Bangalore Rains: ಬೆಂಗಳೂರಿನಲ್ಲಿ ಮಳೆ ಅವಾಂತರ ಒಂದೇ, ಎರಡೇ… ಇಲ್ಲಿವೆ ಫೋಟೊಸ್

|

Updated on: Oct 21, 2024 | 2:32 PM

ಬೆಂಗಳೂರು, ಅಕ್ಟೋಬರ್ 21: ಮುಳುಗಿದ ಬೈಕ್​ಗಳು, ನಿವಾಸಿಗಳು ಮನೆಯಲ್ಲೇ ಲಾಕ್​, ರಸ್ತೆ ತುಂಬಾ ನೀರಿನ ಹರಿವು, ಅದರಲ್ಲೇ ಬೈಕ್, ಆಟೋ ತಳ್ಳಿಕೊಂಡು ಸಾಗುತ್ತಿರುವ ಸವಾರರು! ಈ ದೃಶ್ಯಗಳೆಲ್ಲ ಕಂಡುಬಂದಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ. ಭಾನುವಾರ ರಾತ್ರಿ, ಸೋಮವಾರ ಬೆಳಗ್ಗೆ ಸುರಿದ ಭಾರಿ ಮಳೆ ಬೆಂಗಳೂರು ಜನರನ್ನು ಅಕ್ಷರಶಃ ಕಂಗಾಲಾಗಿಸಿತ್ತು.

1 / 5
ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಮಳೆ ಅವಾಂತರದಿಂದಾಗಿ ಶಾಲೆಗೆ ಜಲದಿಗ್ಬಂಧನ ಉಂಟಾಯಿತು. 10ಕ್ಕೂ ಹೆಚ್ಚು ಬಸ್​​ಗಳು ಮುಳುಗಡೆಯಾದವು. ಮಳೆಯಿಂದಾಗಿ ಫ್ರೀಡಂ ಶಾಲೆ ಸೇರಿದಂತೆ ಸುತ್ತ ಮುತ್ತ ಕೆರೆಯಂತಾಗಿತ್ತು. ಶಾಲೆ ಹೊರಗೆ ನಿಂತಿರುವ ಬಸ್​ಗಳು ಕೂಡ ನೀರುಪಾಲಾದವು.

ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಮಳೆ ಅವಾಂತರದಿಂದಾಗಿ ಶಾಲೆಗೆ ಜಲದಿಗ್ಬಂಧನ ಉಂಟಾಯಿತು. 10ಕ್ಕೂ ಹೆಚ್ಚು ಬಸ್​​ಗಳು ಮುಳುಗಡೆಯಾದವು. ಮಳೆಯಿಂದಾಗಿ ಫ್ರೀಡಂ ಶಾಲೆ ಸೇರಿದಂತೆ ಸುತ್ತ ಮುತ್ತ ಕೆರೆಯಂತಾಗಿತ್ತು. ಶಾಲೆ ಹೊರಗೆ ನಿಂತಿರುವ ಬಸ್​ಗಳು ಕೂಡ ನೀರುಪಾಲಾದವು.

2 / 5
ಜೆಜೆ ನಗರದ ವಿಎಸ್​ ಗಾರ್ಡನ್​​ನಲ್ಲಿಯೂ ನಿವಾಸಿಗಳ ಬದುಕೇ ನರಕಮಯವಾಯಿತು. ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಕೊಳಚೆ ನೀರು ಹೊರಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸಿತು.

ಜೆಜೆ ನಗರದ ವಿಎಸ್​ ಗಾರ್ಡನ್​​ನಲ್ಲಿಯೂ ನಿವಾಸಿಗಳ ಬದುಕೇ ನರಕಮಯವಾಯಿತು. ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಕೊಳಚೆ ನೀರು ಹೊರಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸಿತು.

3 / 5
ಕೋರಮಂಗಲದಲ್ಲಿ ಮುಖ್ಯರಸ್ತೆಗಳೇ ಹಳ್ಳ, ಕೊಳ್ಳಗಳಾಗಿವೆ. ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಇಷ್ಟೇ ಅಲ್ಲ ನೆಟ್​ಬಾಲ್ ಕ್ರೀಡಾಂಗಣ ಜಲಾವೃತ ಆಗಿದ್ದರಿಂದದ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.

ಕೋರಮಂಗಲದಲ್ಲಿ ಮುಖ್ಯರಸ್ತೆಗಳೇ ಹಳ್ಳ, ಕೊಳ್ಳಗಳಾಗಿವೆ. ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಇಷ್ಟೇ ಅಲ್ಲ ನೆಟ್​ಬಾಲ್ ಕ್ರೀಡಾಂಗಣ ಜಲಾವೃತ ಆಗಿದ್ದರಿಂದದ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.

4 / 5
ಭಾರಿ ಮಳೆಗೆ ಸರ್ಜಾಪುರ-ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿತು. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆ ಕೆರೆಯಂತಾಯಿತು. ಇದರಿಂದ ಕಿಲೋ ಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್​ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಭಾರಿ ಮಳೆಗೆ ಸರ್ಜಾಪುರ-ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿತು. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆ ಕೆರೆಯಂತಾಯಿತು. ಇದರಿಂದ ಕಿಲೋ ಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್​ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

5 / 5
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ಆಗಿವೆ. ಹೀಗಾಗಿ ಮಳೆಹಾನಿ ಪ್ರದೇಶಕ್ಕೆ ವಿಪಕ್ಷ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್​ ಬೋರ್ಡ್ ಜಂಕ್ಷನ್​​ಗೆ ಭೇಟಿ ನೀಡಿದ ವಿಪಕ್ಷ ನಾಯಕ ಅಶೋಕ್, ಅಲ್ಲಿನ ಸಮಸ್ಯೆ ಆಲಿಸಿದರು. ಅಶೋಕ್​ಗೆ ಶಾಸಕ ನಂದೀಶ್​ ರೆಡ್ಡಿ ಸಾಥ್ ನೀಡಿದರು.

ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ಆಗಿವೆ. ಹೀಗಾಗಿ ಮಳೆಹಾನಿ ಪ್ರದೇಶಕ್ಕೆ ವಿಪಕ್ಷ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್​ ಬೋರ್ಡ್ ಜಂಕ್ಷನ್​​ಗೆ ಭೇಟಿ ನೀಡಿದ ವಿಪಕ್ಷ ನಾಯಕ ಅಶೋಕ್, ಅಲ್ಲಿನ ಸಮಸ್ಯೆ ಆಲಿಸಿದರು. ಅಶೋಕ್​ಗೆ ಶಾಸಕ ನಂದೀಶ್​ ರೆಡ್ಡಿ ಸಾಥ್ ನೀಡಿದರು.