AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಜಾಪುರದಲ್ಲಿ ನಾಟಿ ಕೋಳಿ ಸಾರು ಮತ್ತು ಮುದ್ದೆ ತಿನ್ನುವ ಸ್ಪರ್ಧೆ: ಬೆಂಗಳೂರು ಮಹಾಲಕ್ಷ್ಮಿ ಲೇಔಟ್​​ ಯುವಕ ಹರೀಶ್ ತಿಂದ ಮುದ್ದೆಗಳೆಷ್ಟು ಗೊತ್ತಾ!?

ಸಂಡೇ ಅಂದ್ರೆ ಜನರಿಗೆ ಏನ್ ನೆನಪಾಗುತ್ತೋ ಬಿಡುತ್ತೋ ಗೊತ್ತಿಲ್ಲ. ಆದ್ರೆ ನಾನ್​ವೆಜ್ ಪ್ರಿಯರಿಗೆ ಮಾಂಸದೂಟದ ಗಮ್ಮತ್ತು ಇರ್ಲೇಬೇಕು.. ಅದ್ರಲ್ಲೂ ನಾಟಿ ಕೋಳಿ ಸಾರು ಮತ್ತು ಮುದ್ದೆ ಇದ್ರೆ ಕೇಳೋದೇ ಬೇಡ.. ಹೀಗಾಗಿಯೇ ಇಲ್ಲೊಂದು ಕಡೆ ಹಳ್ಳಿಯ ಸೊಗಡನ್ನ ನೆನಪಿಸುವಂತಹ ನಾಟಿ ಕೋಳಿಯ ಸಾರಿನೊಂದಿಗೆ ಮುದ್ದೆ ತಿನ್ನೋ ಕಾಂಪಿಟೇಷನ್ ಏರ್ಪಡಿಸಿದ್ದು ಸಖತ್ ಎಂಜಾಯ್ ಮೆಂಟ್ ಗೆ ಕಾರಣವಾಗಿತ್ತು.

ರಾಮ್​, ಮೈಸೂರು
| Edited By: ಸಾಧು ಶ್ರೀನಾಥ್​|

Updated on: Jul 10, 2023 | 10:49 AM

Share
ಬಿಸಿಬಿಸಿ ರಾಗಿಮುದ್ದೆ-ನಾಟಿ ಕೋಳಿ ಸಾರಿನ ಘಮ ಘಮ... ನಾಟಿ ಕೋಳಿ ಸಾರಿನೊಂದಿಗೆ ಮುದ್ದೆ ತಿನ್ನುವ ಸ್ಪರ್ಧೆ... ನಾಮುಂದು ತಾಮುಂದು ಎಂದು ಹತ್ತಾರು ಮುದ್ದೆ ಮುರಿದ ಸ್ಪರ್ಧಾಳುಗಳು..

ಬಿಸಿಬಿಸಿ ರಾಗಿಮುದ್ದೆ-ನಾಟಿ ಕೋಳಿ ಸಾರಿನ ಘಮ ಘಮ... ನಾಟಿ ಕೋಳಿ ಸಾರಿನೊಂದಿಗೆ ಮುದ್ದೆ ತಿನ್ನುವ ಸ್ಪರ್ಧೆ... ನಾಮುಂದು ತಾಮುಂದು ಎಂದು ಹತ್ತಾರು ಮುದ್ದೆ ಮುರಿದ ಸ್ಪರ್ಧಾಳುಗಳು..

1 / 9
ಹೌದು ಹೀಗೆ ನಾಟಿ ಕೋಳಿಯ ಸಾರಿನೊಂದಿಗೆ ಮುದ್ದೆಗಳನ್ನ ನಾಮುಂದು ತಾಮುಂದು ಎಂದು ತಿನ್ನುತ್ತಿರುವ ಈ ದೃಶ್ಯ ಕಂಡು ಬಂದಿದ್ದು, ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ..  ಮಂಥನ ಹೋಟೆಲ್ ಹಾಗೂ ಸರ್ಜಾಪುರದ ಯುವಕರು ಸೇರಿ ಆಯೋಜನೆ ಮಾಡಿದ್ದ ನಾಟಿ ಕೋಳಿ ಸಾರಿನ ಜೊತೆಗೆ ಮುದ್ದೆ ತಿನ್ನುವ ಸ್ಪರ್ಧೆಯಲ್ಲಿ ಕುಣಿಗಲ್, ಮಂಡ್ಯ, ಮಾಲೂರು‌ ಸೇರಿದಂತೆ ಬೆಂಗಳೂರಿನ ಹಲವೆಡೆಗಳಿಂದ ಸ್ಪರ್ಧಾಳುಗಳು ಭಾಗಿಯಾಗಿದ್ದರು.

