Bangalore Rain: ಬೆಂಗಳೂರು ಮಳೆ ಅವಾಂತರದ ದೃಶ್ಯಾವಳಿಗಳು

ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಆರಂಭವಾದ ಮಳೆಯ ಅಬ್ಬರ ಗುರುವಾರ ಬೆಳಗ್ಗೆ ಹೊತ್ತಿಗೆ ತಗ್ಗಿತು. ಸುರಿದ ಮಳೆಗೆ ಒಂದಷ್ಟು ಪ್ರದೇಶಗಳು ಜಲಾವೃತಗೊಂಡವು.

| Updated By: Rakesh Nayak Manchi

Updated on:Oct 20, 2022 | 9:15 AM

ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಗೆ ವಿವಿಧ ಕಡೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಅಂಡರ್​ಪಾಸ್ ರಸ್ತೆಗಳು ಮತ್ತು ರಸ್ತೆಗಳಲ್ಲಿ ನದಿಯಂತೆ ಮಳೆ ನೀರು ಹರಿದು ಹೋಗಿದೆ. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ ಬಳಿ ಮತ್ತು ವಿಲ್ಸನ್​ಗಾರ್ಡನ್ ರಸ್ತೆಗಳಲ್ಲಿ ನೀರು ತುಂಬಿದ ಹರಿದಿದೆ. ಇದರಿಂದಾಗಿ ವಾಹನ ಸವಾರರ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಯಿತು. (ಫೋಟೋ ಕ್ರೆಡಿಟ್: bineetmishra/Twitter)

Bangalore Rain Heavy rain in Bangalore Many areas are flooded bangalore news in Kannada

1 / 8
ಸೇಂಟ್​ ಜೋಸೆಫ್​ ಕಾಲೇಜು ಬಳಿ ರಸ್ತೆಗಳು ಜಲಾವೃತಗೊಂಡು ಫುಟ್​ಪಾತ್​ ಮಟ್ಟಕ್ಕೆ ನೀರು ಹರಿದಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು. ಬೆಂಗಳೂರು ಮಳೆಯ ಬಗ್ಗೆ ನಗರವಾಸಿಗಳು ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. (ಫೋಟೋ ಕ್ರೆಡಿಟ್: mayurchannagere/Twitter)

Bangalore Rain Heavy rain in Bangalore Many areas are flooded bangalore news in Kannada

2 / 8
Bangalore Rain Heavy rain in Bangalore Many areas are flooded bangalore news in Kannada

ಅರ್ಧಗಂಟೆ ಮಳೆಗೆ ಸುಲ್ತಾನ್ ಪೇಟೆ ಮುಖ್ಯರಸ್ತೆಯ ಸ್ಥಿತಿ ಇದು ಎನ್ನುತ್ತಾ ಕಮ್ರಾನ್ ಎಂಬವರು ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಈ ಬಗ್ಗೆಯೂ ಸಿಎಂ ತನಿಖೆಗೆ ಆದೇಶಿಸಬೇಕು ಎಂದು ಬರೆದುಕೊಂಡಿದ್ದಾರೆ.

3 / 8
Bangalore Rain Heavy rain in Bangalore Many areas are flooded bangalore news in Kannada

ಶಿವಾಜಿನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಯಲ್ಲಿ ರಭಸದಿಂದ ನೀರು ಹರಿದು ಹೋಗಿದ್ದು, ಪಾರ್ಕ್​ ಮಾಡಿದ್ದ ದ್ವಿಚಕ್ರ ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಈ ವೇಳೆ ರಸ್ತೆಗಿಳಿದ ಸವಾರರು ಮತ್ತು ಸಾರ್ವಜನಿಕರು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವಾಹನಗಳನ್ನು ತಡೆದರು. (ಕ್ರೆಡಿಟ್: Kamran/Twitter)

4 / 8
Bangalore Rain Heavy rain in Bangalore Many areas are flooded bangalore news in Kannada

ಎಚ್​ಎಸ್​ಆರ್ ಲೇಔಟ್​, ಬೊಮ್ಮನಹಳ್ಳಿಯಲ್ಲಿಯೂ ಮಳೆರಾಯ ಅವಾಂತರ ಸೃಷ್ಟಿಸಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವ ವಿಡಿಯೋವನ್ನು Dr Karthik Narayanan ಎಂಬವರು ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 / 8
Bangalore Rain Heavy rain in Bangalore Many areas are flooded bangalore news in Kannada

ಅಪಾರ್ಟ್​ಮೆಂಟ್ ಆವರಣದಲ್ಲಿ ತುಂಬಿದ ನೀರಿನ ಫೋಟೋ ಮತ್ತು ವಿಡಿಯೋವನ್ನು KismiBar ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

6 / 8
Bangalore Rain Heavy rain in Bangalore Many areas are flooded bangalore news in Kannada

ಮಳೆಯ ಅಬ್ಬರಕ್ಕೆ ರಸ್ತೆಗಳಲ್ಲಿ ನೀರು ತುಂಬಿಕೊಂಡು ನದಿಯಂತೆ ಹರಿಯುತ್ತಿರುವ ದೃಶ್ಯವನ್ನು ಸೆರೆ ಹಿಡಿದು HomelanderBale ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

7 / 8
Bangalore Rain Heavy rain in Bangalore Many areas are flooded bangalore news in Kannada

ಇನ್ನೊಂದೆಡೆ ಸುರಿದ ಮಳೆಗೆ ಪಾರ್ಕ್​ ಮಾಡಿದ್ದ ಕಾರುಗಳ ಮೇಲೆ ಮರ ಉರುಳಿ ಬಿದ್ದಿದ್ದು, ನಾಲ್ಕೈದು ಕಾರುಗಳ ಮೇಲೆ ತಡೆಗೋಡೆ ಬಿದ್ದು ಹಾನಿಗೊಂಡಿವೆ. (ಕ್ರೆಡಿಟ್: Manoj Kumar/Twitter)

8 / 8

Published On - 9:15 am, Thu, 20 October 22

Follow us
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