AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮತ್ತೆ ಮಹಾ ಮಳೆ, ಕೆರೆಯಂತಾದ ರಸ್ತೆಗಳು: ಇಲ್ಲಿವೆ ನೋಡಿ ಫೋಟೋಸ್

ಸ್ವಲ್ಪ ದಿನ ಬಿಡುವು ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಪರಿಣಾಮ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚರಿಸಿದ್ದಾರೆ. ಮಹಾ ಮಳೆಗೆ ಬೆಂಗಳೂರು ಸಂಚಾರ ಪೊಲೀಸರು ಕೂಡ ಪರದಾಡಿದ್ದಾರೆ.

TV9 Web
| Edited By: |

Updated on: Aug 19, 2024 | 7:55 PM

Share
ಕೊಂಚ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ಬೆಂಗಳೂರಿನ ಹಲವೆಡೆ ಧಾರಾಕಾರ ಸುರಿದ ಮಳೆಗೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ಪ್ರತಿ ಭಾರೀ ಮಳೆ ಬಂದಾಗಲೂ ಇದೇ ಸಮಸ್ಯೆ ಎನ್ನುತ್ತಿದ್ದಾರೆ ಜನರು. ಮಹಾ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದ್ದು, ಆ ಮೂಲಕ ಬ್ರ್ಯಾಂಡ್ ಬೆಂಗಳೂರು ಅನಾವರಣವಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸ್​ ಫೋಟೋ ಸಮೇತ ಮಾಹಿತಿ ಹಂಚಿಕೊಂಡಿದ್ದಾರೆ.

ಕೊಂಚ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ಬೆಂಗಳೂರಿನ ಹಲವೆಡೆ ಧಾರಾಕಾರ ಸುರಿದ ಮಳೆಗೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ಪ್ರತಿ ಭಾರೀ ಮಳೆ ಬಂದಾಗಲೂ ಇದೇ ಸಮಸ್ಯೆ ಎನ್ನುತ್ತಿದ್ದಾರೆ ಜನರು. ಮಹಾ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದ್ದು, ಆ ಮೂಲಕ ಬ್ರ್ಯಾಂಡ್ ಬೆಂಗಳೂರು ಅನಾವರಣವಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸ್​ ಫೋಟೋ ಸಮೇತ ಮಾಹಿತಿ ಹಂಚಿಕೊಂಡಿದ್ದಾರೆ.

1 / 8
ಧಾರಾಕಾರ ಮಳೆಗೆ ವಡ್ಡರಪಾಳ್ಯ ಜಂಕ್ಷನ್‌ ಬಳಿ ನೀರು ನಿಂತಿರುವುದರಿಂದ ನಗರದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ, ದಯಮಾಡಿ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಧಾರಾಕಾರ ಮಳೆಗೆ ವಡ್ಡರಪಾಳ್ಯ ಜಂಕ್ಷನ್‌ ಬಳಿ ನೀರು ನಿಂತಿರುವುದರಿಂದ ನಗರದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ, ದಯಮಾಡಿ ಸಹಕರಿಸುವಂತೆ ಮನವಿ ಮಾಡಲಾಗಿದೆ.

2 / 8
ಯೋಗೇಶ್ವರನಗರ ಕ್ರಾಸ್‌ ಬಳಿ ಮಳೆ ನೀರು ನಿಂತಿರುವುದರಿಂದ ವೀರಣ್ಣಪಾಳ್ಯ ಕಡೆಗೆ ಹೋಗುವವರು ನಿಧಾನಗತಿಯಲ್ಲಿ ಸಂಚರಿಸುವಂತೆ ತಿಳಿಸಲಾಗಿದೆ.

ಯೋಗೇಶ್ವರನಗರ ಕ್ರಾಸ್‌ ಬಳಿ ಮಳೆ ನೀರು ನಿಂತಿರುವುದರಿಂದ ವೀರಣ್ಣಪಾಳ್ಯ ಕಡೆಗೆ ಹೋಗುವವರು ನಿಧಾನಗತಿಯಲ್ಲಿ ಸಂಚರಿಸುವಂತೆ ತಿಳಿಸಲಾಗಿದೆ.

3 / 8
ಇಂದು ಸುರಿದ ಧಾರಕಾರ ಮಳೆಗೆ ದೇವಿನಗರ ಅಂಡರ್‌ಪಾಸ್‌ ಬಳಿ ಕೂಡ ನೀರು ನಿಂತುಕೊಂಡಿದೆ. ಮಳೆಯಿಂದಾಗಿ ಅಂಡರ್‌ಪಾಸ್‌ ಸಂಪೂರ್ಣ ತುಂಬಿ ಹೋಗಿದೆ.

ಇಂದು ಸುರಿದ ಧಾರಕಾರ ಮಳೆಗೆ ದೇವಿನಗರ ಅಂಡರ್‌ಪಾಸ್‌ ಬಳಿ ಕೂಡ ನೀರು ನಿಂತುಕೊಂಡಿದೆ. ಮಳೆಯಿಂದಾಗಿ ಅಂಡರ್‌ಪಾಸ್‌ ಸಂಪೂರ್ಣ ತುಂಬಿ ಹೋಗಿದೆ.

4 / 8
ಸದಾಶಿವನಗರ ಪೊಲೀಸ್ ಠಾಣೆ ಬಳಿ ಮತ್ತು ಹೆಬ್ಬಾಳ ಡೌನ್ ರ‍್ಯಾಂಪ್‌ ಬಳಿ ಕೂಡ ಮಳೆಯಿಂದಾಗಿ ರಸ್ತೆ ತುಂಬೆಲ್ಲಾ ನೀರು ನಿಂತ್ತುಕೊಂಡಿದೆ. ಈ ಮಧ್ಯೆ ಕೆಟ್ಟು ಹೋದ ಕಾರನ್ನು ಜನರು ತಳ್ಳುತ್ತಿದ್ದಾರೆ.

ಸದಾಶಿವನಗರ ಪೊಲೀಸ್ ಠಾಣೆ ಬಳಿ ಮತ್ತು ಹೆಬ್ಬಾಳ ಡೌನ್ ರ‍್ಯಾಂಪ್‌ ಬಳಿ ಕೂಡ ಮಳೆಯಿಂದಾಗಿ ರಸ್ತೆ ತುಂಬೆಲ್ಲಾ ನೀರು ನಿಂತ್ತುಕೊಂಡಿದೆ. ಈ ಮಧ್ಯೆ ಕೆಟ್ಟು ಹೋದ ಕಾರನ್ನು ಜನರು ತಳ್ಳುತ್ತಿದ್ದಾರೆ.

5 / 8
ಸರ್ವಿಸ್ ರಸ್ತೆಯಲ್ಲಿ ನಿಂತ ಮಳೆ ನೀರಿಗೆ ಅರ್ಧಕರ್ಧ ಕಾರುಗಳು ಮುಳುಗಡೆ ಆಗಿವೆ. ಇತ್ತ ವಿಂಡ್ಸರ್ ಮ್ಯಾನರ್ ರೈಲ್ವೆ ಸೇತುವೆಯ ಕೆಳಭಾಗದಲ್ಲಿ ಮಳೆ ನೀರು ನಿಂತ್ತುಕೊಂಡಿದ್ದು, ನೀರು ಹೋಗಿಸಲು ಸಂಚಾರಿ ಪೊಲೀಸ್​ ಪ್ರಯತ್ನಿಸುತ್ತಿದ್ದಾರೆ.

ಸರ್ವಿಸ್ ರಸ್ತೆಯಲ್ಲಿ ನಿಂತ ಮಳೆ ನೀರಿಗೆ ಅರ್ಧಕರ್ಧ ಕಾರುಗಳು ಮುಳುಗಡೆ ಆಗಿವೆ. ಇತ್ತ ವಿಂಡ್ಸರ್ ಮ್ಯಾನರ್ ರೈಲ್ವೆ ಸೇತುವೆಯ ಕೆಳಭಾಗದಲ್ಲಿ ಮಳೆ ನೀರು ನಿಂತ್ತುಕೊಂಡಿದ್ದು, ನೀರು ಹೋಗಿಸಲು ಸಂಚಾರಿ ಪೊಲೀಸ್​ ಪ್ರಯತ್ನಿಸುತ್ತಿದ್ದಾರೆ.

6 / 8
ಇನ್ನು ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣ ನಗರ ಅಂಡರ್ ಬ್ರಿಡ್ಜ್ ಬಳಿ ಭಾರಿ ಮಳೆಯಿಂದಾಗಿ ವಾಟರ್ ಲಾಗಿಂಗ್ ಉಂಟಾಗಿತ್ತು. ಹೀಗಾಗಿ ವಾಹನ ಸವಾರರು ಪರದಾಡಿದ್ದಾರೆ. ಸ್ಥಳದಲ್ಲಿ ನಮ್ಮ ಸಿಬ್ಬಂದಿ ಹಾಜರಿದ್ದು ಸುಗಮ ಸಂಚಾರಕ್ಕೆ ಅನುವು ಮಾಡಿದ್ದಾರೆ.

ಇನ್ನು ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣ ನಗರ ಅಂಡರ್ ಬ್ರಿಡ್ಜ್ ಬಳಿ ಭಾರಿ ಮಳೆಯಿಂದಾಗಿ ವಾಟರ್ ಲಾಗಿಂಗ್ ಉಂಟಾಗಿತ್ತು. ಹೀಗಾಗಿ ವಾಹನ ಸವಾರರು ಪರದಾಡಿದ್ದಾರೆ. ಸ್ಥಳದಲ್ಲಿ ನಮ್ಮ ಸಿಬ್ಬಂದಿ ಹಾಜರಿದ್ದು ಸುಗಮ ಸಂಚಾರಕ್ಕೆ ಅನುವು ಮಾಡಿದ್ದಾರೆ.

7 / 8
ಭಾರೀ ಮಳೆಯಿಂದಾಗಿ ಹೆಣ್ಣೂರು, ಎಚ್‌ಆರ್‌ಬಿಆರ್ ಲೇಔಟ್, ಕಲ್ಯಾಣನಗರ, ಜಯಮಹಲ್ ರಸ್ತೆಯ ಒಆರ್‌ಆರ್‌ನಲ್ಲಿ ಕೂಡ ರಸ್ತೆಗಳು ಕೆರೆಯಂತಾಗಿವೆ. ವಾಹನ ಸವಾರರು ಪರದಾಡಿದ್ದಾರೆ.

ಭಾರೀ ಮಳೆಯಿಂದಾಗಿ ಹೆಣ್ಣೂರು, ಎಚ್‌ಆರ್‌ಬಿಆರ್ ಲೇಔಟ್, ಕಲ್ಯಾಣನಗರ, ಜಯಮಹಲ್ ರಸ್ತೆಯ ಒಆರ್‌ಆರ್‌ನಲ್ಲಿ ಕೂಡ ರಸ್ತೆಗಳು ಕೆರೆಯಂತಾಗಿವೆ. ವಾಹನ ಸವಾರರು ಪರದಾಡಿದ್ದಾರೆ.

8 / 8
Follow Us
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!