AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವೊಬ್ಬ ಡಿಸಿಎಂ ಎನ್ನುವುದನ್ನೇ ಮರೆತು ಗುರುವಿನ ಋಣ ತೀರಿಸಿದ ಡಿಕೆ ಶಿವಕುಮಾರ್​

ಡಿಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯಲ್ಲಿ ಎಸ್​ಎಂ ಕೃಷ್ಣ ಅವರ ಪಾತ್ರ ಕೂಡ ಇದೆ. ಗುರು-ಶಿಷ್ಯರಾದ ಇವರು ಬಳಿಕ ಸಂಬಂಧಿಕರಾದ್ರು. ಎಸ್.ಎಂ ಕೃಷ್ಣ ಅವ್ರ ಪಾಲಿಗೆ ಡಿಕೆ ಶಿವಕುಮಾರ್ ಬರೀ ಬೀಗರಲ್ಲ. ಮನೆಮಗನಂತೆ ಕುಟುಂಬದ ಜೊತೆ ನಿಂತವರು. ಕೃಷ್ಣ ಅವರ ಮನೆಗೆ ಮಗಳನ್ನೇ ಧಾರೆ ಎರೆದು ಕೊಟ್ಟವರು. ಕೃಷ್ಣ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ರೂ ಗುರುವಿನ ಮೇಲಿನ ಡಿಕೆ ನಿಯತ್ತು ಮಾತ್ರ ಅಚಲವಾಗಿಯೇ ಇತ್ತು. ಹೀಗಾಗಿ ತಾವೊಬ್ಬ ಡಿಸಿಎಂ ಎನ್ನುವುದನ್ನು ಮರೆತು ಎಸ್​ಎಂ ಕೃಷ್ಣರ ಶಿಷ್ಯನಾಗಿ ಕಾಣಿಸಿಕೊಂಡಿದ್ರು. ಕೈಯಲ್ಲಿ ಮೈಕ್‌ ಹಿಡಿದು ಎಲ್ಲವನ್ನೂ ನಿರ್ವಹಿಸಿದ ಡಿಕೆ ಶಿವಕುಮಾರ್, ಗುರುವಿಗೆ ಹೆಗಲು ನೀಡಿ ಅಂತಿಮ ವಿದಾಯ ಹೇಳಿದರು. ಇನ್ನು ಎಸ್​ಎಂ ಕೃಷ್ಣ ಉಸಿರು ನಿಲ್ಲಿಸಿದ ಬಳಿಕ ಅವರನ್ನು ಗೌರವಪೂರ್ವಕವಾಗಿ ಕಳುಹಿಸಿಕೊಡುವವರೆಗೆ ಡಿಕೆಶಿ ಎಲ್ಲಾ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಫೋಟೋಗಳೇ ಎಲ್ಲವನ್ನೂ ಹೇಳುತ್ತವೆ.

ರಮೇಶ್ ಬಿ. ಜವಳಗೇರಾ
|

Updated on: Dec 11, 2024 | 9:08 PM

Share
ಡಿಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯಲ್ಲಿ ಎಸ್​ಎಂ ಕೃಷ್ಣ ಅವರ ಪಾತ್ರ ಕೂಡ ಇದೆ. ಗುರು-ಶಿಷ್ಯರಾದ ಇವರು ಬಳಿಕ ಸಂಬಂಧಿಕರಾದ್ರು. ಎಸ್​ಎಂ ಕೃಷ್ಣ ಅವರ ಗರಡಿಯಲ್ಲೇ ಬೆಳೆದ ಡಿಕೆ ಶಿವಕುಮಾರ್​, ಇಂದು ಗುರುಗೆ ಕಣ್ಣೀರ ವಿದಾಯ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯಲ್ಲಿ ಎಸ್​ಎಂ ಕೃಷ್ಣ ಅವರ ಪಾತ್ರ ಕೂಡ ಇದೆ. ಗುರು-ಶಿಷ್ಯರಾದ ಇವರು ಬಳಿಕ ಸಂಬಂಧಿಕರಾದ್ರು. ಎಸ್​ಎಂ ಕೃಷ್ಣ ಅವರ ಗರಡಿಯಲ್ಲೇ ಬೆಳೆದ ಡಿಕೆ ಶಿವಕುಮಾರ್​, ಇಂದು ಗುರುಗೆ ಕಣ್ಣೀರ ವಿದಾಯ ಹೇಳಿದರು.

