- Kannada News Photo gallery Bagalkot teacher wrote letter to CM and VIP Person to wishing new year and sankranti
ಪತ್ರದ ಮೂಲಕ ವಿವಿಧ ರಾಜ್ಯಗಳ ಸಿಎಂಗಳಿಗೆ ಹೊಸ ವರ್ಷದ ಶುಭಾಷಯ ತಿಳಿಸುವ ಶಿಕ್ಷಕ
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ.
Updated on:Dec 25, 2023 | 2:35 PM

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ.

ವಿವಿಧ ರಾಜ್ಯಗಳ ಮುಖ್ಯಂತ್ರಿಗಳು, ವಿವಿಧ ಮಠಾಧೀಶರು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿ, ವಿವಿಧ ಇಲಾಖೆ ಅಧಿಕಾರಿಗಳಿಗೆ ಶುಭಾಷಯ ಪತ್ರ ಬರೆಯುತ್ತಿದ್ದಾರೆ.

ಬರೀ ವಿಐಪಿಗಳಿಗೆ ಮಾತ್ರವಲ್ಲದೇ ಬಂಧುಗಳು, ಮಿತ್ರರು, ಪರಿಚಿತರು, ಗಣ್ಯರು, ವಿವಿಧ ಕ್ಷೇತ್ರಗಳ ಪ್ರಮುಖರಿಗೆ ಪತ್ರದ ಮುಖೇನ ಶುಭಾಶಯ ತಿಳಿಸುತ್ತಿದ್ದಾರೆ.

ವಿಕಲಚೇತನರಾದ ಶಿಕ್ಷಕ ಬಸವರಾಜ 1989 ರಿಂದ ಪತ್ರ ಬರೆಯಲು ಆರಂಭಿಸಿದ್ದಾರೆ. ಆರಂಭದಲ್ಲಿ 100-200 ಜನರಿಗೆ ಬರೆಯುತ್ತಿದ್ದ ಪತ್ರ ಬರೆಯುತ್ತಿದ್ದರು.

ಈ ಪತ್ರಗಳ ಸಂಖ್ಯೆ ಇದೀಗ ಸುಮಾರು ಎರಡು ಸಾವಿರಕ್ಕೆ ತಲುಪಿದೆ.

2023 ರ ಹೊಸವರ್ಷದ ಶುಭಾಷಯ ಪತ್ರ ಬರೆದಿದ್ದ ಶಿಕ್ಷಕ ಬಸವರಾಜ್ ಅವರಿಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಗೋವಾ ಸಿಎಂ ಪ್ರಮೋದ್ ಸಾವಂತ್ ಮರು ಶುಭಾಷಯ ಪತ್ರ ಕಳಿಸಿದ್ದರು.

ಶಿಕ್ಷಕ ಬಸವರಾಜ ಈ ವರ್ಷ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಶುಭಾಷಯ ಪತ್ರ ಬರೆದಿದ್ದಾರೆ.

ಇದೊಂದು ಒಳ್ಳೆಯ ಹವ್ಯಾಸ, ಇದರಿಂದ ತಮಗೆ ಹೆಚ್ಚು ಖುಷಿ ಇದೆ. ಹೀಗೆ ಪತ್ರ ಬರೆಯಲು ತಂದೆ ಚಂದ್ರಶೇಖರ ಹಾಗೂ ತಮ್ಮ ದೊಡ್ಡಪ್ಪ ಪ್ರೇರಣೆ ಎಂದು ಶಿಕ್ಷಕ ಬಸವರಾಜ ಹೇಳಿದ್ದಾರೆ.
Published On - 2:22 pm, Mon, 25 December 23

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
Read More




