AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರೀಯ ವಿಹಾರಗೆ ಡಿಕೆ ಶಿವಕುಮಾರ್ ಭೇಟಿ: ಮನೆ ಬಾಗಿಲು ಒಡೆದಾದ್ರೂ ಜನರನ್ನು ಹೊರ ತರುವಂತೆ ಸೂಚನೆ

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಆಗುತ್ತಿದೆ. ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಸದ್ಯ ಅವಾಂತರಗಳು ಸೃಷ್ಟಿಯಾದ ಯಲಹಂಕದ ಕೇಂದ್ರೀಯ ವಿಹಾರ, ಥಣಿಸಂದ್ರ ಮತ್ತು ಸಾಯಿಬಾಬಾ ಲೇಔಟ್​ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ನೀಡಿ, ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Oct 23, 2024 | 6:06 PM

Share
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಅದರಲ್ಲೂ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ನಲ್ಲಿ ಮಳೆ ನೀರು ತುಂಬಿಕೊಂಡಿದ್ದು, ನಿವಾಸಿಗಳು ಪರದಾಡಿದ್ದಾರೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್​ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಅದರಲ್ಲೂ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ನಲ್ಲಿ ಮಳೆ ನೀರು ತುಂಬಿಕೊಂಡಿದ್ದು, ನಿವಾಸಿಗಳು ಪರದಾಡಿದ್ದಾರೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್​ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

1 / 7
ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್​ಗೆ ಭೇಟಿ ನೀಡಿದ ಡಿಕೆ ಶಿವಕುಮಾರ್​, ನೀರು ನುಗ್ಗಲು ಕಾರಣ ಏನು, ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಿಂದ ನೀರು ಬರುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್​ಗೆ ಭೇಟಿ ನೀಡಿದ ಡಿಕೆ ಶಿವಕುಮಾರ್​, ನೀರು ನುಗ್ಗಲು ಕಾರಣ ಏನು, ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಿಂದ ನೀರು ಬರುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

2 / 7
ಮಳೆಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಹಾಗೂ ಎನ್​​ಡಿಆರ್​ಎಫ್​ ತಂಡಕ್ಕೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಮಳೆಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಹಾಗೂ ಎನ್​​ಡಿಆರ್​ಎಫ್​ ತಂಡಕ್ಕೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

3 / 7
ಸೆಂಟಿಮೆಂಟ್ ಬೇಡ, ಅನಾಹುತವಾದರೆ ಯಾರು ಹೊಣೆ? ಎಲ್ಲರನ್ನೂ ಶಿಫ್ಟ್ ಮಾಡಿ. ಮನೆಯ ಡೋರ್ ಒಡೆದಾದ್ರೂ ಹೊರಗಡೆ ಕರೆದುಕೊಂಡು ಬನ್ನಿ. ಒಂದು ವಾರ ಬೇರೆ ಕಡೆ ನಿವಾಸಿಗಳಿಗೆ ವ್ಯವಸ್ಥೆ ಮಾಡಿ ಎಂದು ತುಷಾರ್​ ಗಿರಿನಾಥ್​ಗೆ ಡಿಕೆ ಶಿವಕುಮಾರ್​ ಖಡಕ್​ ಸೂಚನೆ ನೀಡಿದ್ದಾರೆ.

ಸೆಂಟಿಮೆಂಟ್ ಬೇಡ, ಅನಾಹುತವಾದರೆ ಯಾರು ಹೊಣೆ? ಎಲ್ಲರನ್ನೂ ಶಿಫ್ಟ್ ಮಾಡಿ. ಮನೆಯ ಡೋರ್ ಒಡೆದಾದ್ರೂ ಹೊರಗಡೆ ಕರೆದುಕೊಂಡು ಬನ್ನಿ. ಒಂದು ವಾರ ಬೇರೆ ಕಡೆ ನಿವಾಸಿಗಳಿಗೆ ವ್ಯವಸ್ಥೆ ಮಾಡಿ ಎಂದು ತುಷಾರ್​ ಗಿರಿನಾಥ್​ಗೆ ಡಿಕೆ ಶಿವಕುಮಾರ್​ ಖಡಕ್​ ಸೂಚನೆ ನೀಡಿದ್ದಾರೆ.

