ಬಾಗಲಕೋಟೆ ಜಿಲ್ಲೆಯ ಜಲಪಾತಗಳಿಗೆ ಜೀವಕಳೆ, ಜಲಧಾರೆಗೆ ಮೈಯೊಡ್ಡಿ ಮಸ್ತಿ
ಬಾಗಲಕೋಟೆ ಜಿಲ್ಲೆಯ ಜನರು ಬಿಸಿಲಿಂದ ಕಂಗೆಟ್ಟಿದ್ದರು. ಬಿಸಿಲಿಗೆ ರಸ್ತೆಗಳು ಕಾದು ಕೆಂಡವಾಗಿದ್ದವು. ಬಿಸಿ ಗಾಳಿಗೆ ಜನರು ಮನೆಯಿಂದ ಆಚೆ ಬರಲು ಹಿಂದೇಟು ಹಾಕುತ್ತಿದ್ದರು. ಕೆರೆ, ನದಿಗಳು ಒಣಗಿ ಹೋಗಿದ್ದವು. ಇದೀಗ ನಿರಂತರ ಮಳೆಯಿಂದ ಜಲಮೂಲಗಳು ಭರ್ತಿಯಾಗಿವೆ. ಜಲಧಾರೆಗಳಿಗೆ ಜೀವಕಳೆ ಬಂದಿದ್ದು, ಪ್ರಸಿದ್ದ ದಮ್ಮೂರು ಪಾಲ್ಸ್ ಎಲ್ಲರನ್ನು ತನ್ನತ್ತ ಸೆಳೆಯುತ್ತಿದೆ. ಪ್ರವಾಸಿಗರು ಜಲಧಾರೆಗೆ ಮೈಯೊಡ್ಡಿ ಸಂಭ್ರಮಿಸುತ್ತಿದ್ದಾರೆ.
Updated on:May 23, 2025 | 8:21 PM

ಇಷ್ಟು ದಿನ ಬಾಗಲಕೋಟೆ ಜಿಲ್ಲೆಯಲ್ಲಿ ಬಿಸಿಲು ಜನರನ್ನು ಹೈರಾಣಾಗಿಸಿತ್ತು. ಮನೆ ಬಿಟ್ಟು ಹೊರ ಬರಲು ಜನ ಹಿಂದೇಟು ಹಾಕ್ತಿದ್ದರು. ನದಿ-ಕೆರೆಗಳು ಖಾಲಿಯಾಗಿದ್ದವು. ಬರದ ಚಿತ್ರಣ ಎಲ್ಲೆಡೆ ಇತ್ತು. ಆದರೆ ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ಬತ್ತಿದ ನದಿಗಳು ಭರ್ತಿಯಾದರೆ, ಜಲಪಾತಗಳಿಗೆ ಜೀವಕಳೆ ಬಂದಿದೆ.

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ದಮ್ಮೂರು ಫಾಲ್ಸ್ ಧುಮ್ಮುಕ್ಕುತ್ತಿದೆ. ಬೆಟ್ಟದಿಂದ ಗಿಡಮರಗಳ ಮಧ್ಯದಿಂದ ಧುಮ್ಮುಕ್ಕುವ ಜಲಧಾರೆ ಕಡು ಪ್ರವಾಸಿಗರು ಖುಷ್ ಆಗಿದ್ದಾರೆ. ಜಲಧಾರೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಸಂಭ್ರಮಿಸುತ್ತಿದ್ದಾರೆ. ಜಲಧಾರೆಯಲ್ಲಿ ಮಕ್ಕಳು, ಯುವಕರು, ಮಹಿಳೆಯರು ಮೈಯೊಡ್ಡಿ ಎಂಜಾಯ್ ಮಾಡುತ್ತಿದ್ದಾರೆ. ಬೆಟ್ಟದಿಂದ ಧುಮ್ಮುಕುವ ದಮ್ಮೂರು ಫಾಲ್ಸ್ ನೋಡುವುದೇ ಕಣ್ಣಿಗೆ ಹಬ್ಬ.

ಇದು ಕೇವಲ ಜಲಧಾರೆಯಲ್ಲ. ಇದರ ಪ್ರತಿ ಹನಿ ಔಷಧಿ ಎಂಬ ನಂಬಿಕೆ ಜನರಲ್ಲಿದೆ. ಏಕೆಂದರೆ ಈ ಫಾಲ್ಸ್ ಬೃಹತ್ ಬೆಟ್ಟದ ಮೇಲಿಂದ ದುಮುಕುತ್ತದೆ. ಬೆಟ್ಟದ ಮೇಲೆ ಔಷಧಿ ಗಿಡಗಳಿದ್ದು, ಔಷಧಿ ಗಿಡಮರಗಳ ಬೇರಿನಿಂದ ಹರಿದು ಬರುವ ಜಲಧಾರೆಯಲ್ಲಿ ಔಷಧಿ ಗುಣ ಇದೆ. ಚರ್ಮರೋಗ, ಮೈ-ಕೈ ನೋವು ಇದ್ದರೂ ಈ ಜಲಧಾರೆಗೆ ಮೈಯೊಡ್ಡಿದರೆ ವಾಸಿಯಾಗುತ್ತದೆ ಎಂಬ ನಂಬಿಕೆಯಿದೆ.

ಕೇವಲ ಮಜಾ ನೀಡುವ ಜಲಧಾರೆ ಮಾತ್ರವಲ್ಲ ಇದು ಚಿಕಿತ್ಸೆ ಪಾಲ್ಸ್ ಎಂದು ಜನ ಕರೆಯುತ್ತಾರೆ. ಜಲಧಾರೆ ಪಕ್ಕದಲ್ಲಿ ದಿಡಗಿನ ಬಸವೇಶ್ವರ ದೇವಸ್ಥಾನವಿದ್ದು, ಫಾಲ್ಸ್ ಮೋಜು ಮಸ್ತಿ ನಂತರ ಜನರು ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಕೂಡ ಪಡೆದು ಹೋಗುತ್ತಾರೆ.

ಒಟ್ಟಿನಲ್ಲಿ ನಿರಂತರ ಮಳೆಯಿಂದ ಜಲಮೂಲಗಳಿಗೆ ಜೀವಕಳೆ ಬಂದಿದೆ. ಜಲಪಾತಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ದಮ್ಮೂರು ಫಾಲ್ಸ್ ಪ್ರವಾಸಿಗರಿಗೆ ಒನ್ ಡೆ ಪಿಕ್ ನಿಕ್ಗೆ ಹೇಳಿ ಮಾಡಿಸಿದ ತಾಣವಾಗಿದ್ದು, ಎಲ್ಲರೂ ಹೋಗಿ ಎಂಜಾಯ್ ಮಾಡಬಹುದಾಗಿದೆ.
Published On - 7:48 pm, Fri, 23 May 25

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
Read More




