AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditya L1: ಸೂರ್ಯನತ್ತ ಹಾರಿದ ಆದಿತ್ಯ ಎಲ್​ 1 ನೌಕೆ, ಪೋಟೋಗಳಲ್ಲಿ ನೋಡಿ

ಚಂದ್ರಯಾನ-3 ಯಶಸ್ಸಿನ ಬಳಿಕ ಇಸ್ರೋ ಸೆಪ್ಟೆಂಬರ್ 2ರ ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಆದಿತ್ಯ ಎಲ್ 1 ಉಡಾವಣೆ ಮಾಡಿದೆ. ಭಾಸ್ಕರನ ಅಧ್ಯಯನ ಮಾಡುವ ಉದ್ದೇಶದಿಂದ ಆದಿತ್ಯ ಎಲ್‌-1 ನೌಕೆಯನ್ನು ಇಸ್ರೋ ಉಡಾವಣೆ ಮಾಡಿದೆ.

ಆಯೇಷಾ ಬಾನು
ಆಯೇಷಾ ಬಾನು|

Updated on:Sep 02, 2023 | 3:08 PM

Share
ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಇಸ್ರೋ ಇಂದು ಮತ್ತೊಂದು  ಮೈಲಿಗಲ್ಲು ಸ್ಥಾಪಿಸಿದೆ. ಚಂದ್ರಯಾನ 3ರ ಯಶಸ್ಸಿನ ಬಳಿಕ ಇಸ್ರೋ ಇದೀಗ ಯಶಸ್ವಿಯಾಗಿ ಸೂರ್ಯನತ್ತ ಆದಿತ್ಯ ಎಲ್​1 ಹಾರಿಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್ 1 ಯಶಸ್ವಿಯಾಗಿ ಹಾರಿದೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಇಸ್ರೋ ಇಂದು ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಚಂದ್ರಯಾನ 3ರ ಯಶಸ್ಸಿನ ಬಳಿಕ ಇಸ್ರೋ ಇದೀಗ ಯಶಸ್ವಿಯಾಗಿ ಸೂರ್ಯನತ್ತ ಆದಿತ್ಯ ಎಲ್​1 ಹಾರಿಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್ 1 ಯಶಸ್ವಿಯಾಗಿ ಹಾರಿದೆ.

1 / 7
ಭಾರತದ ಮೊಟ್ಟ ಮೊದಲ ಸೂರ್ಯಯಾನ ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಕೋಟ್ಯಂತರ ಭಾರತೀಯರಲ್ಲಿ ಮತ್ತೊಮ್ಮೆ ಹೆಮ್ಮೆಯ ಸಂಭ್ರಮ ಮನೆ ಮಾಡಿದೆ. ಆದಿತ್ಯ ಎಲ್​1 ಉಪಗ್ರಹ ಹೊತ್ತ PSLV-C57 ರಾಕೆಟ್​ ಬೆಳಗ್ಗೆ 11 ಗಂಟೆ 50 ನಿಮಿಷಕ್ಕೆ ಆಕಾಶಕ್ಕೆ ಹಾರಿದೆ.

ಭಾರತದ ಮೊಟ್ಟ ಮೊದಲ ಸೂರ್ಯಯಾನ ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಕೋಟ್ಯಂತರ ಭಾರತೀಯರಲ್ಲಿ ಮತ್ತೊಮ್ಮೆ ಹೆಮ್ಮೆಯ ಸಂಭ್ರಮ ಮನೆ ಮಾಡಿದೆ. ಆದಿತ್ಯ ಎಲ್​1 ಉಪಗ್ರಹ ಹೊತ್ತ PSLV-C57 ರಾಕೆಟ್​ ಬೆಳಗ್ಗೆ 11 ಗಂಟೆ 50 ನಿಮಿಷಕ್ಕೆ ಆಕಾಶಕ್ಕೆ ಹಾರಿದೆ.

2 / 7
ಭೂಮಿಯಿಂದ ಯಶಸ್ವಿಯಾಗಿ ಪ್ರಯಾಣ ಆರಂಭಿಸಿರುವ ಆದಿತ್ಯ ಎಲ್​ 1 ನೌಕೆ ಇನ್ನು ನಾಲ್ಕು ತಿಂಗಳುಗಳ ಬಳಿಕ ತನ್ನ ನಿಗದಿತ ಕಕ್ಷೆಗೆ ತಲುಪಲಿದೆ. ಸೂರ್ಯ ನಿಂದ 148.5 ಮಿಲಿಯನ್ ಕಿಲೋ ಮೀಟರ್​ ಮತ್ತು ಭೂಮಿಯಿಂದ 15 ಲಕ್ಷ ಕಿಲೋ ಮೀಟರ್​ ದೂರದಲ್ಲಿರುವ L1ಪಾಯಿಂಟ್ ತಲುಪಲು ಈ ನೌಕೆಗೆ ಇನ್ನು ನಾಲ್ಕು ತಿಂಗಳುಗಳ ಕಾಲ ಬೇಕು

ಭೂಮಿಯಿಂದ ಯಶಸ್ವಿಯಾಗಿ ಪ್ರಯಾಣ ಆರಂಭಿಸಿರುವ ಆದಿತ್ಯ ಎಲ್​ 1 ನೌಕೆ ಇನ್ನು ನಾಲ್ಕು ತಿಂಗಳುಗಳ ಬಳಿಕ ತನ್ನ ನಿಗದಿತ ಕಕ್ಷೆಗೆ ತಲುಪಲಿದೆ. ಸೂರ್ಯ ನಿಂದ 148.5 ಮಿಲಿಯನ್ ಕಿಲೋ ಮೀಟರ್​ ಮತ್ತು ಭೂಮಿಯಿಂದ 15 ಲಕ್ಷ ಕಿಲೋ ಮೀಟರ್​ ದೂರದಲ್ಲಿರುವ L1ಪಾಯಿಂಟ್ ತಲುಪಲು ಈ ನೌಕೆಗೆ ಇನ್ನು ನಾಲ್ಕು ತಿಂಗಳುಗಳ ಕಾಲ ಬೇಕು

3 / 7
ಇಂದು ಸೆಪ್ಟಂಬರ್ 2 2023ರಂದು ಹಾರಿಬಿಟ್ಟಿರುವ ಆದಿತ್ಯ ನೌಕೆ 2024ರ ಜನವರಿ 12ರಂದು ಎಲ್​ 1 ಕಕ್ಷೆಗೆ ತಲುಪಲಿದೆ. ಭೂಕಕ್ಷೆಗೆ ಸೇರಿಸಿದ ಬಳಿಕ ಕ್ರೂಸ್​ ಫೇಸ್​ನ ವೇಗವನ್ನು ಹೆಚ್ಚಿಸಲಾಗುತ್ತೆ. ಬಳಿಕ ಅದನ್ನು ಹಾಲೋ ಆರ್ಬಿಟ್​ಗೆ ಸೇರಿಸಲಾಗುತ್ತದೆ. ಬಳಿಕ ಅಲ್ಲಿಂದ ಬೂಸ್ಟ್​ ಮಾಡುವ ಮೂಲಕ L1 ಕಡೆಗೆ ಪಾಯಿಂಟ್​ಗೆ ಸೇರಿಸಲಾಗುತ್ತದೆ.

