Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇಷ್ಯಾ ವಿರುದ್ಧ ಭಾರತ ಹಾಕಿ ತಂಡಕ್ಕೆ ಬೃಹತ್ ಜಯ; ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ

Asian Champions Trophy 2023: ಪಂದ್ಯಾವಳಿಯ ತನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ 5-0 ಗೋಲುಗಳಿಂದ ಮಣಿಸಿದೆ.

ಪೃಥ್ವಿಶಂಕರ
|

Updated on: Aug 07, 2023 | 11:04 AM

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಟೀಂ ಇಂಡಿತಾ ಮತ್ತೆ ತನ್ನ ಗೆಲುವಿನ ಹಾದಿಗೆ ಮರಳಿದೆ. ಪಂದ್ಯಾವಳಿಯ ತನ್ನ ಮೂರನೇ ಪಂದ್ಯದಲ್ಲಿ  ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ 5-0 ಗೋಲುಗಳಿಂದ ಮಣಿಸಿದೆ.

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಟೀಂ ಇಂಡಿತಾ ಮತ್ತೆ ತನ್ನ ಗೆಲುವಿನ ಹಾದಿಗೆ ಮರಳಿದೆ. ಪಂದ್ಯಾವಳಿಯ ತನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ 5-0 ಗೋಲುಗಳಿಂದ ಮಣಿಸಿದೆ.

1 / 9
ಪಂದ್ಯಾವಳಿಯ ಮಲೇಷ್ಯಾ ಬಲಿಷ್ಠ ತಂಡ ಎನಿಸಿಕೊಂಡಿದ್ದರಿಂದ ಈ ಪಂದ್ಯದಲ್ಲಿ ಪ್ರಬಲ ಸ್ಪರ್ಧೆಯನ್ನು ನಿರೀಕ್ಷಿಸಲಾಗಿತ್ತು. ಆದರೆ ಹರ್ಮನ್‌ಪ್ರೀತ್ ಸಿಂಗ್ ತಂಡದ ಎದುರು ಮಲೇಷ್ಯಾ ತಂಡ ಮಂಕಾಯಿತು.

ಪಂದ್ಯಾವಳಿಯ ಮಲೇಷ್ಯಾ ಬಲಿಷ್ಠ ತಂಡ ಎನಿಸಿಕೊಂಡಿದ್ದರಿಂದ ಈ ಪಂದ್ಯದಲ್ಲಿ ಪ್ರಬಲ ಸ್ಪರ್ಧೆಯನ್ನು ನಿರೀಕ್ಷಿಸಲಾಗಿತ್ತು. ಆದರೆ ಹರ್ಮನ್‌ಪ್ರೀತ್ ಸಿಂಗ್ ತಂಡದ ಎದುರು ಮಲೇಷ್ಯಾ ತಂಡ ಮಂಕಾಯಿತು.

2 / 9
ಇನ್ನು ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಚೀನಾ ವಿರುದ್ಧ 7-2 ಅಂತರದಿಂದ ಜಯ ಸಾಧಿಸಿದ್ದ ಭಾರತ ಆ ಬಳಿಕ ನಡೆದ ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

ಇನ್ನು ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಚೀನಾ ವಿರುದ್ಧ 7-2 ಅಂತರದಿಂದ ಜಯ ಸಾಧಿಸಿದ್ದ ಭಾರತ ಆ ಬಳಿಕ ನಡೆದ ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

3 / 9
ಇತ್ತ ಮಲೇಷ್ಯಾ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು 3-1 ಗೋಲುಗಳಿಂದ ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ಚೀನಾ ವಿರುದ್ಧ 5-1 ಅಂತರದ ಜಯ ಸಾಧಿಸಿತ್ತು. ಹೀಗಾಗಿ ಹೈವೋಲ್ಟೆಜ್ ಪಂದ್ಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಭಾರತ ಎದುರಾಳಿ ತಂಡವನ್ನು 5-0 ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.

ಇತ್ತ ಮಲೇಷ್ಯಾ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು 3-1 ಗೋಲುಗಳಿಂದ ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ಚೀನಾ ವಿರುದ್ಧ 5-1 ಅಂತರದ ಜಯ ಸಾಧಿಸಿತ್ತು. ಹೀಗಾಗಿ ಹೈವೋಲ್ಟೆಜ್ ಪಂದ್ಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಭಾರತ ಎದುರಾಳಿ ತಂಡವನ್ನು 5-0 ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.

4 / 9
ಪಂದ್ಯದ 15ನೇ ನಿಮಿಷದಲ್ಲಿ ಕಾರ್ತಿ ಸೆಲ್ವಂ ಭಾರತದ ಪರ ಮೊದಲು ಗೋಲು ದಾಖಲಿಸಿದರು. ಆ ಬಳಿಕ ಹಾರ್ದಿಕ್ ಸಿಂಗ್ 32ನೇ ನಿಮಿಷದಲ್ಲಿ 2ನೇ ಗೋಲು ದಾಖಲಿಸಿ, 2-0 ಅಂತರದ ಮುನ್ನಡೆ ಸಾಧಿಸಿದರು.

