
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ

ಮದುವೆ ಮುಗಿಸಿ ಮನೆಗೆ ವಾಪಸ್ ಮರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಘಟನೆ ನಡೆದಿದ್ದು, ಮಹಾರಾಷ್ಟ್ರ ಮೂಲದ ಕಾರು ಎಂದು ಗುರುತಿಸಲಾಗಿದೆ.

ಕಾರು ಚಾಲಕ ಶಾರುಕ್ ಪೆನ್ಡಾರಿ(30), ಇಕ್ಬಾಲ್ ಜಮಾದಾರ್(50), ಸಾನಿಯಾ ಲಂಗೋಟಿ(37), ಉಮ್ರಾ ಬೆಗಮ್ ಲಂಗೋಟಿ(17), ಶಬನಮ್ ಲಂಗೋಟಿ(37), ಪರಾನ್ ಲಂಗೋಟಿ(13) ಮೃತರು. ಇವರೆಲ್ಲರೂ ಧಾರವಾಡ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ,

ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಇದ್ದು, ಈ ಪೈಕಿ ಆರು ಜನ ಯಾರೆಲ್ಲಾ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ,

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಮರಕ್ಕೆ ಗುದ್ದಿರ ರಭಸಕ್ಕೆ ಕಾರು ಮುಂದಿನ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇನ್ನು ಜಾರಿನ ಇಂಭಾಗ ಸಹ ತೆರೆದುಕೊಂಡಿದೆ.
Published On - 5:46 pm, Thu, 22 February 24