AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರು ಮಳೆ ಸೃಷ್ಟಿಸಿದ ಅಧ್ವಾನ ಒಂದೆರಡಲ್ಲ; ಎಲ್ಲೆಲ್ಲಿ ಏನೇನಾಯ್ತು ನೋಡಿ!

ಬೆಂಗಳೂರು, ಮೇ 19: ಶನಿವಾರ ರಾತ್ರಿ ಸುರಿದ ಭಾರಿ ಮಳೆಯ ಆಘಾತದಿಂದ ಚೇತರಿಸಿಕೊಳ್ಳುವುದಕ್ಕೆ ಹೆಣಗಾಡುತ್ತಿದ್ದ ಬೆಂಗಳೂರಿಗೆ ಭಾನುವಾರ ರಾತ್ರಿ ಮತ್ತೆ ವರುಣಾಘಾತವಾಗಿದೆ. ಶನಿವಾರದ ಮಳೆಗೆ ಕಾವೇರಿ ನಗರದ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುವಂತಾಗಿತ್ತು. ಸಾಯಿ ಲೇಔಟ್​​ಗೆ ಜಲ ಕಂಟಕ ಎದುರಾಗಿತ್ತು. ಭಾನುವಾರ ರಾತ್ರಿ ಕೂಡ ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಜಯನಗರ, ವಿಜಯನಗರ, ಚಾಮರಾಜಪೇಟೆ ಸೇರಿದಂತೆ ಬೆಂಗಳೂರಿನ ಅನೇಕ ಕಡೆಗಳಲ್ಲಿ ವರ್ಷಧಾರೆ ಸುರಿದಿದೆ.

ಗಣಪತಿ ಶರ್ಮಾ
|

Updated on: May 19, 2025 | 7:39 AM

Share
ಭಾನುವಾರ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಅನೇಕ ಕಡೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಗಿರುವ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶಗಳನ್ನು ಪ್ರಕಟಿಸಿ ವಿವರಗಳನ್ನು ನೀಡಿದ್ದಾರೆ. ಭಾನುವಾರ ರಾತ್ರಿ ಸುಮಾರು 8 ರಿಂದ 9 ತಾಸು ಮಳೆಯಾಗಿದೆ.

ಭಾನುವಾರ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಅನೇಕ ಕಡೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಗಿರುವ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶಗಳನ್ನು ಪ್ರಕಟಿಸಿ ವಿವರಗಳನ್ನು ನೀಡಿದ್ದಾರೆ. ಭಾನುವಾರ ರಾತ್ರಿ ಸುಮಾರು 8 ರಿಂದ 9 ತಾಸು ಮಳೆಯಾಗಿದೆ.

1 / 6
ಭಾನುವಾರ ತಡರಾತ್ರಿ 1.30 ರ ನಂತರ ಪ್ರಾರಂಭವಾದ ಮಳೆ ಮುಂಜಾನೆ ವರೆಗೂ ಸುರಿದಿದೆ. ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಭಾನುವಾರ ತಡರಾತ್ರಿ 1.30 ರ ನಂತರ ಪ್ರಾರಂಭವಾದ ಮಳೆ ಮುಂಜಾನೆ ವರೆಗೂ ಸುರಿದಿದೆ. ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.

2 / 6
ತಡರಾತ್ರಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಸಿಟಿ ಮಾರ್ಕೆಟ್, ದಕ್ಷಿಣ ಮತ್ತು ನೈಋತ್ಯ ಬೆಂಗಳೂರಿನ ಕೆಲವು ಭಾಗಗಳಲ್ಲಿ ಮುಂಜಾನೆಯೇ ಸಂಚಾರಕ್ಕೆ ಅಡಚಣೆಯಾಯಿತು.

ತಡರಾತ್ರಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಸಿಟಿ ಮಾರ್ಕೆಟ್, ದಕ್ಷಿಣ ಮತ್ತು ನೈಋತ್ಯ ಬೆಂಗಳೂರಿನ ಕೆಲವು ಭಾಗಗಳಲ್ಲಿ ಮುಂಜಾನೆಯೇ ಸಂಚಾರಕ್ಕೆ ಅಡಚಣೆಯಾಯಿತು.

3 / 6
ರಾತ್ರಿ ಸುರಿದ ಮಳೆ ಬ್ರ್ಯಾಂಡ್ ಬೆಂಗಳೂರಿನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ರಾಜಧಾನಿಯ ಹಲವೆಡೆ ಮಳೆಗೆ ಅವಾಂತರಗಳ ಸರಮಾಲೆಯೇ ಸೃಷ್ಟಿಯಾಗಿವೆ. ಪ್ರತಿ  ಬಾರಿ ಮಳೆ ಬಂದಾಗಲೂ ಕೆರೆಯಂತಾಗುವ ಸಾಯಿಲೇಔಟ್​ನಲ್ಲಿ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.

