AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷದ ಮೊದಲ ಮಳೆಗೆ ಬಂಡೀಪುರ ಹಸಿರುಮಯ: ಕೆರೆಗಳು ಭರ್ತಿ, ಸಫಾರಿಗೆ ಒಳ್ಳೆ ಸಮಯ

ಈಗ ಭಾರೀ ಮಳೆಯಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಸಿರಿನಿಂದ ತುಂಬಿದೆ. ಬರಿದಾಗಿದ್ದ ಕೆರೆ-ಕಟ್ಟೆಗಳು ಮತ್ತೆ ತುಂಬಿವೆ, ಮತ್ತು ಕಾಡು ಪ್ರಾಣಿಗಳು ಮರಳಿ ಬಂದಿವೆ. ಪೂರ್ವ ಮುಂಗಾರು ಮಳೆಯು ಬಂಡೀಪುರಕ್ಕೆ ಜೀವ ತುಂಬಿದೆ. ಇದು ಸಫಾರಿ ಪ್ರವಾಸಕ್ಕೆ ಅತ್ಯುತ್ತಮ ಸಮಯವಾಗಿದೆ. ಕಾಡು ಪ್ರಾಣಿಗಳಿಗೆ ನೀರಿನ ಸಮಸ್ಯೆ ದೂರವಾಗಿದೆ.

ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on: Jun 01, 2025 | 4:29 PM

Share
ಕಳೆದೊಂದು ವರ್ಷದಿಂದ ಸಕಾಲಕ್ಕೆ ಮಳೆಯಾಗದ ಹಿನ್ನೆಲೆಯಲ್ಲಿ ತೀವ್ರ ಬರದಿಂದ ಬಂಡೀಪುರ ಕಾಡು ಸಂಪೂರ್ಣವಾಗಿ ಒಣಗಿ ಹೋಗಿತ್ತು. ಆದರೆ, ಪೂರ್ವ ಮುಂಗಾರು ಮಳೆಗೆ ಬಂಡೀಪುರ ಸಂಪೂರ್ಣ ಹಸಿರುಮಯವಾಗಿದ್ದು, ಕೆರೆ-ಕಟ್ಟೆಗಳಿಗೆ ಜೀವ ಕಳೆ ಬಂದಿದೆ. ಕಾಡು ಪ್ರಾಣಿಗಳಿಗಿದ್ದ ಕಂಟಕ ಈಗ ದೂರವಾಗಿದೆ.

ಕಳೆದೊಂದು ವರ್ಷದಿಂದ ಸಕಾಲಕ್ಕೆ ಮಳೆಯಾಗದ ಹಿನ್ನೆಲೆಯಲ್ಲಿ ತೀವ್ರ ಬರದಿಂದ ಬಂಡೀಪುರ ಕಾಡು ಸಂಪೂರ್ಣವಾಗಿ ಒಣಗಿ ಹೋಗಿತ್ತು. ಆದರೆ, ಪೂರ್ವ ಮುಂಗಾರು ಮಳೆಗೆ ಬಂಡೀಪುರ ಸಂಪೂರ್ಣ ಹಸಿರುಮಯವಾಗಿದ್ದು, ಕೆರೆ-ಕಟ್ಟೆಗಳಿಗೆ ಜೀವ ಕಳೆ ಬಂದಿದೆ. ಕಾಡು ಪ್ರಾಣಿಗಳಿಗಿದ್ದ ಕಂಟಕ ಈಗ ದೂರವಾಗಿದೆ.

1 / 6
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದೊಂದು ವರ್ಷದಿಂದ ಸಕಾಲಕ್ಕೆ ಮಳೆಯಾಗಿರಲಿಲ್ಲ. ಕಾಡು ಒಣಗಿತ್ತು. ಕೆರೆ ಕಟ್ಟೆಗಳೆಲ್ಲ ಬರಿದಾಗಿದ್ದವು. ಇದರಿಂದ ಕಾಡು ಪ್ರಾಣಿಗಳಿಗೆ ಸಂಕಷ್ಟ ಎದುರಾಗಿತ್ತು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದೊಂದು ವರ್ಷದಿಂದ ಸಕಾಲಕ್ಕೆ ಮಳೆಯಾಗಿರಲಿಲ್ಲ. ಕಾಡು ಒಣಗಿತ್ತು. ಕೆರೆ ಕಟ್ಟೆಗಳೆಲ್ಲ ಬರಿದಾಗಿದ್ದವು. ಇದರಿಂದ ಕಾಡು ಪ್ರಾಣಿಗಳಿಗೆ ಸಂಕಷ್ಟ ಎದುರಾಗಿತ್ತು.

2 / 6
ಆದರೆ, ಈ ವರ್ಷ ಭಾರಿ ಪೂರ್ವ ಮುಂಗಾರು ಮಳೆಯಾಗಿದೆ. ಈ ಹಿನ್ನಲೆ ಬಂಡೀಪುರ ಅಭಯಾರಣ್ಯ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇದು ಸಫಾರಿಗೆ ಸೂಕ್ತ ಸಮಯವಾಗಿದೆ.

ಆದರೆ, ಈ ವರ್ಷ ಭಾರಿ ಪೂರ್ವ ಮುಂಗಾರು ಮಳೆಯಾಗಿದೆ. ಈ ಹಿನ್ನಲೆ ಬಂಡೀಪುರ ಅಭಯಾರಣ್ಯ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇದು ಸಫಾರಿಗೆ ಸೂಕ್ತ ಸಮಯವಾಗಿದೆ.

