AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇಷ್ಯಾ ವಿರುದ್ಧ ಭಾರತ ಹಾಕಿ ತಂಡಕ್ಕೆ ಬೃಹತ್ ಜಯ; ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ

Asian Champions Trophy 2023: ಪಂದ್ಯಾವಳಿಯ ತನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ 5-0 ಗೋಲುಗಳಿಂದ ಮಣಿಸಿದೆ.

ಪೃಥ್ವಿಶಂಕರ
|

Updated on: Aug 07, 2023 | 11:04 AM

Share
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಟೀಂ ಇಂಡಿತಾ ಮತ್ತೆ ತನ್ನ ಗೆಲುವಿನ ಹಾದಿಗೆ ಮರಳಿದೆ. ಪಂದ್ಯಾವಳಿಯ ತನ್ನ ಮೂರನೇ ಪಂದ್ಯದಲ್ಲಿ  ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ 5-0 ಗೋಲುಗಳಿಂದ ಮಣಿಸಿದೆ.

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಟೀಂ ಇಂಡಿತಾ ಮತ್ತೆ ತನ್ನ ಗೆಲುವಿನ ಹಾದಿಗೆ ಮರಳಿದೆ. ಪಂದ್ಯಾವಳಿಯ ತನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ 5-0 ಗೋಲುಗಳಿಂದ ಮಣಿಸಿದೆ.

1 / 9
ಪಂದ್ಯಾವಳಿಯ ಮಲೇಷ್ಯಾ ಬಲಿಷ್ಠ ತಂಡ ಎನಿಸಿಕೊಂಡಿದ್ದರಿಂದ ಈ ಪಂದ್ಯದಲ್ಲಿ ಪ್ರಬಲ ಸ್ಪರ್ಧೆಯನ್ನು ನಿರೀಕ್ಷಿಸಲಾಗಿತ್ತು. ಆದರೆ ಹರ್ಮನ್‌ಪ್ರೀತ್ ಸಿಂಗ್ ತಂಡದ ಎದುರು ಮಲೇಷ್ಯಾ ತಂಡ ಮಂಕಾಯಿತು.

ಪಂದ್ಯಾವಳಿಯ ಮಲೇಷ್ಯಾ ಬಲಿಷ್ಠ ತಂಡ ಎನಿಸಿಕೊಂಡಿದ್ದರಿಂದ ಈ ಪಂದ್ಯದಲ್ಲಿ ಪ್ರಬಲ ಸ್ಪರ್ಧೆಯನ್ನು ನಿರೀಕ್ಷಿಸಲಾಗಿತ್ತು. ಆದರೆ ಹರ್ಮನ್‌ಪ್ರೀತ್ ಸಿಂಗ್ ತಂಡದ ಎದುರು ಮಲೇಷ್ಯಾ ತಂಡ ಮಂಕಾಯಿತು.

2 / 9
ಇನ್ನು ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಚೀನಾ ವಿರುದ್ಧ 7-2 ಅಂತರದಿಂದ ಜಯ ಸಾಧಿಸಿದ್ದ ಭಾರತ ಆ ಬಳಿಕ ನಡೆದ ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

ಇನ್ನು ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಚೀನಾ ವಿರುದ್ಧ 7-2 ಅಂತರದಿಂದ ಜಯ ಸಾಧಿಸಿದ್ದ ಭಾರತ ಆ ಬಳಿಕ ನಡೆದ ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

3 / 9
ಇತ್ತ ಮಲೇಷ್ಯಾ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು 3-1 ಗೋಲುಗಳಿಂದ ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ಚೀನಾ ವಿರುದ್ಧ 5-1 ಅಂತರದ ಜಯ ಸಾಧಿಸಿತ್ತು. ಹೀಗಾಗಿ ಹೈವೋಲ್ಟೆಜ್ ಪಂದ್ಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಭಾರತ ಎದುರಾಳಿ ತಂಡವನ್ನು 5-0 ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.

ಇತ್ತ ಮಲೇಷ್ಯಾ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು 3-1 ಗೋಲುಗಳಿಂದ ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ಚೀನಾ ವಿರುದ್ಧ 5-1 ಅಂತರದ ಜಯ ಸಾಧಿಸಿತ್ತು. ಹೀಗಾಗಿ ಹೈವೋಲ್ಟೆಜ್ ಪಂದ್ಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಭಾರತ ಎದುರಾಳಿ ತಂಡವನ್ನು 5-0 ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.

4 / 9
ಪಂದ್ಯದ 15ನೇ ನಿಮಿಷದಲ್ಲಿ ಕಾರ್ತಿ ಸೆಲ್ವಂ ಭಾರತದ ಪರ ಮೊದಲು ಗೋಲು ದಾಖಲಿಸಿದರು. ಆ ಬಳಿಕ ಹಾರ್ದಿಕ್ ಸಿಂಗ್ 32ನೇ ನಿಮಿಷದಲ್ಲಿ 2ನೇ ಗೋಲು ದಾಖಲಿಸಿ, 2-0 ಅಂತರದ ಮುನ್ನಡೆ ಸಾಧಿಸಿದರು.

ಪಂದ್ಯದ 15ನೇ ನಿಮಿಷದಲ್ಲಿ ಕಾರ್ತಿ ಸೆಲ್ವಂ ಭಾರತದ ಪರ ಮೊದಲು ಗೋಲು ದಾಖಲಿಸಿದರು. ಆ ಬಳಿಕ ಹಾರ್ದಿಕ್ ಸಿಂಗ್ 32ನೇ ನಿಮಿಷದಲ್ಲಿ 2ನೇ ಗೋಲು ದಾಖಲಿಸಿ, 2-0 ಅಂತರದ ಮುನ್ನಡೆ ಸಾಧಿಸಿದರು.

5 / 9
ಇನ್ನು ಚೀನಾ ವಿರುದ್ಧದ ಪಂದ್ಯದಲ್ಲಿ ಜೋಡಿ ಗೋಲು ದಾಖಲಿಸಿದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಕೂಡ ಒಂದು ಗೋಲು ದಾಖಲಿಸಿ ಅಂತರವನ್ನು 3-0 ಗೆ ಏರಿಸಿದರು.

ಇನ್ನು ಚೀನಾ ವಿರುದ್ಧದ ಪಂದ್ಯದಲ್ಲಿ ಜೋಡಿ ಗೋಲು ದಾಖಲಿಸಿದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಕೂಡ ಒಂದು ಗೋಲು ದಾಖಲಿಸಿ ಅಂತರವನ್ನು 3-0 ಗೆ ಏರಿಸಿದರು.

6 / 9
ಭಾರತದ ಗೋಲು ಭೇಟೆ ಇಲ್ಲಿಗೆ ನಿಲ್ಲದೆ, ಗುರ್ಜಂತ್ ಸಿಂಗ್ ಮತ್ತು ಯುಗರಾಜ್ ಸಿಂಗ್ ಒಂದು ನಿಮಿಷದ ಅಂತರದಲ್ಲಿ ತಲಾ ಒಂದೊಂದು ಗೋಲು ದಾಖಲಿಸಿ ಭಾರತದ ಗೋಲುಗಳ ಸಂಖ್ಯೆಯನ್ನು 5-0 ಗೆ ಏರಿಸಿದರು.

ಭಾರತದ ಗೋಲು ಭೇಟೆ ಇಲ್ಲಿಗೆ ನಿಲ್ಲದೆ, ಗುರ್ಜಂತ್ ಸಿಂಗ್ ಮತ್ತು ಯುಗರಾಜ್ ಸಿಂಗ್ ಒಂದು ನಿಮಿಷದ ಅಂತರದಲ್ಲಿ ತಲಾ ಒಂದೊಂದು ಗೋಲು ದಾಖಲಿಸಿ ಭಾರತದ ಗೋಲುಗಳ ಸಂಖ್ಯೆಯನ್ನು 5-0 ಗೆ ಏರಿಸಿದರು.

7 / 9
ಭಾರತ ಆಡಿರುವ ಮೂರು ಪಂದ್ಯಗಳಲ್ಲಿ 7 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಹಾಗೆಯೇ ಮಲೇಷ್ಯಾ ಆಡಿರುವ 3 ಪಂದ್ಯಗಳಲ್ಲಿ 6 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಭಾರತ ಆಡಿರುವ ಮೂರು ಪಂದ್ಯಗಳಲ್ಲಿ 7 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಹಾಗೆಯೇ ಮಲೇಷ್ಯಾ ಆಡಿರುವ 3 ಪಂದ್ಯಗಳಲ್ಲಿ 6 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

8 / 9
ಇದೀಗ ಪಾಕಿಸ್ತಾನ ವಿರುದ್ಧ ಗುಂಪು ಹಂತದ ಕೊನೆಯ ಪಂದ್ಯವನ್ನು ಇದೇ ಬುಧವಾರ ಆಡುವುದಕ್ಕೂ ಮುನ್ನ ಭಾರತ ಹಾಕಿ ತಂಡ ಇಂದು ಸಂಜೆ 8:30 ಕ್ಕೆ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ಪ್ರಸ್ತುತ ದಕ್ಷಿಣ ಕೊರಿಯಾ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದೀಗ ಪಾಕಿಸ್ತಾನ ವಿರುದ್ಧ ಗುಂಪು ಹಂತದ ಕೊನೆಯ ಪಂದ್ಯವನ್ನು ಇದೇ ಬುಧವಾರ ಆಡುವುದಕ್ಕೂ ಮುನ್ನ ಭಾರತ ಹಾಕಿ ತಂಡ ಇಂದು ಸಂಜೆ 8:30 ಕ್ಕೆ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ಪ್ರಸ್ತುತ ದಕ್ಷಿಣ ಕೊರಿಯಾ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

9 / 9
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