AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಜನರ ಆರಾಧ್ಯ ದೇವಿ ಮಾರಮ್ಮನ ಅದ್ದೂರಿ ಉತ್ಸವ; ಬುಡಕಟ್ಟು ಸಂಸ್ಕೃತಿ ಅನಾವರಣಗೊಳಿಸುವ ಜಾತ್ರೆಯ ಝಲಕ್ ಇಲ್ಲಿದೆ

ಜಾತ್ರೆ, ಉತ್ಸವಗಳ ಸಂದರ್ಭದಲ್ಲಿ ಭಕ್ತರು ಹೂವು, ಹಣ್ಣು ಎಸೆಯುವುದು ಸಹಜ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ಆರಾಧ್ಯ ದೇವಿಯ ಉತ್ಸವದ ವೇಳೆ ಕೋಳಿಗಳನ್ನು ತೂರುವ ಅಪರೂಪದ ಆಚರಣೆ ನಡೆಯುತ್ತದೆ. ಬುಡಕಟ್ಟು ಸಂಸ್ಕೃತಿ ಅನಾವರಣಗೊಳಿಸುವ ಉತ್ಸವದ ಝಲಕ್ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on:Sep 04, 2024 | 6:18 PM

Share
ಕರ್ನಾಟಕ ಮತ್ತು ಆಂಧ್ರ ಗಡಿ ಭಾಗದ ಗ್ರಾಮದ ಜನರ ಆರಾಧ್ಯ ದೇವಿ ಮಾರಮ್ಮನ ಅದ್ಧೂರಿ ಉತ್ಸವ ಮೂರ್ತಿ ಮೆರವಣಿಗೆ ವೇಳೆ ಕೋಳಿ ತೂರಿ ಹರಕೆ ತೀರಿಸುವ ಭಕ್ತರು. ನಾಡಿನ ಮೂಲೆ ಮೂಲೆಯಿಂದ ಆಗಮಿಸಿದ ಜನಸಾಗರ. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ.

ಕರ್ನಾಟಕ ಮತ್ತು ಆಂಧ್ರ ಗಡಿ ಭಾಗದ ಗ್ರಾಮದ ಜನರ ಆರಾಧ್ಯ ದೇವಿ ಮಾರಮ್ಮನ ಅದ್ಧೂರಿ ಉತ್ಸವ ಮೂರ್ತಿ ಮೆರವಣಿಗೆ ವೇಳೆ ಕೋಳಿ ತೂರಿ ಹರಕೆ ತೀರಿಸುವ ಭಕ್ತರು. ನಾಡಿನ ಮೂಲೆ ಮೂಲೆಯಿಂದ ಆಗಮಿಸಿದ ಜನಸಾಗರ. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ.

1 / 6
ಪ್ರತಿ ವರ್ಷಕ್ಕೊಮ್ಮೆ ಈ ಗ್ರಾಮದಲ್ಲಿ ಮಾರಮ್ಮ ದೇವಿಯ ಜಾತ್ರೆ, ಉತ್ಸವ ಸಂಭ್ರಮದಿಂದ ನಡೆಯುತ್ತದೆ. ಕರ್ನಾಟಕ ಮಾತ್ರ ಅಲ್ಲದೆ ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಾರೆ. ಗ್ರಾಮದ ದೇಗುಲದಿಂದ ಹೊರವಲಯದಲ್ಲಿರುವ ಮಾರಮ್ಮ ದೇವಿಯ ಪ್ರದೇಶದವರೆಗೆ ಭವ್ಯ ಮೆರವಣಿಗೆ ನಡೆಯುತ್ತದೆ.

