AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವೇಣಿ ಕಾದಂಬರಿ ಆಧಾರಿತ ‘ಸರಳ ಸುಬ್ಬರಾವ್’ ಸಿನಿಮಾ ಫೆ.20ಕ್ಕೆ ರಿಲೀಸ್

ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಆ ಕೊರತೆ ನೀಗಿಸಲು ‘ಸರಳ ಸುಬ್ಬರಾವ್’ ಸಿನಿಮಾ ಬರುತ್ತಿದೆ. ಅನುಭವಿ ನಿರ್ದೇಶಕ ಮಂಜು ಸ್ವರಾಜ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಫೆಬ್ರವರಿ 20ರಂದು ತೆರೆಕಾಣಲಿರುವ ಈ ಸಿನಿಮಾದ ಚಂದದ ಪೋಸ್ಟರ್​​ಗಳು ಮತ್ತು ಮಾಹಿತಿ ಇಲ್ಲಿವೆ..

ಮದನ್​ ಕುಮಾರ್​
|

Updated on: Feb 16, 2026 | 9:26 PM

Share
1971ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಸಿನಿಮಾ ‘ಸರಳ ಸುಬ್ಬರಾವ್’. ಇದು ಖ್ಯಾತ ಲೇಖಕಿ ತ್ರಿವೇಣಿ ಅವರ ಕಾದಂಬರಿ ಆಧರಿತ ಸಿನಿಮಾ ಎಂಬುದು ವಿಶೇಷ.

1971ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಸಿನಿಮಾ ‘ಸರಳ ಸುಬ್ಬರಾವ್’. ಇದು ಖ್ಯಾತ ಲೇಖಕಿ ತ್ರಿವೇಣಿ ಅವರ ಕಾದಂಬರಿ ಆಧರಿತ ಸಿನಿಮಾ ಎಂಬುದು ವಿಶೇಷ.

1 / 5
‘ಸರಳ ಸುಬ್ಬರಾವ್’ ಸಿನಿಮಾವನ್ನು ‘ರಿಯಾನ್ ಕ್ರಿಯೇಷನ್ಸ್’ ಲಾಂಛನದ ಮೂಲಕ ಲೋಹಿತ್ ನಂಜುಂಡಯ್ಯ ಅವರು ನಿರ್ಮಿಸಿದ್ದಾರೆ. ಮಂಜು ಸ್ವರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

‘ಸರಳ ಸುಬ್ಬರಾವ್’ ಸಿನಿಮಾವನ್ನು ‘ರಿಯಾನ್ ಕ್ರಿಯೇಷನ್ಸ್’ ಲಾಂಛನದ ಮೂಲಕ ಲೋಹಿತ್ ನಂಜುಂಡಯ್ಯ ಅವರು ನಿರ್ಮಿಸಿದ್ದಾರೆ. ಮಂಜು ಸ್ವರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

2 / 5
ಅಜಯ್ ರಾವ್, ಮಿಶಾ ನಾರಂಗ್ ನಟಿಸಿರುವ ‘ಸರಳ ಸುಬ್ಬರಾವ್’ ಸಿನಿಮಾ ಫೆಬ್ರವರಿ 20ರಂದು ತೆರೆಗೆ ಬರುತ್ತಿದೆ. ಈಗಾಗಲೇ ಈ ಸಿನಿಮಾದ ಟೀಸರ್, ಟ್ರೇಲರ್ ಮತ್ತು ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಅಜಯ್ ರಾವ್, ಮಿಶಾ ನಾರಂಗ್ ನಟಿಸಿರುವ ‘ಸರಳ ಸುಬ್ಬರಾವ್’ ಸಿನಿಮಾ ಫೆಬ್ರವರಿ 20ರಂದು ತೆರೆಗೆ ಬರುತ್ತಿದೆ. ಈಗಾಗಲೇ ಈ ಸಿನಿಮಾದ ಟೀಸರ್, ಟ್ರೇಲರ್ ಮತ್ತು ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.

3 / 5
ಪಾತ್ರವರ್ಗದಲ್ಲಿ ಅಜಯ್ ರಾವ್, ಮಿಶಾ ನಾರಂಗ್ ಮಾತ್ರವಲ್ಲದೇ ರಂಗಾಯಣ ರಘು, ನಟಶ್ರೀ, ವಿಜಯ್ ಚಂಡೂರ್, ಚಿತ್ಕಲಾ ಬಿರಾದಾರ್, ರಘು ರಾಮನಕೊಪ್ಪ ಮುಂತಾದವರು ಕೂಡ ಇದ್ದಾರೆ.

ಪಾತ್ರವರ್ಗದಲ್ಲಿ ಅಜಯ್ ರಾವ್, ಮಿಶಾ ನಾರಂಗ್ ಮಾತ್ರವಲ್ಲದೇ ರಂಗಾಯಣ ರಘು, ನಟಶ್ರೀ, ವಿಜಯ್ ಚಂಡೂರ್, ಚಿತ್ಕಲಾ ಬಿರಾದಾರ್, ರಘು ರಾಮನಕೊಪ್ಪ ಮುಂತಾದವರು ಕೂಡ ಇದ್ದಾರೆ.

4 / 5
ಈ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಬಸವರಾಜ ಅರಸ್ ಸಂಕಲನ, ಅಮರ್ ಕಲಾ ನಿರ್ದೇಶನ, ಮದನ್-ಹರಿಣಿ ನೃತ್ಯ ನಿರ್ದೇಶನ ಮಾಡಿದ್ದಾರೆ.

ಈ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಬಸವರಾಜ ಅರಸ್ ಸಂಕಲನ, ಅಮರ್ ಕಲಾ ನಿರ್ದೇಶನ, ಮದನ್-ಹರಿಣಿ ನೃತ್ಯ ನಿರ್ದೇಶನ ಮಾಡಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us