AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ ಬಂಡೀಪುರ; ತುಂಬಿದ ಕೆರೆ ಕಟ್ಟೆಗಳು, ಸ್ವಚ್ಛಂದದಿಂದ ವನ್ಯ ಜೀವಿಗಳ ಓಡಾಟ, ಫೋಟೋಸ್ ನೋಡಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯ ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ವರ್ಷ ಬರದಿಂದ ಒಣಗಿದ್ದ ಕಾಡು ಈ ಬಾರಿಯ ಮಳೆಗೆ ಹಚ್ಚ ಹಸಿರಾಗಿದೆ. ಹಸಿರು ಗಿಡ ಮರಗಳಿಂದ ಕಂಗೊಳಿಸುತ್ತಿದೆ.

ಸೂರಜ್ ಪ್ರಸಾದ್ ಎಸ್.ಎನ್
| Edited By: ಆಯೇಷಾ ಬಾನು|

Updated on: Aug 20, 2024 | 10:43 AM

Share
ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆ ಬಂಡೀಪುರಕ್ಕಿದೆ. ಕಳೆದ ವರ್ಷ ಬರದಿಂದ ಒಣಗಿದ್ದ ಕಾಡು ಈ ಬಾರಿಯ ಮಳೆಗೆ ಹಚ್ಚ ಹಸಿರಾಗಿದೆ. ಹಸಿರು ಗಿಡ ಮರಗಳಿಂದ ಕಂಗೊಳಿಸುತ್ತಿದೆ.

ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆ ಬಂಡೀಪುರಕ್ಕಿದೆ. ಕಳೆದ ವರ್ಷ ಬರದಿಂದ ಒಣಗಿದ್ದ ಕಾಡು ಈ ಬಾರಿಯ ಮಳೆಗೆ ಹಚ್ಚ ಹಸಿರಾಗಿದೆ. ಹಸಿರು ಗಿಡ ಮರಗಳಿಂದ ಕಂಗೊಳಿಸುತ್ತಿದೆ.

1 / 6
ಎತ್ತ ಕಣ್ಣಾಯಿಸಿದರೂ ಕಣ್ಣಿಗೆ ರಾಚೋ ಹಸಿರ ಕಂಪು. ಹಸಿರಿನ ಹೋದಿಕೆಯನ್ನ ಹೊದ್ದು ನಿಂತಿರುವ ಬೆಟ್ಟಗುಡ್ಡಗಳು. ತುಂಬಿದ ಕೆರೆಯಲ್ಲಿ ನೀರು ಕುಡಿಯುತ್ತಿರುವ ವನ್ಯ ಮೃಗಗಳು. ಸ್ವಚ್ಛಂದದಿಂದ ಓಡಾಡುತ್ತಿರುವ ಪ್ರಾಣಿಗಳು. ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ.

ಎತ್ತ ಕಣ್ಣಾಯಿಸಿದರೂ ಕಣ್ಣಿಗೆ ರಾಚೋ ಹಸಿರ ಕಂಪು. ಹಸಿರಿನ ಹೋದಿಕೆಯನ್ನ ಹೊದ್ದು ನಿಂತಿರುವ ಬೆಟ್ಟಗುಡ್ಡಗಳು. ತುಂಬಿದ ಕೆರೆಯಲ್ಲಿ ನೀರು ಕುಡಿಯುತ್ತಿರುವ ವನ್ಯ ಮೃಗಗಳು. ಸ್ವಚ್ಛಂದದಿಂದ ಓಡಾಡುತ್ತಿರುವ ಪ್ರಾಣಿಗಳು. ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ.

2 / 6
ರಾಜ್ಯದಲ್ಲೇ ಅತಿ ಹೆಚ್ಚು ಹುಲಿ ಆನೆಗಳನ್ನ ಹೊಂದಿರುವ ಏಕೈಕ ಟೈಗರ್ ರಿಸರ್ವ್ ಫಾರೆಸ್ಟ್ ಅಂದ್ರೆ ಅದು ಬಂಡೀಪುರ. ಕಳೆದ ವರ್ಷ ಮಳೆಯಿಲ್ಲದೆ ಕಾಡು ಸಂಪೂರ್ಣ ಬರುಡಾಗಿತ್ತು. ಕೆರೆ ಕಟ್ಟೆಗಳೆಲ್ಲ ಒಣಗಿ ಹೋಗಿತ್ತು. ಕಾಡು ಪ್ರಾಣಿಗಳ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿತ್ತು. ಆದ್ರೆ ಈ ಬಾರಿ ಸುರಿದ ಮುಂಗಾರು ಮಳೆಗೆ ಬಂಡೀಪುರ ಫುಲ್ ಗ್ರಿನೀಶ್ ಆಗಿದ್ದು ಭೂ ಲೋಕದ ಸ್ವರ್ಗದಂತೆ ಭಾಸವಾಗುತ್ತಿದೆ.

ರಾಜ್ಯದಲ್ಲೇ ಅತಿ ಹೆಚ್ಚು ಹುಲಿ ಆನೆಗಳನ್ನ ಹೊಂದಿರುವ ಏಕೈಕ ಟೈಗರ್ ರಿಸರ್ವ್ ಫಾರೆಸ್ಟ್ ಅಂದ್ರೆ ಅದು ಬಂಡೀಪುರ. ಕಳೆದ ವರ್ಷ ಮಳೆಯಿಲ್ಲದೆ ಕಾಡು ಸಂಪೂರ್ಣ ಬರುಡಾಗಿತ್ತು. ಕೆರೆ ಕಟ್ಟೆಗಳೆಲ್ಲ ಒಣಗಿ ಹೋಗಿತ್ತು. ಕಾಡು ಪ್ರಾಣಿಗಳ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿತ್ತು. ಆದ್ರೆ ಈ ಬಾರಿ ಸುರಿದ ಮುಂಗಾರು ಮಳೆಗೆ ಬಂಡೀಪುರ ಫುಲ್ ಗ್ರಿನೀಶ್ ಆಗಿದ್ದು ಭೂ ಲೋಕದ ಸ್ವರ್ಗದಂತೆ ಭಾಸವಾಗುತ್ತಿದೆ.

