ಬೆಳಗಾವಿಯಲ್ಲಿ ನದಿಗಳ ಅಬ್ಬರ: ನೀರಲ್ಲಿ ನಿಂತ ಮನೆ, ಬೆಳೆ, ಸೇತುವೆ ಮುಳುಗಡೆ; ಇಲ್ಲಿದೆ ಫೋಟೋಸ್​

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ರಣಮಳೆಯಾಗುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳಿಗೆ ಅಪರಾ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಸಪ್ತ ನದಿಗಳ ಅಬ್ಬರಕ್ಕೆ ಜನರು ಕಂಗಾಲಾಗಿದ್ದಾರೆ. ಮನೆ, ಮಂದಿರ, ದರ್ಗಾದ ಒಳಗೆ ನೀರು ನುಗ್ಗಿದೆ ಇಲ್ಲಿದೆ ಫೋಟೋಸ್​

| Updated By: ವಿವೇಕ ಬಿರಾದಾರ

Updated on:Jul 26, 2024 | 8:40 AM

Belagavi Flood: water enter houses, crops, bridges; Here are the photos

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ರಣಮಳೆಯಾಗುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳಿಗೆ ಅಪರಾ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಸಪ್ತ ನದಿಗಳ ಅಬ್ಬರಕ್ಕೆ ಜನರು ಕಂಗಾಲಾಗಿದ್ದಾರೆ. ಇದೀಗ ಕೋಯ್ನಾ ಜಲಾಶಯದಿಂದ ಕೃಷ್ಣ ನದಿಗೆ ನೀರು ಬಡಿತ್ತಿರುವುದರಿಂದ ಗೋಕಾಕ್​, ಚಿಕ್ಕೋಡಿ ತಾಲೂಕಿನ ನದಿ ತೀರದ ಗ್ರಾಮಗಳಿಗೆ ನೀರು ನುಗ್ಗಿದೆ.

1 / 9
Belagavi Flood: water enter houses, crops, bridges; Here are the photos

ನದಿಗಳು ಅಪಯಾದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ 30 ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಗೋಕಾಕ್​ನಲ್ಲಿ ಐದು ಸೇತುವೆಗಳು, ಮೂಡಲಗಿ ತಾಲೂಕಿನಲ್ಲಿ ಐದು ಸೇತುವೆ ಜಲಾವೃತಗೊಂಡಿವೆ. ಹುಕ್ಕೇರಿ ತಾಲೂಕಿನ ಐದು, ಚಿಕ್ಕೋಡಿ ತಾಲೂಕಿನ ನಾಲ್ಕು, ನಿಪ್ಪಾಣಿ ತಾಲೂಕಿನ ನಾಲ್ಕು, ರಾಯಬಾಗ ತಾಲೂಕಿನ ಮೂರು, ಖಾನಾಪುರ ಎರಡು, ಕಾಗವಾಡ ಒಂದು, ಅಥಣಿ ಒಂದು ಸೇತುವೆ ಜಲಾವೃತಗೊಂಡಿವೆ. ಇದರಿಂದ ಜಿಲ್ಲೆಯ 60 ಅಧಿಕ ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ.

2 / 9
Belagavi Flood: water enter houses, crops, bridges; Here are the photos

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ 87 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಬೆಳಗಾವಿ ವ್ಯಾಪ್ತಿಯಲ್ಲಿ 35 ಗ್ರಾಮಗಳಿಗೆ ಪ್ರವಾಹದ ಆತಂಕ ಶುರುವಾಗಿದೆ. ಜಿಲ್ಲೆಯಲ್ಲಿ ಬರೋಬ್ಬರಿ 122 ಗ್ರಾಮಗಳಲ್ಲಿ ಪ್ರವಾಹದ ಸ್ಥಿತಿ ಎದುರಾಗಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ 45 ಬೋಟ್​ಗಳು ಸಿದ್ಧತೆಯಲ್ಲಿವೆ. ಈಗಾಗಲೇ ಸ್ಥಳದಲ್ಲಿ ಎನ್‌ಡಿಆರ್‌ಎಫ್ ತಂಡ ಬೀಡು ಬಿಟ್ಟಿದೆ.

3 / 9
Belagavi Flood: water enter houses, crops, bridges; Here are the photos

ದೂದಗಂಗಾ ನದಿಯ ಅಬ್ಬರಕ್ಕೆ ನಿಪ್ಪಾಣಿ ತಾಲೂಕಿನ ಹುಣ್ಣರಗಿ ಗ್ರಾಮದ ಜನರು ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ‌. ಗ್ರಾಮದ ಕುರುಬರ ಗಲ್ಲಿಗೆ ನದಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಜಾನುವಾರು, ಅಗತ್ಯ ಸಾಮಾಗ್ರಿಗಳ ಸಮೇತ ಜನ ಊರು ಖಾಲಿ‌ ಮಾಡುತ್ತಿದ್ದಾರೆ.

4 / 9
Belagavi Flood: water enter houses, crops, bridges; Here are the photos

ದೂದಗಂಗಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿರುವ ಬಂಗಾಲಿ ಬಾಬಾ ದರ್ಗಾ ಸಂಪೂರ್ಣ ಜಲಾವೃತಗೊಂಡಿದೆ. ದರ್ಗಾದಲ್ಲಿ ನಾಲ್ಕು ಅಡಿಗಳಷ್ಟು ನೀರು ಬಂದಿದೆ. ಗ್ರಾಮಸ್ಥರು ಊರು ತೊರೆಯುವಂತೆ ಸೂಚನೆ ನೀಡಲಾಗಿದೆ.

5 / 9
Belagavi Flood: water enter houses, crops, bridges; Here are the photos

ಮಾರ್ಕಂಡೇಯ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಗೋಕಾಕ್ ನಗರಕ್ಕೆ ಹೊಂದಿಕೊಂಡಿರುವ ಚಿಕ್ಕೋಳಿ ಸೇತುವೆ ಬಿರುಕುಗೊಂಡಿದೆ.

6 / 9
Belagavi Flood: water enter houses, crops, bridges; Here are the photos

ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಗೋಕಾಕ್ ನಗರದ ದನದ ಪೇಟೆಗೆ ನದಿ ನೀರು ನುಗ್ಗಿದೆ. ಕೆಲ ಶೆಡ್​ಗಳು ಮನೆಯೊಳಗೆ ನುಗ್ಗಿದೆ. ದನದ ಪೇಟೆಯ ಪಟಗುಂದಿ ಹನುಮ ದೇವಸ್ಥಾನದ ಸುತ್ತ ನೀರು ನಿಂತಿದೆ.

7 / 9
Belagavi Flood: water enter houses, crops, bridges; Here are the photos

ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ದೂದ್​ಸಾಗರ್ ಮತ್ತು ಸೋನಾಲಿಯಂ ರೈಲು ನಿಲ್ದಾಣಗಳ ಮಧ್ಯೆ ರೈಲು‌ ಹಳಿಗಳ ಮೇಲೆ ತಡರಾತ್ರಿ ಗುಡ್ಡ ಕುಸಿದಿದೆ. ಹಳಿಯ ಮೇಲೆ‌ ಅಪಾರ ಪ್ರಮಾಣದ ಕಲ್ಲು ಹಾಗೂ ಮಣ್ಣು ಉರುಳಿ ಬಿದ್ದಿವೆ. ಹಳಿ ಮೇಲೆ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಲೋಂಡಾ ಮಾರ್ಗವಾಗಿ ಬೆಳಗಾವಿಗೆ ಬರುವ ರೈಲುಗಳು ತಡವಾಗಿ ಚಲಿಸುತ್ತಿವೆ. ಪ್ರಯಾಣಿಕರಿಗೆ ತೊಂದರೆ ಆಗದಂತೆ ರೈಲ್ವೆ ಇಲಾಖೆ ಬಸ್ ವ್ಯವಸ್ಥೆ ಮಾಡಿದೆ.

8 / 9
Belagavi Flood: water enter houses, crops, bridges; Here are the photos

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತದಿಂದ ಪ್ರವಾಹ ಸಹಾಯವಾಣಿ ಆರಂಭಿಸಿದೆ. ಪ್ರವಾಹ ಸಹಾಯವಾಣಿ ಸಂಖ್ಯೆ 0831-2407290, ಪೊಲೀಸ್ ಸಹಾಯವಾಣಿ ಸಂಖ್ಯೆ 08321-2474054, ತುರ್ತು ನೆರವಿಗಾಗಿ 112 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ​

9 / 9

Published On - 8:40 am, Fri, 26 July 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್