AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಕ್ಕವರ ಮುಂದೆ ಲಕ್ಷ ಲಕ್ಷ ಹಣ ಎಣಿಸಿದ

ಬಾಗಲಕೋಟೆ ಜಿಲ್ಲೆಯ ರೈತ ಶ್ರೀಶೈಲ್ ತೇಲಿ ಅವರು ಕಬ್ಬು ಬೆಳೆಯುವ ಪ್ರದೇಶದಲ್ಲಿ ಸೇಬು ಬೆಳೆಯುವ ಮೂಲಕ ಅಪಾರ ಯಶಸ್ಸು ಕಂಡಿದ್ದಾರೆ. ಏಳು ಎಕರೆ ಜಮೀನಿನಲ್ಲಿ ಸಾವಯವ ವಿಧಾನದಿಂದ ಸೇಬು ಬೆಳೆದು ಅವರು ಲಕ್ಷಾಂತರ ರೂಪಾಯಿ ಗಳಿಸಿದ್ದಾರೆ. ಈ ಯಶಸ್ಸಿನಿಂದ ಇತರ ರೈತರಿಗೆ ಸ್ಪೂರ್ತಿಯಾಗಿದ್ದಾರೆ ಮತ್ತು ಸೇಬು ಕೃಷಿಯ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Mar 29, 2025 | 1:54 PM

Share
ಬಾಗಲಕೋಟೆ ನೂರಕ್ಕೆ 80 ರಷ್ಟು ಕಬ್ಬು ಬೆಳೆಯುವ ಪ್ರದೇಶ. ಕಬ್ಬು ಇಲ್ಲಿನ ರೈತರ ಪ್ರಮುಖ ಬೆಳೆಯಾಗಿದೆ. ಕಬ್ಬು ಜೋಳ, ಗೋಧಿ ಗೋವಿನ ಜೋಳ, ದಾಳಿಂಬೆ ಮತ್ತು ಚಿಕ್ಕು ಬಿಟ್ಟು  ಬೇರೆ ಏನು ಬೆಳೆಯುವುದಿಲ್ಲ ಎಂಬುವುದು ರೈತರ ನಂಬಿಕೆ. ಆದರೆ ಇಂತಹ ನೆಲದಲ್ಲಿ ಓರ್ವ ರೈತ ಸೇಬು ಬೆಳೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಬಾಗಲಕೋಟೆ ನೂರಕ್ಕೆ 80 ರಷ್ಟು ಕಬ್ಬು ಬೆಳೆಯುವ ಪ್ರದೇಶ. ಕಬ್ಬು ಇಲ್ಲಿನ ರೈತರ ಪ್ರಮುಖ ಬೆಳೆಯಾಗಿದೆ. ಕಬ್ಬು ಜೋಳ, ಗೋಧಿ ಗೋವಿನ ಜೋಳ, ದಾಳಿಂಬೆ ಮತ್ತು ಚಿಕ್ಕು ಬಿಟ್ಟು ಬೇರೆ ಏನು ಬೆಳೆಯುವುದಿಲ್ಲ ಎಂಬುವುದು ರೈತರ ನಂಬಿಕೆ. ಆದರೆ ಇಂತಹ ನೆಲದಲ್ಲಿ ಓರ್ವ ರೈತ ಸೇಬು ಬೆಳೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

1 / 6
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಶ್ರೀಶೈಲ್ ತೇಲಿ ಅವರು ಸೇಬು ಬೆಳೆಯುವ ಮೂಲಕ ಉಳಿದ ರೈತರ ಹುಬ್ಬೇರುವಂತೆ ಮಾಡಿದ್ದಾರೆ. ಶ್ರೀಶೈಲ್ ತಮ್ಮ ಏಳು ಎಕರೆ ಜಮೀನಿನಲ್ಲಿ ಸೇಬು ಬೆಳೆದು ಲಾಭ ಪಡೆಯುತ್ತಿದ್ದಾರೆ. ಕಬ್ಬು ಹೆಚ್ಚಾಗಿ ಬೆಳೆಯುವ ಈ ನಾಡಲ್ಲಿ ಸಮೃದ್ಧವಾಗಿ ಸೇಬು ಬೆಳೆದು ಜನರಿಗೆ ಸೇಬಿನ ಸಿಹಿ‌ ಹಂಚುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಶ್ರೀಶೈಲ್ ತೇಲಿ ಅವರು ಸೇಬು ಬೆಳೆಯುವ ಮೂಲಕ ಉಳಿದ ರೈತರ ಹುಬ್ಬೇರುವಂತೆ ಮಾಡಿದ್ದಾರೆ. ಶ್ರೀಶೈಲ್ ತಮ್ಮ ಏಳು ಎಕರೆ ಜಮೀನಿನಲ್ಲಿ ಸೇಬು ಬೆಳೆದು ಲಾಭ ಪಡೆಯುತ್ತಿದ್ದಾರೆ. ಕಬ್ಬು ಹೆಚ್ಚಾಗಿ ಬೆಳೆಯುವ ಈ ನಾಡಲ್ಲಿ ಸಮೃದ್ಧವಾಗಿ ಸೇಬು ಬೆಳೆದು ಜನರಿಗೆ ಸೇಬಿನ ಸಿಹಿ‌ ಹಂಚುತ್ತಿದ್ದಾರೆ.

