AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditya L1: ಸೂರ್ಯನತ್ತ ಹಾರಿದ ಆದಿತ್ಯ ಎಲ್​ 1 ನೌಕೆ, ಪೋಟೋಗಳಲ್ಲಿ ನೋಡಿ

ಚಂದ್ರಯಾನ-3 ಯಶಸ್ಸಿನ ಬಳಿಕ ಇಸ್ರೋ ಸೆಪ್ಟೆಂಬರ್ 2ರ ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಆದಿತ್ಯ ಎಲ್ 1 ಉಡಾವಣೆ ಮಾಡಿದೆ. ಭಾಸ್ಕರನ ಅಧ್ಯಯನ ಮಾಡುವ ಉದ್ದೇಶದಿಂದ ಆದಿತ್ಯ ಎಲ್‌-1 ನೌಕೆಯನ್ನು ಇಸ್ರೋ ಉಡಾವಣೆ ಮಾಡಿದೆ.

ಆಯೇಷಾ ಬಾನು
|

Updated on:Sep 02, 2023 | 3:08 PM

Share
ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಇಸ್ರೋ ಇಂದು ಮತ್ತೊಂದು  ಮೈಲಿಗಲ್ಲು ಸ್ಥಾಪಿಸಿದೆ. ಚಂದ್ರಯಾನ 3ರ ಯಶಸ್ಸಿನ ಬಳಿಕ ಇಸ್ರೋ ಇದೀಗ ಯಶಸ್ವಿಯಾಗಿ ಸೂರ್ಯನತ್ತ ಆದಿತ್ಯ ಎಲ್​1 ಹಾರಿಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್ 1 ಯಶಸ್ವಿಯಾಗಿ ಹಾರಿದೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಇಸ್ರೋ ಇಂದು ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಚಂದ್ರಯಾನ 3ರ ಯಶಸ್ಸಿನ ಬಳಿಕ ಇಸ್ರೋ ಇದೀಗ ಯಶಸ್ವಿಯಾಗಿ ಸೂರ್ಯನತ್ತ ಆದಿತ್ಯ ಎಲ್​1 ಹಾರಿಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್ 1 ಯಶಸ್ವಿಯಾಗಿ ಹಾರಿದೆ.

1 / 7
ಭಾರತದ ಮೊಟ್ಟ ಮೊದಲ ಸೂರ್ಯಯಾನ ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಕೋಟ್ಯಂತರ ಭಾರತೀಯರಲ್ಲಿ ಮತ್ತೊಮ್ಮೆ ಹೆಮ್ಮೆಯ ಸಂಭ್ರಮ ಮನೆ ಮಾಡಿದೆ. ಆದಿತ್ಯ ಎಲ್​1 ಉಪಗ್ರಹ ಹೊತ್ತ PSLV-C57 ರಾಕೆಟ್​ ಬೆಳಗ್ಗೆ 11 ಗಂಟೆ 50 ನಿಮಿಷಕ್ಕೆ ಆಕಾಶಕ್ಕೆ ಹಾರಿದೆ.

ಭಾರತದ ಮೊಟ್ಟ ಮೊದಲ ಸೂರ್ಯಯಾನ ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಕೋಟ್ಯಂತರ ಭಾರತೀಯರಲ್ಲಿ ಮತ್ತೊಮ್ಮೆ ಹೆಮ್ಮೆಯ ಸಂಭ್ರಮ ಮನೆ ಮಾಡಿದೆ. ಆದಿತ್ಯ ಎಲ್​1 ಉಪಗ್ರಹ ಹೊತ್ತ PSLV-C57 ರಾಕೆಟ್​ ಬೆಳಗ್ಗೆ 11 ಗಂಟೆ 50 ನಿಮಿಷಕ್ಕೆ ಆಕಾಶಕ್ಕೆ ಹಾರಿದೆ.

