AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇನು ನದಿಯೋ ಇಲ್ಲಾ ಮೈದಾವೋ? ಖಾಲಿಯಾದ ಮಲಪ್ರಭೆ

ಬೇಸಿಗೆಯ ತೀವ್ರ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಿರುವಾಗಲೇ ಇತ್ತ ಮಲಪ್ರಭಾ ನದಿ ಒಡಲು ಖಾಲಿಯಾಗುತ್ತಿದೆ. ಖಾಲಿಯಾದ ಮಲಪ್ರಭಾ ನದಿ ಸದ್ಯ ಕ್ರಿಕೆಟ್ ಮೈದಾನವಾಗಿ ಮಾರ್ಪಟ್ಟಿದೆ. ಯುವಕರಿಗೆ ಕ್ರಿಕೆಟ್​ ಆಡಲು ಜಾಗ ಸಿಕ್ಕಂತಾಗಿದೆ. ರೈತರು ಮತ್ತು ಜಾನುವಾರುಗಳಿಗೆ ನೀರಿನ ತೀವ್ರ ಅಭಾವ ಉಂಟಾಗಿದೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Apr 16, 2025 | 11:05 AM

Share
ಬೇಸಿಗೆ ಬಿರುಬಿಸಿಲಿನಿಂದ ಜನರು ಕಂಗಾಲಾಗಿದ್ದಾರೆ. ಈ ಮಧ್ಯೆ ಜಲಮೂಲಗಳು ಖಾಲಿಯಾಗುತ್ತಿವೆ. ಮಲಪ್ರಭಾ ನದಿ ಒಡಲು ಬರಿದಾಗಿದ್ದು, ಕ್ರಿಕೆಟ್ ಮೈದಾನವಾಗಿ ಬದಲಾಗಿದೆ. ನದಿಯಲ್ಲೇ ಯುವಕರು ಕ್ರಿಕೆಟ್ ಆಡುತ್ತಿದ್ದು, ನದಿ ಒಡಲು ಎಷ್ಟರ ಮಟ್ಟಿಗೆ ಖಾಲಿಯಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. 

ಬೇಸಿಗೆ ಬಿರುಬಿಸಿಲಿನಿಂದ ಜನರು ಕಂಗಾಲಾಗಿದ್ದಾರೆ. ಈ ಮಧ್ಯೆ ಜಲಮೂಲಗಳು ಖಾಲಿಯಾಗುತ್ತಿವೆ. ಮಲಪ್ರಭಾ ನದಿ ಒಡಲು ಬರಿದಾಗಿದ್ದು, ಕ್ರಿಕೆಟ್ ಮೈದಾನವಾಗಿ ಬದಲಾಗಿದೆ. ನದಿಯಲ್ಲೇ ಯುವಕರು ಕ್ರಿಕೆಟ್ ಆಡುತ್ತಿದ್ದು, ನದಿ ಒಡಲು ಎಷ್ಟರ ಮಟ್ಟಿಗೆ ಖಾಲಿಯಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. 

1 / 6
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕಮತಗಿ ಪಟ್ಟಣದ ವ್ಯಾಪ್ತಿಯ ಮಲಪ್ರಭಾ ನದಿಯಲ್ಲಿ ನೀರು ಖಾಲಿಯಾದ ಹಿನ್ನೆಲ್ಲ ಯುವಕರು ಕ್ರಿಕೆಟ್ ಆಡುತ್ತಿದ್ದಾರೆ. ಅಷ್ಟೇ ಅಲ್ಲದೆ ಲಾರಿ ಕೂಡ ತೊಳೆಯಲಾಗುತ್ತಿದೆ. ಅಲ್ಲಲ್ಲಿ ತಗ್ಗುಗುಂಡಿಗಳಲ್ಲಿ ನೀರು ‌ನಿಂತಿರುವುದು ಬಿಟ್ಟರೆ ಮಲಪ್ರಭಾ ನದಿ ಒಡಲು ಬರಿದಾಗಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕಮತಗಿ ಪಟ್ಟಣದ ವ್ಯಾಪ್ತಿಯ ಮಲಪ್ರಭಾ ನದಿಯಲ್ಲಿ ನೀರು ಖಾಲಿಯಾದ ಹಿನ್ನೆಲ್ಲ ಯುವಕರು ಕ್ರಿಕೆಟ್ ಆಡುತ್ತಿದ್ದಾರೆ. ಅಷ್ಟೇ ಅಲ್ಲದೆ ಲಾರಿ ಕೂಡ ತೊಳೆಯಲಾಗುತ್ತಿದೆ. ಅಲ್ಲಲ್ಲಿ ತಗ್ಗುಗುಂಡಿಗಳಲ್ಲಿ ನೀರು ‌ನಿಂತಿರುವುದು ಬಿಟ್ಟರೆ ಮಲಪ್ರಭಾ ನದಿ ಒಡಲು ಬರಿದಾಗಿದೆ.

