ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಸಚಿವ ಕೆಎನ್ ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದೆ. ಈ ಸಂಬಂಧ ಕಾಂಗ್ರೆಸ್ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದರ ಮಧ್ಯೆ ಖುದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.
ಇಂದು (ಮಾರ್ಚ್ 23) ಬೆಂಗಳೂರಿನ ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. ಹನಿಟ್ರ್ಯಾಪ್ ಬಿರುಗಾಳಿ ಬೆನ್ನಲ್ಲೇ ಸ್ವತಃ ಖರ್ಗೆ ಅವರೇ ಬಂದು ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ. ಅಲ್ಲದೇ ಇದೇ ನೆಪದಲ್ಲಿ ರಾಜಣ್ಣ ಅವರ ಹನಿಟ್ರ್ಯಾಪ್ ಆರೋಪದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ದೇಶಾದ್ಯಂತ ಸದ್ದು ಮಾಡಿರುವ ಹನಿಟ್ರಾಪ್ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ದೂರವಾಣಿ ಮೂಲಕ ಮಾಹಿತಿ ಪಡೆದಿದೆ. ಆದರೂ ಸಹ ಎಐಸಿಸಿ ಅಧ್ಯಕ್ಷರು ಸಿಎಂ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಬಂದು ಹನಿಟ್ರ್ಯಾಪ್ ಬಗ್ಗೆ ಸುದೀರ್ಘವಾಗಿ 45 ಮಿಮಿಷಗಳ ಮಹತ್ವದ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ಮಲ್ಲಿಕಾರ್ಜ ಖರ್ಗೆ ಹಾಗೂ ಸಿದ್ದರಾಮಯ್ಯನವರ ಚರ್ಚೆ ವೇಳೆ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದು, ಉಭಯ ನಾಯಕರು ಬರೋಬ್ಬರಿ 45 ನಿಮಿಷಗಳ ಕಾಲ ಮಹತ್ವದ ಮಾತುಕತೆ ಮಾಡಿದ್ದಾರೆ.
ಸಾಮಾನ್ಯ. ಹಲವು ರಾಜಕೀಯ ವಿಚಾರಗಳು ಚರ್ಚೆ ಆಗಿರುತ್ತೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಹನಿಟ್ರ್ಯಾಪ್ ಬಗ್ಗೆಯೂ ಸಹ ಚರ್ಚೆ ನಡೆದಿದೆ ಎನ್ನುವುದನ್ನು ಪ್ರಿಯಾಂಕ್ ಕರ್ಗೆ ಅವರು ಪರೋಕ್ಷವಾಗಿ ಖಚಿತಪಡಿಸಿದಂತಾಗಿದೆ.
ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದರು. ಈ ವಿಚಾರವನ್ನೇ ಮುಂದಿಟ್ಟುಕೊಂಡು ಬಿಜೆಪಿ ಶಾಸಕರು ಶುಕ್ರವಾರ ಸದನದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಲ್ಲದೆ, ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ವಹಿಸುವಂತೆ ಹೈಡ್ರಾಮಾ ಸೃಷ್ಟಿಸಿದ್ದರು. ಈ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತಂತೆ ಶುಕ್ರವಾರ ಸಂಜೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.