2 / 7
ಭೂಮಿಯಿಂದ ಯಶಸ್ವಿಯಾಗಿ ಪ್ರಯಾಣ ಆರಂಭಿಸಿರುವ ಆದಿತ್ಯ ಎಲ್​ 1 ನೌಕೆ ಇನ್ನು ನಾಲ್ಕು ತಿಂಗಳುಗಳ ಬಳಿಕ ತನ್ನ ನಿಗದಿತ ಕಕ್ಷೆಗೆ ತಲುಪಲಿದೆ. ಸೂರ್ಯ ನಿಂದ 148.5 ಮಿಲಿಯನ್ ಕಿಲೋ ಮೀಟರ್​ ಮತ್ತು ಭೂಮಿಯಿಂದ 15 ಲಕ್ಷ ಕಿಲೋ ಮೀಟರ್​ ದೂರದಲ್ಲಿರುವ L1ಪಾಯಿಂಟ್ ತಲುಪಲು ಈ ನೌಕೆಗೆ ಇನ್ನು ನಾಲ್ಕು ತಿಂಗಳುಗಳ ಕಾಲ ಬೇಕು

ಭೂಮಿಯಿಂದ ಯಶಸ್ವಿಯಾಗಿ ಪ್ರಯಾಣ ಆರಂಭಿಸಿರುವ ಆದಿತ್ಯ ಎಲ್​ 1 ನೌಕೆ ಇನ್ನು ನಾಲ್ಕು ತಿಂಗಳುಗಳ ಬಳಿಕ ತನ್ನ ನಿಗದಿತ ಕಕ್ಷೆಗೆ ತಲುಪಲಿದೆ. ಸೂರ್ಯ ನಿಂದ 148.5 ಮಿಲಿಯನ್ ಕಿಲೋ ಮೀಟರ್​ ಮತ್ತು ಭೂಮಿಯಿಂದ 15 ಲಕ್ಷ ಕಿಲೋ ಮೀಟರ್​ ದೂರದಲ್ಲಿರುವ L1ಪಾಯಿಂಟ್ ತಲುಪಲು ಈ ನೌಕೆಗೆ ಇನ್ನು ನಾಲ್ಕು ತಿಂಗಳುಗಳ ಕಾಲ ಬೇಕು

3 / 7
ಇಂದು ಸೆಪ್ಟಂಬರ್ 2 2023ರಂದು ಹಾರಿಬಿಟ್ಟಿರುವ ಆದಿತ್ಯ ನೌಕೆ 2024ರ ಜನವರಿ 12ರಂದು ಎಲ್​ 1 ಕಕ್ಷೆಗೆ ತಲುಪಲಿದೆ. ಭೂಕಕ್ಷೆಗೆ ಸೇರಿಸಿದ ಬಳಿಕ ಕ್ರೂಸ್​ ಫೇಸ್​ನ ವೇಗವನ್ನು ಹೆಚ್ಚಿಸಲಾಗುತ್ತೆ. ಬಳಿಕ ಅದನ್ನು ಹಾಲೋ ಆರ್ಬಿಟ್​ಗೆ ಸೇರಿಸಲಾಗುತ್ತದೆ. ಬಳಿಕ ಅಲ್ಲಿಂದ ಬೂಸ್ಟ್​ ಮಾಡುವ ಮೂಲಕ L1 ಕಡೆಗೆ ಪಾಯಿಂಟ್​ಗೆ ಸೇರಿಸಲಾಗುತ್ತದೆ.

