AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮದ ಎಲ್ಲರಿಗೂ ವಿಮೆ: ಮರಸೂರು ಕರ್ನಾಟಕದ ಮೊದಲ ಸಂಪೂರ್ಣ ವಿಮಾ ಪಂಚಾಯ್ತಿ

ಮರಸೂರು ಗ್ರಾಮ ಪಂಚಾಯಿತಿಯು ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಮತ್ತು ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಗಳ ಅಡಿಯಲ್ಲಿ ಎಲ್ಲಾ ಗ್ರಾಮಸ್ಥರಿಗೆ ವಿಮಾ ಸೌಲಭ್ಯ ಒದಗಿಸುವ ಮೂಲಕ ರಾಜ್ಯದ ಮೊದಲ ಸಂಪೂರ್ಣ ವಿಮಾ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಯೋಜನೆಯಿಂದ 15,531 ಜನರಿಗೆ ಪ್ರಯೋಜನವಾಗಿದೆ.

ರಾಮು, ಆನೇಕಲ್​
| Edited By: |

Updated on: Mar 13, 2025 | 7:15 PM

Share
ಪ್ರತಿಯೊಂದು ಕುಟುಂಬಕ್ಕೂ ಕೂಡ ವಿಮೆ ಅನ್ನೋದು ಅತ್ಯವಶ್ಯಕ ಹಾಗೂ ಅನಿವಾರ್ಯ. ಹೀಗಾಗಿ ಜನರಿಗೆ ವಿಮೆ ಬಗ್ಗೆ ಜಾಗೃತಿಯನ್ನ ಮೂಡಿಸುವ ಮೂಲಕ ಗ್ರಾಮದ ಎಲ್ಲಾ ಗ್ರಾಮಸ್ಥರಿಗೆ ವಿಮೆ ಮಾಡಿಸಿದ್ದು, ರಾಜ್ಯದ ಮೊದಲ ಸಂಪೂರ್ಣ ವಿಮಾ ಪಂಚಾಯತಿ ಎಂಬ ಹೆಗ್ಗಳಿಕೆಗೆ ಇಲ್ಲೊಂದು ಗ್ರಾಮಪಂಚಾಯಿತಿ ಪಾತ್ರವಾಗಿದೆ. ಅಲ್ಲದೆ ಈ ಸಾಧನೆ ಮಾಡಿದ ಗ್ರಾಮ ಪಂಚಾಯಿತಿಗೆ ಪ್ರಶಸ್ತಿ ಒಲಿದು ಬಂದಿದೆ.

ಪ್ರತಿಯೊಂದು ಕುಟುಂಬಕ್ಕೂ ಕೂಡ ವಿಮೆ ಅನ್ನೋದು ಅತ್ಯವಶ್ಯಕ ಹಾಗೂ ಅನಿವಾರ್ಯ. ಹೀಗಾಗಿ ಜನರಿಗೆ ವಿಮೆ ಬಗ್ಗೆ ಜಾಗೃತಿಯನ್ನ ಮೂಡಿಸುವ ಮೂಲಕ ಗ್ರಾಮದ ಎಲ್ಲಾ ಗ್ರಾಮಸ್ಥರಿಗೆ ವಿಮೆ ಮಾಡಿಸಿದ್ದು, ರಾಜ್ಯದ ಮೊದಲ ಸಂಪೂರ್ಣ ವಿಮಾ ಪಂಚಾಯತಿ ಎಂಬ ಹೆಗ್ಗಳಿಕೆಗೆ ಇಲ್ಲೊಂದು ಗ್ರಾಮಪಂಚಾಯಿತಿ ಪಾತ್ರವಾಗಿದೆ. ಅಲ್ಲದೆ ಈ ಸಾಧನೆ ಮಾಡಿದ ಗ್ರಾಮ ಪಂಚಾಯಿತಿಗೆ ಪ್ರಶಸ್ತಿ ಒಲಿದು ಬಂದಿದೆ.

1 / 7
ಹೌದು! ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಮರಸೂರು ಗ್ರಾಮ ಪಂಚಾಯಿತಿ ರಾಜ್ಯದಲ್ಲೇ ಮೊದಲ ಸಂಪೂರ್ಣ ವಿಮಾ ಗ್ರಾಮ ಪಂಚಾಯಿತಿಯಾಗಿ ಆಯ್ಕೆಯಾಗುವ ಮೂಲಕ ಪ್ರಶಸ್ತಿ ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಸುರಕ್ಷಾ ಭಿಮಾ ಯೋಜನೆ ಅಡಿಯಲ್ಲಿ ಗ್ರಾಮದ ಎಲ್ಲಾ ಗ್ರಾಮಸ್ಥರಿಗೆ ವಿಮೆ ಮಾಡಿಸುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ಹೌದು! ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಮರಸೂರು ಗ್ರಾಮ ಪಂಚಾಯಿತಿ ರಾಜ್ಯದಲ್ಲೇ ಮೊದಲ ಸಂಪೂರ್ಣ ವಿಮಾ ಗ್ರಾಮ ಪಂಚಾಯಿತಿಯಾಗಿ ಆಯ್ಕೆಯಾಗುವ ಮೂಲಕ ಪ್ರಶಸ್ತಿ ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಸುರಕ್ಷಾ ಭಿಮಾ ಯೋಜನೆ ಅಡಿಯಲ್ಲಿ ಗ್ರಾಮದ ಎಲ್ಲಾ ಗ್ರಾಮಸ್ಥರಿಗೆ ವಿಮೆ ಮಾಡಿಸುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

