AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aman Sehrawat: ಒಲಿಂಪಿಕ್ಸ್​ನಲ್ಲಿ ಹೊಸ ಇತಿಹಾಸ ಬರೆದ ಅಮನ್ ಸೆಹ್ರಾವತ್

AMAN SEHRAWAT: ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಭಾರತಕ್ಕೆ ಆರನೇ ಪದಕ ತಂದುಕೊಟ್ಟಿದ್ದಾರೆ. 57 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಡೇರಿಯನ್ ಟೊಯಿ ಕ್ರೂಜ್ ಅವರನ್ನು ಮಣಿಸುವ ಮೂಲಕ ಅಮನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ ಅತ್ಯಂತ ಕಿರಿಯ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 10, 2024 | 8:22 AM

Share
ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ (Aman Sehrawat) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ತಮ್ಮ 21ನೇ ವಯಸ್ಸಿನಲ್ಲಿ ಕಂಚಿನ ಪದಕಕ್ಕೆ ಕೊರೊಳೊಡ್ಡುವ ಮೂಲಕ ಎಂಬುದು ವಿಶೇಷ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ (Aman Sehrawat) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ತಮ್ಮ 21ನೇ ವಯಸ್ಸಿನಲ್ಲಿ ಕಂಚಿನ ಪದಕಕ್ಕೆ ಕೊರೊಳೊಡ್ಡುವ ಮೂಲಕ ಎಂಬುದು ವಿಶೇಷ.

1 / 6
ಶುಕ್ರವಾರ ಚಾಂಪ್ ಡಿ ಅರೆನಾದಲ್ಲಿ ನಡೆದ 57 ಕೆ.ಜಿ ಫ್ರೀ ಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಅಮನ್ ಸೆಹ್ರಾವತ್ ಹಾಗೂ ಪೋರ್ಟೊ ರಿಕೊದ ಡೇರಿಯನ್ ಟೊಯಿ ಕ್ರೂಜ್ ಮುಖಾಮುಖಿಯಾಗಿದ್ದರು. ಕಂಚಿನ ಪದಕ್ಕಾಗಿ ನಡೆದ ಈ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡು ಬಂದರೂ ಅಂತಿಮವಾಗಿ 13-5 ಪಾಯಿಂಟ್ಸ್​ಗಳ ಅಂತರದಿಂದ ಗೆಲ್ಲುವಲ್ಲಿ ಅಮನ್ ಯಶಸ್ವಿಯಾದರು.

ಶುಕ್ರವಾರ ಚಾಂಪ್ ಡಿ ಅರೆನಾದಲ್ಲಿ ನಡೆದ 57 ಕೆ.ಜಿ ಫ್ರೀ ಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಅಮನ್ ಸೆಹ್ರಾವತ್ ಹಾಗೂ ಪೋರ್ಟೊ ರಿಕೊದ ಡೇರಿಯನ್ ಟೊಯಿ ಕ್ರೂಜ್ ಮುಖಾಮುಖಿಯಾಗಿದ್ದರು. ಕಂಚಿನ ಪದಕ್ಕಾಗಿ ನಡೆದ ಈ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡು ಬಂದರೂ ಅಂತಿಮವಾಗಿ 13-5 ಪಾಯಿಂಟ್ಸ್​ಗಳ ಅಂತರದಿಂದ ಗೆಲ್ಲುವಲ್ಲಿ ಅಮನ್ ಯಶಸ್ವಿಯಾದರು.

2 / 6
ಈ ಗೆಲುವಿನೊಂದಿಗೆ ಅಮನ್ ಸೆಹ್ರಾವತ್ ಕಂಚಿನ ಪದಕಕ್ಕೆ ಕೊರೊಳೊಡ್ಡಿದ್ದರು. ವಿಶೇಷ ಎಂದರೆ ಈ ಪದಕದೊಂದಿಗೆ ಒಲಿಂಪಿಕ್ಸ್ ಇತಿಹಾಸದಲ್ಲೇ ಭಾರತಕ್ಕೆ ಪದಕ ಗೆದ್ದುಕೊಟ್ಟ ಅತ್ಯಂತ ಕಿರಿಯ ಕ್ರೀಡಾಳು ಎಂಬ ದಾಖಲೆಯೊಂದು ಅಮನ್ ಹೆಸರಿಗೆ ಸೇರ್ಪಡೆಯಾಯಿತು.

ಈ ಗೆಲುವಿನೊಂದಿಗೆ ಅಮನ್ ಸೆಹ್ರಾವತ್ ಕಂಚಿನ ಪದಕಕ್ಕೆ ಕೊರೊಳೊಡ್ಡಿದ್ದರು. ವಿಶೇಷ ಎಂದರೆ ಈ ಪದಕದೊಂದಿಗೆ ಒಲಿಂಪಿಕ್ಸ್ ಇತಿಹಾಸದಲ್ಲೇ ಭಾರತಕ್ಕೆ ಪದಕ ಗೆದ್ದುಕೊಟ್ಟ ಅತ್ಯಂತ ಕಿರಿಯ ಕ್ರೀಡಾಳು ಎಂಬ ದಾಖಲೆಯೊಂದು ಅಮನ್ ಹೆಸರಿಗೆ ಸೇರ್ಪಡೆಯಾಯಿತು.

3 / 6
ಇದಕ್ಕೂ ಮುನ್ನ ಈ ದಾಖಲೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರ ಹೆಸರಿನಲ್ಲಿತ್ತು. 2016ರ ರಿಯೋ ಒಲಿಂಪಿಕ್ಸ್​ನಲ್ಲಿ 21 ವರ್ಷದ (1 ತಿಂಗಳು, 14 ದಿನಗಳು) ಸಿಂಧು ಬೆಳ್ಳಿ ಪದಕ ಗೆದ್ದು ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯುವ ಕುಸ್ತಿ ಪಟು ಯಶಸ್ವಿಯಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರ ಹೆಸರಿನಲ್ಲಿತ್ತು. 2016ರ ರಿಯೋ ಒಲಿಂಪಿಕ್ಸ್​ನಲ್ಲಿ 21 ವರ್ಷದ (1 ತಿಂಗಳು, 14 ದಿನಗಳು) ಸಿಂಧು ಬೆಳ್ಳಿ ಪದಕ ಗೆದ್ದು ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯುವ ಕುಸ್ತಿ ಪಟು ಯಶಸ್ವಿಯಾಗಿದ್ದಾರೆ.

4 / 6
ಪ್ಯಾರಿಸ್ ಒಲಿಂಪಿಕ್ಸ್​ ಮೂಲಕ ಚೊಚ್ಚಲ ಬಾರಿಗೆ ಒಲಿಂಪಿಕ್ಸ್ ಅಂಗಳಕ್ಕೆ ಪ್ರವೇಶಿಸಿರುವ ಅಮನ್ ಸೆಹ್ರಾವತ್ 21 ವರ್ಷ, 24 ದಿನಗಳ ವಯಸ್ಸಿನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪರ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಅತ್ಯಂತ ಕಿರಿಯ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್​ ಮೂಲಕ ಚೊಚ್ಚಲ ಬಾರಿಗೆ ಒಲಿಂಪಿಕ್ಸ್ ಅಂಗಳಕ್ಕೆ ಪ್ರವೇಶಿಸಿರುವ ಅಮನ್ ಸೆಹ್ರಾವತ್ 21 ವರ್ಷ, 24 ದಿನಗಳ ವಯಸ್ಸಿನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪರ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಅತ್ಯಂತ ಕಿರಿಯ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

5 / 6
ಹಾಗೆಯೇ ಒಲಿಂಪಿಕ್ಸ್ ಇತಿಹಾಸದಲ್ಲಿ ಪದಕ ಗೆದ್ದ ಅತ್ಯಂತ ಕಿರಿಯ ಭಾರತೀಯ ಕುಸ್ತಿಪಟು ಎಂಬ ಹೆಗ್ಗಳಿಕೆಗೂ ಅಮನ್ ಸೆಹ್ರಾವತ್ ಪಾತ್ರರಾಗಿದ್ದಾರೆ. ಈ ಮೂಲಕ ಮೊದಲ ಒಲಿಂಪಿಕ್ಸ್​ನಲ್ಲೇ ಭಾರತದ ಕೀರ್ತಿ ಪಾತಾಕೆಯನ್ನು ಮುಗಿಲೆತ್ತರಕ್ಕೇರಿಸಿರುವ ಅಮನ್ ಕಡೆಯಿಂದ ಮುಂಬರುವ ದಿನಗಳಲ್ಲಿ ಮತ್ತಷ್ಟು ಪದಕಗಳನ್ನು ನಿರೀಕ್ಷಿಸಬಹುದಾಗಿದೆ.

ಹಾಗೆಯೇ ಒಲಿಂಪಿಕ್ಸ್ ಇತಿಹಾಸದಲ್ಲಿ ಪದಕ ಗೆದ್ದ ಅತ್ಯಂತ ಕಿರಿಯ ಭಾರತೀಯ ಕುಸ್ತಿಪಟು ಎಂಬ ಹೆಗ್ಗಳಿಕೆಗೂ ಅಮನ್ ಸೆಹ್ರಾವತ್ ಪಾತ್ರರಾಗಿದ್ದಾರೆ. ಈ ಮೂಲಕ ಮೊದಲ ಒಲಿಂಪಿಕ್ಸ್​ನಲ್ಲೇ ಭಾರತದ ಕೀರ್ತಿ ಪಾತಾಕೆಯನ್ನು ಮುಗಿಲೆತ್ತರಕ್ಕೇರಿಸಿರುವ ಅಮನ್ ಕಡೆಯಿಂದ ಮುಂಬರುವ ದಿನಗಳಲ್ಲಿ ಮತ್ತಷ್ಟು ಪದಕಗಳನ್ನು ನಿರೀಕ್ಷಿಸಬಹುದಾಗಿದೆ.

6 / 6
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!