ಎರಡು ಅಪಘಾತ ಆಗುತ್ತೆ ಅಷ್ಟೆ ಎನ್ನುತ್ತಾರೆ ಇಲ್ಲಿನ ಜನರು.

4 / 7
ಇನ್ನು ಮಾಘ ಚೌತಿಯಂದು ಗಣಪತಿ ಮೂರ್ತಿಯನ್ನ ಮನೆಯಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವ ಸಂಪ್ರದಾಯ ಹೆಚ್ಚಾಗಿ ಮಹಾರಾಷ್ಟ್ರ, ಗೋವಾದಲ್ಲಿ ಆಚರಣೆಯಲ್ಲಿದೆ. ಕಾರವಾರ ಗೋವಾ ಗಡಿಯಾಗಿರುವುದರಿಂದ ಜೊತೆಗೆ ಮಹಾರಾಷ್ಟ್ರ ಸಂಸ್ಕೃತಿ ಸಹ ಇರುವ ಹಿನ್ನಲೆ ಮಾಘ ಚೌತಿಯನ್ನ ಕಾರವಾರದಲ್ಲೂ ಸಹ ಆಚರಣೆ ಮಾಡಿಕೊಂಡು ಬಂದಿದ್ದು, ಉತ್ತರಕನ್ನಡ ಜಿಲ್ಲೆಯ ಬೇರೆ ಯಾವ ತಾಲೂಕಿನಲ್ಲೂ ಅಷ್ಟಾಗಿ ಈ ಹಬ್ಬವನ್ನ ಆಚರಿಸುವುದಿಲ್ಲ.

ಇನ್ನು ಮಾಘ ಚೌತಿಯಂದು ಗಣಪತಿ ಮೂರ್ತಿಯನ್ನ ಮನೆಯಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವ ಸಂಪ್ರದಾಯ ಹೆಚ್ಚಾಗಿ ಮಹಾರಾಷ್ಟ್ರ, ಗೋವಾದಲ್ಲಿ ಆಚರಣೆಯಲ್ಲಿದೆ. ಕಾರವಾರ ಗೋವಾ ಗಡಿಯಾಗಿರುವುದರಿಂದ ಜೊತೆಗೆ ಮಹಾರಾಷ್ಟ್ರ ಸಂಸ್ಕೃತಿ ಸಹ ಇರುವ ಹಿನ್ನಲೆ ಮಾಘ ಚೌತಿಯನ್ನ ಕಾರವಾರದಲ್ಲೂ ಸಹ ಆಚರಣೆ ಮಾಡಿಕೊಂಡು ಬಂದಿದ್ದು, ಉತ್ತರಕನ್ನಡ ಜಿಲ್ಲೆಯ ಬೇರೆ ಯಾವ ತಾಲೂಕಿನಲ್ಲೂ ಅಷ್ಟಾಗಿ ಈ ಹಬ್ಬವನ್ನ ಆಚರಿಸುವುದಿಲ್ಲ.

5 / 7
ಹಲವರು ತಮ್ಮ ಇಷ್ಟಾರ್ಥಗಳ ಸಿದ್ಧಿಗಾಗಿ ಮಾಘ ಚೌತಿಯಂದು ಗಣಪನ ಮೂರ್ತಿ ಪ್ರತಿಷ್ಠಾಪಿಸುವುದಾಗಿ ಹರಕೆ ಹೊತ್ತುಕೊಳ್ಳುತ್ತಾರೆ. ಅದು ಈಡೇರಿದ ವೇಳೆ ಮಾಘ ಚೌತಿಯಂದು ಗಣಪತಿ ಮೂರ್ತಿಯನ್ನು ತಂದು ಮನೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಹರಕೆಯನ್ನು ತೀರಿಸುವ ಪದ್ದತಿ ನಡೆದುಕೊಂಡು ಬಂದಿದೆ. ಅಲ್ಲದೇ ಕೆಲವರು ಮಾಘ ಚತುರ್ಥಿಯಂದು ಸಾರ್ವಜನಿಕ ಮೂರ್ತಿಯನ್ನೂ ಸಹ ಪ್ರತಿಷ್ಠಾಪಿಸಿ, ಪೂಜಿಸಿ, ಸಂಜೆಯ ವೇಳೆಗೆ ವಿಸರ್ಜನೆ ಮಾಡುತ್ತಾರೆ.

ಹಲವರು ತಮ್ಮ ಇಷ್ಟಾರ್ಥಗಳ ಸಿದ್ಧಿಗಾಗಿ ಮಾಘ ಚೌತಿಯಂದು ಗಣಪನ ಮೂರ್ತಿ ಪ್ರತಿಷ್ಠಾಪಿಸುವುದಾಗಿ ಹರಕೆ ಹೊತ್ತುಕೊಳ್ಳುತ್ತಾರೆ. ಅದು ಈಡೇರಿದ ವೇಳೆ ಮಾಘ ಚೌತಿಯಂದು ಗಣಪತಿ ಮೂರ್ತಿಯನ್ನು ತಂದು ಮನೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಹರಕೆಯನ್ನು ತೀರಿಸುವ ಪದ್ದತಿ ನಡೆದುಕೊಂಡು ಬಂದಿದೆ. ಅಲ್ಲದೇ ಕೆಲವರು ಮಾಘ ಚತುರ್ಥಿಯಂದು ಸಾರ್ವಜನಿಕ ಮೂರ್ತಿಯನ್ನೂ ಸಹ ಪ್ರತಿಷ್ಠಾಪಿಸಿ, ಪೂಜಿಸಿ, ಸಂಜೆಯ ವೇಳೆಗೆ ವಿಸರ್ಜನೆ ಮಾಡುತ್ತಾರೆ.

6 / 7
ಒಟ್ಟಿನಲ್ಲಿ ಮಾಘ ಚೌತಿ ಹಬ್ಬದ ಹಿನ್ನಲೆ ಕಡಲನಗರಿ ಕಾರವಾರದಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಿ ಜನರು ಪೂಜೆ ಸಲ್ಲಿಸುವ ಮೂಲಕ ವಿಘ್ನನಿವಾರಕನನ್ನ ಆರಾಧಿಸಿದ್ದು ವಿಶೇಷವೇ. ಎರಡನೇ ಗಣಪತಿ ಹಬ್ಬ ಎಂದೇ ಕರೆಯುವ ಮಾಘ ಚೌತಿ ಹಬ್ಬದ ಸಂಭ್ರಮ ಗಣೇಶ ಚತುರ್ಥಿಯಂತೆಯೇ ಕಂಡುಬಂದಿದ್ದಂತೂ ಸತ್ಯ.

ಒಟ್ಟಿನಲ್ಲಿ ಮಾಘ ಚೌತಿ ಹಬ್ಬದ ಹಿನ್ನಲೆ ಕಡಲನಗರಿ ಕಾರವಾರದಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಿ ಜನರು ಪೂಜೆ ಸಲ್ಲಿಸುವ ಮೂಲಕ ವಿಘ್ನನಿವಾರಕನನ್ನ ಆರಾಧಿಸಿದ್ದು ವಿಶೇಷವೇ. ಎರಡನೇ ಗಣಪತಿ ಹಬ್ಬ ಎಂದೇ ಕರೆಯುವ ಮಾಘ ಚೌತಿ ಹಬ್ಬದ ಸಂಭ್ರಮ ಗಣೇಶ ಚತುರ್ಥಿಯಂತೆಯೇ ಕಂಡುಬಂದಿದ್ದಂತೂ ಸತ್ಯ.

7 / 7
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