ರಾತ್ರಿ ಸುರಿದ ಮಳೆ ಬ್ರ್ಯಾಂಡ್ ಬೆಂಗಳೂರಿನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ರಾಜಧಾನಿಯ ಹಲವೆಡೆ ಮಳೆಗೆ ಅವಾಂತರಗಳ ಸರಮಾಲೆಯೇ ಸೃಷ್ಟಿಯಾಗಿವೆ. ಪ್ರತಿ ಬಾರಿ ಮಳೆ ಬಂದಾಗಲೂ ಕೆರೆಯಂತಾಗುವ ಸಾಯಿಲೇಔಟ್​ನಲ್ಲಿ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.

4 / 6
ಗೊರಗುಂಟೆಪಾಳ್ಯ, ಹೆಬ್ಬಾಳ ಸುತ್ತಮುತ್ತ ರಸ್ತೆಗಳಲ್ಲಿ ಆಳವಾದ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ಜೆಸಿ ರಸ್ತೆಯಲ್ಲಿಯೂ ಹೊಂಡಗುಂಡಿಗಳಿಂದಾಗಿ ವಾಹನ ಸಂಚಾರ ನರಕವಾಗಿದೆ. ಮಳೆಯ ಅಬ್ಬರಕ್ಕೆ ಬಿಬಿಎಂಪಿಯ ಕಳಪೆ ಕಾಮಗಾರಿ ಬಟಾಬಯಲಾಗಿದೆ.

ಗೊರಗುಂಟೆಪಾಳ್ಯ, ಹೆಬ್ಬಾಳ ಸುತ್ತಮುತ್ತ ರಸ್ತೆಗಳಲ್ಲಿ ಆಳವಾದ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ಜೆಸಿ ರಸ್ತೆಯಲ್ಲಿಯೂ ಹೊಂಡಗುಂಡಿಗಳಿಂದಾಗಿ ವಾಹನ ಸಂಚಾರ ನರಕವಾಗಿದೆ. ಮಳೆಯ ಅಬ್ಬರಕ್ಕೆ ಬಿಬಿಎಂಪಿಯ ಕಳಪೆ ಕಾಮಗಾರಿ ಬಟಾಬಯಲಾಗಿದೆ.

5 / 6
ಕೇವಲ ಒಂದೆರಡು ದಿನಗಳ ಮಳೆ ಬೆಂಗಳೂರಿನ ಜನರು ನರಕ ನೋಡುವಂತೆ ಮಾಡಿಬಿಟ್ಟಿದೆ. ಇತ್ತ ಬ್ರ್ಯಾಂಡ್ ಬೆಂಗಳೂರು, ಗ್ರೇಟರ್ ಬೆಂಗಳೂರು ಎಂದು ಜಪ ಮಾಡುತ್ತಿರುವ ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಮಳೆಗಾಲದ ಸಿದ್ಧತೆ ಮಾಡಿಕೊಳ್ಳದಿರುವುದು ಮಳೆ ಸೃಷ್ಟಿಸಿದ ಅವಾಂತರಗಳಿಂದ ಬಟಾಬಯಲಾಗಿದೆ. ಮಳೆಗಾಲ ಹತ್ತಿರವಾಗುತ್ತದ್ದು, ವರುಣನ ಅಬ್ಬರ ರಾಜಧಾನಿಯಲ್ಲಿ ಇನ್ನೇನೆಲ್ಲ ಅವಾಂತರಗಳನ್ನ ಸೃಷ್ಟಿಸುತ್ತದೆಯೋ ಎಂಬುದನ್ನು ಕಾದುನೋಡಬೇಕಿದೆ.

ಕೇವಲ ಒಂದೆರಡು ದಿನಗಳ ಮಳೆ ಬೆಂಗಳೂರಿನ ಜನರು ನರಕ ನೋಡುವಂತೆ ಮಾಡಿಬಿಟ್ಟಿದೆ. ಇತ್ತ ಬ್ರ್ಯಾಂಡ್ ಬೆಂಗಳೂರು, ಗ್ರೇಟರ್ ಬೆಂಗಳೂರು ಎಂದು ಜಪ ಮಾಡುತ್ತಿರುವ ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಮಳೆಗಾಲದ ಸಿದ್ಧತೆ ಮಾಡಿಕೊಳ್ಳದಿರುವುದು ಮಳೆ ಸೃಷ್ಟಿಸಿದ ಅವಾಂತರಗಳಿಂದ ಬಟಾಬಯಲಾಗಿದೆ. ಮಳೆಗಾಲ ಹತ್ತಿರವಾಗುತ್ತದ್ದು, ವರುಣನ ಅಬ್ಬರ ರಾಜಧಾನಿಯಲ್ಲಿ ಇನ್ನೇನೆಲ್ಲ ಅವಾಂತರಗಳನ್ನ ಸೃಷ್ಟಿಸುತ್ತದೆಯೋ ಎಂಬುದನ್ನು ಕಾದುನೋಡಬೇಕಿದೆ.

6 / 6
Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