ಸಿಎಂ ಭೇಟಿಯಾದ ವಿವಿಧ ಸಮುದಾಯದ ಸ್ವಾಮೀಜಿಗಳು: ಬೇಷರತ್ ನೈತಿಕ ಬೆಂಬಲ ಘೋಷಣೆ

ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಸಂಬಂಧ ಸಿಎಂ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿವೆ. ಇದರ ಮಧ್ಯ ಇದೀಗ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯದ ಸ್ವಾಮೀಜಿಗಳ ನಿಯೋ ಅಖಾಡಕ್ಕಿಳಿದಿದ್ದು, ಸಿಎಂಗೆ ಬೆನ್ನಿಗೆ ನಿಂತಿದೆ. ಅಲ್ಲದೇ ಸ್ವಾಮೀಜಿಗಳ ನಿಯೋಗ ಸಿಎಂಗೆ ಬೇಷರತ್ ನೈತಿಕ ಬೆಂಬಲ ಘೋಷಿಸಿದೆ.

|

Updated on: Aug 25, 2024 | 4:30 PM

ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯದ ಸ್ವಾಮೀಜಿಗಳ ನಿಯೋಗ ಇಂದು (ಆಗಸ್ಟ್​ 25) ಕಾವೇರಿ ನಿವಾಸಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. ಈ ಮೂಲಕ ಸ್ವಾಮೀಜಿಗಳ ನಿಯೋಗ ಸಿಎಂಗೆ ಬೇಷರತ್ ನೈತಿಕ ಬೆಂಬಲ ಘೋಷಿಸಿತು.

ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯದ ಸ್ವಾಮೀಜಿಗಳ ನಿಯೋಗ ಇಂದು (ಆಗಸ್ಟ್​ 25) ಕಾವೇರಿ ನಿವಾಸಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. ಈ ಮೂಲಕ ಸ್ವಾಮೀಜಿಗಳ ನಿಯೋಗ ಸಿಎಂಗೆ ಬೇಷರತ್ ನೈತಿಕ ಬೆಂಬಲ ಘೋಷಿಸಿತು.

1 / 6
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ಸ್ವಾಮೀಜಿಗಳು, ತೀವ್ರವಾಗಿ ಖಂಡಿಸಿದ್ದು,  ಷಡ್ಯಂತ್ರದ ವಿರುದ್ಧ ಒಕ್ಕೊರಲಿನಿಂದ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದದರು.

ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ಸ್ವಾಮೀಜಿಗಳು, ತೀವ್ರವಾಗಿ ಖಂಡಿಸಿದ್ದು, ಷಡ್ಯಂತ್ರದ ವಿರುದ್ಧ ಒಕ್ಕೊರಲಿನಿಂದ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದದರು.

2 / 6
ಸಂಪುಟದ ಸಚಿವರು, ಶಾಸಕರು ಸೇರಿದಂತೆ ಹೈಕಮಾಂಡ್​ ನಾಯಕರು ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದೆ. ಈಗ ಹಿಂದೂಳಿದ ವರ್ಗಗಳ ಸ್ವಾಮೀಜಿಗಳು ಸಹ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ನಿಮ್ಮ ಹಿಂದೆ ನಾವಿದ್ದೇವೆ ಎನ್ನುವ ಸಂದೇಶ ರವಾನಿಸಿದ್ದಾರೆ.

ಸಂಪುಟದ ಸಚಿವರು, ಶಾಸಕರು ಸೇರಿದಂತೆ ಹೈಕಮಾಂಡ್​ ನಾಯಕರು ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದೆ. ಈಗ ಹಿಂದೂಳಿದ ವರ್ಗಗಳ ಸ್ವಾಮೀಜಿಗಳು ಸಹ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ನಿಮ್ಮ ಹಿಂದೆ ನಾವಿದ್ದೇವೆ ಎನ್ನುವ ಸಂದೇಶ ರವಾನಿಸಿದ್ದಾರೆ.