ಇಂದು ಸೆಪ್ಟಂಬರ್ 2 2023ರಂದು ಹಾರಿಬಿಟ್ಟಿರುವ ಆದಿತ್ಯ ನೌಕೆ 2024ರ ಜನವರಿ 12ರಂದು ಎಲ್​ 1 ಕಕ್ಷೆಗೆ ತಲುಪಲಿದೆ. ಭೂಕಕ್ಷೆಗೆ ಸೇರಿಸಿದ ಬಳಿಕ ಕ್ರೂಸ್​ ಫೇಸ್​ನ ವೇಗವನ್ನು ಹೆಚ್ಚಿಸಲಾಗುತ್ತೆ. ಬಳಿಕ ಅದನ್ನು ಹಾಲೋ ಆರ್ಬಿಟ್​ಗೆ ಸೇರಿಸಲಾಗುತ್ತದೆ. ಬಳಿಕ ಅಲ್ಲಿಂದ ಬೂಸ್ಟ್​ ಮಾಡುವ ಮೂಲಕ L1 ಕಡೆಗೆ ಪಾಯಿಂಟ್​ಗೆ ಸೇರಿಸಲಾಗುತ್ತದೆ.

4 / 7
: L1 ಪಾಯಿಂಟ್​ಗೆ ಸೇರಿದ ಬಳಿಕ ಆರ್ಬಿಟರ್​ ಮುಖ್ಯವಾಗಿ ಸೂರ್ಯನ ಅತ್ಯಂತ ಹೊರಪದರಾದ ಕೊರೊನಾ ಬಗ್ಗೆ ಅಧ್ಯಯನ ನಡೆಸಲಿದೆ. ಸೂರ್ಯನ ಕರೊನಾ ಪದರದಲ್ಲಿನ ಅತಿಯಾದ ಶಾಖ ಉತ್ಪತ್ತಿಗೆ ಕಾರಣವೇನು. ಸೂರ್ಯನ ಒಳಪದರಕ್ಕಿಂತ ಕೊರೊನಾ ಪದರು ಅತಿ ಹೆಚ್ಚು ಶಾಖ ಹೊಂದಿದ್ದೇಕೆ? ಎಂಬ ಅಂಶಗಳ ಮೇಲೆ ಅಧ್ಯಯನ ನಡೆಯಲಿದೆ.

: L1 ಪಾಯಿಂಟ್​ಗೆ ಸೇರಿದ ಬಳಿಕ ಆರ್ಬಿಟರ್​ ಮುಖ್ಯವಾಗಿ ಸೂರ್ಯನ ಅತ್ಯಂತ ಹೊರಪದರಾದ ಕೊರೊನಾ ಬಗ್ಗೆ ಅಧ್ಯಯನ ನಡೆಸಲಿದೆ. ಸೂರ್ಯನ ಕರೊನಾ ಪದರದಲ್ಲಿನ ಅತಿಯಾದ ಶಾಖ ಉತ್ಪತ್ತಿಗೆ ಕಾರಣವೇನು. ಸೂರ್ಯನ ಒಳಪದರಕ್ಕಿಂತ ಕೊರೊನಾ ಪದರು ಅತಿ ಹೆಚ್ಚು ಶಾಖ ಹೊಂದಿದ್ದೇಕೆ? ಎಂಬ ಅಂಶಗಳ ಮೇಲೆ ಅಧ್ಯಯನ ನಡೆಯಲಿದೆ.

5 / 7
ಇಂದು ಹಾರಿ ಬಿಟ್ಟಿರುವ ಆದಿತ್ಯ ಎಲ್​1 ನೌಕೆ ತನ್ನ ನಿಗದಿತ ಗುರಿ ಮುಟ್ಟಿದ್ದೇ ಆದ್ರೆ ಭಾರತ L1 ಪಾಯಿಂಟ್ ತಲುಪಿದ ಜಗತ್ತಿನ ಮೂರನೇ ದೇಶ ಎನಿಸಿಕೊಳ್ಳಲಿದೆ. ಇನ್ನು ಕಕ್ಷೆಗೆ ತಲುಪಿದ ಬಳಿಕ ಈ ಆದಿತ್ಯ ಎಲ್​1 ಒಟ್ಟು 365 ದಿನಗಳ ಕಾಲ ನಿರಂತರ ಸೂರ್ಯನ ಅಧ್ಯಯನ ನಡೆಸಲಿದೆ. ಅಧ್ಯಯನ ನಡೆಸಿದ ಬಳಿಕ L1 ನೌಕೆ ಇಸ್ರೋಗೆ ನೇರವಾಗಿ ಮಾಹಿತಿ ನೀಡಲಿದೆ.