1 / 13
ಎಸ್​ಎಂ ಕೃಷ್ಣ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಬೆಳಗಾವಿಯಿಂದ ವಿಮಾನ ಏರಿ ಬಂದು ನೇರವಾಗಿ ಗುರುವಿನ ಮನೆಗೆ ತೆರಳಿದ್ರು. ಮೊದಲಿಗೆ ಗುರುವಿಗೆ ಹೂವಿನ ಹಾರ ಹಾಕಿ ಕಣ್ಣೀರಿಟ್ಟರು.

ಎಸ್​ಎಂ ಕೃಷ್ಣ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಬೆಳಗಾವಿಯಿಂದ ವಿಮಾನ ಏರಿ ಬಂದು ನೇರವಾಗಿ ಗುರುವಿನ ಮನೆಗೆ ತೆರಳಿದ್ರು. ಮೊದಲಿಗೆ ಗುರುವಿಗೆ ಹೂವಿನ ಹಾರ ಹಾಕಿ ಕಣ್ಣೀರಿಟ್ಟರು.

2 / 13
ಮಾಜಿ ಸಿಎಂ ಎಸ್‌ಕೃಷ್ಣ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ ಸೂಚಿಸಿ ನನ್ನ ತಂದೆಯನ್ನೇ ಕಳೆದುಕೊಂಡಷ್ಟು ನೋವು ಆಗುತ್ತಿದೆ ಎಂದು ಭಾವುಕರಾದರು, ನನ್ನ ಅವರ ಸಂಬಂಧ ತಂದೆ ಮಗನ ಸಂಬಂಧ ಇದ್ದಂತೆ ಎಂದು ಗಳಗಳನೆ ಅತ್ತರು.

ಮಾಜಿ ಸಿಎಂ ಎಸ್‌ಕೃಷ್ಣ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ ಸೂಚಿಸಿ ನನ್ನ ತಂದೆಯನ್ನೇ ಕಳೆದುಕೊಂಡಷ್ಟು ನೋವು ಆಗುತ್ತಿದೆ ಎಂದು ಭಾವುಕರಾದರು, ನನ್ನ ಅವರ ಸಂಬಂಧ ತಂದೆ ಮಗನ ಸಂಬಂಧ ಇದ್ದಂತೆ ಎಂದು ಗಳಗಳನೆ ಅತ್ತರು.

3 / 13
ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅಂತೂ ನಿನ್ನೆಯಿಂದಲೂ ಕಣ್ಣೀರಾಗಿದ್ದಾರೆ. ಇಂದು ತಮ್ಮ ನಾಯಕನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟಿದ್ದ ಡಿಕೆಶಿ ಕಣ್ಣೀರಿಡುತ್ತಾಲೇ ಎಲ್ಲವನ್ನೂ ನಿರ್ವಹಿಸಿದ್ರು.

ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅಂತೂ ನಿನ್ನೆಯಿಂದಲೂ ಕಣ್ಣೀರಾಗಿದ್ದಾರೆ. ಇಂದು ತಮ್ಮ ನಾಯಕನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟಿದ್ದ ಡಿಕೆಶಿ ಕಣ್ಣೀರಿಡುತ್ತಾಲೇ ಎಲ್ಲವನ್ನೂ ನಿರ್ವಹಿಸಿದ್ರು.

4 / 13
ತಾವೊಬ್ಬ ಡಿಸಿಎಂ ಎನ್ನುವುದನ್ನು ಮರೆತು ಇಲ್ಲಿ   ಎಸ್‌ಎಂಕೆಯ ಶಿಷ್ಯನಾಗಿ ಕಾಣಿಸಿಕೊಂಡಿದ್ರು. ಕೈಯಲ್ಲಿ ಮೈಕ್‌ ಹಿಡಿದು ಎಲ್ಲವನ್ನೂ ನಿರ್ವಹಿಸಿದ್ರು.

ತಾವೊಬ್ಬ ಡಿಸಿಎಂ ಎನ್ನುವುದನ್ನು ಮರೆತು ಇಲ್ಲಿ ಎಸ್‌ಎಂಕೆಯ ಶಿಷ್ಯನಾಗಿ ಕಾಣಿಸಿಕೊಂಡಿದ್ರು. ಕೈಯಲ್ಲಿ ಮೈಕ್‌ ಹಿಡಿದು ಎಲ್ಲವನ್ನೂ ನಿರ್ವಹಿಸಿದ್ರು.