ಹೌದು ಹೀಗೆ ನಾಟಿ ಕೋಳಿಯ ಸಾರಿನೊಂದಿಗೆ ಮುದ್ದೆಗಳನ್ನ ನಾಮುಂದು ತಾಮುಂದು ಎಂದು ತಿನ್ನುತ್ತಿರುವ ಈ ದೃಶ್ಯ ಕಂಡು ಬಂದಿದ್ದು, ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ.. ಮಂಥನ ಹೋಟೆಲ್ ಹಾಗೂ ಸರ್ಜಾಪುರದ ಯುವಕರು ಸೇರಿ ಆಯೋಜನೆ ಮಾಡಿದ್ದ ನಾಟಿ ಕೋಳಿ ಸಾರಿನ ಜೊತೆಗೆ ಮುದ್ದೆ ತಿನ್ನುವ ಸ್ಪರ್ಧೆಯಲ್ಲಿ ಕುಣಿಗಲ್, ಮಂಡ್ಯ, ಮಾಲೂರು‌ ಸೇರಿದಂತೆ ಬೆಂಗಳೂರಿನ ಹಲವೆಡೆಗಳಿಂದ ಸ್ಪರ್ಧಾಳುಗಳು ಭಾಗಿಯಾಗಿದ್ದರು.

2 / 9
ಮೊದಲನೇ ಬಹುಮಾನವಾಗಿ ಒಂದು ಕುರಿ, ಎರಡನೇ ಹಾಗೂ ಮೂರನೇ ಬಹುಮಾನವಾಗಿ ನಾಟಿ ಕೋಳಿ ಕೊಡುವುದಾಗಿ ಆಯೋಜಕರು ತಿಳಿಸಿದ್ದರು.

ಮೊದಲನೇ ಬಹುಮಾನವಾಗಿ ಒಂದು ಕುರಿ, ಎರಡನೇ ಹಾಗೂ ಮೂರನೇ ಬಹುಮಾನವಾಗಿ ನಾಟಿ ಕೋಳಿ ಕೊಡುವುದಾಗಿ ಆಯೋಜಕರು ತಿಳಿಸಿದ್ದರು.

3 / 9
200 ರೂಪಾಯಿ ಎಂಟ್ರಿ ಫೀಸ್ ಇಟ್ಟಿದ್ದು, 40ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿಯಾಗಿದ್ರು. ಸ್ಪರ್ಧೆಗೆ ಕುಳಿತವ್ರಿಗೆ ಆರಂಭದಲ್ಲಿ ತಲಾ ಅರ್ಧ ಕೆಜಿ ತೂಕದ 2 ಮುದ್ದೆಗಳನ್ನ ನೀಡಲಾಗಿತ್ತು.

200 ರೂಪಾಯಿ ಎಂಟ್ರಿ ಫೀಸ್ ಇಟ್ಟಿದ್ದು, 40ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿಯಾಗಿದ್ರು. ಸ್ಪರ್ಧೆಗೆ ಕುಳಿತವ್ರಿಗೆ ಆರಂಭದಲ್ಲಿ ತಲಾ ಅರ್ಧ ಕೆಜಿ ತೂಕದ 2 ಮುದ್ದೆಗಳನ್ನ ನೀಡಲಾಗಿತ್ತು.

4 / 9
ಅದನ್ನ ಖಾಲಿ ಮಾಡಿದ ಮೇಲೆ ಮತ್ತಷ್ಟು ಮುದ್ದೆ ನೀಡಲಾಗಿತ್ತು. ಸ್ಪರ್ಧೆಗೆ 30 ನಿಮಿಷದವರೆಗೆ ಟೈಂ ನಿಗದಿಪಡಿಸಿದ್ದು, ಯಾರು ಹೆಚ್ಚು ಮುದ್ದೆ ತಿನ್ನುತ್ತಾರೋ ಅವರೇ ವಿಜೇತರು ಎಂದು ಘೋಷಿಸಲಾಗಿತ್ತು.

ಅದನ್ನ ಖಾಲಿ ಮಾಡಿದ ಮೇಲೆ ಮತ್ತಷ್ಟು ಮುದ್ದೆ ನೀಡಲಾಗಿತ್ತು. ಸ್ಪರ್ಧೆಗೆ 30 ನಿಮಿಷದವರೆಗೆ ಟೈಂ ನಿಗದಿಪಡಿಸಿದ್ದು, ಯಾರು ಹೆಚ್ಚು ಮುದ್ದೆ ತಿನ್ನುತ್ತಾರೋ ಅವರೇ ವಿಜೇತರು ಎಂದು ಘೋಷಿಸಲಾಗಿತ್ತು.

5 / 9
ಕೆಲವರು ಮೂರೇ ಮುದ್ದೆಗೆ ಸಾಕಾಯ್ತು ಅಂದ್ರೆ ಇನ್ನೂ ಕೆಲವರು ಆರೇಳು ಮುದ್ದೆ ತಿಂದು ಸುಮ್ಮನಾದ್ರು. ಆದ್ರೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಹರೀಶ್ ಅನ್ನೋರು ಮಾತ್ರ ಬರೋಬ್ಬರಿ 13 ಮುದ್ದೆ ಬಾರಿಸಿ ಮೊದಲನೇ ಬಹುಮಾನವಾಗಿದ್ದ ಕುರಿಯನ್ನ ತಮ್ಮದಾಗಿಸಿಕೊಂಡ್ರು.

ಕೆಲವರು ಮೂರೇ ಮುದ್ದೆಗೆ ಸಾಕಾಯ್ತು ಅಂದ್ರೆ ಇನ್ನೂ ಕೆಲವರು ಆರೇಳು ಮುದ್ದೆ ತಿಂದು ಸುಮ್ಮನಾದ್ರು. ಆದ್ರೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಹರೀಶ್ ಅನ್ನೋರು ಮಾತ್ರ ಬರೋಬ್ಬರಿ 13 ಮುದ್ದೆ ಬಾರಿಸಿ ಮೊದಲನೇ ಬಹುಮಾನವಾಗಿದ್ದ ಕುರಿಯನ್ನ ತಮ್ಮದಾಗಿಸಿಕೊಂಡ್ರು.

6 / 9
ಸ್ಪರ್ಧೆಯಲ್ಲಿ ಎರಡನೇ ಬಹುಮಾನವನ್ನ ಶ್ರೀನಿವಾಸ್ ಎಂಬುವವರು ಹಾಗೂ ಮೂರನೇ ಬಹುಮಾನವನ್ನ ಆನಂದ್ ಎಂಬುವವರು ಪಡೆದುಕೊಂಡರು. ಈ ಸ್ಪರ್ಧೆ ನೋಡಲೆಂದು ಸರ್ಜಾಪುರದ ಸುತ್ತಮುತ್ತಲ ಕಡೆಗಳಿಂದ ಸಾಕಷ್ಟು ಜನ ಸೇರಿದ್ದರು.

ಸ್ಪರ್ಧೆಯಲ್ಲಿ ಎರಡನೇ ಬಹುಮಾನವನ್ನ ಶ್ರೀನಿವಾಸ್ ಎಂಬುವವರು ಹಾಗೂ ಮೂರನೇ ಬಹುಮಾನವನ್ನ ಆನಂದ್ ಎಂಬುವವರು ಪಡೆದುಕೊಂಡರು. ಈ ಸ್ಪರ್ಧೆ ನೋಡಲೆಂದು ಸರ್ಜಾಪುರದ ಸುತ್ತಮುತ್ತಲ ಕಡೆಗಳಿಂದ ಸಾಕಷ್ಟು ಜನ ಸೇರಿದ್ದರು.

7 / 9
ಬಂದಿದ್ದವರೆಲ್ಲ ನಾಟಿ ಕೋಳಿ ಜೊತೆಗೆ ಮುದ್ದೆಗಳನ್ನ ಬ್ಯಾಟಿಂಗ್ ಮಾಡುತ್ತಿದ್ದ ಸ್ಫರ್ಧಾಳುಗಳಿಗೆ ಕೇಕೆ ಹಾಕಿ  ಹುರಿದುಂಬಿಸಿದ್ರು. ಸ್ಪರ್ಧೆಯಲ್ಲಿ ಭಾಗಿಯಾದವ್ರು ಮಾತ್ರ ನಾವು ಗೆಲ್ತೀವೋ ಬಿಡ್ತೀವೋ ಗೊತ್ತಿಲ್ಲ.. ಒಟ್ಟಿನಲ್ಲಿ ಕೊಟ್ಟ ಇನ್ನೂರು ರೂಪಾಯಿ ಎಂಟ್ರಿ ಫೀಸ್ ಗೆ ಮೋಸ ಆಗಬಾರ್ದು ಅಂತ ಸರಿಯಾಗಿ ಬ್ಯಾಟಿಂಗ್ ಮಾಡಿದ್ರು..