3 / 6
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾನಿಕ್ಯೂಷನ್​ಗೆ ರಾಜ್ಯಪಾಲರು ಅನಿಮತಿ ನೀಡಿದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ. ಕೆಲವರು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಸಿಎಂ ಪರವಾಗಿ ನಿಂತು ರಾಜ್ಯಪಾಲರ ನಡೆಯನ್ನು ಖಂಡಿಸಿ ಸಿಎಂ ಬೆನ್ನಿಗೆ ನಿಂತಿದ್ದಾರೆ. ಈಗ ಸ್ವಾಮೀಜಿಗಳು ಸಹ ಸಿಎಂ ಪರವಾಗಿ ಅಖಾಡಕ್ಕಿಳಿಸಿದ್ದಾರೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾನಿಕ್ಯೂಷನ್​ಗೆ ರಾಜ್ಯಪಾಲರು ಅನಿಮತಿ ನೀಡಿದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ. ಕೆಲವರು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಸಿಎಂ ಪರವಾಗಿ ನಿಂತು ರಾಜ್ಯಪಾಲರ ನಡೆಯನ್ನು ಖಂಡಿಸಿ ಸಿಎಂ ಬೆನ್ನಿಗೆ ನಿಂತಿದ್ದಾರೆ. ಈಗ ಸ್ವಾಮೀಜಿಗಳು ಸಹ ಸಿಎಂ ಪರವಾಗಿ ಅಖಾಡಕ್ಕಿಳಿಸಿದ್ದಾರೆ.

4 / 6
ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು ಕನಕ ಪೀಠ ಕಾಗಿನೆಲೆ, ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ , ಜಗದ್ಗುರು ಶ್ರೀ ಹಿಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು ಭೋವಿ ಗುರುಪೀಠ ಚಿತ್ರದುರ್ಗ , ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಮಾದರ ಚನ್ನಯ ಗುರುಪೀಠ ಚಿತ್ರದುರ್ಗ  , ಭಗಿರಥ ಪೀಠ ಮಧುರೆ  ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ನಿಯೋಗದದ್ದರು.

ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು ಕನಕ ಪೀಠ ಕಾಗಿನೆಲೆ, ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ , ಜಗದ್ಗುರು ಶ್ರೀ ಹಿಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು ಭೋವಿ ಗುರುಪೀಠ ಚಿತ್ರದುರ್ಗ , ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಮಾದರ ಚನ್ನಯ ಗುರುಪೀಠ ಚಿತ್ರದುರ್ಗ , ಭಗಿರಥ ಪೀಠ ಮಧುರೆ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ನಿಯೋಗದದ್ದರು.

5 / 6
ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು ಕನಕ ಗುರುಪೀಠ ಹೊಸದುರ್ಗ , ಶ್ರೀ ರೇಣುಕಾನಂದ ಸ್ವಾಮಿಗಳು ನಾರಾಯಣ ಗುರುಪೀಠ ಶಿವಮೊಗ್ಗ , ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಮಡಿವಾಳ ಗುರುಪೀಠ ಚಿತ್ರದುರ್ಗ, ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ, ಸರೂರು ವಿಜಯನಗರ ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು ಸೇರಿದಂತೆ ಇತರೆ ಸ್ವಾಮೀಜಿಗಳು ಸಿಎಂ ಭೇಟಿಯಾದರು.

ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು ಕನಕ ಗುರುಪೀಠ ಹೊಸದುರ್ಗ , ಶ್ರೀ ರೇಣುಕಾನಂದ ಸ್ವಾಮಿಗಳು ನಾರಾಯಣ ಗುರುಪೀಠ ಶಿವಮೊಗ್ಗ , ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಮಡಿವಾಳ ಗುರುಪೀಠ ಚಿತ್ರದುರ್ಗ, ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ, ಸರೂರು ವಿಜಯನಗರ ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು ಸೇರಿದಂತೆ ಇತರೆ ಸ್ವಾಮೀಜಿಗಳು ಸಿಎಂ ಭೇಟಿಯಾದರು.

6 / 6
Follow us