Bengaluru-Chennai expressway: ಮಹತ್ವದ ಅಪ್​ಡೇಟ್​ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

Edited By:

Updated on: Jul 28, 2023 | 8:39 PM

ಬೆಂಗಳೂರು ಮತ್ತು ಚೆನ್ನೈ ಸಂಪರ್ಕ ಕಲ್ಪಿಸುವ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಬಗ್ಗೆ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.

1 / 6
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಯೋಜನೆಯ ಕಾಮಗಾರಿ ಚಿತ್ರಗಳನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಯೋಜನೆಯ ಕಾಮಗಾರಿ ಚಿತ್ರಗಳನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

2 / 6
ಬೆಂಗಳೂರು-ಮಾಲೂರು ಸೆಕ್ಷನ್‌ನ ಕೆಲಸಗಳು ಹೇಗೆ ನಡೆಯುತ್ತಿವೆ? ಎಂದು ಸಚಿವ ನಿತಿನ್ ಗಡ್ಕರಿ  ಅವರು ವಿವರ ನೀಡಿದ್ದು, ಯೋಜನೆಯ ಇತರ ಮಾಹಿತಿಯನ್ನು ಫೋಟೋಗಳ ಸಮೇತ ಹಂಚಿಕೊಂಡಿದ್ದಾರೆ.

ಬೆಂಗಳೂರು-ಮಾಲೂರು ಸೆಕ್ಷನ್‌ನ ಕೆಲಸಗಳು ಹೇಗೆ ನಡೆಯುತ್ತಿವೆ? ಎಂದು ಸಚಿವ ನಿತಿನ್ ಗಡ್ಕರಿ ಅವರು ವಿವರ ನೀಡಿದ್ದು, ಯೋಜನೆಯ ಇತರ ಮಾಹಿತಿಯನ್ನು ಫೋಟೋಗಳ ಸಮೇತ ಹಂಚಿಕೊಂಡಿದ್ದಾರೆ.

3 / 6
ಪ್ರಸ್ತುತ 1160 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಮತ್ತು ಮಾಲೂರು ನಡುವಿನ ಕಾಮಗಾರಿ ನಡೆಯುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

ಪ್ರಸ್ತುತ 1160 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಮತ್ತು ಮಾಲೂರು ನಡುವಿನ ಕಾಮಗಾರಿ ನಡೆಯುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

4 / 6
 ಭಾರತ್ ಮಾಲಾ ಪರಿಯೋಜನೆ ಅಡಿ ಕೈಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ಮೂರು ರಾಜ್ಯಗಳಲ್ಲಿ ಹಾದು ಹೋಗಲಿದೆ.

ಭಾರತ್ ಮಾಲಾ ಪರಿಯೋಜನೆ ಅಡಿ ಕೈಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ಮೂರು ರಾಜ್ಯಗಳಲ್ಲಿ ಹಾದು ಹೋಗಲಿದೆ.

5 / 6
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ದೇಶಾದ್ಯಂತ ತಡೆರಹಿತ ಮತ್ತು ಪರಿಸರ ಪೂರಕವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಬದ್ಧರಾಗಿದ್ದೇವೆ ಎಂದು ನಿತಿನ್ ಗಡ್ಕರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ದೇಶಾದ್ಯಂತ ತಡೆರಹಿತ ಮತ್ತು ಪರಿಸರ ಪೂರಕವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಬದ್ಧರಾಗಿದ್ದೇವೆ ಎಂದು ನಿತಿನ್ ಗಡ್ಕರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

6 / 6
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ ಪೂರ್ಣಗೊಂಡರೆ ಬೆಂಗಳೂರು-ಚೆನ್ನೈ ನಡುವಿನ ಪ್ರಯಾಣದ ಅವಧಿ ಕೇವಲ 3 ಗಂಟೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ ಪೂರ್ಣಗೊಂಡರೆ ಬೆಂಗಳೂರು-ಚೆನ್ನೈ ನಡುವಿನ ಪ್ರಯಾಣದ ಅವಧಿ ಕೇವಲ 3 ಗಂಟೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Published On - 9:30 am, Tue, 25 July 23

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us