3 / 6
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 400 ಕ್ಕೂ ಅಧಿಕ ಕೆರೆ ಕಟ್ಟೆಗಳಿವೆ. ಕಳೆದ ವರ್ಷ ಭಾರಿ ಬರಗಾಲ ಎದುರಾಗಿದ್ದು ಶೇ 90 ರಷ್ಟು ಕೆರೆಗಳು ಬತ್ತಿ ಹೋಗಿದ್ದವು. ಬೆರೆಳೆಣಿಕೆಯಷ್ಟು ಕೆರೆಗಳಿಗೆ ಮಾತ್ರ ಸೋಲಾರ್ ಬೋರ್​ನಿಂದ ನೀರು ತುಂಬಿಸುವ ಕಾರ್ಯವನ್ನು ಅರಣ್ಯಾಧಿಕಾರಿಗಳು ಮಾಡಿದ್ದರು. ಆದರೆ, ಅದು ಅಷ್ಟರ ಮಟ್ಟಿಗೆ ಯಶಸ್ವಿ ಕೂಡ ಆಗಿರಲಿಲ್ಲ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 400 ಕ್ಕೂ ಅಧಿಕ ಕೆರೆ ಕಟ್ಟೆಗಳಿವೆ. ಕಳೆದ ವರ್ಷ ಭಾರಿ ಬರಗಾಲ ಎದುರಾಗಿದ್ದು ಶೇ 90 ರಷ್ಟು ಕೆರೆಗಳು ಬತ್ತಿ ಹೋಗಿದ್ದವು. ಬೆರೆಳೆಣಿಕೆಯಷ್ಟು ಕೆರೆಗಳಿಗೆ ಮಾತ್ರ ಸೋಲಾರ್ ಬೋರ್​ನಿಂದ ನೀರು ತುಂಬಿಸುವ ಕಾರ್ಯವನ್ನು ಅರಣ್ಯಾಧಿಕಾರಿಗಳು ಮಾಡಿದ್ದರು. ಆದರೆ, ಅದು ಅಷ್ಟರ ಮಟ್ಟಿಗೆ ಯಶಸ್ವಿ ಕೂಡ ಆಗಿರಲಿಲ್ಲ.

4 / 6
ನೀರಿನ ಅಭಾವದಿಂದ ಕಾಡು ಪ್ರಾಣಿಗಳೆಲ್ಲ ನೀರು ಅರಸಿ ಬಂಡೀಪುರ ತೊರೆದಿದ್ದವು. ಆದರೆ, ವರ್ಷದ ಮೊದಲ ಮಳೆ ಉತ್ತಮವಾಗಿದ್ದು ಕೆರೆ ಕಟ್ಟೆಗಳು ತುಂಬುತ್ತಿದ್ದು ಜೀವ ಕಳೆ ಮರುಕಳಿಸಿದೆ. ಪ್ರಾಣಿಗಳೆಲ್ಲ ಮತ್ತೆ ಬಂಡೀಪುರ ಅರಣ್ಯಕ್ಕೆ ಆಗಮಿಸಿವೆ.

ನೀರಿನ ಅಭಾವದಿಂದ ಕಾಡು ಪ್ರಾಣಿಗಳೆಲ್ಲ ನೀರು ಅರಸಿ ಬಂಡೀಪುರ ತೊರೆದಿದ್ದವು. ಆದರೆ, ವರ್ಷದ ಮೊದಲ ಮಳೆ ಉತ್ತಮವಾಗಿದ್ದು ಕೆರೆ ಕಟ್ಟೆಗಳು ತುಂಬುತ್ತಿದ್ದು ಜೀವ ಕಳೆ ಮರುಕಳಿಸಿದೆ. ಪ್ರಾಣಿಗಳೆಲ್ಲ ಮತ್ತೆ ಬಂಡೀಪುರ ಅರಣ್ಯಕ್ಕೆ ಆಗಮಿಸಿವೆ.

5 / 6
ಒಟ್ಟಾರೆಯಾಗಿ ಮೊದಲ ಮಳೆ ಉತ್ತಮವಾಗಿದ್ದು, ಮೂಲೆ ಹೊಳೆ ಸೇರಿದಂತೆ ತಮಿಳುನಾಡು ಹಾಗೂ ಕೇರಳ ಗಡಿಯಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು ಕಾಡು ಹಚ್ಚ ಹಸಿರಾಗಿ ಕಂಗೊಳಿಸುತ್ತಿದೆ. ಪ್ರಾಣಿಗಳಿಗಿದ್ದ ನೀರಿನ ಸಮಸ್ಯೆ ದೂರವಾಗಿದೆ.

ಒಟ್ಟಾರೆಯಾಗಿ ಮೊದಲ ಮಳೆ ಉತ್ತಮವಾಗಿದ್ದು, ಮೂಲೆ ಹೊಳೆ ಸೇರಿದಂತೆ ತಮಿಳುನಾಡು ಹಾಗೂ ಕೇರಳ ಗಡಿಯಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು ಕಾಡು ಹಚ್ಚ ಹಸಿರಾಗಿ ಕಂಗೊಳಿಸುತ್ತಿದೆ. ಪ್ರಾಣಿಗಳಿಗಿದ್ದ ನೀರಿನ ಸಮಸ್ಯೆ ದೂರವಾಗಿದೆ.

6 / 6
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು