- Kannada News Photo gallery At Mantralaya in Raichur The Union Minister Amit Shah virtually lays foundation stone for 108 feet statue of Lord Ram
ಮಂತ್ರಾಲಯಕ್ಕೆ ಮತ್ತೊಂದು ಹೆಗ್ಗುರುತು: ರಾಯರ ಸನ್ನಿಧಿಯಲ್ಲಿ ಶ್ರೀರಾಮನ ಬೃಹತ್ ಪಂಚಲೋಹದ ಪ್ರತಿಮೆ ನಿರ್ಮಾಣಕ್ಕೆ ಅಮಿತಾ ಶಾ ಶಂಕುಸ್ಥಾಪನೆ
ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಭೂಮಿಪೂಜೆ ಕಾರ್ಯಕ್ರಮ ರಾಘವೇಂದ್ರ ಸ್ವಾಮಿ ಮಠದ ಶ್ರೀಗಳಿಂದ ವೈಭವದಿಂದ ನಡೆಯಿತು. 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಮನ ಪ್ರತಿಮೆಗೆ ಕೇಂದ್ರ ಸಚಿವ ಅಮಿತ್ ಶಾ ಅವರು ವರ್ಚುಯಲ್ ಶಂಕುಸ್ಥಾಪನೆ ನೆರವೇರಿಸಿದರು.
Updated on:Jul 24, 2023 | 2:50 PM

ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಭೂಮಿಪೂಜೆ ಕಾರ್ಯಕ್ರಮ ರಾಘವೇಂದ್ರ ಸ್ವಾಮಿ ಮಠದ ಶ್ರೀಗಳಿಂದ ವೈಭವದಿಂದ ನಡೆಯಿತು. 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಮನ ಪ್ರತಿಮೆಗೆ ಕೇಂದ್ರ ಸಚಿವ ಅಮಿತ್ ಶಾ ಅವರು ವರ್ಚುಯಲ್ ಶಂಕುಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಂತ್ರಾಲಯದ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥರು ಭೂಮಿಪೂಜೆ ನೆರವೇರಿಸಿದರು. ಆಂಧ್ರ ಪ್ರದೇಶದ ಸಚಿವರು ಹಾಗೂ ಉನ್ನತಾಧಿಕಾರಿಗಳು ಭಾಗವಹಿಸಿದ್ದು, ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

ಇದೇ ವೇಳೆ ಕೇಂದ್ರ ಮಂತ್ರಿ ಅಮಿತ್ ಶಾ ಅವರು ತಾವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ತಮ್ಮ ಪೂರ್ವ ಜನ್ಮದ ಪುಣ್ಯ ಎಂದು ಹೇಳಿದ್ದಾರೆ. ಜೈ ಶ್ರೀ ರಾಮ್ ಫೌಂಡೇಶನ್ ಆಶ್ರಯದಲ್ಲಿ ಈ ಪಂಚಲೋಹ ಮೂರ್ತಿ ನಿರ್ಮಾಣ ನಡೆಯಲಿದೆ.

ಶ್ರೀ ರಾಘವೇಂದ್ರಸ್ವಾಮಿ ಮಠದ ಅಧ್ಯಕ್ಷ ಸುಬುಧೇಂದ್ರ ತೀರ್ಥರು, 'ಜೈ ಶ್ರೀರಾಮ್ ಫೌಂಡೇಶನ್' ಸಂಸ್ಥಾಪಕರಾದ ರಾಮು, ಶ್ರೀಧರ್, ಸಚಿವ ಗುಮ್ಮನೂರು ಜಯರಾಂ, ಬಿಜೆಪಿ ಮುಖಂಡ ಟಿ.ಜಿ. ವೆಂಕಟೇಶ್ ಸೇರಿದಂತೆ ಅಪಾರ ಸಂಖ್ಯೆಯ ಗ್ರಾಮಸ್ಥರು ಈ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಎರಡು ವರ್ಷಗಳಲ್ಲಿ ಈ ಮೂರ್ತಿಯ ತಯಾರಿ ಪೂರ್ಣಗೊಂಡು ನಂತರ ಪ್ರತಿಷ್ಠಾಪನೆ ನಡೆಯಲಿದೆ. ನಂತರ ಪ್ರತಿಮೆಯ ಮುಂಭಾಗದಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ.
Published On - 2:49 pm, Mon, 24 July 23
