ಇಂದು ಸೆಪ್ಟಂಬರ್ 2 2023ರಂದು ಹಾರಿಬಿಟ್ಟಿರುವ ಆದಿತ್ಯ ನೌಕೆ 2024ರ ಜನವರಿ 12ರಂದು ಎಲ್​ 1 ಕಕ್ಷೆಗೆ ತಲುಪಲಿದೆ. ಭೂಕಕ್ಷೆಗೆ ಸೇರಿಸಿದ ಬಳಿಕ ಕ್ರೂಸ್​ ಫೇಸ್​ನ ವೇಗವನ್ನು ಹೆಚ್ಚಿಸಲಾಗುತ್ತೆ. ಬಳಿಕ ಅದನ್ನು ಹಾಲೋ ಆರ್ಬಿಟ್​ಗೆ ಸೇರಿಸಲಾಗುತ್ತದೆ. ಬಳಿಕ ಅಲ್ಲಿಂದ ಬೂಸ್ಟ್​ ಮಾಡುವ ಮೂಲಕ L1 ಕಡೆಗೆ ಪಾಯಿಂಟ್​ಗೆ ಸೇರಿಸಲಾಗುತ್ತದೆ.

4 / 7
: L1 ಪಾಯಿಂಟ್​ಗೆ ಸೇರಿದ ಬಳಿಕ ಆರ್ಬಿಟರ್​ ಮುಖ್ಯವಾಗಿ ಸೂರ್ಯನ ಅತ್ಯಂತ ಹೊರಪದರಾದ ಕೊರೊನಾ ಬಗ್ಗೆ ಅಧ್ಯಯನ ನಡೆಸಲಿದೆ. ಸೂರ್ಯನ ಕರೊನಾ ಪದರದಲ್ಲಿನ ಅತಿಯಾದ ಶಾಖ ಉತ್ಪತ್ತಿಗೆ ಕಾರಣವೇನು. ಸೂರ್ಯನ ಒಳಪದರಕ್ಕಿಂತ ಕೊರೊನಾ ಪದರು ಅತಿ ಹೆಚ್ಚು ಶಾಖ ಹೊಂದಿದ್ದೇಕೆ? ಎಂಬ ಅಂಶಗಳ ಮೇಲೆ ಅಧ್ಯಯನ ನಡೆಯಲಿದೆ.

: L1 ಪಾಯಿಂಟ್​ಗೆ ಸೇರಿದ ಬಳಿಕ ಆರ್ಬಿಟರ್​ ಮುಖ್ಯವಾಗಿ ಸೂರ್ಯನ ಅತ್ಯಂತ ಹೊರಪದರಾದ ಕೊರೊನಾ ಬಗ್ಗೆ ಅಧ್ಯಯನ ನಡೆಸಲಿದೆ. ಸೂರ್ಯನ ಕರೊನಾ ಪದರದಲ್ಲಿನ ಅತಿಯಾದ ಶಾಖ ಉತ್ಪತ್ತಿಗೆ ಕಾರಣವೇನು. ಸೂರ್ಯನ ಒಳಪದರಕ್ಕಿಂತ ಕೊರೊನಾ ಪದರು ಅತಿ ಹೆಚ್ಚು ಶಾಖ ಹೊಂದಿದ್ದೇಕೆ? ಎಂಬ ಅಂಶಗಳ ಮೇಲೆ ಅಧ್ಯಯನ ನಡೆಯಲಿದೆ.

5 / 7
ಇಂದು ಹಾರಿ ಬಿಟ್ಟಿರುವ ಆದಿತ್ಯ ಎಲ್​1 ನೌಕೆ ತನ್ನ ನಿಗದಿತ ಗುರಿ ಮುಟ್ಟಿದ್ದೇ ಆದ್ರೆ ಭಾರತ L1 ಪಾಯಿಂಟ್ ತಲುಪಿದ ಜಗತ್ತಿನ ಮೂರನೇ ದೇಶ ಎನಿಸಿಕೊಳ್ಳಲಿದೆ. ಇನ್ನು ಕಕ್ಷೆಗೆ ತಲುಪಿದ ಬಳಿಕ ಈ ಆದಿತ್ಯ ಎಲ್​1 ಒಟ್ಟು 365 ದಿನಗಳ ಕಾಲ ನಿರಂತರ ಸೂರ್ಯನ ಅಧ್ಯಯನ ನಡೆಸಲಿದೆ. ಅಧ್ಯಯನ ನಡೆಸಿದ ಬಳಿಕ L1 ನೌಕೆ ಇಸ್ರೋಗೆ ನೇರವಾಗಿ ಮಾಹಿತಿ ನೀಡಲಿದೆ.

