Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalakote: ನೋಡುಗರನ್ನ ರೋಮಾಂಚನಗೊಳಿಸಿದ ಭಾರ ಎತ್ತುವ ಸ್ಪರ್ಧೆಯ ಝಲಕ್​ ಇಲ್ಲಿದೆ ನೋಡಿ

ಬಾಗಲಕೋಟೆ: ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸಿದ್ದೇಶ್ವರ ಜಾತ್ರೆಯ ಸಡಗರ ಮನೆ ಮಾಡಿದೆ. ಜಾತ್ರೆ ಪ್ರಯುಕ್ತ ಪ್ರತಿನಿತ್ಯ ಗ್ರಾಮದಲ್ಲಿ ಒಂದೊಂದು ಗ್ರಾಮೀಣ ಕ್ರೀಡೆಗಳನ್ನು ಆಯೋಜನೆ ಮಾಡಿದ್ದಾರೆ.

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 13, 2022 | 12:16 PM

ಬಾಗಲಕೋಟೆ: ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸಿದ್ದೇಶ್ವರ ಜಾತ್ರೆಯ ಸಡಗರ ಮನೆ ಮಾಡಿದೆ. ಜಾತ್ರೆ ಪ್ರಯುಕ್ತ ಪ್ರತಿನಿತ್ಯ ಗ್ರಾಮದಲ್ಲಿ ಒಂದೊಂದು ಗ್ರಾಮೀಣ ಕ್ರೀಡೆಗಳನ್ನು ಆಯೋಜನೆ ಮಾಡಿದ್ದಾರೆ.

ಬಾಗಲಕೋಟೆ: ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸಿದ್ದೇಶ್ವರ ಜಾತ್ರೆಯ ಸಡಗರ ಮನೆ ಮಾಡಿದೆ. ಜಾತ್ರೆ ಪ್ರಯುಕ್ತ ಪ್ರತಿನಿತ್ಯ ಗ್ರಾಮದಲ್ಲಿ ಒಂದೊಂದು ಗ್ರಾಮೀಣ ಕ್ರೀಡೆಗಳನ್ನು ಆಯೋಜನೆ ಮಾಡಿದ್ದಾರೆ.

1 / 7
ಟಗರಿನ ಕಾಳಗ, ಬಂಡಿ ಓಟ, ಕುಸ್ತಿ ಸೇರಿದಂತೆ ಬಾರ ಎತ್ತುವ ಸ್ಪರ್ಧೆ ಎಲ್ಲರ ಗಮನ ಸೆಳೆಯಿತು. ಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ 20, 25, 50, 100, 120 ಕೆ.ಜಿ ಬಾರದ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ ರೋಚಕವಾಗಿತ್ತು.

ಟಗರಿನ ಕಾಳಗ, ಬಂಡಿ ಓಟ, ಕುಸ್ತಿ ಸೇರಿದಂತೆ ಬಾರ ಎತ್ತುವ ಸ್ಪರ್ಧೆ ಎಲ್ಲರ ಗಮನ ಸೆಳೆಯಿತು. ಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ 20, 25, 50, 100, 120 ಕೆ.ಜಿ ಬಾರದ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ ರೋಚಕವಾಗಿತ್ತು.

2 / 7
ಬಲಶಾಲಿಗಳು ಒಂದೆ ಕೈಯಲ್ಲಿ ಕಲ್ಲು ಎತ್ತಿ ಬಿಸಾಕುತ್ತಿದ್ದರೆ, ನೆರೆದ ಜನರು ಚಪ್ಪಾಳೆ ತಟ್ಟುವ ಮೂಲಕ ಹುರಿದುಂಬಿಸುತ್ತಿದ್ದರು. ಬಲಭೀಮರಂತೆ ಕಲ್ಲಿನ ಜೊತೆ ಸೆಣಸಾಡಿದ ಜಟ್ಟಿಗಳು ಮೈ ಬಗ್ಗಿಸಿ ನೋಡ ನೋಡುತ್ತಿದ್ದಂತೆ ಕಲ್ಲು ಎತ್ತುವ ಪರಿ ಜನರನ್ನು ರೋಮಾಂಚನಗೊಳಿಸಿತ್ತು.