ಬಂದಿದ್ದವರೆಲ್ಲ ನಾಟಿ ಕೋಳಿ ಜೊತೆಗೆ ಮುದ್ದೆಗಳನ್ನ ಬ್ಯಾಟಿಂಗ್ ಮಾಡುತ್ತಿದ್ದ ಸ್ಫರ್ಧಾಳುಗಳಿಗೆ ಕೇಕೆ ಹಾಕಿ ಹುರಿದುಂಬಿಸಿದ್ರು. ಸ್ಪರ್ಧೆಯಲ್ಲಿ ಭಾಗಿಯಾದವ್ರು ಮಾತ್ರ ನಾವು ಗೆಲ್ತೀವೋ ಬಿಡ್ತೀವೋ ಗೊತ್ತಿಲ್ಲ.. ಒಟ್ಟಿನಲ್ಲಿ ಕೊಟ್ಟ ಇನ್ನೂರು ರೂಪಾಯಿ ಎಂಟ್ರಿ ಫೀಸ್ ಗೆ ಮೋಸ ಆಗಬಾರ್ದು ಅಂತ ಸರಿಯಾಗಿ ಬ್ಯಾಟಿಂಗ್ ಮಾಡಿದ್ರು..

8 / 9
ಇತ್ತೀಚೆಗೆ ನಮ್ಮ ದೇಶೀಯ ಅಹಾರ ಪದ್ಧತಿ ಮರೆಯಾಗುತ್ತಿದ್ದು, ಫಾಸ್ಟ್ ಫುಡ್ ನತ್ತ ಜನರು ಮೊರೆ ಹೋಗ್ತಿದ್ದಾರೆ. ಹೀಗಾಗಿ ನಮ್ಮ ಹಳ್ಳಿ ಸೊಗಡಿನ ಆರೋಗ್ಯಕರವಾದ ರಾಗಿ ಮುದ್ದೆಯ ರುಚಿಯನ್ನ ಸಿಲಿಕಾನ್ ಸಿಟಿ ಮಂದಿಗೆ ಪರಿಚಯಿಸುವ ದೃಷ್ಟಿಯಿಂದ ಆಯೋಜನೆ ಮಾಡಿದ್ದ ನಾಟಿ ಕೋಳಿ ಸಾರಿನೊಂದಿಗೆ ಮುದ್ದೆ ತಿನ್ನೋ ಸ್ಪರ್ಧೆಯಲ್ಲಿ ಸ್ಪರ್ಧಾಳುಗಳು ಭಾಗಿಯಾಗಿ ಭರ್ಜರಿ ಬ್ಯಾಟಿಂಗ್ ಮಾಡಿ ನಾಟಿ ಸ್ಟೈಲ್ ರುಚಿ ಸವಿದಿದ್ದಾರೆ.

ಇತ್ತೀಚೆಗೆ ನಮ್ಮ ದೇಶೀಯ ಅಹಾರ ಪದ್ಧತಿ ಮರೆಯಾಗುತ್ತಿದ್ದು, ಫಾಸ್ಟ್ ಫುಡ್ ನತ್ತ ಜನರು ಮೊರೆ ಹೋಗ್ತಿದ್ದಾರೆ. ಹೀಗಾಗಿ ನಮ್ಮ ಹಳ್ಳಿ ಸೊಗಡಿನ ಆರೋಗ್ಯಕರವಾದ ರಾಗಿ ಮುದ್ದೆಯ ರುಚಿಯನ್ನ ಸಿಲಿಕಾನ್ ಸಿಟಿ ಮಂದಿಗೆ ಪರಿಚಯಿಸುವ ದೃಷ್ಟಿಯಿಂದ ಆಯೋಜನೆ ಮಾಡಿದ್ದ ನಾಟಿ ಕೋಳಿ ಸಾರಿನೊಂದಿಗೆ ಮುದ್ದೆ ತಿನ್ನೋ ಸ್ಪರ್ಧೆಯಲ್ಲಿ ಸ್ಪರ್ಧಾಳುಗಳು ಭಾಗಿಯಾಗಿ ಭರ್ಜರಿ ಬ್ಯಾಟಿಂಗ್ ಮಾಡಿ ನಾಟಿ ಸ್ಟೈಲ್ ರುಚಿ ಸವಿದಿದ್ದಾರೆ.

9 / 9
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