ಇಂದು ಹಾರಿ ಬಿಟ್ಟಿರುವ ಆದಿತ್ಯ ಎಲ್​1 ನೌಕೆ ತನ್ನ ನಿಗದಿತ ಗುರಿ ಮುಟ್ಟಿದ್ದೇ ಆದ್ರೆ ಭಾರತ L1 ಪಾಯಿಂಟ್ ತಲುಪಿದ ಜಗತ್ತಿನ ಮೂರನೇ ದೇಶ ಎನಿಸಿಕೊಳ್ಳಲಿದೆ. ಇನ್ನು ಕಕ್ಷೆಗೆ ತಲುಪಿದ ಬಳಿಕ ಈ ಆದಿತ್ಯ ಎಲ್​1 ಒಟ್ಟು 365 ದಿನಗಳ ಕಾಲ ನಿರಂತರ ಸೂರ್ಯನ ಅಧ್ಯಯನ ನಡೆಸಲಿದೆ. ಅಧ್ಯಯನ ನಡೆಸಿದ ಬಳಿಕ L1 ನೌಕೆ ಇಸ್ರೋಗೆ ನೇರವಾಗಿ ಮಾಹಿತಿ ನೀಡಲಿದೆ.

6 / 7
. 11 ವರ್ಷಕ್ಕೊಮ್ಮೆ ನಡೆಯಲಿರುವ ಸೋಲಾರ್ ಮ್ಯಾಕ್ಸಿಮಮ್ ವೇಳೆ ಸೂರ್ಯನ ಮೇಲ್ಮೈಯಲ್ಲಿ ಸೌರ ಚಟುವಟಿಕೆ ಅತಿಯಾಗಿರುತ್ತದೆ. ಅತಿಯಾದ ಸೌರ ಚಟುವಟಿಕಿಯೇ ಸೋಲಾರ ಮ್ಯಾಕ್ಸಿಮಮ್ ಎಂದು ಕರೆಯಲಾಗುತ್ತದೆ. ಸೋಲಾರ್ ಮ್ಯಾಕ್ಸಿಮಮ್​ನಿಂದ ಉಂಟಾಗುವ ಪರಿಣಾಮ, ಇದರಿಂದ ಭೂಮಿ ಆಗುವ ಪರಿಣಾಮದ ಬಗ್ಗೆ ಅಧ್ಯಯನ ನಡೆಯಲಿದೆ.

. 11 ವರ್ಷಕ್ಕೊಮ್ಮೆ ನಡೆಯಲಿರುವ ಸೋಲಾರ್ ಮ್ಯಾಕ್ಸಿಮಮ್ ವೇಳೆ ಸೂರ್ಯನ ಮೇಲ್ಮೈಯಲ್ಲಿ ಸೌರ ಚಟುವಟಿಕೆ ಅತಿಯಾಗಿರುತ್ತದೆ. ಅತಿಯಾದ ಸೌರ ಚಟುವಟಿಕಿಯೇ ಸೋಲಾರ ಮ್ಯಾಕ್ಸಿಮಮ್ ಎಂದು ಕರೆಯಲಾಗುತ್ತದೆ. ಸೋಲಾರ್ ಮ್ಯಾಕ್ಸಿಮಮ್​ನಿಂದ ಉಂಟಾಗುವ ಪರಿಣಾಮ, ಇದರಿಂದ ಭೂಮಿ ಆಗುವ ಪರಿಣಾಮದ ಬಗ್ಗೆ ಅಧ್ಯಯನ ನಡೆಯಲಿದೆ.

7 / 7

Published On - 3:06 pm, Sat, 2 September 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್