4 / 7
ಕೇಂದ್ರೀಯ ವಿಹಾರ ವಸತಿ ಸಮುಚ್ಚಯದಲ್ಲಿ ಕೇಂದ್ರ ಸರ್ಕಾರದ ನೌಕರರು ವಾಸಿಸುತ್ತಿದ್ದು, ಯಲಹಂಕದಲ್ಲಿ ಇಷ್ಟು ಪ್ರಮಾಣದ ಮಳೆಯಾಗಿರುವ ಇತಿಹಾಸವಿಲ್ಲ. ಸಮುಚ್ಚಯದಲ್ಲಿನ ಅರ್ಧದಷ್ಟು ಮಳೆಯ ನೀರನ್ನು ಈಗಾಗಲೇ ತೆಗೆಯಲಾಗಿದೆ ಎಂದಿದ್ದಾರೆ.

ಕೇಂದ್ರೀಯ ವಿಹಾರ ವಸತಿ ಸಮುಚ್ಚಯದಲ್ಲಿ ಕೇಂದ್ರ ಸರ್ಕಾರದ ನೌಕರರು ವಾಸಿಸುತ್ತಿದ್ದು, ಯಲಹಂಕದಲ್ಲಿ ಇಷ್ಟು ಪ್ರಮಾಣದ ಮಳೆಯಾಗಿರುವ ಇತಿಹಾಸವಿಲ್ಲ. ಸಮುಚ್ಚಯದಲ್ಲಿನ ಅರ್ಧದಷ್ಟು ಮಳೆಯ ನೀರನ್ನು ಈಗಾಗಲೇ ತೆಗೆಯಲಾಗಿದೆ ಎಂದಿದ್ದಾರೆ.

5 / 7
ಇನ್ನು ಎಡೆಬಿಡದೆ ಸುರಿದ ಮಳೆಯಿಂದ ಥಣಿಸಂದ್ರ ವ್ಯಾಪ್ತಿಯಲ್ಲಿ ಹಾನಿಗೊಳಗಾದ ಸ್ಥಳಗಳಿಗೂ ಭೇಟಿ ನೀಡಿದ್ದಾರೆ. ಮಳೆಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿ, ಅಲ್ಲಿನ ನಿವಾಸಿಗಳ ಕುಂದು ಕೊರತೆಗಳನ್ನು ಆಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಇನ್ನು ಎಡೆಬಿಡದೆ ಸುರಿದ ಮಳೆಯಿಂದ ಥಣಿಸಂದ್ರ ವ್ಯಾಪ್ತಿಯಲ್ಲಿ ಹಾನಿಗೊಳಗಾದ ಸ್ಥಳಗಳಿಗೂ ಭೇಟಿ ನೀಡಿದ್ದಾರೆ. ಮಳೆಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿ, ಅಲ್ಲಿನ ನಿವಾಸಿಗಳ ಕುಂದು ಕೊರತೆಗಳನ್ನು ಆಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

6 / 7
ಸಾಯಿಬಾಬಾ ಲೇಔಟ್ ವ್ಯಾಪ್ತಿಯಲ್ಲಿ ಹಾನಿಗೊಳಗಾದ ಸ್ಥಳಗಳಿಗೂ ಭೇಟಿ ನೀಡಿ, ಮಳೆಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿದ್ದಾರೆ.

ಸಾಯಿಬಾಬಾ ಲೇಔಟ್ ವ್ಯಾಪ್ತಿಯಲ್ಲಿ ಹಾನಿಗೊಳಗಾದ ಸ್ಥಳಗಳಿಗೂ ಭೇಟಿ ನೀಡಿ, ಮಳೆಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿದ್ದಾರೆ.

7 / 7

Published On - 6:04 pm, Wed, 23 October 24

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!