2 / 6
ಎರಡು ವರ್ಷದ ಹಿಂದೆ ಸೇಬು ನಾಟಿ ಮಾಡಿದ್ದು, ಈ ವರ್ಷ ಎಕರೆಗೆ ಖರ್ಚುವೆಚ್ಚ ಎಲ್ಲ ತೆಗೆದು ಮೂರುವರೆ ಲಕ್ಷ ಆದಾಯ ಪಡೆದಿದ್ದಾರೆ. ಬಾಗಲಕೋಟೆ , ಬೆಳಗಾವಿ, ವಿಜಯಪುರದ ಸ್ಥಳೀಯ ‌ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಕೈ ತುಂಬ ಆದಾಯ ಪಡೆಯುತ್ತಿದ್ದಾರೆ.

ಎರಡು ವರ್ಷದ ಹಿಂದೆ ಸೇಬು ನಾಟಿ ಮಾಡಿದ್ದು, ಈ ವರ್ಷ ಎಕರೆಗೆ ಖರ್ಚುವೆಚ್ಚ ಎಲ್ಲ ತೆಗೆದು ಮೂರುವರೆ ಲಕ್ಷ ಆದಾಯ ಪಡೆದಿದ್ದಾರೆ. ಬಾಗಲಕೋಟೆ , ಬೆಳಗಾವಿ, ವಿಜಯಪುರದ ಸ್ಥಳೀಯ ‌ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಕೈ ತುಂಬ ಆದಾಯ ಪಡೆಯುತ್ತಿದ್ದಾರೆ.

3 / 6
ಶ್ರೀಶೈಲ್ ತೇಲಿ ಮೊದಲು ದ್ರಾಕ್ಷಿ ಬೆಳೆಯುತ್ತಿದ್ದರು. ಅದು ಇತ್ತೀಚೆಗೆ ಲಾಸ್ ಆಗಿ ಮುಂದೆ ಏನು ಬೆಳೆಯಬೇಕು  ಎಂಬ ವಿಚಾರದಲ್ಲಿ ಇದ್ದಾಗ ಹೊಳೆದದ್ದು ಸೇಬು. ಯಾಕೆ ನಮ್ಮ ಜಮೀನಿನಲ್ಲಿ ಸೇಬು ಬೆಳೆಯಬಾರದು ಎಂದು ಕೆಲ ಗೆಳೆಯರನ್ನು ಪ್ರಶ್ನೆ ಮಾಡಿದಾಗ ಆಪ್ತ ಗೆಳೆಯರು ಪ್ರೋತ್ಸಾಹ ನೀಡಿದರು. ನಂತರ ಮಹಾರಾಷ್ಟ್ರದ ಶಿರಡಿಯಿಂದ 150 ರೂ.ಗೆ ಒಂದರಂತೆ ಒಟ್ಟು 2600 ಸೇಬಿನ ಗಿಡ ತಂದು ನೆಟ್ಟಿದ್ದಾರೆ.

ಶ್ರೀಶೈಲ್ ತೇಲಿ ಮೊದಲು ದ್ರಾಕ್ಷಿ ಬೆಳೆಯುತ್ತಿದ್ದರು. ಅದು ಇತ್ತೀಚೆಗೆ ಲಾಸ್ ಆಗಿ ಮುಂದೆ ಏನು ಬೆಳೆಯಬೇಕು ಎಂಬ ವಿಚಾರದಲ್ಲಿ ಇದ್ದಾಗ ಹೊಳೆದದ್ದು ಸೇಬು. ಯಾಕೆ ನಮ್ಮ ಜಮೀನಿನಲ್ಲಿ ಸೇಬು ಬೆಳೆಯಬಾರದು ಎಂದು ಕೆಲ ಗೆಳೆಯರನ್ನು ಪ್ರಶ್ನೆ ಮಾಡಿದಾಗ ಆಪ್ತ ಗೆಳೆಯರು ಪ್ರೋತ್ಸಾಹ ನೀಡಿದರು. ನಂತರ ಮಹಾರಾಷ್ಟ್ರದ ಶಿರಡಿಯಿಂದ 150 ರೂ.ಗೆ ಒಂದರಂತೆ ಒಟ್ಟು 2600 ಸೇಬಿನ ಗಿಡ ತಂದು ನೆಟ್ಟಿದ್ದಾರೆ.

