Allu Arjun: ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ ಅಲ್ಲು ಅರ್ಜುನ್; ಇಲ್ಲಿವೆ ಫೋಟೋಗಳು

| Updated By: ರಾಜೇಶ್ ದುಗ್ಗುಮನೆ

Updated on: Feb 03, 2022 | 1:33 PM

ಇಂದು (ಫೆ.3) ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದರು. 12 ಗಂಟೆಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿ ನಂತರ ಅಲ್ಲಿಂದ ಪುನೀತ್​ ರಾಜ್​ಕುಮಾರ್​ ಮನೆಗೆ ಅಲ್ಲು ಅರ್ಜುನ್​ ಭೇಟಿ ನೀಡಲಿದ್ದಾರೆ

1 / 5
ಹೃದಯಾಘಾತದಿಂದ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಕೂಡ ಅವರು ಸ್ನೇಹಿತರನ್ನು ಸಂಪಾದಿಸಿದ್ದರು. ಪುನೀತ್​ ನಿಧನದ ಬಳಿಕ ಅಕ್ಕಪಕ್ಕದ ರಾಜ್ಯಗಳ ಅನೇಕ ಸೆಲೆಬ್ರಿಟಿಗಳು ಬಂದು ಡಾ. ರಾಜ್​ಕುಮಾರ್​ ಕುಟುಂಬಕ್ಕೆ ಸಾಂತ್ವನವನ್ನು ಹೇಳಿದರು.

ಹೃದಯಾಘಾತದಿಂದ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಕೂಡ ಅವರು ಸ್ನೇಹಿತರನ್ನು ಸಂಪಾದಿಸಿದ್ದರು. ಪುನೀತ್​ ನಿಧನದ ಬಳಿಕ ಅಕ್ಕಪಕ್ಕದ ರಾಜ್ಯಗಳ ಅನೇಕ ಸೆಲೆಬ್ರಿಟಿಗಳು ಬಂದು ಡಾ. ರಾಜ್​ಕುಮಾರ್​ ಕುಟುಂಬಕ್ಕೆ ಸಾಂತ್ವನವನ್ನು ಹೇಳಿದರು.

2 / 5
ತಾವು ಪುನೀತ್​ ಮನೆಗೆ ಭೇಟಿ ನೀಡುವುದಾಗಿ ಅಲ್ಲು ಅರ್ಜುನ್​ ಈ ಮೊದಲೇ  ತಿಳಿಸಿದ್ದರು. ಅದರಂತೆ ಈಗ ನಡೆದುಕೊಳ್ಳುತ್ತಿದ್ದಾರೆ. ಪುನೀತ್​ ನಿಧನರಾದ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಹೈದರಾಬಾದ್​ನಲ್ಲಿ ನಡೆದ ಸಿನಿಮಾವೊಂದರ ಪ್ರಚಾರ ಕಾರ್ಯದ ವೇಳೆ ಮೌನಾಚರಣೆ ಮಾಡುವ ಮೂಲಕ ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದರು. ಈಗ ಅವರು ಬೆಂಗಳೂರಿಗೆ ಬಂದು ಪುನೀತ್​ ಕುಟುಂಬದ  ಸದಸ್ಯರನ್ನು ಭೇಟಿ ಮಾಡಲಿದ್ದಾರೆ.

ತಾವು ಪುನೀತ್​ ಮನೆಗೆ ಭೇಟಿ ನೀಡುವುದಾಗಿ ಅಲ್ಲು ಅರ್ಜುನ್​ ಈ ಮೊದಲೇ ತಿಳಿಸಿದ್ದರು. ಅದರಂತೆ ಈಗ ನಡೆದುಕೊಳ್ಳುತ್ತಿದ್ದಾರೆ. ಪುನೀತ್​ ನಿಧನರಾದ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಹೈದರಾಬಾದ್​ನಲ್ಲಿ ನಡೆದ ಸಿನಿಮಾವೊಂದರ ಪ್ರಚಾರ ಕಾರ್ಯದ ವೇಳೆ ಮೌನಾಚರಣೆ ಮಾಡುವ ಮೂಲಕ ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದರು. ಈಗ ಅವರು ಬೆಂಗಳೂರಿಗೆ ಬಂದು ಪುನೀತ್​ ಕುಟುಂಬದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ.

3 / 5
ಅಲ್ಲು ಅರ್ಜುನ್​ ಅವರು ಇಂದು ಬೆಳಗ್ಗೆ 11 ಗಂಟೆಗೆ ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದಾರೆ.  ಮಧ್ಯಾಹ್ನ 12 ಗಂಟೆಗೆ ಎಚ್​ಎಎಲ್​ ತಲುಪಲಿದ್ದಾರೆ.  ಆ ಬಳಿ ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ಅಲ್ಲು ಅರ್ಜುನ್​ ಅವರು ಇಂದು ಬೆಳಗ್ಗೆ 11 ಗಂಟೆಗೆ ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಎಚ್​ಎಎಲ್​ ತಲುಪಲಿದ್ದಾರೆ. ಆ ಬಳಿ ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

4 / 5
ಹಲವು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಡಾ. ರಾಜ್​ ಕುಟುಂಬದವರಿಗೆ ಎಲ್ಲ ಭಾಷೆಯ ಸೆಲೆಬ್ರಿಟಿಗಳ ನಡುವೆ ಉತ್ತಮ ಬಾಂಧವ್ಯ ಇದೆ. ಪುನೀತ್​ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

ಹಲವು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಡಾ. ರಾಜ್​ ಕುಟುಂಬದವರಿಗೆ ಎಲ್ಲ ಭಾಷೆಯ ಸೆಲೆಬ್ರಿಟಿಗಳ ನಡುವೆ ಉತ್ತಮ ಬಾಂಧವ್ಯ ಇದೆ. ಪುನೀತ್​ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

5 / 5
ಪುಷ್ಪ’ ಚಿತ್ರದ ಪ್ರಚಾರದ ಸಮಯದಲ್ಲಿ ಅಲ್ಲು ಅರ್ಜುನ್​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪುನೀತ್​ ನಿವಾಸಕ್ಕೆ ಭೇಟಿ ನೀಡದಿರಲು ಅವರು ನಿರ್ಧರಿಸಿದ್ದರು. ಅದಕ್ಕೆ ಕಾರಣ ಏನೆಂಬುದನ್ನೂ ಅವರು ವಿವರಿಸಿದ್ದರು. ‘

ಪುಷ್ಪ’ ಚಿತ್ರದ ಪ್ರಚಾರದ ಸಮಯದಲ್ಲಿ ಅಲ್ಲು ಅರ್ಜುನ್​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪುನೀತ್​ ನಿವಾಸಕ್ಕೆ ಭೇಟಿ ನೀಡದಿರಲು ಅವರು ನಿರ್ಧರಿಸಿದ್ದರು. ಅದಕ್ಕೆ ಕಾರಣ ಏನೆಂಬುದನ್ನೂ ಅವರು ವಿವರಿಸಿದ್ದರು. ‘

Published On - 1:33 pm, Thu, 3 February 22