5 / 13
ಅಳಿಯನನ್ನು ಕಳೆದುಕೊಂಡಾಗ ಬಂಡೆಯಂತೆ ನಿಂತರು. ಗಂಡು ಮಕ್ಕಳಿಲ್ಲದ ಎಸ್.ಎಂ ಕೃಷ್ಣಗೆ  ಮನೆಮಗನಾದರು. ಕೃಷ್ಣ ಮೊಮ್ಮಗನಿಗೆ ಮಗಳನ್ನೇ ಧಾರೆ  ಎರೆದು ಕೊಟ್ಟರು. ಈಗ ಅವರು ನಿಧನದ ಬಳಿಕ ಬಂಡೆಯಂತೆ ಮುಂದೆ ನಿಂತು ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಸಿಕೊಟ್ಟಿದ್ದಾರೆ.

ಅಳಿಯನನ್ನು ಕಳೆದುಕೊಂಡಾಗ ಬಂಡೆಯಂತೆ ನಿಂತರು. ಗಂಡು ಮಕ್ಕಳಿಲ್ಲದ ಎಸ್.ಎಂ ಕೃಷ್ಣಗೆ ಮನೆಮಗನಾದರು. ಕೃಷ್ಣ ಮೊಮ್ಮಗನಿಗೆ ಮಗಳನ್ನೇ ಧಾರೆ ಎರೆದು ಕೊಟ್ಟರು. ಈಗ ಅವರು ನಿಧನದ ಬಳಿಕ ಬಂಡೆಯಂತೆ ಮುಂದೆ ನಿಂತು ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಸಿಕೊಟ್ಟಿದ್ದಾರೆ.

6 / 13
ಬೆಂಗಳೂರಿನ ಸದಾಶಿವನಗರದಲ್ಲಿ ಎಸ್​ಎಂ ಕೃಷ್ಣ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಏನೇನು ಬೇಕು ಎಂದು ಮುಂದೆ ನಿಂತುಕೊಂಡು ಎಲ್ಲಾ ನೋಡಿಕೊಂಡರು.

ಬೆಂಗಳೂರಿನ ಸದಾಶಿವನಗರದಲ್ಲಿ ಎಸ್​ಎಂ ಕೃಷ್ಣ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಏನೇನು ಬೇಕು ಎಂದು ಮುಂದೆ ನಿಂತುಕೊಂಡು ಎಲ್ಲಾ ನೋಡಿಕೊಂಡರು.

7 / 13
ಎಸ್​ಎಂ ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲೇ ಅಂತ್ಯಸಂಸ್ಕಾರ ಮಾಡಬೇಕೆಂದಾಗ ಡಿಕೆಶಿ ಸ್ಥಳಕ್ಕೆ ಭೇಟಿ ನೀಡಿದರು. ಅಲ್ಲದೇ ಮುಂದೆ ನಿಂತು ಅಂತ್ಯಕ್ರಿಯೆ ಸ್ಥಳವನ್ನು ಸ್ವಚ್ಛಗೊಳಿಸಿ ಎಲ್ಲಾ ತಯಾರಿ ಮಾಡಿಸಿದ್ದಾರೆ.

ಎಸ್​ಎಂ ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲೇ ಅಂತ್ಯಸಂಸ್ಕಾರ ಮಾಡಬೇಕೆಂದಾಗ ಡಿಕೆಶಿ ಸ್ಥಳಕ್ಕೆ ಭೇಟಿ ನೀಡಿದರು. ಅಲ್ಲದೇ ಮುಂದೆ ನಿಂತು ಅಂತ್ಯಕ್ರಿಯೆ ಸ್ಥಳವನ್ನು ಸ್ವಚ್ಛಗೊಳಿಸಿ ಎಲ್ಲಾ ತಯಾರಿ ಮಾಡಿಸಿದ್ದಾರೆ.

8 / 13
ಗುರುವಿನ ಅಂತಿಮ ದರ್ಶನಕ್ಕೆ ಬರುವ ರಾಜಕೀಯ ನಾಯಕರು, ಸ್ವಾಮೀಜಿಗಳು ಹಾಗೂ ಅಭಿಮಾನಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪೊಲೀಸ್ ಬಂದೋಬಸ್ತ್​ ಮಾಡಿಸಿದ್ದರು.

ಗುರುವಿನ ಅಂತಿಮ ದರ್ಶನಕ್ಕೆ ಬರುವ ರಾಜಕೀಯ ನಾಯಕರು, ಸ್ವಾಮೀಜಿಗಳು ಹಾಗೂ ಅಭಿಮಾನಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪೊಲೀಸ್ ಬಂದೋಬಸ್ತ್​ ಮಾಡಿಸಿದ್ದರು.

9 / 13

ತಾವೇ ಖುದ್ದಾಗಿ ಬೆಂಗಳೂರಿನಿಂದ ಸೋಮನಹಳ್ಳಿ, ಸೋಮನಹಳ್ಳಿಯಿಂದ ಬೆಂಗಳೂರಿಗೆ ತಿರುಗಾಡಿ ಕೃಷ್ಣ ಅವರ ಅಂತ್ಯಕ್ರಿಯೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಸಿದ್ದಾರೆ.

ತಾವೇ ಖುದ್ದಾಗಿ ಬೆಂಗಳೂರಿನಿಂದ ಸೋಮನಹಳ್ಳಿ, ಸೋಮನಹಳ್ಳಿಯಿಂದ ಬೆಂಗಳೂರಿಗೆ ತಿರುಗಾಡಿ ಕೃಷ್ಣ ಅವರ ಅಂತ್ಯಕ್ರಿಯೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಸಿದ್ದಾರೆ.

10 / 13
ಇನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಬರುವಾಗ ಕೃಷ್ಣ ಪಾರ್ಥಿವ ಶರೀರ ಜೊತೆಯಲ್ಲೇ ಇದ್ದರು.

ಇನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಬರುವಾಗ ಕೃಷ್ಣ ಪಾರ್ಥಿವ ಶರೀರ ಜೊತೆಯಲ್ಲೇ ಇದ್ದರು.

11 / 13
ಇನ್ನು ಗುರುವಿಗೆ ಸರ್ಕಾರದಿಂದ ಏನೆಲ್ಲಾ ಗೌರವ ಕೊಡಿಸಬೇಕೋ ಅದನೆಲ್ಲಾ ಕೊಡಿಸಿದ್ದಾರೆ. ಶಾಲೆ ಕಾಲೇಜುಗಳಿಗೆ ರಜೆ, ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ, ಅಂತ್ಯಕ್ರಿಯೆ ಸಂದರ್ಭದಲ್ಲಿ ಸರ್ಕಾರದ ಕಡೆಯಿಂದ ಗೌರವ ವಂದನೆ. ಹೀಗೆ ಎಲ್ಲಾ ರೀತಿ ಗೌರವ ಕೊಡಿಸಿದ್ದಾರೆ.

ಇನ್ನು ಗುರುವಿಗೆ ಸರ್ಕಾರದಿಂದ ಏನೆಲ್ಲಾ ಗೌರವ ಕೊಡಿಸಬೇಕೋ ಅದನೆಲ್ಲಾ ಕೊಡಿಸಿದ್ದಾರೆ. ಶಾಲೆ ಕಾಲೇಜುಗಳಿಗೆ ರಜೆ, ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ, ಅಂತ್ಯಕ್ರಿಯೆ ಸಂದರ್ಭದಲ್ಲಿ ಸರ್ಕಾರದ ಕಡೆಯಿಂದ ಗೌರವ ವಂದನೆ. ಹೀಗೆ ಎಲ್ಲಾ ರೀತಿ ಗೌರವ ಕೊಡಿಸಿದ್ದಾರೆ.

12 / 13
ಎಸ್​ಎಂ ಕೃಷ್ಣ ಅವರ ಅಂತಿಮ ಯಾತ್ರೆಗೆ ಡಿಕೆ ಶಿವಕುಮಾರ್ ಕೂಡ ಹೆಗಲು ಕೊಟ್ರು. ಹೂವಿನಿಂದ ಅಲಂಕಾರಗೊಂಡಿದ್ದ ಪಲ್ಲಕ್ಕಿಗೆ ಹೆಗಲು ಕೊಟ್ಟ ಡಿಕೆಶಿ ಒಂದು ಸುತ್ತು ಬಂದು ಗುರುಗಳಿಗೆ ಅಂತಿಮ ನಮನ ಸಲ್ಲಿಸಿದ್ರು.

ಎಸ್​ಎಂ ಕೃಷ್ಣ ಅವರ ಅಂತಿಮ ಯಾತ್ರೆಗೆ ಡಿಕೆ ಶಿವಕುಮಾರ್ ಕೂಡ ಹೆಗಲು ಕೊಟ್ರು. ಹೂವಿನಿಂದ ಅಲಂಕಾರಗೊಂಡಿದ್ದ ಪಲ್ಲಕ್ಕಿಗೆ ಹೆಗಲು ಕೊಟ್ಟ ಡಿಕೆಶಿ ಒಂದು ಸುತ್ತು ಬಂದು ಗುರುಗಳಿಗೆ ಅಂತಿಮ ನಮನ ಸಲ್ಲಿಸಿದ್ರು.

13 / 13
Follow Us
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?