4 / 6
ಹರ್ಮನ್-99, ಗೋಲ್ಡನ್ ಡಾರ್ಸೆಟ್, ಅಣ್ಣಾ ತಳಿಯ ಸೇಬು ಬೆಳೆದಿದ್ದಾರೆ. ಅದು ಸಾವಯವ ಪದ್ದತಿಯಲ್ಲಿ ಎಂಬುದು ವಿಶೇಷವಾಗಿದೆ. ಹೂ ಬಿಡುವ ವೇಳೆ ಸ್ವಲ್ಪ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದನ್ನು, ಬಿಟ್ಟರೆ ಮತ್ತೆ ಕೆಮಿಕಲ್ ಸ್ಪರ್ಷ ನೀಡಿಲ್ಲ. ಇನ್ನು, ಯಾವುದೇ ಕಾಶ್ಮೀರಿ ಆ್ಯಪಲ್​ಗೂ ಕಡಿಮೆಯಿಲ್ಲದ ರುಚಿ ಬಣ್ಣದಿಂದ ಸೇಬು ಕಂಗೊಳಿಸುತ್ತಿವೆ.

ಹರ್ಮನ್-99, ಗೋಲ್ಡನ್ ಡಾರ್ಸೆಟ್, ಅಣ್ಣಾ ತಳಿಯ ಸೇಬು ಬೆಳೆದಿದ್ದಾರೆ. ಅದು ಸಾವಯವ ಪದ್ದತಿಯಲ್ಲಿ ಎಂಬುದು ವಿಶೇಷವಾಗಿದೆ. ಹೂ ಬಿಡುವ ವೇಳೆ ಸ್ವಲ್ಪ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದನ್ನು, ಬಿಟ್ಟರೆ ಮತ್ತೆ ಕೆಮಿಕಲ್ ಸ್ಪರ್ಷ ನೀಡಿಲ್ಲ. ಇನ್ನು, ಯಾವುದೇ ಕಾಶ್ಮೀರಿ ಆ್ಯಪಲ್​ಗೂ ಕಡಿಮೆಯಿಲ್ಲದ ರುಚಿ ಬಣ್ಣದಿಂದ ಸೇಬು ಕಂಗೊಳಿಸುತ್ತಿವೆ.

5 / 6
ಸೇಬು ಬೆಳೆಯುವಾಗ ಇಲ್ಲಿ ಸೇಬು ಬೆಳೆಯುತ್ತಾ, ಈತನಿಗೆ ತಲೆ ಕೆಟ್ಟಿದೆ ಎಂದು ನಗಾಡಿದ್ದ ರೈತರೇ ಈಗ ಶಾಕ್ ಆಗಿದ್ದಾರೆ. ಅದೇ ರೈತರು ಶ್ರೀಶೈಲ ಅವರ ಜಮೀನಿಗೆ ಬಂದು ಸೇಬು ಬೆಳೆಯ ಬಗ್ಗೆ ಮಾಹಿತಿ ಪಡೆದು ತಮ್ಮ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ಶ್ರೀಶೈಲ ಅವರ ಸೇಬು ಕೃಷಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಸೇಬು ಬೆಳೆಯುವಾಗ ಇಲ್ಲಿ ಸೇಬು ಬೆಳೆಯುತ್ತಾ, ಈತನಿಗೆ ತಲೆ ಕೆಟ್ಟಿದೆ ಎಂದು ನಗಾಡಿದ್ದ ರೈತರೇ ಈಗ ಶಾಕ್ ಆಗಿದ್ದಾರೆ. ಅದೇ ರೈತರು ಶ್ರೀಶೈಲ ಅವರ ಜಮೀನಿಗೆ ಬಂದು ಸೇಬು ಬೆಳೆಯ ಬಗ್ಗೆ ಮಾಹಿತಿ ಪಡೆದು ತಮ್ಮ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ಶ್ರೀಶೈಲ ಅವರ ಸೇಬು ಕೃಷಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

6 / 6

Published On - 11:02 pm, Fri, 28 March 25

Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