ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಿದೆ, ಇಲ್ಲಿದೆ ಫೋಟೋಗಳು
ಹಲವು ವರ್ಷಗಳ ಹೋರಾಟದ ಫಲವಾಗಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಂತಕ್ಕೆ ಬಂದು ನಿಂತಿದೆ. ಇದೀಗ ಅಯ್ಯೋಧೆ ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ಸಾಗುತ್ತಿದ್ದು, ಕೆಲವೊಂದು ಕೆಲಸಗಳು ಪೂರ್ಣಗೊಂಡಿದೆ. ಅವುಗಳ ಫೋಟೋ ಇಲ್ಲಿದೆ
Updated on: Sep 26, 2023 | 4:24 PM

ಅಯೋಧ್ಯೆ ರಾಮಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಕೆಲವೊಂದು ಕೆಲಸಗಳು ಪೂರ್ಣಗೊಂಡಿದೆ. ಜನವರಿಯಲ್ಲಿ ಇದರ ಉದ್ಟಾಟನೆ ನಡೆಯಲಿದೆ ಎಂದು ರಾಮ ಜನ್ಮಭೂಮಿ ಸಮಿತಿ ಹೇಳಿದೆ. ದೇಶದ ಅದೆಷ್ಟೋ ಭಕ್ತರು ರಾಮಮಂದಿರದ ಲೋಕಾರ್ಪಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಅಲ್ಲಿಯ ನಿರ್ಮಾಣ ಕಾರ್ಯಗಳು ಹೇಗೆ ನಡೆಯುತ್ತಿದೆ. ಯಾವೆಲ್ಲ ಕೆಲಸಗಳು ಬಾಕಿದೆ ಎಂಬ ವಿವರ ಇಲ್ಲಿದೆ.

ದೇವಾಲಯದ ನಿರ್ಮಾಣವು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್ ಹೇಳಿದೆ. ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ 50% ಪಿಲ್ಲರ್ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ ಎಂದು ಟ್ರಸ್ಟ್ ಹೇಳಿದೆ.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಹಿಂದೆ ತಿಳಿಸಿರುವಂತೆ 2024ರ ಜನವರಿ 21-23 ರಂದು ದೇವಾಲಯದ ಲೋಕಾರ್ಪಣೆ ಸಮಾರಂಭ ನಡೆಯಲಿದೆ ಎಂದು ಹೇಳಿತ್ತು. ಈಗಾಗಲೇ ಪ್ರಧಾನಿ ಮೋದಿ ಅವರನ್ನು ಅಧಿಕೃತ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮಕ್ಕೆ 136 ಸನಾತನ ಸಂಪ್ರದಾಯಗಳೊಂಡ, 25,000ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಆಹ್ವಾನಿಸುವ ಯೋಜನೆಯನ್ನು ಟ್ರಸ್ಟ್ ಹಾಕಿಕೊಂಡಿದೆ. ಇನ್ನು ರಾಮನ ದೇವರ ಪ್ರತಿಷ್ಠಾಪನೆಯಂದು 25,000 ಸಂತರ ಜೊತೆಗೆ, 10,000 ವಿಶೇಷ ಅತಿಥಿಗಳು ಸಹ ಇರುತ್ತಾರೆ.

ಇನ್ನು ಈಗಾಗಲೇ ಟ್ರಸ್ಟ್ ನಿರ್ಧಾರಿಸಿದಂತೆ 2024ರಂದು ಜನವರಿ 21, 22 ಮತ್ತು 23ರಂದು ರಾಮಮಂದಿರದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ಪ್ರಧಾನಿ ಮೋದಿ ಮತ್ತು ಪ್ರಮುಖ ಸಾಧು, ಸಂತರನ್ನು ಆಹ್ವಾನಿಸಲಾಗಿದೆ.

ರಾಮಮಂದಿರಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಹಾಗೂ ಲೋಕಾರ್ಪಣೆಗೆ ಬೇಕಾದ ಸಹಾಯವನ್ನು, ಜತೆಗೆ ಅಯ್ಯೋಧೆಯ ನಗರಗಳನ್ನು ಅಭಿವೃದ್ಧಿ ಪಡಿಸಲು ಎಲ್ಲ ಸೌಕರ್ಯಗಳನ್ನು ನೀಡುವಂತೆ ಅಧಿಕಾರಿಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್ ಸುದ್ದಿಗಳನ್ನು ಬರೆಯುತ್ತಾರೆ.
Read More