ಪಂದ್ಯದ 15ನೇ ನಿಮಿಷದಲ್ಲಿ ಕಾರ್ತಿ ಸೆಲ್ವಂ ಭಾರತದ ಪರ ಮೊದಲು ಗೋಲು ದಾಖಲಿಸಿದರು. ಆ ಬಳಿಕ ಹಾರ್ದಿಕ್ ಸಿಂಗ್ 32ನೇ ನಿಮಿಷದಲ್ಲಿ 2ನೇ ಗೋಲು ದಾಖಲಿಸಿ, 2-0 ಅಂತರದ ಮುನ್ನಡೆ ಸಾಧಿಸಿದರು.

5 / 9
ಇನ್ನು ಚೀನಾ ವಿರುದ್ಧದ ಪಂದ್ಯದಲ್ಲಿ ಜೋಡಿ ಗೋಲು ದಾಖಲಿಸಿದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಕೂಡ ಒಂದು ಗೋಲು ದಾಖಲಿಸಿ ಅಂತರವನ್ನು 3-0 ಗೆ ಏರಿಸಿದರು.

ಇನ್ನು ಚೀನಾ ವಿರುದ್ಧದ ಪಂದ್ಯದಲ್ಲಿ ಜೋಡಿ ಗೋಲು ದಾಖಲಿಸಿದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಕೂಡ ಒಂದು ಗೋಲು ದಾಖಲಿಸಿ ಅಂತರವನ್ನು 3-0 ಗೆ ಏರಿಸಿದರು.

6 / 9
ಭಾರತದ ಗೋಲು ಭೇಟೆ ಇಲ್ಲಿಗೆ ನಿಲ್ಲದೆ, ಗುರ್ಜಂತ್ ಸಿಂಗ್ ಮತ್ತು ಯುಗರಾಜ್ ಸಿಂಗ್ ಒಂದು ನಿಮಿಷದ ಅಂತರದಲ್ಲಿ ತಲಾ ಒಂದೊಂದು ಗೋಲು ದಾಖಲಿಸಿ ಭಾರತದ ಗೋಲುಗಳ ಸಂಖ್ಯೆಯನ್ನು 5-0 ಗೆ ಏರಿಸಿದರು.

ಭಾರತದ ಗೋಲು ಭೇಟೆ ಇಲ್ಲಿಗೆ ನಿಲ್ಲದೆ, ಗುರ್ಜಂತ್ ಸಿಂಗ್ ಮತ್ತು ಯುಗರಾಜ್ ಸಿಂಗ್ ಒಂದು ನಿಮಿಷದ ಅಂತರದಲ್ಲಿ ತಲಾ ಒಂದೊಂದು ಗೋಲು ದಾಖಲಿಸಿ ಭಾರತದ ಗೋಲುಗಳ ಸಂಖ್ಯೆಯನ್ನು 5-0 ಗೆ ಏರಿಸಿದರು.

7 / 9
ಭಾರತ ಆಡಿರುವ ಮೂರು ಪಂದ್ಯಗಳಲ್ಲಿ 7 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಹಾಗೆಯೇ ಮಲೇಷ್ಯಾ ಆಡಿರುವ 3 ಪಂದ್ಯಗಳಲ್ಲಿ 6 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಭಾರತ ಆಡಿರುವ ಮೂರು ಪಂದ್ಯಗಳಲ್ಲಿ 7 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಹಾಗೆಯೇ ಮಲೇಷ್ಯಾ ಆಡಿರುವ 3 ಪಂದ್ಯಗಳಲ್ಲಿ 6 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

8 / 9
ಇದೀಗ ಪಾಕಿಸ್ತಾನ ವಿರುದ್ಧ ಗುಂಪು ಹಂತದ ಕೊನೆಯ ಪಂದ್ಯವನ್ನು ಇದೇ ಬುಧವಾರ ಆಡುವುದಕ್ಕೂ ಮುನ್ನ ಭಾರತ ಹಾಕಿ ತಂಡ ಇಂದು ಸಂಜೆ 8:30 ಕ್ಕೆ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ಪ್ರಸ್ತುತ ದಕ್ಷಿಣ ಕೊರಿಯಾ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದೀಗ ಪಾಕಿಸ್ತಾನ ವಿರುದ್ಧ ಗುಂಪು ಹಂತದ ಕೊನೆಯ ಪಂದ್ಯವನ್ನು ಇದೇ ಬುಧವಾರ ಆಡುವುದಕ್ಕೂ ಮುನ್ನ ಭಾರತ ಹಾಕಿ ತಂಡ ಇಂದು ಸಂಜೆ 8:30 ಕ್ಕೆ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ಪ್ರಸ್ತುತ ದಕ್ಷಿಣ ಕೊರಿಯಾ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

9 / 9
Follow us
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು