ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್​​ಗಳಲ್ಲಿ ಇಂದಿನಿಂದ ಕ್ಯೂಆರ್ ಕೋಡ್ ಟಿಕೆಟ್!

Edited By:

Updated on: Feb 13, 2024 | 1:10 PM

KSRTC Bus QR Code Tickets: ಬಾಗಲಕೋಟೆ ಜಿಲ್ಲೆಯಾದ್ಯಂತ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ (KSRTC Bus) ಇಂದಿನಿಂದ (ಫೆಬ್ರವರಿ 13) ಕ್ಯೂಆರ್ ಕೋಡ್ (QR Code Ticket) ಸೌಲಭ್ಯ ಆರಂಭವಾಗಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯ ಕೆಎಸ್​ಆರ್​​ಟಿಸಿ ಬಸ್​ಗಳಲ್ಲಿ ಇಂಥದ್ದೊಂದು ವಿನೂತನ ಕ್ರಮ ಜಾರಿಗೆ ತರಲಾಗಿದೆ.

1 / 7
ನೂತನ ವ್ಯವಸ್ಥೆಯಿಂದಾಗಿ ಯುಪಿಐ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಮೊತ್ತವನ್ನು ಪಾವತಿ ಮಾಡುವ ಸೌಲಭ್ಯ ಪ್ರಯಾಣಿಕರಿಗೆ ಲಭ್ಯವಾಗಲಿದೆ.

ನೂತನ ವ್ಯವಸ್ಥೆಯಿಂದಾಗಿ ಯುಪಿಐ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಮೊತ್ತವನ್ನು ಪಾವತಿ ಮಾಡುವ ಸೌಲಭ್ಯ ಪ್ರಯಾಣಿಕರಿಗೆ ಲಭ್ಯವಾಗಲಿದೆ.

2 / 7
ಬೀಳಗಿ ಕೆಎಸ್​​​ಆರ್​​​ಟಿಸಿ ಘಟಕದಲ್ಲಿ ಸಂಸ್ಥೆಯ ಅಧಿಕಾರಿಗಳಿಂದ ಕ್ಯೂಆರ್ ಕೋಡ್ ಟಿಕೆಟ್ ಪಾವತಿ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಮಹಾಂತೇ ಕಪ್ಲಿ ಉಪ ಗಣಕ ವ್ಯವಸ್ಥಾಪಕ, ವಾಯುವ್ಯ ಸಾರಿಗೆ ಕೇಂದ್ರ ಕಚೇರಿ ಹುಬ್ಬಳ್ಳಿ, ಬಾಗಲಕೋಟೆ ವಿಭಾಗೀಯ ಸಾರಿಗೆ ಅಧಿಕಾರಿ ಪಿವ್ಹಿ ಮೇತ್ರಿ ಅವರಿಂದ ಚಾಲನೆ ದೊರೆಯಿತು.

ಬೀಳಗಿ ಕೆಎಸ್​​​ಆರ್​​​ಟಿಸಿ ಘಟಕದಲ್ಲಿ ಸಂಸ್ಥೆಯ ಅಧಿಕಾರಿಗಳಿಂದ ಕ್ಯೂಆರ್ ಕೋಡ್ ಟಿಕೆಟ್ ಪಾವತಿ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಮಹಾಂತೇ ಕಪ್ಲಿ ಉಪ ಗಣಕ ವ್ಯವಸ್ಥಾಪಕ, ವಾಯುವ್ಯ ಸಾರಿಗೆ ಕೇಂದ್ರ ಕಚೇರಿ ಹುಬ್ಬಳ್ಳಿ, ಬಾಗಲಕೋಟೆ ವಿಭಾಗೀಯ ಸಾರಿಗೆ ಅಧಿಕಾರಿ ಪಿವ್ಹಿ ಮೇತ್ರಿ ಅವರಿಂದ ಚಾಲನೆ ದೊರೆಯಿತು.

3 / 7
ಎರಡು ದಿನಗಳ ಒಳಗಾಗಿ ಬಾಗಲಕೋಟೆ ಜಿಲ್ಲೆಯ ಎಂಟು ಘಟಕಗಳ ಎಲ್ಲ ಬಸ್​​ಗಳಲ್ಲೂ ಯುಪಿಐ ಸೇವೆ ಆರಂಭಗೊಳ್ಳಲಿದೆ. ಮೊದಲ ದಿನವಾದ ಇಂದು ಉದ್ಘಾಟನೆ ಬಳಿಲ ಬಸ್ ಏರಿ ಪ್ರಯಾಣಿಕರಿಗೆ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಬಗ್ಗೆ ಅಧಿಕಾರಿಗಳು ತಿಳಿ ಹೇಳಿದರು.

ಎರಡು ದಿನಗಳ ಒಳಗಾಗಿ ಬಾಗಲಕೋಟೆ ಜಿಲ್ಲೆಯ ಎಂಟು ಘಟಕಗಳ ಎಲ್ಲ ಬಸ್​​ಗಳಲ್ಲೂ ಯುಪಿಐ ಸೇವೆ ಆರಂಭಗೊಳ್ಳಲಿದೆ. ಮೊದಲ ದಿನವಾದ ಇಂದು ಉದ್ಘಾಟನೆ ಬಳಿಲ ಬಸ್ ಏರಿ ಪ್ರಯಾಣಿಕರಿಗೆ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಬಗ್ಗೆ ಅಧಿಕಾರಿಗಳು ತಿಳಿ ಹೇಳಿದರು.

4 / 7
ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯಿಂದಾಗಿ ಪ್ರಯಾಣದ ವೇಳೆ ಚಿಲ್ಲರೆ ನೀಡುವ ಸಮಸ್ಯೆಯಿಂದ ಪ್ರಯಾಣಿಕರಿಗೆ ಹಾಗೂ ನಿರ್ವಾಹಕರಿಗೆ ಮುಕ್ತಿ ಸಿಗಲಿದೆ. ಜತೆಗೆ, ಡಿಜಿಟಲ್ ಪಾವತಿ ವ್ಯವಸ್ಥೆಗೆ ಉತ್ತೇಜನವೂ ದೊರೆಯಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯಿಂದಾಗಿ ಪ್ರಯಾಣದ ವೇಳೆ ಚಿಲ್ಲರೆ ನೀಡುವ ಸಮಸ್ಯೆಯಿಂದ ಪ್ರಯಾಣಿಕರಿಗೆ ಹಾಗೂ ನಿರ್ವಾಹಕರಿಗೆ ಮುಕ್ತಿ ಸಿಗಲಿದೆ. ಜತೆಗೆ, ಡಿಜಿಟಲ್ ಪಾವತಿ ವ್ಯವಸ್ಥೆಗೆ ಉತ್ತೇಜನವೂ ದೊರೆಯಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

5 / 7
ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯ ಪ್ರಯೋಜನವನ್ನು ಹೆಚ್ಚಿನವರು ಪಡೆದುಕೊಳ್ಳಬೇಕು. ಇದರಿಂದ ಡಿಜಿಟಲ್ ಪಾವತಿಗೆ ಉತ್ತೇಜನ ದೊರೆಯುತ್ತದೆ. ಜತೆಗೆ, ಚಿಲ್ಲರೆ ಸಮಸ್ಯೆಗೂ ಪರಿಹಾರ ದೊರೆಯುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯ ಪ್ರಯೋಜನವನ್ನು ಹೆಚ್ಚಿನವರು ಪಡೆದುಕೊಳ್ಳಬೇಕು. ಇದರಿಂದ ಡಿಜಿಟಲ್ ಪಾವತಿಗೆ ಉತ್ತೇಜನ ದೊರೆಯುತ್ತದೆ. ಜತೆಗೆ, ಚಿಲ್ಲರೆ ಸಮಸ್ಯೆಗೂ ಪರಿಹಾರ ದೊರೆಯುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

6 / 7
ಎರಡು ದಿನಗಳ ಹಿಂದಷ್ಟೇ ಇಂಥದ್ದೇ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ಘಟಕದ ಬಸ್​ಗಳಲ್ಲಿ ಜಾರಿಗೆ ತರಲಾಗಿತ್ತು. ಮುಂದಿನ ಕೆಲವೇ ದಿನಗಳಲ್ಲಿ ಧಾರವಾಡ ಘಟಕದ ಇತರ ವಿಭಾಗಗಳಲ್ಲಿಯೂ ಈ ಸೇವೆಯನ್ನು ವಿಸ್ತರಿಸುವುದಾಗಿ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದರು.

ಎರಡು ದಿನಗಳ ಹಿಂದಷ್ಟೇ ಇಂಥದ್ದೇ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ಘಟಕದ ಬಸ್​ಗಳಲ್ಲಿ ಜಾರಿಗೆ ತರಲಾಗಿತ್ತು. ಮುಂದಿನ ಕೆಲವೇ ದಿನಗಳಲ್ಲಿ ಧಾರವಾಡ ಘಟಕದ ಇತರ ವಿಭಾಗಗಳಲ್ಲಿಯೂ ಈ ಸೇವೆಯನ್ನು ವಿಸ್ತರಿಸುವುದಾಗಿ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದರು.

7 / 7
ಮುಂದಿನ ಕೆಲವು ದಿನಗಳಲ್ಲಿ ಈ ವ್ಯವಸ್ಥೆ ರಾಜ್ಯದಾದ್ಯಂತ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಇದೀಗ ಬಾಗಲಕೋಟೆ ಹಾಗೂ ಧಾರವಾಡಗಳಲ್ಲಿ ವ್ಯವಸ್ಥೆ ಜಾರಿಯಾಗಿದ್ದು, ಪ್ರಯಾಣಿಕರಿಗೆ ಹಾಗೂ ನಿರ್ವಹಾಕರಿಗೆ ನೆರವಾಗುತ್ತಿದೆ.

ಮುಂದಿನ ಕೆಲವು ದಿನಗಳಲ್ಲಿ ಈ ವ್ಯವಸ್ಥೆ ರಾಜ್ಯದಾದ್ಯಂತ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಇದೀಗ ಬಾಗಲಕೋಟೆ ಹಾಗೂ ಧಾರವಾಡಗಳಲ್ಲಿ ವ್ಯವಸ್ಥೆ ಜಾರಿಯಾಗಿದ್ದು, ಪ್ರಯಾಣಿಕರಿಗೆ ಹಾಗೂ ನಿರ್ವಹಾಕರಿಗೆ ನೆರವಾಗುತ್ತಿದೆ.

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us