ಪ್ರತಿ ವರ್ಷಕ್ಕೊಮ್ಮೆ ಈ ಗ್ರಾಮದಲ್ಲಿ ಮಾರಮ್ಮ ದೇವಿಯ ಜಾತ್ರೆ, ಉತ್ಸವ ಸಂಭ್ರಮದಿಂದ ನಡೆಯುತ್ತದೆ. ಕರ್ನಾಟಕ ಮಾತ್ರ ಅಲ್ಲದೆ ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸುತ್ತಾರೆ. ಗ್ರಾಮದ ದೇಗುಲದಿಂದ ಹೊರವಲಯದಲ್ಲಿರುವ ಮಾರಮ್ಮ ದೇವಿಯ ಪ್ರದೇಶದವರೆಗೆ ಭವ್ಯ ಮೆರವಣಿಗೆ ನಡೆಯುತ್ತದೆ.

2 / 6
ಈ ವೇಳೆ ಹರಕೆ ಹೊತ್ತ ಭಕ್ತರು ಹೂವು, ಹಣ್ಣು ಮತ್ತು ಕೆಲವರು ಕೋಳಿಗಳನ್ನು ತೂರಿ ಹರಕೆ ತೀರಿಸುವ ಆಚರಣೆ ಕಾಲಾನುಕಾಲದಿಂದ ನಡೆದುಕೊಂಡು ಬಂದಿದೆ.

ಈ ವೇಳೆ ಹರಕೆ ಹೊತ್ತ ಭಕ್ತರು ಹೂವು, ಹಣ್ಣು ಮತ್ತು ಕೆಲವರು ಕೋಳಿಗಳನ್ನು ತೂರಿ ಹರಕೆ ತೀರಿಸುವ ಆಚರಣೆ ಕಾಲಾನುಕಾಲದಿಂದ ನಡೆದುಕೊಂಡು ಬಂದಿದೆ.

3 / 6
ಇನ್ನು ಮಧ್ಯಾಹ್ನದ ಮಾರಮ್ಮ ಎಂದೇ ಕರೆಯುವ ಈ ದೇವಿಯ ಉತ್ಸವ ಮಧ್ಯಾಹ್ನದ ವೇಳೆ ಅದ್ಧೂರಿಯಾಗಿ ನಡೆಯುತ್ತದೆ. ಸಂಜೆ ವೇಳೆ ತುಂಬುಲು ಪ್ರದೇಶದಲ್ಲಿನ ದೇಗುಲ ಬಳಿ ಒಬ್ಬರ ಮೇಲೊಬ್ಬರು ಏರಿ ಕಲ್ಲಿನ ಕಂಬವೇರಿ ದೀಪ ಬೆಳಗುತ್ತಾರೆ. ಆ ಮೂಲಕ ಮಳೆ, ಬೆಳೆ ಸಮೃದ್ಧಿಯಾಗಿದ್ದು, ಜನರ ಬದುಕು ಬೆಳಗಲಿ ಎಂದು ಆರಾಧ್ಯ ದೇವಿಯಲ್ಲಿ ಪ್ರಾರ್ಥಿಸುತ್ತಾರೆ.

ಇನ್ನು ಮಧ್ಯಾಹ್ನದ ಮಾರಮ್ಮ ಎಂದೇ ಕರೆಯುವ ಈ ದೇವಿಯ ಉತ್ಸವ ಮಧ್ಯಾಹ್ನದ ವೇಳೆ ಅದ್ಧೂರಿಯಾಗಿ ನಡೆಯುತ್ತದೆ. ಸಂಜೆ ವೇಳೆ ತುಂಬುಲು ಪ್ರದೇಶದಲ್ಲಿನ ದೇಗುಲ ಬಳಿ ಒಬ್ಬರ ಮೇಲೊಬ್ಬರು ಏರಿ ಕಲ್ಲಿನ ಕಂಬವೇರಿ ದೀಪ ಬೆಳಗುತ್ತಾರೆ. ಆ ಮೂಲಕ ಮಳೆ, ಬೆಳೆ ಸಮೃದ್ಧಿಯಾಗಿದ್ದು, ಜನರ ಬದುಕು ಬೆಳಗಲಿ ಎಂದು ಆರಾಧ್ಯ ದೇವಿಯಲ್ಲಿ ಪ್ರಾರ್ಥಿಸುತ್ತಾರೆ.

