ACT 2024: ಭಾರತ- ಚೀನಾ ನಡುವೆ ಫೈನಲ್ ಫೈಟ್; ಉಭಯರ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

Asian Champions Trophy 2024 Hockey Final: ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳ ಮುಖಾಮುಖಿಯ ಬಗ್ಗೆ ಮಾತನಾಡುವುದಾದರೆ.. ಭಾರತ ಮತ್ತು ಚೀನಾ 7ನೇ ಬಾರಿ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಆಡಿದ ಆರು ಪಂದ್ಯಗಳಲ್ಲಿ ಭಾರತ 5 ಪಂದ್ಯಗಳನ್ನು ಗೆದ್ದಿದ್ದರೆ, ಚೀನಾ ಏಕೈಕ ಪಂದ್ಯವನ್ನು ಮಾತ್ರ ಗೆದ್ದಿದೆ.

|

Updated on: Sep 17, 2024 | 2:56 PM

ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024 ರ ಫೈನಲ್‌ ಪಂದ್ಯ ಇಂದು ನಡೆಯಲ್ಲಿದ್ದು, ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಬಲಿಷ್ಠ ಭಾರತ ಹಾಕಿ ತಂಡ ಚೀನಾ ತಂಡವನ್ನು ಎದುರಿಸುತ್ತಿದೆ. ಈ ಹಾಕಿ ಟೂರ್ನಿಯಲ್ಲಿ ಚೀನಾ ಫೈನಲ್‌ಗೆ ಲಗ್ಗೆ ಇಟ್ಟಿರುವುದು ಇದೇ ಮೊದಲ ಬಾರಿಯಾದರೆ, ಇತ್ತ ಈ ಟೂರ್ನಿಯಲ್ಲಿ ಭಾರತ ಆರನೇ ಬಾರಿಗೆ ಫೈನಲ್‌ ಆಡಲಿದೆ.

ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024 ರ ಫೈನಲ್‌ ಪಂದ್ಯ ಇಂದು ನಡೆಯಲ್ಲಿದ್ದು, ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಬಲಿಷ್ಠ ಭಾರತ ಹಾಕಿ ತಂಡ ಚೀನಾ ತಂಡವನ್ನು ಎದುರಿಸುತ್ತಿದೆ. ಈ ಹಾಕಿ ಟೂರ್ನಿಯಲ್ಲಿ ಚೀನಾ ಫೈನಲ್‌ಗೆ ಲಗ್ಗೆ ಇಟ್ಟಿರುವುದು ಇದೇ ಮೊದಲ ಬಾರಿಯಾದರೆ, ಇತ್ತ ಈ ಟೂರ್ನಿಯಲ್ಲಿ ಭಾರತ ಆರನೇ ಬಾರಿಗೆ ಫೈನಲ್‌ ಆಡಲಿದೆ.

1 / 6
ಭಾರತ ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು 4-1 ಗೋಲುಗಳಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಇತ್ತ ಚೀನಾ ತಂಡ ಸೆಮಿಫೈನಲ್‌ನಲ್ಲಿ ಪಾಕಿಸ್ತಾನವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಸೋಲಿಸಿ ಪ್ರಶಸ್ತಿ ಸುತ್ತಿಗೆ ಟಿಕೆಟ್ ಪಡೆದುಕೊಂಡಿದೆ. ಭಾರತ ಈ ಹಿಂದೆ 4 ಬಾರಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆದ್ದಿದೆ. ಹೀಗಿರುವಾಗ ಈ ಬಾರಿ ದಾಖಲೆಯ 5ನೇ ಬಾರಿ ಪ್ರಶಸ್ತಿ ಗೆಲ್ಲುವತ್ತ ದೃಷ್ಟಿ ನೆಟ್ಟಿದೆ.