3 / 6
ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ನಲ್ಲಿ 150ಕ್ಕೂ ಹೆಚ್ಚು ಕೆರೆ ಕಟ್ಟೆಗಳಿವೆ. ಈ ಎಲ್ಲಾ ಕೆರೆಗಳು ಬರಗಾಲಕ್ಕೆ ಭಾಗಶಃ ಖಾಲಿಯಾಗಿತ್ತು. ಬಂಡೀಪುರದಲ್ಲಿರುವ ಹುಲಿ ಹಾಗೂ ಆನೆಗಳು ಬಂಡೀಪುರದಿಂದ ಕಬಿನಿ ಹಿನ್ನೀರಿನ ಕಡೆ ಮುಖ ಮಾಡಿದ್ವು. ದಾಹ ತೀರಿಸಿಕೊಳ್ಳಲು ಗುಳೆ ಹೋಗಿದ್ದ ಕಾಡು ಪ್ರಾಣಿಗಳು ಈಗ ಮತ್ತೆ ಬಂಡೀಪುರದತ್ತ ಹಿಂತಿರುಗುತ್ತಿವೆ.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ನಲ್ಲಿ 150ಕ್ಕೂ ಹೆಚ್ಚು ಕೆರೆ ಕಟ್ಟೆಗಳಿವೆ. ಈ ಎಲ್ಲಾ ಕೆರೆಗಳು ಬರಗಾಲಕ್ಕೆ ಭಾಗಶಃ ಖಾಲಿಯಾಗಿತ್ತು. ಬಂಡೀಪುರದಲ್ಲಿರುವ ಹುಲಿ ಹಾಗೂ ಆನೆಗಳು ಬಂಡೀಪುರದಿಂದ ಕಬಿನಿ ಹಿನ್ನೀರಿನ ಕಡೆ ಮುಖ ಮಾಡಿದ್ವು. ದಾಹ ತೀರಿಸಿಕೊಳ್ಳಲು ಗುಳೆ ಹೋಗಿದ್ದ ಕಾಡು ಪ್ರಾಣಿಗಳು ಈಗ ಮತ್ತೆ ಬಂಡೀಪುರದತ್ತ ಹಿಂತಿರುಗುತ್ತಿವೆ.

4 / 6
ಈ ಹಿನ್ನಲೆ ಸಫಾರಿಗೆ ಹೋದವರಿಗೂ ಆನೆ, ಹುಲಿ ಸೇರಿದಂತೆ ಕಾಡು ಪ್ರಾಣಿಗಳ ಸೈಟಿಂಗ್ ಕೂಡ ಚೆನ್ನಾಗಿ ಆಗ್ತಾಯಿದೆ. ಕೆರೆ ಕಟ್ಟೆಗಳು ತುಂಬಿ ಹಚ್ಚ ಹಸಿರಿನಿಂದ ಕೂಡಿದ ಪರಿಣಾಮ ವನ್ಯ ಮೃಗಗಳಿಗೂ ಆಹಾರ ಸಿಗುತ್ತಿದ್ದು ಕಾಡು ಪ್ರಾಣಿಗಳು ಸ್ವಚ್ಛಂದವಾಗಿ ಓಡಾಡುತ್ತಿವೆ.

ಈ ಹಿನ್ನಲೆ ಸಫಾರಿಗೆ ಹೋದವರಿಗೂ ಆನೆ, ಹುಲಿ ಸೇರಿದಂತೆ ಕಾಡು ಪ್ರಾಣಿಗಳ ಸೈಟಿಂಗ್ ಕೂಡ ಚೆನ್ನಾಗಿ ಆಗ್ತಾಯಿದೆ. ಕೆರೆ ಕಟ್ಟೆಗಳು ತುಂಬಿ ಹಚ್ಚ ಹಸಿರಿನಿಂದ ಕೂಡಿದ ಪರಿಣಾಮ ವನ್ಯ ಮೃಗಗಳಿಗೂ ಆಹಾರ ಸಿಗುತ್ತಿದ್ದು ಕಾಡು ಪ್ರಾಣಿಗಳು ಸ್ವಚ್ಛಂದವಾಗಿ ಓಡಾಡುತ್ತಿವೆ.

5 / 6
ಒಟ್ಟಾರೆ ಈ ಬಾರಿಯ ಉತ್ತಮ ಮಳೆಗೆ ಒಣಗಿ ಹೋಗಿದ್ದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಫುಲ್ ಗ್ರೀನಿಶ್ ಆಗಿದ್ದು ಪ್ರವಾಸಿಗರ ಪಾಲಿಗೆ ಬಂಡೀಪುರ ಭೂ ಲೋಕದ ಸ್ವರ್ಗದಂತೆ ಕಂಗೊಳಿಸುತ್ತಿದೆ.

ಒಟ್ಟಾರೆ ಈ ಬಾರಿಯ ಉತ್ತಮ ಮಳೆಗೆ ಒಣಗಿ ಹೋಗಿದ್ದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಫುಲ್ ಗ್ರೀನಿಶ್ ಆಗಿದ್ದು ಪ್ರವಾಸಿಗರ ಪಾಲಿಗೆ ಬಂಡೀಪುರ ಭೂ ಲೋಕದ ಸ್ವರ್ಗದಂತೆ ಕಂಗೊಳಿಸುತ್ತಿದೆ.

6 / 6
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us