2 / 7
ಮರಸೂರು ಗ್ರಾಮದಲ್ಲಿ 3550 ಕುಟುಂಬಗಳಿದ್ದು 15,531 ಗ್ರಾಮಸ್ಥರು ವಾಸವಾಗಿದ್ದಾರೆ, ಇವರಲ್ಲಿ 7242 ಜನ ಈಗಾಗಲೇ ಒಂದಿಲ್ಲೊಂದು ವಿಮೆ ಪಡೆದುಕೊಂಡಿದ್ದಾರೆ. ಇನ್ನುಳಿದ ಗ್ರಾಮಸ್ಥರಿಗೆ ವಿಮೆ ಮಾಡಿಸಿಕೊಡುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಹಾಗೂ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸರ್ವೆ ಕಾರ್ಯ ನಡೆಸಿ ವಿಮೆ ಹೊಂದಿಲ್ಲದ ಗ್ರಾಮಸ್ಥರ ಪಟ್ಟಿ ಸಿದ್ಧಪಡಿಸಿ ಅವರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭಿಮಾ ಯೋಜನೆ ಅಡಿಯಲ್ಲಿ ವಿಮೆ ಮಾಡಿಸಲಾಗಿದೆ.

ಮರಸೂರು ಗ್ರಾಮದಲ್ಲಿ 3550 ಕುಟುಂಬಗಳಿದ್ದು 15,531 ಗ್ರಾಮಸ್ಥರು ವಾಸವಾಗಿದ್ದಾರೆ, ಇವರಲ್ಲಿ 7242 ಜನ ಈಗಾಗಲೇ ಒಂದಿಲ್ಲೊಂದು ವಿಮೆ ಪಡೆದುಕೊಂಡಿದ್ದಾರೆ. ಇನ್ನುಳಿದ ಗ್ರಾಮಸ್ಥರಿಗೆ ವಿಮೆ ಮಾಡಿಸಿಕೊಡುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಹಾಗೂ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸರ್ವೆ ಕಾರ್ಯ ನಡೆಸಿ ವಿಮೆ ಹೊಂದಿಲ್ಲದ ಗ್ರಾಮಸ್ಥರ ಪಟ್ಟಿ ಸಿದ್ಧಪಡಿಸಿ ಅವರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭಿಮಾ ಯೋಜನೆ ಅಡಿಯಲ್ಲಿ ವಿಮೆ ಮಾಡಿಸಲಾಗಿದೆ.

3 / 7
ಆ ಮೂಲಕ ಶೇ 100% ಸಂಪೂರ್ಣ ವಿಮಾ ಗ್ರಾಮ ಪಂಚಾಯಿತಿಯಾಗಿ ಮರಸೂರು ಪಂಚಾಯಿತಿ ಆಯ್ಕೆಯಾಗಿದೆ. ಹೀಗಾಗಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಿಇಒ ಲತಾ ಕುಮಾರಿ ಸಂಪೂರ್ಣ ವಿಮಾ ಗ್ರಾಮ ಪಂಚಾಯಿತಿ ಪ್ರಶಸ್ತಿ ನೀಡುವ ಮೂಲಕ ಅಭಿನಂದಿಸಿದ್ದಾರೆ.

ಆ ಮೂಲಕ ಶೇ 100% ಸಂಪೂರ್ಣ ವಿಮಾ ಗ್ರಾಮ ಪಂಚಾಯಿತಿಯಾಗಿ ಮರಸೂರು ಪಂಚಾಯಿತಿ ಆಯ್ಕೆಯಾಗಿದೆ. ಹೀಗಾಗಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಿಇಒ ಲತಾ ಕುಮಾರಿ ಸಂಪೂರ್ಣ ವಿಮಾ ಗ್ರಾಮ ಪಂಚಾಯಿತಿ ಪ್ರಶಸ್ತಿ ನೀಡುವ ಮೂಲಕ ಅಭಿನಂದಿಸಿದ್ದಾರೆ.

4 / 7
ಇನ್ನೂ ಗ್ರಾಮ ಪಂಚಾಯಿತಿಯಿಂದ ವಿಮೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕರಪತ್ರ ಹಂಚಿ, ಆಟೋ ಅನೌನ್ಸ್ ಮುಖಾಂತರ ಜನರಿಗೆ ವಿಮೆ ಪಡೆಯುವುದರಿಂದ ಯಾವೆಲ್ಲ ಪ್ರಯೋಜನಗಳಿವೆ ಎಂಬ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಗ್ರಾಮಪಂಚಾಯಿತಿ ಸಿಬ್ಬಂದಿಗಳು, ಅಧಿಕಾರಿಗಳ ವರ್ಗ ಜೊತೆಗೆ ಜನಪ್ರತಿನಿಧಿಗಳು ಈವೊಂದು ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಇನ್ನೂ ಗ್ರಾಮ ಪಂಚಾಯಿತಿಯಿಂದ ವಿಮೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕರಪತ್ರ ಹಂಚಿ, ಆಟೋ ಅನೌನ್ಸ್ ಮುಖಾಂತರ ಜನರಿಗೆ ವಿಮೆ ಪಡೆಯುವುದರಿಂದ ಯಾವೆಲ್ಲ ಪ್ರಯೋಜನಗಳಿವೆ ಎಂಬ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಗ್ರಾಮಪಂಚಾಯಿತಿ ಸಿಬ್ಬಂದಿಗಳು, ಅಧಿಕಾರಿಗಳ ವರ್ಗ ಜೊತೆಗೆ ಜನಪ್ರತಿನಿಧಿಗಳು ಈವೊಂದು ಕಾರ್ಯಕ್ಕೆ ಕೈಜೋಡಿಸಿದ್ದಾರೆ.

5 / 7
ಕ್ರೈಸ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ವಿಮಾ ಯೋಜನೆ ಉಪಯೋಗಳನ್ನ ಜನರಿಗೆ ಮನದಟ್ಟು ಮಾಡಿಕೊಟ್ಟು, ಗ್ರಾಮಗಳಲ್ಲಿ ಕ್ಯಾಂಪ್ ನಡೆಸಿ ವಿಮೆ ಹೊಂದಿಲ್ಲದ ಗ್ರಾಮಸ್ಥರಿಗೆ ವಿಮೆ ಮಾಡಿಸಿ ಕೊಡಲಾಗಿದೆ. 18 ರಿಂದ 70 ವರ್ಷದ ಎಲ್ಲಾ ಗ್ರಾಮಸ್ಥರು ವಿಮೆ ಮಾಡಿಸುವ ಮೂಲಕ ಮರಸೂರು ಪಂಚಾಯಿತಿ ಸಂಪೂರ್ಣ ವಿಮಾ ಪಂಚಾಯಿತಿಯಾಗಿ ಆಯ್ಕೆಯಾಗಿದೆ.

ಕ್ರೈಸ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ವಿಮಾ ಯೋಜನೆ ಉಪಯೋಗಳನ್ನ ಜನರಿಗೆ ಮನದಟ್ಟು ಮಾಡಿಕೊಟ್ಟು, ಗ್ರಾಮಗಳಲ್ಲಿ ಕ್ಯಾಂಪ್ ನಡೆಸಿ ವಿಮೆ ಹೊಂದಿಲ್ಲದ ಗ್ರಾಮಸ್ಥರಿಗೆ ವಿಮೆ ಮಾಡಿಸಿ ಕೊಡಲಾಗಿದೆ. 18 ರಿಂದ 70 ವರ್ಷದ ಎಲ್ಲಾ ಗ್ರಾಮಸ್ಥರು ವಿಮೆ ಮಾಡಿಸುವ ಮೂಲಕ ಮರಸೂರು ಪಂಚಾಯಿತಿ ಸಂಪೂರ್ಣ ವಿಮಾ ಪಂಚಾಯಿತಿಯಾಗಿ ಆಯ್ಕೆಯಾಗಿದೆ.

6 / 7
ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ವದ ವಿಮಾ ಯೋಜನೆಗಳನ್ನ ಅನುಷ್ಟಾನಗೊಳಿಸುವ ಮೂಲಕ ಮರಸೂರು ಗ್ರಾಮ ಪಂಚಾಯಿತಿ ಸಂಪೂರ್ಣ ವಿಮಾ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸ್ವಾಗತಾರ್ಹ. ಇದೇ ರೀತಿ ಬೇರೆ ಗ್ರಾಮ ಪಂಚಾಯಿತಿಗಳು ಸರ್ಕಾರದ ಯೋಜನೆಗಳನ್ನ ಅನುಷ್ಠಾನ ಮಾಡಿದ್ದಲ್ಲಿ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ ಎಂಬುದು ನಮ್ಮ ಆಶಯ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ವದ ವಿಮಾ ಯೋಜನೆಗಳನ್ನ ಅನುಷ್ಟಾನಗೊಳಿಸುವ ಮೂಲಕ ಮರಸೂರು ಗ್ರಾಮ ಪಂಚಾಯಿತಿ ಸಂಪೂರ್ಣ ವಿಮಾ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸ್ವಾಗತಾರ್ಹ. ಇದೇ ರೀತಿ ಬೇರೆ ಗ್ರಾಮ ಪಂಚಾಯಿತಿಗಳು ಸರ್ಕಾರದ ಯೋಜನೆಗಳನ್ನ ಅನುಷ್ಠಾನ ಮಾಡಿದ್ದಲ್ಲಿ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ ಎಂಬುದು ನಮ್ಮ ಆಶಯ.

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