ಭಾರತ ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು 4-1 ಗೋಲುಗಳಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಇತ್ತ ಚೀನಾ ತಂಡ ಸೆಮಿಫೈನಲ್‌ನಲ್ಲಿ ಪಾಕಿಸ್ತಾನವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಸೋಲಿಸಿ ಪ್ರಶಸ್ತಿ ಸುತ್ತಿಗೆ ಟಿಕೆಟ್ ಪಡೆದುಕೊಂಡಿದೆ. ಭಾರತ ಈ ಹಿಂದೆ 4 ಬಾರಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆದ್ದಿದೆ. ಹೀಗಿರುವಾಗ ಈ ಬಾರಿ ದಾಖಲೆಯ 5ನೇ ಬಾರಿ ಪ್ರಶಸ್ತಿ ಗೆಲ್ಲುವತ್ತ ದೃಷ್ಟಿ ನೆಟ್ಟಿದೆ.

2 / 6
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಲಿ ಚಾಂಪಿಯನ್ ಆಗಿರುವ ಕಾರಣ ತನ್ನ ಚಾಂಪಿಯನ್ ಕಿರೀಟವನ್ನು ಉಳಿಸಿಕೊಳ್ಳುವ ಜವಬ್ದಾರಿ ಭಾರತದ ಮೇಲಿದ್ದರೆ, ಇತ್ತ ಚೊಚ್ಚಲ ಫೈನಲ್ ಆಡುತ್ತಿರುವ ಚೀನಾ ತಂಡಕ್ಕು ಕೂಡ ಈ ಪಂದ್ಯ ಮಹತ್ವದ್ದಾಗಿದೆ. ಆದರೆ ಗ್ರೂಪ್ ಹಂತದಲ್ಲಿ ಚೀನಾವನ್ನು 3-0 ಗೋಲುಗಳಿಂದ ಸೋಲಿಸಿರುವ ಟೀಂ ಇಂಡಿಯಾದ ಆತ್ಮವಿಶ್ವಾಸ ಹೆಚ್ಚಿದೆ.

ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಲಿ ಚಾಂಪಿಯನ್ ಆಗಿರುವ ಕಾರಣ ತನ್ನ ಚಾಂಪಿಯನ್ ಕಿರೀಟವನ್ನು ಉಳಿಸಿಕೊಳ್ಳುವ ಜವಬ್ದಾರಿ ಭಾರತದ ಮೇಲಿದ್ದರೆ, ಇತ್ತ ಚೊಚ್ಚಲ ಫೈನಲ್ ಆಡುತ್ತಿರುವ ಚೀನಾ ತಂಡಕ್ಕು ಕೂಡ ಈ ಪಂದ್ಯ ಮಹತ್ವದ್ದಾಗಿದೆ. ಆದರೆ ಗ್ರೂಪ್ ಹಂತದಲ್ಲಿ ಚೀನಾವನ್ನು 3-0 ಗೋಲುಗಳಿಂದ ಸೋಲಿಸಿರುವ ಟೀಂ ಇಂಡಿಯಾದ ಆತ್ಮವಿಶ್ವಾಸ ಹೆಚ್ಚಿದೆ.

3 / 6
ಇನ್ನು ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳ ಮುಖಾಮುಖಿಯ ಬಗ್ಗೆ ಮಾತನಾಡುವುದಾದರೆ.. ಭಾರತ ಮತ್ತು ಚೀನಾ 7ನೇ ಬಾರಿ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಆಡಿದ ಆರು ಪಂದ್ಯಗಳಲ್ಲಿ ಭಾರತ 5 ಪಂದ್ಯಗಳನ್ನು ಗೆದ್ದಿದ್ದರೆ, ಚೀನಾ ಏಕೈಕ ಪಂದ್ಯವನ್ನು ಮಾತ್ರ ಗೆದ್ದಿದೆ.

ಇನ್ನು ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳ ಮುಖಾಮುಖಿಯ ಬಗ್ಗೆ ಮಾತನಾಡುವುದಾದರೆ.. ಭಾರತ ಮತ್ತು ಚೀನಾ 7ನೇ ಬಾರಿ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಆಡಿದ ಆರು ಪಂದ್ಯಗಳಲ್ಲಿ ಭಾರತ 5 ಪಂದ್ಯಗಳನ್ನು ಗೆದ್ದಿದ್ದರೆ, ಚೀನಾ ಏಕೈಕ ಪಂದ್ಯವನ್ನು ಮಾತ್ರ ಗೆದ್ದಿದೆ.

4 / 6
ಒಟ್ಟಾರೆ ಹಾಕಿ ಪಂದ್ಯಗಳ ಬಗ್ಗೆ ಮಾತನಾಡುವುದಾದರೆ, ಭಾರತ ಮತ್ತು ಚೀನಾ 23 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 17 ಪಂದ್ಯಗಳನ್ನು ಗೆದ್ದಿದ್ದರೆ, ಚೀನಾ 3 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ 3 ಪಂದ್ಯಗಳು ಡ್ರಾ ಆಗಿವೆ. ಅಂಕಿಅಂಶಗಳಲ್ಲಿ ಚೀನಾದ ಮೇಲೆ ಭಾರತವೇ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದ್ದು, ಭಾರತ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿದೆ ಎಂಬುದು ಅಲ್ಲರ ಅಭಿಪ್ರಾಯವಾಗಿದೆ.

ಒಟ್ಟಾರೆ ಹಾಕಿ ಪಂದ್ಯಗಳ ಬಗ್ಗೆ ಮಾತನಾಡುವುದಾದರೆ, ಭಾರತ ಮತ್ತು ಚೀನಾ 23 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 17 ಪಂದ್ಯಗಳನ್ನು ಗೆದ್ದಿದ್ದರೆ, ಚೀನಾ 3 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ 3 ಪಂದ್ಯಗಳು ಡ್ರಾ ಆಗಿವೆ. ಅಂಕಿಅಂಶಗಳಲ್ಲಿ ಚೀನಾದ ಮೇಲೆ ಭಾರತವೇ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದ್ದು, ಭಾರತ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿದೆ ಎಂಬುದು ಅಲ್ಲರ ಅಭಿಪ್ರಾಯವಾಗಿದೆ.

5 / 6
ಇದಕ್ಕೆ ಪೂರಕವಾಗಿ ಟೂರ್ನಿಯಲ್ಲಿ ಭಾರತ ತಂಡ ಇದುವರೆಗೆ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಭಾರತ ಗುಂಪು ಹಂತದಲ್ಲಿ ಚೀನಾ, ಜಪಾನ್, ಮಲೇಷ್ಯಾ, ಕೊರಿಯಾ ಮತ್ತು ಪಾಕಿಸ್ತಾನವನ್ನು ಸೋಲಿಸಿತ್ತು. ಆ ಬಳಿಕ ಸೆಮಿಫೈನಲ್‌ನಲ್ಲಿ ಕೊರಿಯಾವನ್ನು ಮತ್ತೆ ಮಣಿಸಿ ಫೈನಲ್​ಗೆ ಲಗ್ಗೆ ಇಟ್ಟಿರುವ ಭಾರತ, ಪ್ರಶಸ್ತಿ ಪಂದ್ಯದಲ್ಲಿ​ ಚೀನಾವನ್ನು ಸೋಲಿಸಿ ಟ್ರೋಫಿಯನ್ನು ವಶಪಡಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಇದಕ್ಕೆ ಪೂರಕವಾಗಿ ಟೂರ್ನಿಯಲ್ಲಿ ಭಾರತ ತಂಡ ಇದುವರೆಗೆ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಭಾರತ ಗುಂಪು ಹಂತದಲ್ಲಿ ಚೀನಾ, ಜಪಾನ್, ಮಲೇಷ್ಯಾ, ಕೊರಿಯಾ ಮತ್ತು ಪಾಕಿಸ್ತಾನವನ್ನು ಸೋಲಿಸಿತ್ತು. ಆ ಬಳಿಕ ಸೆಮಿಫೈನಲ್‌ನಲ್ಲಿ ಕೊರಿಯಾವನ್ನು ಮತ್ತೆ ಮಣಿಸಿ ಫೈನಲ್​ಗೆ ಲಗ್ಗೆ ಇಟ್ಟಿರುವ ಭಾರತ, ಪ್ರಶಸ್ತಿ ಪಂದ್ಯದಲ್ಲಿ​ ಚೀನಾವನ್ನು ಸೋಲಿಸಿ ಟ್ರೋಫಿಯನ್ನು ವಶಪಡಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

6 / 6
Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