ನಂದಿಗಿರಿಧಾಮದ ತಪ್ಪಲಿನಲ್ಲಿ ಅದ್ದೂರಿ ಜೋಡಿ ಬ್ರಹ್ಮರಥೋತ್ಸವ- ಇಲ್ಲಿದೆ ಝಲಕ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Mar 09, 2024 | 4:07 PM

ಅದು ದಕ್ಷಿಣಕಾಶಿ ಎಂದೇ ಖ್ಯಾತಿಯಾಗಿರುವ ಐತಿಹಾಸ ಪ್ರಸಿದ್ದ ಪುರಾಣ ಪ್ರಸಿದ್ದ ರಾಜಧಾನಿ ಬೆಂಗಳೂರಿಗರ ಅಚ್ಚು ಮೆಚ್ಚಿನ ಧಾರ್ಮಿಕ ಕ್ಷೇತ್ರ. ಇನ್ನೂ ಮಹಾ ಶಿವಾರಾತ್ರಿ ಹಾಗೂ ಜಾತ್ರೆಯ ಪ್ರಯುಕ್ತ, ಇಂದು ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ಅಲ್ಲಿ ಜೋಡಿ ಬ್ರಹ್ಮರಥೋತ್ಸವ ನಡೆಯಿತು. 

1 / 6
ಹೀಗೆ ಸುತ್ತ ಎತ್ತ ನೊಡಿದರೂ ಪ್ರಕೃತಿ ಸೌಂದರ್ಯ, ಆಕಾಶ ಭೂಮಿ ಒಂದಾದ ರೀತಿ ಕಾಣುವ ನಂದಿಗಿರಿಧಾಮದ ಸೊಬಗು, ನಂದಿಗಿರಿಧಾಮದ ಪ್ರಕೃತಿ ಸೊಬಗಿನ ಮಧ್ಯೆ ಇರುವ ನಂದಿ ಗ್ರಾಮದಲ್ಲಿ ಶ್ರೀ ಭೋಗನಂದೀಶ್ವರ, ಅರುಣಾಚಲೇಶ್ವರ ಹಾಗೂ ಉಮಾಮಹೇಶ್ವರ ದೇವಸ್ಥಾನಗಳಲ್ಲಿ ಅದ್ದೂರಿ ಜಾತ್ರೆ ನಡೆದಿದೆ.

ಹೀಗೆ ಸುತ್ತ ಎತ್ತ ನೊಡಿದರೂ ಪ್ರಕೃತಿ ಸೌಂದರ್ಯ, ಆಕಾಶ ಭೂಮಿ ಒಂದಾದ ರೀತಿ ಕಾಣುವ ನಂದಿಗಿರಿಧಾಮದ ಸೊಬಗು, ನಂದಿಗಿರಿಧಾಮದ ಪ್ರಕೃತಿ ಸೊಬಗಿನ ಮಧ್ಯೆ ಇರುವ ನಂದಿ ಗ್ರಾಮದಲ್ಲಿ ಶ್ರೀ ಭೋಗನಂದೀಶ್ವರ, ಅರುಣಾಚಲೇಶ್ವರ ಹಾಗೂ ಉಮಾಮಹೇಶ್ವರ ದೇವಸ್ಥಾನಗಳಲ್ಲಿ ಅದ್ದೂರಿ ಜಾತ್ರೆ ನಡೆದಿದೆ.

2 / 6
ಮಹಾ ಶಿವರಾತ್ರಿ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ಜೋಡಿ ಬ್ರಹ್ಮರಥೋತ್ಸವ ನಡೆಯಿತು. ಈ ವೇಳೆ ಶಾಸಕ ಪ್ರದೀಪ್​ ಈಶ್ವರ್​, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಜಾತ್ರೆಯಲ್ಲಿ ಬಾಗಿಯಾಗಿ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ಮಹಾ ಶಿವರಾತ್ರಿ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ಜೋಡಿ ಬ್ರಹ್ಮರಥೋತ್ಸವ ನಡೆಯಿತು. ಈ ವೇಳೆ ಶಾಸಕ ಪ್ರದೀಪ್​ ಈಶ್ವರ್​, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಜಾತ್ರೆಯಲ್ಲಿ ಬಾಗಿಯಾಗಿ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

3 / 6
ಇದೇ ವೇಳೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಸಾಮಾನ್ಯ ಕ್ಷೇತ್ರ ಆಗಿರುವವರೆಗೂ ನಾನೆ ಶಾಸಕನಾಗಿರಲಿ ಹಾಗೂ ಸಚಿವ ಡಾ.ಎಂ.ಸಿ.ಸುಧಾಕರ್ , ಸಚಿವ ಕೃಷ್ಣಬೈರೇಗೌಡ ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

ಇದೇ ವೇಳೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಸಾಮಾನ್ಯ ಕ್ಷೇತ್ರ ಆಗಿರುವವರೆಗೂ ನಾನೆ ಶಾಸಕನಾಗಿರಲಿ ಹಾಗೂ ಸಚಿವ ಡಾ.ಎಂ.ಸಿ.ಸುಧಾಕರ್ , ಸಚಿವ ಕೃಷ್ಣಬೈರೇಗೌಡ ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

4 / 6
ಶಿವರಾತ್ರಿ ಪ್ರಯುಕ್ತ ನಂದಿ ಜಾತ್ರೆಗೆ ಲಕ್ಷಾಂತರ ಜನ ಹರಿದು ಬಂದಿದ್ದರು. ರಥೋತ್ಸವದಲ್ಲಿ ಪಾಲ್ಗೋಂಡು ದೇವರ ಕೃಫೆಗೆ ಪಾತ್ರರಾದರು.

ಶಿವರಾತ್ರಿ ಪ್ರಯುಕ್ತ ನಂದಿ ಜಾತ್ರೆಗೆ ಲಕ್ಷಾಂತರ ಜನ ಹರಿದು ಬಂದಿದ್ದರು. ರಥೋತ್ಸವದಲ್ಲಿ ಪಾಲ್ಗೋಂಡು ದೇವರ ಕೃಫೆಗೆ ಪಾತ್ರರಾದರು.

5 / 6
ಇನ್ನು ನಂದಿ ಜಾತ್ರೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಕುಟುಂಬ ಸಮೇತರಾಗಿ ಭಾಗಿಯಾಗಿದ್ದರು.

ಇನ್ನು ನಂದಿ ಜಾತ್ರೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಕುಟುಂಬ ಸಮೇತರಾಗಿ ಭಾಗಿಯಾಗಿದ್ದರು.

6 / 6
ರಾತ್ರಿಯಿಡಿ ಜಾಗರಣ, ಭಜನೆ ಪ್ರಾರ್ಥನೆ ನಡೆದ್ರೆ, ಬೆಳಿಗ್ಗೆ ದೇವರ ದರ್ಶನ ಪಡೆದು ರಥ ಎಳೆದು ಭಕ್ತರು ದೇವರ ಕೃಪೆಗೆ ಪಾತ್ರರಾದರು.

ರಾತ್ರಿಯಿಡಿ ಜಾಗರಣ, ಭಜನೆ ಪ್ರಾರ್ಥನೆ ನಡೆದ್ರೆ, ಬೆಳಿಗ್ಗೆ ದೇವರ ದರ್ಶನ ಪಡೆದು ರಥ ಎಳೆದು ಭಕ್ತರು ದೇವರ ಕೃಪೆಗೆ ಪಾತ್ರರಾದರು.

Published On - 4:06 pm, Sat, 9 March 24

Loading...
Unable to load recommendations.
Follow Us