ಇಂದು ಹಾರಿ ಬಿಟ್ಟಿರುವ ಆದಿತ್ಯ ಎಲ್​1 ನೌಕೆ ತನ್ನ ನಿಗದಿತ ಗುರಿ ಮುಟ್ಟಿದ್ದೇ ಆದ್ರೆ ಭಾರತ L1 ಪಾಯಿಂಟ್ ತಲುಪಿದ ಜಗತ್ತಿನ ಮೂರನೇ ದೇಶ ಎನಿಸಿಕೊಳ್ಳಲಿದೆ. ಇನ್ನು ಕಕ್ಷೆಗೆ ತಲುಪಿದ ಬಳಿಕ ಈ ಆದಿತ್ಯ ಎಲ್​1 ಒಟ್ಟು 365 ದಿನಗಳ ಕಾಲ ನಿರಂತರ ಸೂರ್ಯನ ಅಧ್ಯಯನ ನಡೆಸಲಿದೆ. ಅಧ್ಯಯನ ನಡೆಸಿದ ಬಳಿಕ L1 ನೌಕೆ ಇಸ್ರೋಗೆ ನೇರವಾಗಿ ಮಾಹಿತಿ ನೀಡಲಿದೆ.

6 / 7
. 11 ವರ್ಷಕ್ಕೊಮ್ಮೆ ನಡೆಯಲಿರುವ ಸೋಲಾರ್ ಮ್ಯಾಕ್ಸಿಮಮ್ ವೇಳೆ ಸೂರ್ಯನ ಮೇಲ್ಮೈಯಲ್ಲಿ ಸೌರ ಚಟುವಟಿಕೆ ಅತಿಯಾಗಿರುತ್ತದೆ. ಅತಿಯಾದ ಸೌರ ಚಟುವಟಿಕಿಯೇ ಸೋಲಾರ ಮ್ಯಾಕ್ಸಿಮಮ್ ಎಂದು ಕರೆಯಲಾಗುತ್ತದೆ. ಸೋಲಾರ್ ಮ್ಯಾಕ್ಸಿಮಮ್​ನಿಂದ ಉಂಟಾಗುವ ಪರಿಣಾಮ, ಇದರಿಂದ ಭೂಮಿ ಆಗುವ ಪರಿಣಾಮದ ಬಗ್ಗೆ ಅಧ್ಯಯನ ನಡೆಯಲಿದೆ.

. 11 ವರ್ಷಕ್ಕೊಮ್ಮೆ ನಡೆಯಲಿರುವ ಸೋಲಾರ್ ಮ್ಯಾಕ್ಸಿಮಮ್ ವೇಳೆ ಸೂರ್ಯನ ಮೇಲ್ಮೈಯಲ್ಲಿ ಸೌರ ಚಟುವಟಿಕೆ ಅತಿಯಾಗಿರುತ್ತದೆ. ಅತಿಯಾದ ಸೌರ ಚಟುವಟಿಕಿಯೇ ಸೋಲಾರ ಮ್ಯಾಕ್ಸಿಮಮ್ ಎಂದು ಕರೆಯಲಾಗುತ್ತದೆ. ಸೋಲಾರ್ ಮ್ಯಾಕ್ಸಿಮಮ್​ನಿಂದ ಉಂಟಾಗುವ ಪರಿಣಾಮ, ಇದರಿಂದ ಭೂಮಿ ಆಗುವ ಪರಿಣಾಮದ ಬಗ್ಗೆ ಅಧ್ಯಯನ ನಡೆಯಲಿದೆ.

7 / 7

Published On - 3:06 pm, Sat, 2 September 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