2 / 6
ಮಲಪ್ರಭಾ ನದಿ ಬಾಗಲಕೋಟೆ ಜಿಲ್ಲೆಯ ಬಾದಾಮಿ, ಹುನಗುಂದ, ಇಳಕಲ್, ಗುಳೇದಗುಡ್ಡ ಭಾಗದಲ್ಲಿ ಹರಿಯುತ್ತದೆ. ನದಿಯನ್ನು ನಂಬಿಕೊಂಡು ರೈತರು ಕೃಷಿ ಮಾಡುತ್ತಾರೆ. ನದಿ ಅಕ್ಕಪಕ್ಕದ ಜಮೀನು ಸದ್ಯಕ್ಕೆ ಹಸಿರಿನಿಂದ ಕೂಡಿದ್ದರೂ, ಇನ್ನೇನು ಕೆಲ ದಿನದಲ್ಲಿ ಬೆಳೆಯೆಲ್ಲಾ ಒಣಗಿ ಹಾಳಾಗಲಿದೆ. ಏಕೆಂದರೆ ನದಿಯಲ್ಲಿ ನೀರು ಖಾಲಿಯಾಗಿದೆ. ಅಲ್ಲಲ್ಲಿ ತಗ್ಗು ಗುಂಡಿಗಳಲ್ಲಿ ಇದ್ದ ನೀರು ಕೂಡ ತಳಮಟ್ಟಕ್ಕೆ ಇಳಿದಿದೆ.

ಮಲಪ್ರಭಾ ನದಿ ಬಾಗಲಕೋಟೆ ಜಿಲ್ಲೆಯ ಬಾದಾಮಿ, ಹುನಗುಂದ, ಇಳಕಲ್, ಗುಳೇದಗುಡ್ಡ ಭಾಗದಲ್ಲಿ ಹರಿಯುತ್ತದೆ. ನದಿಯನ್ನು ನಂಬಿಕೊಂಡು ರೈತರು ಕೃಷಿ ಮಾಡುತ್ತಾರೆ. ನದಿ ಅಕ್ಕಪಕ್ಕದ ಜಮೀನು ಸದ್ಯಕ್ಕೆ ಹಸಿರಿನಿಂದ ಕೂಡಿದ್ದರೂ, ಇನ್ನೇನು ಕೆಲ ದಿನದಲ್ಲಿ ಬೆಳೆಯೆಲ್ಲಾ ಒಣಗಿ ಹಾಳಾಗಲಿದೆ. ಏಕೆಂದರೆ ನದಿಯಲ್ಲಿ ನೀರು ಖಾಲಿಯಾಗಿದೆ. ಅಲ್ಲಲ್ಲಿ ತಗ್ಗು ಗುಂಡಿಗಳಲ್ಲಿ ಇದ್ದ ನೀರು ಕೂಡ ತಳಮಟ್ಟಕ್ಕೆ ಇಳಿದಿದೆ.

3 / 6
ಇನ್ನು ಇದಷ್ಟೇ ಅಲ್ಲದೆ ಕೂಡಲಸಂಗಮ ಪ್ರದೇಶದಲ್ಲೂ ಮಲಪ್ರಭಾ ನದಿ ಖಾಲಿಯಾಗಿದೆ. ಅಲ್ಲಿ ಕೂಡ ಕೇವಲ ತಗ್ಗು ಪ್ರದೇಶದಲ್ಲಿ ನೀರು ನಿಂತಿರೋದನ್ನು ಬಿಟ್ಟರೆ ಬಹುತೇಕ ನದಿ ಖಾಲಿಯಾಗಿದೆ. ನದಿ ಒಡಲು ಬಿರುಕು ಬಿಟ್ಟಿದ್ದು, ಜಲಕ್ಷಾಮ ಎದುರಾಗುವ ಮುನ್ಸೂಚನೆ ಕಾಣಿಸುತ್ತಿದೆ.

ಇನ್ನು ಇದಷ್ಟೇ ಅಲ್ಲದೆ ಕೂಡಲಸಂಗಮ ಪ್ರದೇಶದಲ್ಲೂ ಮಲಪ್ರಭಾ ನದಿ ಖಾಲಿಯಾಗಿದೆ. ಅಲ್ಲಿ ಕೂಡ ಕೇವಲ ತಗ್ಗು ಪ್ರದೇಶದಲ್ಲಿ ನೀರು ನಿಂತಿರೋದನ್ನು ಬಿಟ್ಟರೆ ಬಹುತೇಕ ನದಿ ಖಾಲಿಯಾಗಿದೆ. ನದಿ ಒಡಲು ಬಿರುಕು ಬಿಟ್ಟಿದ್ದು, ಜಲಕ್ಷಾಮ ಎದುರಾಗುವ ಮುನ್ಸೂಚನೆ ಕಾಣಿಸುತ್ತಿದೆ.

4 / 6
ಮಲಪ್ರಭಾ ನದಿ ಖಾಲಿಯಾಗುತ್ತಿರುವುದರಿಂದ ಜನ ಜಾನುವಾರುಗಳಿಗೆ, ಕೃಷಿಗೆ ನೀರಿನ ಸಮಸ್ಯೆ ಎದುರಾಗಲಿದೆ. ಜೊತೆಗೆ ಜಲಚರ ಜೀವಿಗಳಿಗೂ ಸಂಕಷ್ಟ ಎದುರಾಗಲಿದೆ. ಆದ್ದರಿಂದ ಹೆಚ್ಚಿನ ಪ್ರಮಾಣದ ನೀರನ್ನು ನವಿಲುತೀರ್ಥ ಜಲಾಶಯದಿಂದ ಹರಿಸು ಮೂಲಕ ರೈತರು, ಜಾನುವಾರುಗಳು, ಜಲಚರಗಳಿಗೆ ಅನುಕೂಲ ಕಲ್ಪಿಸುವಂತೆ ಆಗ್ರಹ ಕೇಳಿಬರುತ್ತಿದೆ.

ಮಲಪ್ರಭಾ ನದಿ ಖಾಲಿಯಾಗುತ್ತಿರುವುದರಿಂದ ಜನ ಜಾನುವಾರುಗಳಿಗೆ, ಕೃಷಿಗೆ ನೀರಿನ ಸಮಸ್ಯೆ ಎದುರಾಗಲಿದೆ. ಜೊತೆಗೆ ಜಲಚರ ಜೀವಿಗಳಿಗೂ ಸಂಕಷ್ಟ ಎದುರಾಗಲಿದೆ. ಆದ್ದರಿಂದ ಹೆಚ್ಚಿನ ಪ್ರಮಾಣದ ನೀರನ್ನು ನವಿಲುತೀರ್ಥ ಜಲಾಶಯದಿಂದ ಹರಿಸು ಮೂಲಕ ರೈತರು, ಜಾನುವಾರುಗಳು, ಜಲಚರಗಳಿಗೆ ಅನುಕೂಲ ಕಲ್ಪಿಸುವಂತೆ ಆಗ್ರಹ ಕೇಳಿಬರುತ್ತಿದೆ.

5 / 6
ಒಟ್ಟಿನಲ್ಲಿ ಬೇಸಿಗೆಯಲ್ಲಿ ಮಲಪ್ರಭಾ ನದಿ ಖಾಲಿಯಾಗಿದ್ದು, ನದಿ ತೀರದ ಜನರಿಗೆ ಸಂಕಷ್ಟ ತಂದೊಡ್ಡಿದೆ. ಈಗಾಗಲೇ ನವಿಲುತೀರ್ಥ ಜಲಾಶಯದಿಂದ ಹೆಚ್ಚಿನ ನೀರು ಹರಿಸಬೇಕೆಂಬ ಇವರ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತಾ ನೋಡಬೇಕು. 

ಒಟ್ಟಿನಲ್ಲಿ ಬೇಸಿಗೆಯಲ್ಲಿ ಮಲಪ್ರಭಾ ನದಿ ಖಾಲಿಯಾಗಿದ್ದು, ನದಿ ತೀರದ ಜನರಿಗೆ ಸಂಕಷ್ಟ ತಂದೊಡ್ಡಿದೆ. ಈಗಾಗಲೇ ನವಿಲುತೀರ್ಥ ಜಲಾಶಯದಿಂದ ಹೆಚ್ಚಿನ ನೀರು ಹರಿಸಬೇಕೆಂಬ ಇವರ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತಾ ನೋಡಬೇಕು. 

6 / 6

Published On - 11:04 am, Wed, 16 April 25

Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