ಬಲಶಾಲಿಗಳು ಒಂದೆ ಕೈಯಲ್ಲಿ ಕಲ್ಲು ಎತ್ತಿ ಬಿಸಾಕುತ್ತಿದ್ದರೆ, ನೆರೆದ ಜನರು ಚಪ್ಪಾಳೆ ತಟ್ಟುವ ಮೂಲಕ ಹುರಿದುಂಬಿಸುತ್ತಿದ್ದರು. ಬಲಭೀಮರಂತೆ ಕಲ್ಲಿನ ಜೊತೆ ಸೆಣಸಾಡಿದ ಜಟ್ಟಿಗಳು ಮೈ ಬಗ್ಗಿಸಿ ನೋಡ ನೋಡುತ್ತಿದ್ದಂತೆ ಕಲ್ಲು ಎತ್ತುವ ಪರಿ ಜನರನ್ನು ರೋಮಾಂಚನಗೊಳಿಸಿತ್ತು.

3 / 7
ಒಂದು ಕಡೆ ಸಂಗ್ರಾಣಿ ಕಲ್ಲು ಎತ್ತುತ್ತಿದ್ದರೆ, ಇನ್ನೊಂದು ಕಡೆ ಕ್ವಿಂಟಲ್ ಬಾರದ ಚೀಲ ಹೊತ್ತು 200 ಮೀಟರ್ ದೂರ ಸಾಗುವ ಸ್ಪರ್ಧೆ ನೋಡುಗರನ್ನು ತುದಿಗಾಲ ಮೇಲೆ ನಿಲ್ಲುವಂತೆ ಮಾಡಿತ್ತು. ಆಯೋಜಕರು ಹಾಕಿದ ಮಾರ್ಕಿನಲ್ಲಿ ಯಾರು ಹೆಚ್ಚು ಸುತ್ತು ಚೀಲ ಹೊತ್ತು ಸಾಗುತ್ತಾರೊ ಅವರಿಗೆ ಬಹುಮಾನ ನಿಗಧಿ ಮಾಡಲಾಗಿತ್ತು.

ಒಂದು ಕಡೆ ಸಂಗ್ರಾಣಿ ಕಲ್ಲು ಎತ್ತುತ್ತಿದ್ದರೆ, ಇನ್ನೊಂದು ಕಡೆ ಕ್ವಿಂಟಲ್ ಬಾರದ ಚೀಲ ಹೊತ್ತು 200 ಮೀಟರ್ ದೂರ ಸಾಗುವ ಸ್ಪರ್ಧೆ ನೋಡುಗರನ್ನು ತುದಿಗಾಲ ಮೇಲೆ ನಿಲ್ಲುವಂತೆ ಮಾಡಿತ್ತು. ಆಯೋಜಕರು ಹಾಕಿದ ಮಾರ್ಕಿನಲ್ಲಿ ಯಾರು ಹೆಚ್ಚು ಸುತ್ತು ಚೀಲ ಹೊತ್ತು ಸಾಗುತ್ತಾರೊ ಅವರಿಗೆ ಬಹುಮಾನ ನಿಗಧಿ ಮಾಡಲಾಗಿತ್ತು.

4 / 7
ಸಂಗ್ರಾಣಿ ಕಲ್ಲು ಎತ್ತುವುದು ಹಾಗೂ ಚೀಲ ಹೊರುವ ಸ್ಪರ್ಧೆಗಳಿಗೆ ಪ್ರಥಮ ಬಹುಮಾನ 5001, ಧ್ವಿತೀಯ 3001, ತೃತೀಯ 2001 ನಿಗಧಿ ಮಾಡಲಾಗಿತ್ತು. ಚೀಲ ಹೊತ್ತು ಸಾಗುವ ಸ್ಪರ್ಧೆಯಲ್ಲಿ ಮುಧೋಳ ತಾಲ್ಲೂಕಿನ ಜಾಲಿಕಟ್ಟಿ ಗ್ರಾಮದ ಹನುಮಂತ ಕಳಸಣ್ಣವರ ಚೀಲ‌ ಹೊತ್ತು ೨೧ ಸುತ್ತು ಸಾಗಿ ಮೊದಲ ಸ್ಥಾನ ಪಡೆದರು.ಹನುಮಂತ ಸ್ನೇಹಿತರು ಆತನ ಕೊರಳಿಗೆ ಮಾಲೆ ಹಾಕಿ ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.

