- TV9 Kannada Photo gallery Kannada News | Bagalkot: Trees uprooted, crops destroyed due to heavy rains
Bagalkote News: ಧಾರಾಕಾರ ಮಳೆಗೆ ಕಂಗಾಲಾದ ಬಾಗಲಕೋಟೆ ಜನರು: ಧರೆಗುರುಳಿದ ಮರ, ಬೆಳೆ ನಾಶ
ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಹಲವೆಡೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂ. ನಷ್ಟ ಆಗಿದೆ.
Updated on: May 23, 2023 | 9:01 PM

ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಭಾರಿ ಗಾಳಿಯಿಂದ ಬಾದಾಮಿ ತಾಲ್ಲೂಕಿನ ಹೂಲಗೇರಿಯ ರಾಷ್ಟ್ರೀಯ ಹೆದ್ದಾರಿ ೨೧೮ರಲ್ಲಿ ಬೃಹತ್ ಬೇವಿನ ಮರ ಬಿದ್ದ ಪರಿಣಾಮ ಒಂದು ಕಾರು, ಎರಡು ಬೈಕ್ ಜಖಂ ಆಗಿದೆ.

ನಿನ್ನೆ ರಾತ್ರಿ ಬೀಸಿದ ಗಾಳಿ ಹಾಗೂ ಮಳೆಗೆ ಅಪಾರ ಬೆಳೆ ಹಾನಿ ಆಗಿದ್ದು, ಕಲಾದಗಿ ಗ್ರಾಮದ ವ್ಯಾಪ್ತಿಯಲ್ಲಿ ದಾಳಿಂಬೆ, ಕಬ್ಬು, ಪಪ್ಪಾಯಿ ಬೆಳೆ ನಾಶವಾಗಿದೆ. ಮಳೆ ಗಾಳಿ ಹೊಡೆತಕ್ಕೆ ಪಪ್ಪಾಯಿ, ನೆಲಕ್ಕುರುಳಿದರೆ, ಆಲಿಕಲ್ಲಿಗೆ ದಾಳಿಂಬೆ ಹಣ್ಣು ಹಾನಿಯಾಗಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಗಾಳಿ, ಮಳೆ ಆರ್ಭಟಕ್ಕೆ ತೆಂಗಿನ ಮರಗಳು ಉರುಳಿ ಮನೆಗಳ ಮೇಲೆ ಬೀಳುತ್ತಿವೆ. ಸಿಡಿಲು ಬಡಿದು ಕುರಿಗಾಹಿ ಓರ್ವ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್ ಗಾತ್ರದ ಮರ ಒಂದು ಧರೆಗುರುಳಿದ್ದು, ಮನೆ ಮೇಲೆ ಬಿದಿದೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಮುಂಭಾಗದಲ್ಲಿ ಮಲಗಿದ ವೇಳೆ ಗೋಡೆ ಕುಸಿದು ಬಿದ್ದು ಮಳೆಗೆ ಮನೆ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್, ವೈಯಿಸ್ ಓವರ್, ಎಡಿಟಿಂಗ್ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.
Read More