4 / 6
ಸಂಕಷ್ಟ ಪರಿಹಾರಕ್ಕಾಗಿ ಭಕ್ತರು ವಿವಿಧ ಹರಕೆಗಳನ್ನು ಹೊತ್ತಿರುತ್ತಾರೆ. ಜಾನುವಾರು, ಕುರಿ-ಕೋಳಿ ಸಾಕಣೆಯೇ ಪ್ರಮುಖ ಕಸುಬಾಗಿರುವ ಈ ಭಾಗದ ಜನರು ಕುರಿ-ಕೋಳಿ ರಕ್ಷಣೆಗೂ ಹರಕೆ ಹೊತ್ತಿರುತ್ತಾರೆ. ಹೀಗಾಗಿ, ರಕ್ಷಿಸಿದ ದೇವಿಗೆ ಭಕ್ತರು ಕುರಿ, ಕೋಳಿಗಳನ್ನೇ ಅರ್ಪಿಸುವ ಮೂಲಕ ಹರಕೆ ತೀರಿಸುತ್ತಾರಂತೆ.

ಸಂಕಷ್ಟ ಪರಿಹಾರಕ್ಕಾಗಿ ಭಕ್ತರು ವಿವಿಧ ಹರಕೆಗಳನ್ನು ಹೊತ್ತಿರುತ್ತಾರೆ. ಜಾನುವಾರು, ಕುರಿ-ಕೋಳಿ ಸಾಕಣೆಯೇ ಪ್ರಮುಖ ಕಸುಬಾಗಿರುವ ಈ ಭಾಗದ ಜನರು ಕುರಿ-ಕೋಳಿ ರಕ್ಷಣೆಗೂ ಹರಕೆ ಹೊತ್ತಿರುತ್ತಾರೆ. ಹೀಗಾಗಿ, ರಕ್ಷಿಸಿದ ದೇವಿಗೆ ಭಕ್ತರು ಕುರಿ, ಕೋಳಿಗಳನ್ನೇ ಅರ್ಪಿಸುವ ಮೂಲಕ ಹರಕೆ ತೀರಿಸುತ್ತಾರಂತೆ.

5 / 6
ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ಗಡಿ ಭಾಗದಲ್ಲಿ ಈ ಭಾಗದ ಬುಡಕಟ್ಟು ಸಮುದಾಯದ ಸಂಸ್ಕೃತಿ ಅನಾವರಣಗೊಂಡಿದೆ. ಪರಂಪರಾಗತವಾಗಿ ಆಚರಿಸಿಕೊಂಡು ಬಂದ ಜಾತ್ರೆ, ಉತ್ಸವಗಳು ಇಂದಿಗೂ ಯಥಾವತ್ತಾಗಿ ನಡೆಯುತ್ತಿವೆ. ವಿಶೇಷ ಉತ್ಸವಗಳು ಈ ಭಾಗದ ಜನರ ಶ್ರೀಮಂತ ಸಂಸ್ಕೃತಿಗೆ ಸಾಕ್ಷಿಯಾಗಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ಗಡಿ ಭಾಗದಲ್ಲಿ ಈ ಭಾಗದ ಬುಡಕಟ್ಟು ಸಮುದಾಯದ ಸಂಸ್ಕೃತಿ ಅನಾವರಣಗೊಂಡಿದೆ. ಪರಂಪರಾಗತವಾಗಿ ಆಚರಿಸಿಕೊಂಡು ಬಂದ ಜಾತ್ರೆ, ಉತ್ಸವಗಳು ಇಂದಿಗೂ ಯಥಾವತ್ತಾಗಿ ನಡೆಯುತ್ತಿವೆ. ವಿಶೇಷ ಉತ್ಸವಗಳು ಈ ಭಾಗದ ಜನರ ಶ್ರೀಮಂತ ಸಂಸ್ಕೃತಿಗೆ ಸಾಕ್ಷಿಯಾಗಿದೆ.

6 / 6

Published On - 6:15 pm, Wed, 4 September 24

Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?