ಸಂಗ್ರಾಣಿ ಕಲ್ಲು ಎತ್ತುವುದು ಹಾಗೂ ಚೀಲ ಹೊರುವ ಸ್ಪರ್ಧೆಗಳಿಗೆ ಪ್ರಥಮ ಬಹುಮಾನ 5001, ಧ್ವಿತೀಯ 3001, ತೃತೀಯ 2001 ನಿಗಧಿ ಮಾಡಲಾಗಿತ್ತು. ಚೀಲ ಹೊತ್ತು ಸಾಗುವ ಸ್ಪರ್ಧೆಯಲ್ಲಿ ಮುಧೋಳ ತಾಲ್ಲೂಕಿನ ಜಾಲಿಕಟ್ಟಿ ಗ್ರಾಮದ ಹನುಮಂತ ಕಳಸಣ್ಣವರ ಚೀಲ‌ ಹೊತ್ತು ೨೧ ಸುತ್ತು ಸಾಗಿ ಮೊದಲ ಸ್ಥಾನ ಪಡೆದರು.ಹನುಮಂತ ಸ್ನೇಹಿತರು ಆತನ ಕೊರಳಿಗೆ ಮಾಲೆ ಹಾಕಿ ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.

5 / 7
ಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಯಿಂದ ಸಾಹಸಿಗಳು ಭಾಗಿಯಾಗಿ ತಮ್ಮ ಶಕ್ತಿಪ್ರದರ್ಶನ ಮಾಡಿದರು.ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸುವ ಉದ್ದೇಶ,ಯುವಕರನ್ನು  ದೈಹಿಕವಾಗಿ ಸದೃಢರನ್ನಾಗಿ ಮಾಡುವ ಉದ್ದೇಶದಿಂದ ಸಿದ್ದೇಶ್ವರ ಜಾತ್ರಾ ಕಮೀಟಿಯ ಬಸವೇಶ್ವರ ಗೆಳೆಯರ ಬಳಗದಿಂದ ಈ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು‌.

ಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಯಿಂದ ಸಾಹಸಿಗಳು ಭಾಗಿಯಾಗಿ ತಮ್ಮ ಶಕ್ತಿಪ್ರದರ್ಶನ ಮಾಡಿದರು.ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸುವ ಉದ್ದೇಶ,ಯುವಕರನ್ನು ದೈಹಿಕವಾಗಿ ಸದೃಢರನ್ನಾಗಿ ಮಾಡುವ ಉದ್ದೇಶದಿಂದ ಸಿದ್ದೇಶ್ವರ ಜಾತ್ರಾ ಕಮೀಟಿಯ ಬಸವೇಶ್ವರ ಗೆಳೆಯರ ಬಳಗದಿಂದ ಈ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು‌.

6 / 7
ಒಟ್ಟಿನಲ್ಲಿ ನಶಿಸಿ ಹೊರಟಿರುವ ಗ್ರಾಮೀಣ ಕ್ರೀಡೆಗಳನ್ನು ಶಿರೂರು ಗ್ರಾಮಸ್ಥರು ಮತ್ತೆ ಮುನ್ನೆಲೆಗೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಸಿದ್ದೇಶ್ವರ ಜಾತ್ರೆ ಇಂತಹದೊಂದು ಸ್ಪರ್ಧೆಗೆ ಕಾರಣವಾಗಿದ್ದು, ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸುತ್ತಿರುವ ಇವರ ಕಾರ್ಯ ಶ್ಲಾಘನೀಯ.

ಒಟ್ಟಿನಲ್ಲಿ ನಶಿಸಿ ಹೊರಟಿರುವ ಗ್ರಾಮೀಣ ಕ್ರೀಡೆಗಳನ್ನು ಶಿರೂರು ಗ್ರಾಮಸ್ಥರು ಮತ್ತೆ ಮುನ್ನೆಲೆಗೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಸಿದ್ದೇಶ್ವರ ಜಾತ್ರೆ ಇಂತಹದೊಂದು ಸ್ಪರ್ಧೆಗೆ ಕಾರಣವಾಗಿದ್ದು, ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸುತ್ತಿರುವ ಇವರ ಕಾರ್ಯ ಶ್ಲಾಘನೀಯ.

7 / 7
Follow us
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